ಮೀನುಗಾರರಿಗೆ ಸಬ್ಸಿಡಿ ಸೀಮೆಎಣ್ಣೆ: ರಾಜ್ಯಕ್ಕೆ ಕೇಂದ್ರದ ಮಲತಾಯಿ ಧೋರಣೆ

ಕೇರಳಕ್ಕೆ ಸಕಾಲದಲ್ಲಿ ಬಿಡುಗಡೆ ; ರಾಜ್ಯಕ್ಕೆ ನೀಡಲು ಮೀನಮೇಷ

Team Udayavani, Jan 5, 2022, 8:20 AM IST

ಮೀನುಗಾರರಿಗೆ ಸಬ್ಸಿಡಿ ಸೀಮೆಎಣ್ಣೆ: ರಾಜ್ಯಕ್ಕೆ ಕೇಂದ್ರದ ಮಲತಾಯಿ ಧೋರಣೆ

ಕುಂದಾಪುರ: ರಾಜ್ಯ ಕರಾವಳಿಯ 3 ಜಿಲ್ಲೆಗಳ ನಾಡದೋಣಿ ಮೀನುಗಾರರಿಗೆ ಕೇಂದ್ರ ಸರಕಾರದಿಂದ ಸಿಗಬೇಕಿರುವ 5,115 ಕಿಲೋ ಲೀಟರ್‌ (1 ಕಿಲೋ ಲೀ. = 1 ಸಾವಿರ ಲೀ.) ಸಬ್ಸಿಡಿ ಸೀಮೆಎಣ್ಣೆ ಇನ್ನೂ ಬಿಡುಗಡೆಯಾಗಿಲ್ಲ. ಆದರೆ ಪಕ್ಕದ ಕೇರಳಕ್ಕೆ ಸಿಗಬೇಕಿದ್ದ ಸಂಪೂರ್ಣ ಪ್ರಮಾಣದ ಎಣ್ಣೆಯನ್ನೂ ಡಿ. 1ರಂದು ಪೂರೈಸುವ ಮೂಲಕ ಕೇಂದ್ರ ಸರಕಾರ ಮಲತಾಯಿ ಧೋರಣೆ ಅನುಸರಿಸಿದೆ ಎಂದು ಮೀನುಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಉಡುಪಿ, ಮಂಗಳೂರು ಹಾಗೂ ಉತ್ತರ ಕರ್ನಾಟಕ ಜಿಲ್ಲೆಗಳನ್ನೊಳಗೊಂಡ ರಾಜ್ಯದ ಮೀನುಗಾರರು ಕಳೆದ ಜುಲೈಯಿಂದಲೂ ಬಾಕಿ ಸಬ್ಸಿಡಿ ಸೀಮೆಎಣ್ಣೆ ಬಿಡುಗಡೆ ಮಾಡುವಂತೆ ಇಲಾಖೆಯ ಸಚಿವರು, ಅಧಿಕಾರಿಗಳು, ಕೇಂದ್ರದ ಅಧಿಕಾರಿಗಳಿಗೆ ಮನವಿ ಮಾಡುತ್ತಿದ್ದರೂ ಬಿಡುಗಡೆಯಾಗಿಲ್ಲ.

5,115 ಕಿಲೋ ಲೀ. ಬಾಕಿ
ಕರಾವಳಿ ಜಿಲ್ಲೆಗಳಲ್ಲಿ ಸದ್ಯ ಸಬ್ಸಿಡಿ ಸೀಮೆ ಎಣ್ಣೆಗೆ ಅರ್ಹವಾಗಿರುವ 4,514 ದೋಣಿಗಳಿದ್ದು, 2013ರ ಆದೇಶದಂತೆ ತಲಾ 300 ಲೀ.ನಂತೆ ಮಾಸಿಕ 1,355 ಕಿಲೋ ಲೀ. ಸಬ್ಸಿಡಿ ಸೀಮೆಎಣ್ಣೆ ಸಿಗುತ್ತಿದೆ. 2021-22ನೇ ಸಾಲಿನಲ್ಲಿ ಕೇಂದ್ರ ದಿಂದ 1,355 ಕಿ.ಲೀ.ನಂತೆ ವರ್ಷಕ್ಕೆ (9 ತಿಂಗಳಿಗೆ) 12,195 ಕಿ.ಲೀ. ಬಿಡುಗಡೆಯಾಗಬೇಕಿತ್ತು. ಆದರೆ ಈವರೆಗೆ 7,080 ಕಿ.ಲೀ. ಬಿಡುಗಡೆಯಾಗಿದ್ದು, ನವೆಂಬರ್‌ ವರೆಗೆ ಹಂಚಿಕೆ ಮಾಡಲಾಗಿದೆ. ಡಿಸೆಂಬರ್‌ನಿಂದ ಮುಂದಿನ ಮಾರ್ಚ್‌ ವರೆಗೆ 5,115 ಕಿ.ಲೀ. ಸಿಗಬೇಕಿದೆ. ಡಿಸೆಂಬರ್‌ ಮುಗಿದರೂ ಆ ತಿಂಗಳದ್ದು ಇನ್ನೂ ಸಿಕ್ಕಿಲ್ಲ. ಈಗ ಉತ್ತಮ ಮೀನಿನ ಸೀಸನ್‌ ಆಗಿದ್ದು, ಸಕಾಲದಲ್ಲಿ ಸೀಮೆಎಣ್ಣೆ ಸಿಗದೇ ಮೀನುಗಾರರು ಸಂಕಷ್ಟ ಅನುಭವಿಸುವಂತಾಗಿದೆ.

10,100ಕ್ಕೂ ಅಧಿಕ ದೋಣಿ
ವಾಸ್ತವಾಗಿ ರಾಜ್ಯದಲ್ಲಿ 10,100ಕ್ಕಿಂತಲೂ ಅಧಿಕ ನಾಡದೋಣಿಗಳಿವೆ. ಒಂದು ದೋಣಿ ಯಲ್ಲಿ ಕನಿಷ್ಠ 6ರಂತೆ 60,500ಕ್ಕಿಂತಲೂ ಮಿಕ್ಕಿ ಮೀನುಗಾರರಿದ್ದಾರೆ. ಈ ದೋಣಿಗಳಿಗೆ ತಲಾ 300 ಲೀ.ನಂತೆ ವಾರ್ಷಿಕ 30,300 ಕಿ.ಲೀ. ಸೀಮೆ ಎಣ್ಣೆ ಅಗತ್ಯವಿದೆ. ವರ್ಷದಿಂದ ವರ್ಷಕ್ಕೆ ದೋಣಿಗಳ ಸಂಖ್ಯೆ ಹೆಚ್ಚಾಗುತ್ತಿದ್ದರೂ ಸರಕಾರ ಈಗಲೂ 2013ರ ಲೆಕ್ಕದಂತೆ ವಿತರಿಸುತ್ತಿದೆ. ಅದೂ ಸಕಾಲದಲ್ಲಿ ಸಿಗುತ್ತಿಲ್ಲ ಎನ್ನುವುದು ಮಲ್ಪೆ ನಾಡದೋಣಿ ಮೀನುಗಾರರ ಸಹಕಾರಿ ಸಂಘದ ಕಾರ್ಯದರ್ಶಿ ಗೋಪಾಲ್‌ ಆರ್‌.ಕೆ. ಅಳಲು.

ಇದನ್ನೂ ಓದಿ:ಕೋವಿಡ್ ಹೆಚ್ಚಳ : ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಜಾರಿ, ಬೆಂಗಳೂರಿನಲ್ಲಿ 2 ವಾರ ಶಾಲೆ ಬಂದ್

ನಿರ್ಲಕ್ಷ್ಯ ಯಾಕೆ?
ರಾಜ್ಯಕ್ಕೆ ಸಬ್ಸಿಡಿ ಸೀಮೆಎಣ್ಣೆ ಬಿಡುಗಡೆ ವಿಳಂಬ ವಾಗಿದ್ದರೂ ನೆರೆಯ ಕೇರಳಕ್ಕೆ ಕಾಲಕಾಲಕ್ಕೆ ಪೂರೈಕೆ ಯಾಗುತ್ತಿದೆ. ಕೇರಳಕ್ಕೆ ವಾರ್ಷಿಕ 21,888 ಕಿಲೋ ಲೀ. ಸಿಗಬೇಕಿದ್ದು ನವೆಂಬರ್‌ ವರೆಗೆ 15,108 ಕಿ.ಲೀ. ಮತ್ತು ಬಾಕಿ ಉಳಿದ 6,780 ಕಿ.ಲೀ. ಡಿ. 1ಕ್ಕೆ ಬಿಡುಗಡೆಯಾಗಿದೆ. ನಮಗೆ ಮಾತ್ರ ಯಾಕೆ ವಿಳಂಬ ನೀತಿ ಅನುಸರಿಸುತ್ತಿದ್ದಾರೆ ಎನ್ನುವ ಪ್ರಶ್ನೆ ಮೀನುಗಾರರದ್ದು.

ಕೇಂದ್ರದಿಂದ ಬಿಡುಗಡೆಗೆ ಬಾಕಿ ಇರುವ ಸೀಮೆಎಣ್ಣೆ ಕುರಿತಂತೆ ಸ್ವತಃ ದಿಲ್ಲಿಗೆ ಹೋಗಿ ಮನವಿ ಸಲ್ಲಿಸಲಾಗಿದೆ. ಆ ಬಳಿಕ 2-3 ಸಲ ಸಂಬಂಧಪಟ್ಟವರ ಗಮನಕ್ಕೆ ತರಲಾಗಿದೆ. ಇಲಾಖೆಯ ಕಾರ್ಯದರ್ಶಿಗಳು ಪ್ರತೀ ವಾರ ಈ ಬಗ್ಗೆ ಮನವರಿಕೆ ಮಾಡುತ್ತಿದ್ದಾರೆ. ಸಚಿವರ ಗಮನದಲ್ಲಿಯೂ ಇದೆ. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳ ಗಮನಕ್ಕೂ ತರಲಾಗಿದೆ. ಆದಷ್ಟು ಬೇಗ ಬಿಡುಗಡೆಯಾಗುವ ನಿರೀಕ್ಷೆಯಿದೆ.
– ರಾಮಾಚಾರಿ, ಮೀನುಗಾರಿಕಾ
ಇಲಾಖೆಯ ರಾಜ್ಯ ನಿರ್ದೇಶಕ

ನಾವು ಸಬ್ಸಿಡಿ ಸೀಮೆಎಣ್ಣೆ ಬಾಕಿ ಬಿಡುಗಡೆ ಬಗ್ಗೆ ನಿರಂತರ ಪ್ರಯತ್ನ ಮಾಡುತ್ತಿದ್ದೇವೆ. ಬೆಂಗಳೂರಿಗೆ 3-4 ಸಲ ಹೋಗಿ ಬಂದಿದ್ದೇವೆ. ಕೇಂದ್ರ ಸಚಿವರು, ಮೀನುಗಾರಿಕೆ ಸಚಿವರು, ಇಲಾಖಾ ಅಧಿಕಾರಿಗಳಿಗೂ ಮನವಿ ಕೊಟ್ಟಿದ್ದೇವೆ. ಎಲ್ಲಿ ಬಾಕಿ ಆಗಿದೆ ಅಂತ ಗೊತ್ತಿಲ್ಲ. ಇನ್ನು ಒಂದು ವಾರ ಕಾಯುತ್ತೇವೆ. ಅಷ್ಟರೊಳಗೆ ಕೊಡದಿದ್ದರೆ ಬೀದಿಗಿಳಿದು ಹೋರಾಡುತ್ತೇವೆ.
– ಯಶವಂತ, ಅಧ್ಯಕ್ಷರು, ನಾಡದೋಣಿ ಮೀನುಗಾರರ ಸಂಘ ಗಂಗೊಳ್ಳಿ

-ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಉಡುಪಿಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

13 ರಾಜ್ಯಗಳಿಗೆ ಬೇಕಾಗಿದ್ದ ಕಳ್ಳ ಕೋಟದಲ್ಲಿ ಪೊಲೀಸರ ಬಲೆಗೆ!

Theft; 13 ರಾಜ್ಯಗಳಿಗೆ ಬೇಕಾಗಿದ್ದ ಕಳ್ಳ ಕೋಟದಲ್ಲಿ ಪೊಲೀಸರ ಬಲೆಗೆ!

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.