ಪರ್ಯಾಯ ಭೋಜನದ ಭಕ್ಷ್ಯದಲ್ಲಿ ಸಕ್ಕರೆ, ಮೈದಾ ನಿಷೇಧ


Team Udayavani, Jan 15, 2020, 6:53 AM IST

mk-22

ಉಡುಪಿ: ಪಲಿಮಾರು ಶ್ರೀಪಾದರು ಶ್ರೀ ಕೃಷ್ಣ ಮಠದ ಅಡುಗೆಯಲ್ಲಿ ಮೈದಾ ಹಾಗೂ ಸಕ್ಕರೆ ಬಳಕೆ ನಿಷೇಧ ಮಾಡಿದ್ದು, ಈ ಬಾರಿ ಅದಮಾರು ಪರ್ಯಾಯದ ಭಕ್ಷ್ಯದಲ್ಲಿಯೂ ಮೈದಾ ಹಾಗೂ ಸಕ್ಕರೆಯನ್ನು ನಿಷೇಧಿಸಲಾಗಿದೆ.

ಅದಮಾರು ಪರ್ಯಾಯದಲ್ಲಿ ಬೆಲ್ಲದ ಪಾಕದಿಂದ ತಲಾ 60,000 ಸಾವಿರ ಕಾಳು ಲಾಡು, ಗೋಧಿ ಹಿಟ್ಟಿನ ಬರ್ಫಿ, 1.2 ಲಕ್ಷ ಅಕ್ಕಿ ವಡೆ ತಯಾರಿಸಲಾಗಿದೆ. ಎರಡು ಮೂರು ದಿನಗಳಿಂದ ಬೆಳಗ್ಗೆ 7ರಿಂದ ಸಂಜೆ 5 ವರೆಗೆ ಬಾಣಿಸಿಗರು ಭಕ್ಷ್ಯ ತಯಾರಿಕೆಯಲ್ಲಿ ನಿರತರಾಗಿದ್ದಾರೆ.

ಕೃಷ್ಣ ಮಠ ಪಾರ್ಕಿಂಗ್‌ ಏರಿಯಾ ಬಳಿಯ ಬೈಲಕೆರೆ ಸೇರಿಗಾರ ಕುಟುಂಬಸ್ಥರ ಸುಮಾರು ಒಂದೂವರೆ ಎಕರೆ ಸ್ಥಳದಲ್ಲಿ ಪ್ರಸಾದ ತಯಾರಿ ಮತ್ತು ವಿತರಣೆಗಾಗಿ ವ್ಯವಸ್ಥೆ ಕಲ್ಪಿಸಲಾಗಿದೆ. ಉದ್ಯಾವರ ವಿಷ್ಣು ಮೂರ್ತಿ ನೇತೃತ್ವದ ತಂಡ 100ಕ್ಕೂ ಅಧಿಕ ಬಾಣಸಿಗರು ಅಡುಗೆ ತಯಾರಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಕಳೆದ ಅದಮಾರು ಪರ್ಯಾಯದಲ್ಲಿ ಈ ತಂಡ ಭೋಜನವನ್ನು ತಯಾರಿಸಿತ್ತು.

ಭೋಜನದ ಮೆನು
ಜ. 17ರಂದು ರಾತ್ರಿ 35ರಿಂದ 40 ಸಾವಿರ ಭಕ್ತರಿಗೆ ಭೋಜನದ ವ್ಯವಸ್ಥೆ ಕಲ್ಪಿಸಲಾಗಿದೆ. ಸಂಜೆ 7ರಿಂದ 9 ಗಂಟೆಯ ವರೆಗೆ ಪ್ರಸಾದ ವಿತರಣೆ ನಡೆಯಲಿದೆ. ಅಡಿಕೆ ಹಾಳೆ ತಟ್ಟೆಯಲ್ಲಿ ಊಟವನ್ನು ಬಡಿಸಲಿದ್ದು ಅನ್ನ, ಸಾಂಬಾರು, ಪಾಯಸ, ಮಜ್ಜಿಗೆ ಇರಲಿದೆ. ಜ.18ರಂದು ಮಹಾ ಅನ್ನಸಂತರ್ಪಣೆ ನಡೆಯಲಿದ್ದು 40ರಿಂದ 50 ಸಾವಿರ ಜನರು ಪ್ರಸಾದ ಸ್ವೀಕರಿಸುವ ನಿರೀಕ್ಷೆ ಇದೆ. ಭೋಜನದಲ್ಲಿ ಉಪ್ಪಿನಕಾಯಿ, ಪಲ್ಯ, ಅನ್ನ, ಸಾರು, ಮಟ್ಟುಗುಳ್ಳ ಸಾಂಬಾರು, ಗೋಧಿ ಪಾಯಸ, ಲಾಡು, ಗೋಧಿ ಬರ್ಫಿ, ಅಕ್ಕಿ ವಡೆ, ಮಜ್ಜಿಗೆ ಇರಲಿದೆ. ಊಟಕ್ಕೆ ಬಫೆ ಮತ್ತು ಟೇಬಲ್‌ ವ್ಯವಸ್ಥೆ ಇರಲಿದೆ.

ರಾಮ- ಲಕ್ಷ್ಮಣ ಪಾತ್ರೆ
ಜ. 18ರ ಬೆಳಗ್ಗೆ 3 ಗಂಟೆಗೆ ಅಡುಗೆ ಕೆಲಸ ಆರಂಭವಾಗುತ್ತದೆ. ರಾಮ ಮತ್ತು ಲಕ್ಷ್ಮಣ ಎಂಬ ಎರಡು ಬೃಹತ್‌ ತಾಮ್ರದ ಕಠಾರಗಳಿದ್ದು ಇವುಗಳಲ್ಲಿ ಸಾರು ಮತ್ತು ಸಾಂಬಾರನ್ನು ತಯಾರಿಸಲಾಗುತ್ತದೆ.

ಪರಿಸರಸ್ನೇಹಿ ಊಟದ ವ್ಯವಸ್ಥೆ
ಪರಿಸರ ಸಂರಕ್ಷಣೆ ದೃಷ್ಟಿಯಿಂದ ಊಟದ ವೇಳೆ ಪ್ಲಾಸ್ಟಿಕ್‌ ಲೋಟದ ಜತೆಗೆ ಕಾಗದದ ಲೋಟಗಳನ್ನೂ ನಿಷೇಧಿಸಲಾಗಿದೆ. ಅದರ ಬದಲಿಗೆ ಸುಮಾರು 3,000 ಸ್ಟೀಲ್‌ ಲೋಟಗಳನ್ನು ಖರೀದಿಸಿದ್ದು, ಮುಂದಿನ ಎರಡು ವರ್ಷಗಳ ಕಾಲವೂ ಇವುಗಳನ್ನು ಬಳಸಲಾಗುತ್ತದೆ.

ವಿದ್ಯಾರ್ಥಿಗಳಿಂದ ಆಮಂತ್ರಣ ಪತ್ರಿಕೆ ಹಂಚಿಕೆ
ಶ್ರೀ ಕೃಷ್ಣ ಮಠದ ಪರ್ಯಾಯದಲ್ಲಿ ಇದೇ ಮೊದಲ ಬಾರಿ ಪರ್ಯಾಯ ಆಮಂತ್ರಣ ಪತ್ರಿಕೆ ರಾಜಕಾರಣಿ, ಗಣ್ಯರಿಗೆ ಮಾತ್ರವಲ್ಲದೆ ಜನಸಾಮಾನ್ಯರ ಮನೆಗಳಿಗೂ ಆಮಂತ್ರಣ ಪತ್ರಿಕೆ ತಲುಪಿದೆ. ಅದಮಾರು ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಉಡುಪಿ ನಗರದ 5 ಕಿ.ಮೀ. ವ್ಯಾಪ್ತಿಯ ಮನೆಗಳಿಗೆ ತೆರಳಿ ಆಮಂತ್ರಣ ಪತ್ರಿಕೆ ಹಂಚಿದ್ದಾರೆ.

ನೂರಕ್ಕೂ ಅಧಿಕ ಮಂದಿ ಬಾಣಸಿಗರು
ಪ್ರಸ್ತುತ ನೂರಕ್ಕೂ ಅಧಿಕ ಮಂದಿ ಬಾಣಸಿಗರು ಅಡುಗೆ ಕೆಲಸದಲ್ಲಿ ಕೈ ಜೋಡಿಸಲಿದ್ದಾರೆ. ಒಂದು ಬಾರಿಗೆ 1,000 ಜನರು ಕುಳಿತು ಭೋಜನ ಮಾಡಬಹುದು. ಬಫೆ ವ್ಯವಸ್ಥೆಯಲ್ಲಿ ಎಷ್ಟೂ ಜನರು ಪಾಲ್ಗೊಳ್ಳಬಹುದು. ಪಾರ್ಕಿಂಗ್‌ ಪ್ರದೇಶ ಮತ್ತು ಭೋಜನ ಶಾಲೆ, ಅನ್ನಬ್ರಹ್ಮ ಸಭಾಂಗಣದಲ್ಲಿ ಭೋಜನ ಪ್ರಸಾದದ ವ್ಯವಸ್ಥೆ ಇರಲಿದೆ.
-ವಿಷ್ಣು ಮೂರ್ತಿ ಭಟ್‌ , ಉದ್ಯಾವರ, ಮುಖ್ಯ ಬಾಣಸಿಗ.

ಟಾಪ್ ನ್ಯೂಸ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.