Udupi ಧರ್ಮ ಸಂರಕ್ಷಣೆಯಲ್ಲಿ ಪುರೋಹಿತರು, ವಿದ್ವಾಂಸರ ಪಾತ್ರ ಅಪಾರ: ಪುತ್ತಿಗೆ ಶ್ರೀ

ಶ್ರೀಪುತ್ತಿಗೆ ವಿದ್ಯಾಪೀಠದ 37ನೇ ಘಟಿಕೋತ್ಸವ, ಗುರುವಂದನೆ

Team Udayavani, May 26, 2024, 10:59 PM IST

Udupi ಧರ್ಮ ಸಂರಕ್ಷಣೆಯಲ್ಲಿ ಪುರೋಹಿತರು, ವಿದ್ವಾಂಸರ ಪಾತ್ರ ಅಪಾರ: ಪುತ್ತಿಗೆ ಶ್ರೀ

ಉಡುಪಿ: ಧರ್ಮ ಸಂರಕ್ಷಣೆಯಲ್ಲಿ ಪುರೋಹಿತರು, ವಿದ್ವಾಂಸರ ಪಾತ್ರ ಮುಖ್ಯವಾದುದು. ಅಂತಹವರನ್ನು ಸಮಾಜಕ್ಕೆ ಕೊಡುಗೆಯಾಗಿ ನೀಡುವಲ್ಲಿ ಶ್ರೀ ಪುತ್ತಿಗೆ ವಿದ್ಯಾಪೀಠವು 37 ವರ್ಷಗಳಿಂದ ಕಾರ್ಯನಿರತವಾಗಿದೆ ಎಂದು
ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶ ರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ನುಡಿದರು.

ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ರವಿವಾರ ನಡೆದ ಶ್ರೀ ಪುತ್ತಿಗೆ ವಿದ್ಯಾಪೀಠದ 37ನೇ ಘಟಿಕೋತ್ಸವ ಹಾಗೂ ಗುರುವಂದನೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಶ್ರೀಪಾದರು ಆಶೀರ್ವಚನ ನೀಡಿದರು.

ಧಾರ್ಮಿಕ ಆಚರಣೆ, ತಣ್ತೀದ ತಿಳುವಳಿಕೆಯನ್ನು ಸ್ಥೂಲವಾಗಿ ಅಧ್ಯ ಯನ ಮಾಡಿದ ವಿದ್ಯಾರ್ಥಿಗಳು ಜನರು ಧರ್ಮ ಪರಿಪಾಲಕರಾಗಿ ಬದುಕಲು ದಾರಿ ತೋರಿಸಬೇಕು.

ವಿದ್ಯಾಪೀಠದಲ್ಲಿ ಅಭ್ಯಾಸ ಮಾಡಿದವರಲ್ಲಿ 30 ಪುರೋಹಿತರು ವಿದೇಶಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ವಿದ್ಯಾಪೀಠವು ಇದೀಗ 7 ಮಂದಿ ಪುರೋಹಿತ ರನ್ನು ಸಮಾಜಕ್ಕೆ ಧಾರೆ ಎರೆದಿದೆ ಎಂದರು.

ಹುಣಸಿಹೊಳೆ ಕಣ್ವ ಮಠದ ಶ್ರೀ ವಿದ್ಯಾಕಣ್ವವಿರಾಜತೀರ್ಥ ಶ್ರೀಪಾದರು,ಶ್ರೀ ಪುತ್ತಿಗೆ ಮಠದ ಕಿರಿಯ ಯತಿ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ಆಶೀರ್ವಚನ ನೀಡಿದರು.

ವಿದ್ವಾಂಸರಾದ ವಿ| ಸಗ್ರಿ ರಾಘವೇಂದ್ರ ಆಚಾರ್ಯ, ವಿ| ಸೂರ್ಯನಾರಾಯಣ ಉಪಾಧ್ಯಾಯ ಕುಂಭಾಶಿ, ವಿ| ಶ್ರೀಧರ ತಂತ್ರಿ ಕೇಂಜ, ವಿ| ರಾಮದಾಸ ಉಪಾಧ್ಯಾಯ ಮುಂಬಯಿ, ವಿ| ಪ್ರಕಾಶ ಭಟ್‌ ಮುಂಬಯಿ, ವಿ| ಪ್ರವೀಣ್‌ ಆಚಾರ್ಯ ಚೆನ್ನೈ, ವಿ| ಶ್ರೀಪತಿ ಆಚಾರ್ಯ, ಶ್ರೀನಿವಾಸ ಆಚಾರ್ಯ ಬೆಳಗಾವಿ, ರೋಹಿತ್‌ ಚಕ್ರತೀರ್ಥ, ಶತಾವಧಾನಿ ರಾಮನಾಥ ಆಚಾರ್ಯ, ವಿ| ವಿಜಯಸಿಂಹ ತೋಟಂತಿಲ್ಲಾಯ ಶುಭಾಶಂಸನೆಗೈದರು.
ಶ್ರೀ ಮಠದ ರಮೇಶ್‌ ಭಟ್‌, ವಿದ್ವಾಂಸರು, ಗಣ್ಯರು ಉಪಸ್ಥಿತರಿದ್ದರು. ವಿ| ರಾಜೇಶ್‌ ಭಟ್‌ ಮುಂಬಯಿ, ವಿ| ಪಂಜ ಭಾಸ್ಕರ ಭಟ್‌ ಅವರನ್ನು ಶ್ರೀಪಾದರು ಗೌರವಿಸಿದರು. ವಿದ್ವಾಂಸ ಡಾ| ಬಿ. ಗೋಪಾಲ ಆಚಾರ್ಯರು ವಿದ್ಯಾಪೀಠದ ಆಶಯವನ್ನು ವ್ಯಕ್ತಪಡಿಸಿ ದರು. ವಿದ್ಯಾಪೀಠದ ಪ್ರಾಂಶುಪಾಲ ಶ್ರೀನಿಧಿ ಆಚಾರ್ಯ ಸ್ವಾಗತಿಸಿದರು. ವಿ| ಯೋಗೀಂದ್ರ ಭಟ್‌ ಉಳಿ ನಿರೂಪಿಸಿ, ವಿ| ವಾದಿರಾಜ ತಂತ್ರಿ ವಂದಿಸಿದರು.

ಮಂಗಳ ಮಹೋತ್ಸವದಲ್ಲಿ ವಿದ್ಯಾರ್ಥಿಗಳಾದ ಸಂದೇಶ ಮೂಡಿತ್ತಾಯ ಪೆರ್ಡೂರು (ಜೋತಿಷ ಶಾಸ್ತ್ರ ), ವಿರಾಜ್‌ ಭಟ್‌ ಹಳೆಯಂಗಡಿ (ರುಕ್ಮಿಣೀಶ ವಿಜಯ), ಅರ್ಜುನ ಹೆಗಡೆ ಶಿರಸಿ (ಉಪನಿಷತ್ತು), ಕೃಷ್ಣ ಹೆಗಡೆ ಶಿರಸಿ (ಮಹಾಭಾರತ ತಾತ್ಪರ್ಯ ನಿರ್ಣಯ ಗ್ರಂಥ), ದರ್ಶನ್‌ ದೇಶಪಾಂಡೆ ಬಾದಾಮಿ (ವಾಯುದೇವರ ಅವತಾರದ ಕಾರಣ), ಶ್ರವಣ್‌ ಭಟ್‌ ಅಜೆಕಾರು (ಪೌರೋಹಿತ್ಯ) ಅವರು ವಿಷಯ ಪ್ರಸ್ತುತಪಡಿಸಿದರು.

ಪ್ರಾರಂಭೋತ್ಸವ-ಗುರುವಂದನೆ
ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಿಸಿ ಗೌರವಿಸಿದ ಪುತ್ತಿಗೆ ಶ್ರೀಪಾದರು ವಿದ್ಯಾಪೀಠದ 38ನೇ ವರ್ಷಕ್ಕೆ ವಿದ್ಯಾರ್ಥಿಗಳಿಗೆ ಶಾಂತಿ ಪಾಠದ ಮೂಲಕ ಚಾಲನೆ ನೀಡಿದರು. ವಿದ್ಯಾರ್ಥಿಗಳ ಪರವಾಗಿ ಶ್ರೀ ವಿದ್ಯಾಕಣ್ವವಿರಾಜತೀರ್ಥ ಶ್ರೀಪಾದರಿಗೆ ಮಠದ ದಿವಾನ ಪ್ರಸನ್ನ ಆಚಾರ್ಯರ ನೇತೃತ್ವದಲ್ಲಿ ಗುರುವಂದನೆ ನಡೆಸಲಾಯಿತು.

 

ಟಾಪ್ ನ್ಯೂಸ್

Bantwal ಹಳೆಯ ದ್ವೇಷಕ್ಕೆ ಬೆಂಕಿಗಾಹುತಿಯಾಯಿತು ಸ್ನೇಹಿತನ ಬೈಕ್ ….

Bantwal ಸ್ನೇಹಿತರಿಬ್ಬರ ದ್ವೇಷ; ಅಮಾಯಕ ಯುವಕನ ಬೈಕ್‌ ಭಸ್ಮ

1-dharwad

Dharwad; ನೇಚರ್ ವ್ಯೂ ಫೋಟೋಗ್ರಫಿ, ರೀಲ್ಸ್ ಗೆ 16 ರ ಬಾಲಕರಿಬ್ಬರು ಬಲಿ!

renukaacharya

BJP vs BJP; ಶಾಸಕ ಬಿ.ಪಿ. ಹರೀಶ್ ವಿರುದ್ಧ ಕಿಡಿ ಕಾರಿದ ರೇಣುಕಾಚಾರ್ಯ

ಆಲದಮರ ಕೆಳಗೆ ಶಾಂತವಾಗಿ ಕುಳಿತುಕೊಳ್ಳಲಿ: ಸಿದ್ದೇಶ್ವರ್ ಗೆ ರವೀಂದ್ರನಾಥ್ ಟಾಂಗ್

Davanagere;ಆಲದಮರ ಕೆಳಗೆ ಶಾಂತವಾಗಿ ಕುಳಿತುಕೊಳ್ಳಲಿ: ಸಿದ್ದೇಶ್ವರ್ ಗೆ ರವೀಂದ್ರನಾಥ್ ಟಾಂಗ್

Ekam web series produced by Rakshit is coming to the audience; Full details are here

ಪ್ರೇಕ್ಷಕರೆದುರು ಬರುತ್ತಿದೆ ರಕ್ಷಿತ್ ನಿರ್ಮಾಣದ Ekam ವೆಬ್ ಸಿರೀಸ್; ಪೂರ್ಣಮಾಹಿತಿ ಇಲ್ಲಿದೆ

Chikkodi;ಸಮಸ್ಯೆ ಬಗೆಹರಿಸಲು, ಬೇಡಿಕೆ ಈಡೇರಿಸಲು ಪ್ರಯತ್ನ: ಸಂಸದೆ ಪ್ರಿಯಾಂಕಾ ಜಾರಕಿಹೊಳಿ

Chikkodi;ಸಮಸ್ಯೆ ಬಗೆಹರಿಸಲು, ಬೇಡಿಕೆ ಈಡೇರಿಸಲು ಪ್ರಯತ್ನ: ಸಂಸದೆ ಪ್ರಿಯಾಂಕಾ ಜಾರಕಿಹೊಳಿ

Mudhol ಬೈಕ್‌ಗಳ ಸರಣಿ ಕಳ್ಳತನ; ಆರೋಪಿ ಪೊಲೀಸ್‌ ವಶಕ್ಕೆ

Mudhol ಬೈಕ್‌ಗಳ ಸರಣಿ ಕಳ್ಳತನ; ಆರೋಪಿ ಪೊಲೀಸ್‌ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup; ಮೂಳೂರಿನಲ್ಲಿ ಹೊಡೆದಾಟ: ಆರು ಮಂದಿಯ ವಿರುದ್ಧ ಪ್ರಕರಣ ದಾಖಲು

Kaup; ಮೂಳೂರಿನಲ್ಲಿ ಹೊಡೆದಾಟ: ಆರು ಮಂದಿಯ ವಿರುದ್ಧ ಪ್ರಕರಣ ದಾಖಲು

Dendoor Katte: 2 cows, 1 calf found illegally transported in separate cases

Dendoor Katte: ಪ್ರತ್ಯೇಕ ಪ್ರಕರಣಗಳಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 2 ಹಸು, 1 ಕರು ಪತ್ತೆ

Innanje Railway Station; A gold chain was stolen from a woman who was traveling from Madurai to Mumbai

Innanje Railway Station; ಮಧುರೈನಿಂದ ಮುಂಬಯಿಗೆ ತೆರಳುತ್ತಿದ್ದ ಮಹಿಳೆಯ ಚಿನ್ನದ ಸರ ಕಳವು

Udupi: ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ಬಿಜೆಪಿಯಿಂದ ರಸ್ತೆ ತಡೆದು ಪ್ರತಿಭಟನೆ

Udupi: ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ಬಿಜೆಪಿಯಿಂದ ರಸ್ತೆ ತಡೆದು ಪ್ರತಿಭಟನೆ

4-udupi

Udupi: ಮುಗಿದ ಗಡುವು; ಸಿಟಿ ಬಸ್ಸುಗಳ ಕರ್ಕಶ ಹಾರ್ನ್ ತೆರವುಗೊಳಿಸಿದ ಟ್ರಾಫಿಕ್ ಪೊಲೀಸರು

MUST WATCH

udayavani youtube

ಈದ್ಗಾ ಮೈದಾನದಲ್ಲಿ ನಡೆದ ಬಕ್ರೀದ್ ಆಚರಣೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಆರ್ ಬಿ ತಿಮ್ಮಾಪುರ

udayavani youtube

ಮಾನಸಿಕ ಸಮಸ್ಯೆಯ ಲಕ್ಷಣಗಳೇನು?

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

udayavani youtube

ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಆಡಳಿತ ಮಾಡಲು ಅಸಮರ್ಥರು

udayavani youtube

ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

ಹೊಸ ಸೇರ್ಪಡೆ

Bantwal ಹಳೆಯ ದ್ವೇಷಕ್ಕೆ ಬೆಂಕಿಗಾಹುತಿಯಾಯಿತು ಸ್ನೇಹಿತನ ಬೈಕ್ ….

Bantwal ಸ್ನೇಹಿತರಿಬ್ಬರ ದ್ವೇಷ; ಅಮಾಯಕ ಯುವಕನ ಬೈಕ್‌ ಭಸ್ಮ

1-dharwad

Dharwad; ನೇಚರ್ ವ್ಯೂ ಫೋಟೋಗ್ರಫಿ, ರೀಲ್ಸ್ ಗೆ 16 ರ ಬಾಲಕರಿಬ್ಬರು ಬಲಿ!

Alnavar: ಎತ್ತ ನೋಡಿದರೂ ಹಕ್ಕಿಗಳ ಕಲರವ

Alnavar: ಎತ್ತ ನೋಡಿದರೂ ಹಕ್ಕಿಗಳ ಕಲರವ

renukaacharya

BJP vs BJP; ಶಾಸಕ ಬಿ.ಪಿ. ಹರೀಶ್ ವಿರುದ್ಧ ಕಿಡಿ ಕಾರಿದ ರೇಣುಕಾಚಾರ್ಯ

Rabkavi Banhatti ಮೋದಿ ಪ್ರಧಾನಿ; ಹರಕೆ ತೀರಿಸಿದ ಅಭಿಮಾನಿ

Rabkavi-Banhatti ಮೋದಿ ಪ್ರಧಾನಿ; ಹರಕೆ ತೀರಿಸಿದ ಅಭಿಮಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.