ಕೌಟುಂಬಿಕ ಹಿನ್ನೆಲೆ ಇಲ್ಲದ 60 ವರ್ಷ ಮೇಲ್ಪಟ್ಟವರ ಮನೆಗೆ ಅಗತ್ಯಗಳ ಪೂರೈಕೆ
Team Udayavani, Mar 30, 2020, 6:10 AM IST
ಉಡುಪಿ: ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ನಗರ ಪ್ರದೇಶದಲ್ಲಿರುವ 60 ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟ ಯಾವುದೇ ಕೌಟುಂಬಿಕ ಆಧಾರ ಇಲ್ಲದಿರುವ ವಯೋನಾಗರಿಕರಿಗೆ ಅಗತ್ಯ ವಸ್ತು ಮತ್ತು ಔಷಧಗಳನ್ನು ಮನೆ-ಮನೆಗೆ ತಲುಪಿಸಲು ವ್ಯವಸ್ಥೆ ಮಾಡಲಾಗಿದೆ.
ಈಗಾಗಲೇ ಕೋವಿಡ್-19 ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲೆಯ ವ್ಯಾಪ್ತಿಯಲ್ಲಿ ಸಿಆರ್ಪಿಸಿ 144(3) ಸೆಕ್ಷನ್ನಂತೆ ನಾಗರಿಕ ಸಂಚಾರವನ್ನು ನಿರ್ಬಂಧಿಸಿದೆ. ಮೆಡಿಕಲ್ ಶಾಪ್ಗ್ಳನ್ನು ಹೊರತುಪಡಿಸಿ ದಿನಸಿ ಮತ್ತಿತರ ವಸ್ತುಗಳಿಗೆ ಬೆಳಗ್ಗೆ 7ರಿಂದ ಮಧ್ಯಾಹ್ನ 11ಗಂಟೆಯವರೆಗೆ ಮಾತ್ರ ಕಾಲಾವಕಾಶ ನೀಡಲಾಗಿದೆ.
ಹೀಗಾಗಿ 60 ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟ ಯಾವುದೇ ಕೌಟುಂಬಿಕ ಆಧಾರ ಇಲ್ಲದಿರುವ (ಯಾವುದೇ ರೀತಿಯ 60 ವರ್ಷಕ್ಕಿಂತ ಕೆಳಗಿನ ಸಂಬಂಧಿಕರು ಅವರೊಂದಿಗೆ ವಾಸ್ತವ್ಯವಿರದಿದ್ದಲ್ಲಿ) ಇರುವ ವಯೋನಾಗರಿಕರಿಗೆ ಅಗತ್ಯ ವಸ್ತು ಮತ್ತು ಔಷಧಗಳನ್ನು ಮಾರುಕಟ್ಟೆಗೆ ಬಂದು ಕೊಂಡುಕೊಳ್ಳುವುದು ಕಷ್ಟವಾಗಿದೆ. ಆದುದರಿಂದ ಉಡುಪಿ ನಗರಸಭೆ, ಕುಂದಾಪುರ, ಕಾಪು ಹಾಗೂ ಕಾರ್ಕಳ ಪುರಸಭೆ ಮತ್ತು ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಅಗತ್ಯ ವಸ್ತು ಮತ್ತು ಔಷಧವನ್ನು ಮನೆಬಾಗಿಲಿಗೆ ತಲುಪಿಸಲು ವ್ಯವಸ್ಥೆ ಮಾಡಲಾಗಿದೆ.
ಅಂತಹ ವ್ಯಕ್ತಿಗಳು ಒಂದು ವಾರದ ಅಗತ್ಯ ದಿನಸಿ, ಹಣ್ಣು ಹಂಪಲು, ಔಷಧಗಳ ಪಟ್ಟಿ ಮಾಡಿ ಮನೆಯ ಸಂಪೂರ್ಣ ವಿಳಾಸವನ್ನು ಕೆಳಗೆ ನಮೂದಿಸಿದ ಅಧಿಕಾರಿಗಳಿಗೆ ದೂರವಾಣಿ ಮೂಲಕ ಸಂಪರ್ಕಿಸಿ ಮಾಹಿತಿ ನೀಡುವಂತೆ ಸೂಚಿಸಲಾಗಿದೆ. ವಸ್ತುಗಳು ಮನೆಗೆ ತಲುಪಿದ ಬಳಿಕ ಅದಕ್ಕೆ ತಗಲುವ ವೆಚ್ಚವನ್ನು ಪಾವತಿಸುವಂತೆ ಸೂಚಿಸಿದೆ.
ಸಂಪರ್ಕ ಸಂಖ್ಯೆಗಳು
ಉಡುಪಿ ವ್ಯಾಪ್ತಿಯ ನಿವಾಸಿಗಳು: ಉಡುಪಿ ನಗರಸಭೆ ಪೌರಯುಕ್ತ ಆನಂದ ಸಿ. ಕಲ್ಲೋಳಿಕರ್ -9740019211, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಮೋಹನರಾಜು -9342594242, ಪರಿಸರ ಎಂಜಿನಿಯರ್ ಸ್ನೇಹಾ -9164397765, ಕಂದಾಯ ಅಧಿಕಾರಿ ಧನಂಜಯ – 8762083841.
ಕುಂದಾಪುರ ವ್ಯಾಪ್ತಿಯ ನಿವಾಸಿಗಳು: ಕುಂದಾಪುರದ ಪರಿಸರ ಎಂಜಿನಿಯರ್ ರಾಘವೇಂದ್ರ -9448507244
ಕಾರ್ಕಳ ಪುರಸಭೆಯ ನಿವಾಸಿಗಳು: ಪುರಸಭೆಯ ಮುಖ್ಯಾಧಿಕಾರಿ ರೇಖಾ ಶೆಟ್ಟಿ -9900948873,
ಕಾಪು ಪುರಸಭೆ ವ್ಯಾಪ್ತಿಯ ನಿವಾಸಿಗಳು: ಪರಿಸರ ಎಂಜಿನಿಯರ್ ರವಿಪ್ರಕಾಶ್- 7624851225
ಸಾಲಿಗ್ರಾಮ ಪಟ್ಟಣ ಪಂಚಾಯತ್ ನಿವಾಸಿಗಳು: ಮುಖ್ಯಾಧಿಕಾರಿ ಅರುಣ್- 9449943882, ಆರೋಗ್ಯ ನಿರೀಕ್ಷಕಿ ಮಮತಾ- 9035627273 ಅವರನ್ನು ಸಂಪರ್ಕಿಸುವಂತೆ ಜಿಲ್ಲಾಧಿಕಾರಿಗಳು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು
Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ
Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ
Veerappa Moily; ದೇಶಕ್ಕೆ ಕ್ರಿಕೆಟ್ ಕಾಮೆಂಟ್ರಿಯನ್ ಬೇಕಿಲ್ಲ
Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ
MUST WATCH
ಹೊಸ ಸೇರ್ಪಡೆ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Bengaluru: ಕದಂಬ ಹೋಟೆಲ್ ಸ್ಫೋಟ ಮಾಡುವುದಾಗಿ ಬೆದರಿಕೆ