ಕೃಷಿಕರಿಗೆ ಪೂರಕ ಯೋಜನೆಗಳು ಮತ ಕೇಳಲು, ಚರ್ಚಿಸಲು ಸಹಾಯ: ಜೆಪಿ ಹೆಗ್ಡೆ

ಚಿಕ್ಕಮಗಳೂರು ಕ್ಷೇತ್ರ ದಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೇನೆ.

Team Udayavani, Apr 22, 2024, 10:07 AM IST

ಕೃಷಿಕರಿಗೆ ಪೂರಕ ಯೋಜನೆಗಳು ಮತ ಕೇಳಲು, ಚರ್ಚಿಸಲು ಸಹಾಯ: ಜೆಪಿ ಹೆಗ್ಡೆ

ಚಿಕ್ಕಮಗಳೂರು: ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲೆಯಲ್ಲಿ ಮತಯಾಚನೆಯ ವೇಳೆ ಜನರು ಅಪಾರ ಅಭಿಮಾನ, ಪ್ರೀತಿ, ಪ್ರೋತ್ಸಾಹ ನೀಡಿದ್ದಾರೆ. ಈ ಅಭಿಮಾನ ಮತ್ತು ಪ್ರೀತಿ ಮತವಾಗಿ ಬದಲಾಗುತ್ತದೆ ಎಂಬ ನಂಬಿಕೆ ಇದೆ. ಜನ ಬದಲಾವಣೆ ಬಯಸಿದ್ದಾರೆ. ಇದಕ್ಕೆ ರಾಜ್ಯದಲ್ಲಿ ಕಾಂಗ್ರೆಸ್‌ ಮಾಡಿದ ಅಭಿವೃದ್ಧಿ ಕಾರ್ಯಗಳು ಮತ್ತು ಬಡವರ ಬದುಕಿಗೆ ನೆರವಾದ ಐದು ಗ್ಯಾರೆಂಟಿಗಳೇ ಕಾರಣ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಅಭ್ಯರ್ಥಿ ಜಯಪ್ರಕಾಶ ಹೆಗ್ಡೆ ಹೇಳಿದರು.

ಅವರು ತಾಲೂಕಿನ ಆಲ್ದೂರಿನಲ್ಲಿ ನಡೆದ ಬೃಹತ್‌ ಜಾಥಾದ ಬಳಿಕ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದರು. ಹತ್ತು ವರ್ಷ ಕಳೆದರೂ ಮತ್ತೊಂದು ರೈಲು ತರಲಾಗಲಿಲ್ಲ ಕಳೆದ ನಾಲ್ಕು ದಶಕಗಳಿಂದ ರಾಜಕೀಯದಲ್ಲಿ ತೊಡಗಿಕೊಂಡಿದ್ದ ನನ್ನ ಬಗ್ಗೆ ಜನರು ಅಪಾರ ಪ್ರೀತಿ ತೋರಿಸುತ್ತಿರುವುದು ಮಾಡಿರುವ ಕೆಲಸಗಳನ್ನು ನೋಡಿ. ಕೇವಲ 20 ತಿಂಗಳ ಕಾಲ ಸಂಸದನಾಗಿದ್ದರೂ ಉಡುಪಿ ಮತ್ತು ಚಿಕ್ಕಮಗಳೂರು ಕ್ಷೇತ್ರ ದಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೇನೆ.

ಒಂದು ರೈಲ್ವೆ ಆರಂಭವಾಗಿ ಹತ್ತು ವರ್ಷ ಕಳೆದರೂ ಅನಂತರ ಅಧಿಕಾರಕ್ಕೆ ಬಂದವರಿಗೆ ಮತ್ತೂಂದು ರೈಲು ತರಲಾಗಲಿಲ್ಲ. ಪಕ್ಷದ ಜನರೇ “ಗೋ ಬ್ಯಾಕ್‌’ ಎಂದು ಹೇಳುವ ಸ್ಥಿತಿ ನಿರ್ಮಾಣವಾಯಿತು. ಇದರಿಂದಾಗಿ ಪ್ರತಿಸ್ಪರ್ಧಿ ಕ್ಷೇತ್ರವನ್ನೇ ತೊರೆದು ಹೋಗುವಂತಾಯಿತು. ಏನಾದರೂ ಅಭಿವೃದ್ಧಿ ಮಾಡಿದರೆ ಕ್ಷೇತ್ರದ ಜನರು ಚುನಾವಣೆ ಬಂದಾಗ ಸ್ಮರಿಸುತ್ತಾರೆ. ಚಿಕ್ಕಮಗಳೂರಿನ ಬೀದಿ ಬೀದಿಗಳಲ್ಲಿ ಮತ ಯಾಚನೆ ಮಾಡುವಾಗ ಜನ ತೋರುತ್ತಿರುವ ಪ್ರೀತಿಯನ್ನು ಕಂಡಾಗ ಗೆಲ್ಲುವ ಆತ್ಮವಿಶ್ವಾಸ ಮೂಡಿದೆ ಎಂದರು.

ಜನಪ್ರತಿನಿಧಿಯಾಗಿ ಅಡಿಕೆ ಬೆಳೆಗಾರರಿಗೆ ಮಾಡಿದ ನೆರವು, ಕಾಂಗ್ರೆಸ್‌ ಸರಕಾರದ ಕೃಷಿಕರಿಗೆ ಪೂರಕವಾದ ಯೋಜನೆಗಳು ಮತ ಕೇಳಲು ಮತ್ತು ಮತದಾರರೊಂದಿಗೆ ಚರ್ಚಿಸಲು ಸಹಾಯ ಮಾಡಿದೆ. ಜನಪ್ರತಿನಿಧಿ ಎನಿಸಿ  ಕೊಂಡವರು, ಚುನಾವಣೆ ವೇಳೆ ಮತ ಯಾಚಿಸುವಾಗ ಅವರು ಕ್ಷೇತ್ರದ ಜನರಿಗಾಗಿ ಮಾಡಿದ ಯಾವುದಾದರೂ ಕೆಲಸಗಳಿದ್ದರೆ ನೆರವಾಗುತ್ತದೆ. ಇಲ್ಲಿನ ಮತದಾರರು ಹಿಂದೆ ಮಾಡಿದ ಅಭಿವೃದ್ಧಿ ಕಾರ್ಯ ನೋಡಿಕೊಂಡು ಜಯಕ್ಕಾಗಿ ಹಾರೈಸುತ್ತಿದ್ದಾರೆ. ಇದು ಯಶಸ್ಸಿನ ಹಾದಿಗೆ ನೆರವಾಗುತ್ತದೆ ಎಂದರು. ಮಾಜಿ ಶಾಸಕಿ ಮೋಟಮ್ಮ, ಎಂ.ಪಿ. ಕುಮಾರ ಸ್ವಾಮಿ ಹಾಗೂ ಕಾಂಗ್ರೆಸ್‌ನ ಇತರ ಗಣ್ಯರು ಈ
ಸಂದರ್ಭದಲ್ಲಿ ಹಾಜರಿದ್ದರು.

“ಗ್ಯಾರಂಟಿಯಿಂದ ಮಹಿಳೆಯರು ಹಾದಿ ತಪ್ಪುತ್ತಿದ್ದಾರೆ ಎಂದು ಲೇವಡಿ ಮಾಡಿರುವುದು ಖಂಡನೀಯ’

ಮೂಡಿಗೆರೆ ಶಾಸಕಿ, ನಯನಾ ಮೋಟಮ್ಮ ಮಾತನಾಡಿ, “ಇವತ್ತು ರಾಜ್ಯ ಮಹಿಳೆಯರು ಖುಷಿಯಿಂದ, ಆತ್ಮವಿಶ್ವಾಸದಿಂದ ಇರಲು ಕಾಂಗ್ರೆಸ್‌ ಸರಕಾರ ನೀಡಿದ ಐದು ಗ್ಯಾರಂಟಿಗಳೇ ಕಾರಣವಾಗಿವೆ. ಮಾಜಿ ಮುಖ್ಯಮಂತ್ರಿಗಳು ಈ ಗ್ಯಾರಂಟಿಯಿಂದ ಮಹಿಳೆಯರು ಹಾದಿ ತಪ್ಪುತ್ತಿದ್ದಾರೆ ಎಂದು ಲೇವಡಿ ಮಾಡಿರುವುದು ಖಂಡನೀಯ. ಎ. 26ರಂದು ನಡೆಯುವ ಮತದಾನದ ವೇಳೆ ಕ್ಷೇತ್ರದ ಜನತೆ ಇದಕ್ಕೆ ತಕ್ಕ ಉತ್ತರ ನೀಡಲಿದ್ದಾರೆ. ಕಾಂಗ್ರೆಸ್‌ ಸರಕಾರ ನೀಡಿರುವ ಐದು ಗ್ಯಾರಂಟಿಗಳಿಂದ ಅಭಿವೃದ್ಧಿ ಕಾರ್ಯ ಮರೆತ ವಿರೋಧ ಪಕ್ಷಗಳಿಗೆ ಸಹಿಸಿಕೊಳ್ಳಲಾಗುತ್ತಿಲ್ಲ. ಸೋಲಿನ ಆತಂಕ ಕಾಡಿದಾಗ ಲೇವಡಿಯೇ ಅಸ್ತ್ರವಾಗುತ್ತದೆ. ನಮ್ಮ
ಅಭ್ಯರ್ಥಿ ಜಯಪ್ರಕಾಶ್‌ ಹೆಗ್ಡೆ ಅವರು ಅಭಿವೃದ್ಧಿ ಕಾರ್ಯಗಳನ್ನು ಮುಂದಿಟ್ಟುಕೊಂಡು ಮತ ಯಾಚಿಸುತ್ತಿದ್ದಾರೆಯೇ ಹೊರತು ಪ್ರತಿಸ್ಪರ್ಧಿಗಳನ್ನು ಟೀಕಿಸಿಯೋ ಅಥವಾ ಲೇವಡಿ ಮಾಡಿಯೋ ಮತ ಯಾಚಿಸುತ್ತಿಲ್ಲ. ಮಹಿಳೆಯರನ್ನು ಅವಮಾನಿಸುವುದು ಕಾಂಗ್ರೆಸ್‌ ಸಂಸ್ಕೃತಿಯಲ್ಲ. ನಾಳೆಯ ನೆಮ್ಮದಿಗಾಗಿ ಇಂದು ಕಾಂಗ್ರೆಸ್‌ ಪಕ್ಷವನ್ನು ಗೆಲ್ಲಿಸುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಹೇಳಿದರು.

ಟಾಪ್ ನ್ಯೂಸ್

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

gajanur3

ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ

g t devegowda

Mysore; ನಾನು ಮುಡಾದಿಂದ ಎಲ್ಲಿಯೂ ನಿವೇಶನ ಪಡೆದುಕೊಂಡಿಲ್ಲ: ಜಿ ಟಿ ದೇವೇಗೌಡ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?

Protest across the state if Ramanagara name is changed: pramod muthalik

Bengaluru South; ರಾಮನಗರ ಹೆಸರು ಬದಲಾಯಿಸಿದರೆ ರಾಜ್ಯಾದ್ಯಂತ ಉಗ್ರ ಹೋರಾಟ: ಮುತಾಲಿಕ್ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Screenshot (7) copy

Thekkatte: 5 ಗ್ರಾ.ಪಂ.ಗಳ ಕಸ ವಿಲೇವಾರಿಯೇ ದೊಡ್ಡ ಸವಾಲು!

Screenshot (3) copy

Kundapura: ಮಕ್ಕಳನ್ನು ಹೊತ್ಕೊಂಡೇ ಹೊಳೆ ದಾಟಿಸಬೇಕು!ಅಮಾಸೆಬೈಲಿನ ಕುಡಿಸಾಲು ಪರಿಸರದ ಸಮಸ್ಯೆ

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Kundapura ಮೂರು ಕಡಲಾಮೆ ರಕ್ಷಣೆ

Kundapura ಮೂರು ಕಡಲಾಮೆ ರಕ್ಷಣೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

Screenshot (7) copy

Thekkatte: 5 ಗ್ರಾ.ಪಂ.ಗಳ ಕಸ ವಿಲೇವಾರಿಯೇ ದೊಡ್ಡ ಸವಾಲು!

ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು

Hubli; ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು

gajanur3

ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.