ಬೆಂಬಲ ಬೆಲೆ ಘೋಷಿಸಿದರೂ ಕರಾವಳಿಗರಿಗೆ ಪ್ರಯೋಜನವಿಲ್ಲ 


Team Udayavani, Nov 19, 2021, 7:20 AM IST

ಬೆಂಬಲ ಬೆಲೆ ಘೋಷಿಸಿದರೂ ಕರಾವಳಿಗರಿಗೆ ಪ್ರಯೋಜನವಿಲ್ಲ 

ಕೋಟ: ಕನಿಷ್ಠ ಬೆಂಬಲ ಬೆಲೆಯಡಿ ಭತ್ತ ಖರೀದಿಗೆ ನೋಂದಣಿ ಆರಂಭವಾಗಿದ್ದರೂ ಉಡುಪಿ ಮತ್ತು ದಕ್ಷಿಣ ಕನ್ನಡದ ಶೇ. 90 ರೈತರಿಗೆ ನಿರಾಶೆಯೇ ಕಾದಿದೆ. ಪ್ರಸ್ತುತ ಮಾನದಂಡದಂತೆ ಯೋಜನೆಯಡಿ ಕೆಂಪು ಭತ್ತ ಖರೀದಿಗೆ ಅವಕಾಶ ಇಲ್ಲದಿರುವುದೇ ಇದಕ್ಕೆ ಕಾರಣ. ಇದನ್ನು ಶೀಘ್ರ ಬದಲಾಯಿಸಿದರೆ ಮಾತ್ರ ಕರಾವಳಿಯ ರೈತರಿಗೆ ಪ್ರಯೋಜನವಾಗಲು ಸಾಧ್ಯ.

ಸಾಕಷ್ಟು ಹೋರಾಟಗಳ ಅನಂತರ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ಸಹಿತ ರಾಜ್ಯದಲ್ಲಿ ಬೆಂಬಲ ಬೆಲೆಯಲ್ಲಿ ಭತ್ತ ಖರೀದಿಗಾಗಿ ರೈತರ ನೋಂದಣಿ ಆರಂಭವಾಗಿದೆ. ಆದರೆ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇ. 90ರಷ್ಟು ರೈತರು ಎಂಒ 4 ತಳಿಯ ಕೆಂಪು ಭತ್ತವನ್ನೇ ಬೆಳೆಯುತ್ತಾರೆ. ಆದ್ದರಿಂದ ಅವರಾರಿಗೂ ನೋಂದಣಿಗೆ ಅವಕಾಶ ಇಲ್ಲ.

ಕಳೆದ ಸಾಲಿನಲ್ಲಿ ಉಡುಪಿ ಜಿಲ್ಲೆಯಲ್ಲಿ ಕೃಷಿ ಇಲಾಖೆ ಮೂಲಕ ಎರಡು ಸಾವಿರ ಕ್ವಿಂಟಾಲ್‌ ಭತ್ತದ ಬೀಜ ಬಿತ್ತನೆಯಾಗಿತ್ತು. ಇದರಲ್ಲಿ 1,700 ಕ್ವಿಂಟಾಲ್‌ ಎಂಒ4 ತಳಿ. ದಕ್ಷಿಣ ಕನ್ನಡದಲ್ಲಿ ಇಲಾಖೆಯ ಮೂಲಕ 598 ಕ್ವಿಂ. ಬಿತ್ತನೆ ಬೀಜ ಮಾರಾಟವಾಗಿದ್ದು, ಅದರಲ್ಲಿ 418 ಕ್ವಿಂಟಾಲ್‌ ಎಂಒ 4. ಖಾಸಗಿಯಾಗಿ ಮಾರಾಟವಾಗುವ ಬೀಜದಲ್ಲೂ ಇದೇ ತಳಿಯ ಪ್ರಮಾಣ ಹೆಚ್ಚು.

ಉಭಯ ಜಿಲ್ಲೆಗಳಲ್ಲಿ ಬೆಂಬಲ ಬೆಲೆ ನೋಂದಣಿ ಆರಂಭಕ್ಕೆ ಜಿಲ್ಲಾಧಿಕಾರಿಗಳು ಹೊರಡಿಸಿರುವ ಅಧಿಸೂಚನೆಯಲ್ಲೂ ಕೆಂಪು ತಳಿ ಭತ್ತವನ್ನು ಹೊರತುಪಡಿಸಿ ಸಾಮಾನ್ಯ ಭತ್ತವನ್ನು ಪ್ರತಿ ಕ್ವಿಂ.ಗೆ 1,940 ರೂ.ಗಳಂತೆ ಹಾಗೂ ಎ ಗ್ರೇಡ್‌ ಭತ್ತವನ್ನು 1,960 ರೂ.ಗಳಂತೆ ಖರೀದಿಸಲು ಆದೇಶಿಸಿದ್ದಾರೆ. ಕೆಂಪು ತಳಿ ಭತ್ತವನ್ನು ಸರಕಾರದ ಮಾರ್ಗಸೂಚಿ ಪ್ರಕಟವಾದ ಮೇಲೆ ನೋಂದಣಿ ಆರಂಭಿಸುವುದಾಗಿ ತಿಳಿಸಿದ್ದಾರೆ.

ಆದೇಶ ಜಾರಿಯಾದರಷ್ಟೇ ಅನುಕೂಲ:

ಅವಿಭಜಿತ ದ.ಕ. ಜಿಲ್ಲೆಯಲ್ಲಿ ಬಹುತೇಕ ಕೆಂಪು ತಳಿಯ ಭತ್ತವನ್ನೇ ಬೆಳೆಯುವುದರಿಂದ ಬೆಂಬಲ ಬೆಲೆ ಕೇಂದ್ರದಲ್ಲಿ ಇದರ ಖರೀದಿಗೆ ಅವಕಾಶ ನೀಡಬೇಕು ಎಂದು ಆಹಾರ ಇಲಾಖೆಯಿಂದ ಸರಕಾರಕ್ಕೆ ಮನವಿ ಸಲ್ಲಿಕೆಯಾಗಿದೆ. ಆದರೆ ಭತ್ತಕ್ಕೆ ಮುಖ್ಯವಾಗಿ ಬೆಂಬಲ ಬೆಲೆ ನಿಗಡಿಪಡಿಸುವುದು ಕೇಂದ್ರ ಸರಕಾರವಾದ್ದರಿಂದ ಅಲ್ಲಿಂದ ಅನುಮೋದನೆ ಸಿಗಬೇಕಿದೆ. ಒಮ್ಮೆ ಆದೇಶ ಜಾರಿಯಾದಲ್ಲಿ ಪ್ರತೀ ವರ್ಷ ಖರೀದಿಗೆ ಅನುಕೂಲವಾಗುತ್ತದೆ. ಕೇಂದ್ರ ಸರಕಾರಕ್ಕೂ ಮನವಿ ಸಲ್ಲಿಕೆಯಾಗಿದ್ದು ಪ್ರಕ್ರಿಯೆ ಚಾಲನೆಯಲ್ಲಿದೆ. ವಾರದಲ್ಲಿ ಈ ಕುರಿತು ಪೂರಕ ಆದೇಶ ಹೊರಬೀಳಬಹುದು ಎನ್ನುತ್ತಾರೆ ಇಲಾಖೆಯ ಪ್ರಮುಖರು.

ಕೆಂಪು ಭತ್ತ ಖರೀದಿಗೆ ಅನುಮೋದನೆ ದೊರಕದಿದ್ದಲ್ಲಿ ಬೆಂಬಲ ಬೆಲೆ ಖರೀದಿ ಕೇಂದ್ರದಿಂದ ಉಭಯ ಜಿಲ್ಲೆಗಳ ರೈತರಿಗೆ ಚಿಕ್ಕಾಸು ಪ್ರಯೋಜನವಿಲ್ಲ. ಅಧಿಕಾರಿಗಳು, ಜನಪ್ರತಿನಿಧಿಗಳು ತತ್‌ಕ್ಷಣ ಕಾರ್ಯಪ್ರವೃತ್ತರಾಗಬೇಕಿದೆ.

ಅವಿಭಜಿತ ದ.ಕ. ಜಿಲ್ಲೆಯ  ಬೆಂಬಲ ಬೆಲೆ ಕೇಂದ್ರಗಳಲ್ಲಿ ಕೆಂಪು ಭತ್ತ ಖರೀದಿಗೆ ಅವಕಾಶ ನೀಡಬೇಕು ಎಂದು ಈ ಹಿಂದೆಯೇ ಸರಕಾರದ ಗಮನ ಸೆಳೆಯಲಾಗಿದೆ. ಆಹಾರ ಇಲಾಖೆ ಮೂಲಕವೂ ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಕೆಯಾಗಿದೆ. ಕೇಂದ್ರದಿಂದ ಶೀಘ್ರವಾಗಿ ಆದೇಶ ಜಾರಿಯಾಗುವ ನಿರೀಕ್ಷೆ ಇದೆ.ಆದ್ದರಿಂದ ಬೆಂಬಲ ಬೆಲೆ ಕೇಂದ್ರಕ್ಕೆ ಭತ್ತ ನೀಡಲಿಚ್ಛಿಸುವ ಎಂ.ಒ.4 ಭತ್ತ ಬೆಳೆದ ರೈತರು ಸ್ವಲ್ಪ ಸಮಯ ಕಾಯಬಹುದು.ಕಿರಣ್ ಕೊಡ್ಗಿ, ರಾಜ್ಯ ಆಹಾರ ನಿಗಮದ ಉಪಾಧ್ಯಕ್ಷ

ಟಾಪ್ ನ್ಯೂಸ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.