ಸುರತ್ಕಲ್, ಹೆಜಮಾಡಿ ಟೋಲ್ ಒಗ್ಗೂಡಿಸಲಿ: ಜಯಪ್ರಕಾಶ್ ಹೆಗ್ಡೆ
Team Udayavani, Dec 6, 2019, 12:24 AM IST
ಕುಂದಾಪುರ: ಕರಾವಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಟೋಲ್ಗೇಟ್ಗಳು ತೀರಾ ಸನಿಹದಲ್ಲಿದ್ದು, ಫಾಸ್ಟಾಗ್ ಮೂಲಕ ಸುಂಕ ವಸೂಲು ಮಾಡಿದರೆ ಹೊರೆಯಾಗಲಿದೆ. ಆದ್ದರಿಂದ ಸ್ವಲ್ಪ ದರ ಏರಿಸಿಯಾದರೂ ಸುರತ್ಕಲ್, ಹೆಜಮಾಡಿ ಟೋಲ್ಗಳನ್ನು ಒಗ್ಗೂಡಿಸಬೇಕು ಎಂದು ಮಾಜಿ ಸಂಸದ, ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ ಒತ್ತಾಯಿಸಿದ್ದಾರೆ.
ಅವರು ಗುರುವಾರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ನಡೆದ ಸಂವಾದದಲ್ಲಿ ಭಾಗವಹಿಸಿ, ಫ್ಲೈಓವರ್ ಕೆಲಸ ನಿಶ್ಚಿತ ಅವಧಿಯಲ್ಲಿ ಮುಗಿಸಬೇಕು ಎಂದರು.
ಸಮಾಜ ಕಲ್ಯಾಣ ಇಲಾಖೆಯ ಮೂಲಕ ಕೇಂದ್ರದಿಂದ ರಾಜ್ಯಕ್ಕೆ 5 ವಸತಿ ಶಾಲೆಗಳು ಮಂಜೂರಾಗಿದ್ದು, ಒಂದನ್ನು ಉಡುಪಿ ಜಿಲ್ಲೆಗೆ ತರಲು ಯತ್ನಿಸುತ್ತಿದ್ದೇನೆ. ಇದರಲ್ಲಿ ಶೇ.70 ಎಸ್ಸಿ ಮತ್ತು ಉಳಿಕೆ ಸೀಟು ಇತರ ಹಿಂದುಳಿದ ವರ್ಗದವರಿಗೆ ಮೀಸಲು. ಸ್ಪರ್ಧಾತ್ಮಕ ಪರೀಕ್ಷೆ ತಯಾರಿಗೆ ಇಲ್ಲಿ ತರಬೇತಿ ನೀಡಲಾಗುತ್ತದೆ. ಜಿಲ್ಲಾಡಳಿತದಿಂದ 15 ಎಕರೆ ಜಾಗ ಬೇಕಾಗುತ್ತದೆ ಎಂದರು.
ಕಸ್ತೂರಿರಂಗನ್ ವರದಿಗೆ ರಾಜ್ಯ ಸರಕಾರ ಆಕ್ಷೇಪ ಸಲ್ಲಿಸಿದೆ. ಡೀಮ್ಡ್ ಫಾರೆಸ್ಟ್ ಎಂದು ಒಂದು ಸರ್ವೆ ನಂಬರ್ನಲ್ಲಿ ಭಾಗಶಃ ಇದ್ದರೂ ಇಡೀ ಸರ್ವೆ ನಂಬರ್ಗೆ ತೊಂದರೆಯಾಗುತ್ತಿದೆ. ಕಂದಾಯ ಇಲಾಖೆ ಜಂಟಿ ಸರ್ವೆ ನಡೆಸಿದ್ದು, ಸಂಬಂಧಪಟ್ಟ ಅಧಿಕಾರಿಗಳ ಜತೆ ಸಮಸ್ಯೆಯನ್ನು ಗಮನಕ್ಕೆ ತಂದಿದ್ದೇನೆ ಎಂದರು.
ವೇ ಬ್ರಿಡ್ಜ್ ಮೂಲಕ ಮರಳು ನೀಡಿದರೆ ಸಮಸ್ಯೆಯಾಗದು, ನಿಖರ ಲೆಕ್ಕ ಸಿಗುತ್ತದೆ ಎಂದ ಅವರು, ಮೊದಲು ಸಾಂಪ್ರದಾಯಿಕ ಮರಳುಗಾರಿಕೆಯಷ್ಟೇ ಇತ್ತು. ಬ್ರಹ್ಮಾವರದ ಕುಕ್ಕುಡೆಯ ಗಲಾಟೆ ಬಳಿಕ ರಾಷ್ಟ್ರೀಯ ಹಸಿರುಪೀಠದವರೆಗೆ ವ್ಯಾಜ್ಯ ಹೋಗಿ ಮೂರು ಜಿಲ್ಲೆಗಳ ಮರಳುಗಾರಿಕೆಗೆ ಒಂದೇ ಕಾಯ್ದೆ ಬರುವಂತಾಯಿತು ಎಂದರು. ಬೈಂದೂರಿನ ವತ್ತಿನೆಣೆಯಲ್ಲಿ ಉಡಾನ್ ಯೋಜನೆಯ ವಿಮಾನ ನಿಲ್ದಾಣ ಸ್ಥಾಪನೆ ಉತ್ತಮ ವಿಚಾರ, ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಪುನಶ್ಚೇತನಕ್ಕೆ 200 ಕೋ.ರೂ. ಅಗತ್ಯವಿದ್ದು, ಯಾವ ಸರಕಾರ ಇಷ್ಟು ಅನುದಾನ ಕೊಡಲಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ
ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ
Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ
Jadkal: ಬೈಕ್ಗಳ ಢಿಕ್ಕಿ, ಸವಾರರಿಗೆ ಗಂಭೀರ ಗಾಯ
MUST WATCH
ಹೊಸ ಸೇರ್ಪಡೆ
Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ
Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ
Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ
Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ
Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ