ಬೆಳ್ಮಣ್ ಜಂತ್ರದ ಗುಡ್ಡದಲ್ಲಿ ಗುಟ್ಟಾಗಿ ಸರ್ವೇ: ಗ್ರಾಮಸ್ಥರಲ್ಲಿ ಆತಂಕ
ಸ್ಪಷ್ಟ ಮಾಹಿತಿ ನೀಡದ ಅಧಿಕಾರಿಗಳು
Team Udayavani, Jul 27, 2022, 6:25 AM IST
ಕಾರ್ಕಳ: ಬೆಳ್ಮಣ್ನ ಜಂತ್ರ ಪರಿಸರದ ಗುಡ್ಡದಲ್ಲಿ ಖಾಸಗಿ ಏಜೆನ್ಸಿಯೊಂದು ಒಂದು ವಾರದಿಂದ ಅನಧಿಕೃತವಾಗಿ ಸರ್ವೇಯಲ್ಲಿ ತೊಡಗಿರುವುದು ಸ್ಥಳೀಯರಲ್ಲಿ ಹಲವು ಅನುಮಾನಗಳಿಗೆ ಎಡೆ ಮಾಡಿದೆ.
ಈ ಬಗ್ಗೆ ಸ್ಥಳೀಯ ಗ್ರಾ.ಪಂ. ಹಾಗೂ ಗ್ರಾಮಕರಣಿಕರಿಗೂ ಯಾವುದೇ ಮಾಹಿತಿ ಇಲ್ಲ. ಗ್ರಾಮಸ್ಥರು ಸರ್ವೇ ನಿರತರಲ್ಲಿ ವಿಚಾರಿಸಿದಾಗ ಕೇಂದ್ರ ಸರಕಾರದ ಜಿಲೋಲಾಜಿಕಲ್ ಸರ್ವೇ ಆಫ್ ಇಂಡಿಯಾ ವತಿಯಿಂದ ರಾಷ್ಟ್ರೀಯ ಜಿಯೋಫಿಸಿಕಲ್ ಮ್ಯಾಪಿಂಗ್ ಪ್ರೋಗ್ರಾಂ ಅಡಿ ನೆಲದ ಗುರುತ್ವ ಮತ್ತು ಕಾಂತೀಯ ಸರ್ವೇ ಕಾರ್ಯ ಇದಾಗಿದೆ ಎಂದು ತಿಳಿಸಿದ್ದಾರೆ.
ಸರ್ವೇ ನಡೆಸುವವರಿಗೆ ಸಹಕರಿಸುವಂತೆ ಉಡುಪಿ ಜಿಲ್ಲೆಯ ವಿವಿಧ ತಾಲೂಕುಗಳ ಕಂದಾಯ ಅಧಿಕಾರಿಗಳಿಗೆ ಅಪಾರ ಜಿಲ್ಲಾಧಿಕಾರಿ ನೀಡಿರುವ ಪತ್ರವೂ ಅವರ ಬಳಿ ಯಿದೆ. ಮಹಾರಾಷ್ಟ್ರ ನಾಗ್ಪುರದ ಮಿನರಲ್ ಎಕ್ಸ್ಪ್ಲೋರೇಶನ್ ಹಾಗೂ ಕನ್ಸಲ್ಟನ್ಸಿ ಲಿಮಿಟೆಡ್ ಖಾಸಗಿ ಸಂಸ್ಥೆಯ ಸಿಬಂದಿ ಅವರು ಎಂದು ತಿಳಿದುಬಂದಿದೆ. ಬೆಳ್ಮಣ್ನ ಲಾಡ್ಜ್ ನಲ್ಲಿ ಅವರು ತಂಗಿದ್ದಾರೆ. 8-10 ಮಂದಿಯ ತಂಡವಾಗಿ ಅವರ ನಡೆ ಸಂಶಯಕ್ಕೆಡೆ ಮಾಡುತ್ತಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಬಂಟಕಲ್ಲಿನಲ್ಲಿ ವಿರೋಧ
ಉಡುಪಿಯ ಕೆಲವು ಕಡೆ ಗಳಲ್ಲಿ ಈಗಾಗಲೇ ಈ ತಂಡ ಸರ್ವೇ ಪೂರೈ ಸಿದೆ. ಶಿರ್ವ ಬಂಟಕಲ್ಲು ಭಾಗದಲ್ಲಿ ಸರ್ವೇಗೆ ತೊಡಗಿದಾಗ ಗ್ರಾಮಸ್ಥರು ವಿರೋಧ ಮಾಡಿದ್ದರಿಂದ ಕಾಲ್ಕಿತ್ತ ತಂಡ ಬೆಳ್ಮಣ್ನಲ್ಲಿ ಸರ್ವೇಗೆ ಮುಂದಾಗಿದೆ.
ಬೆಳ್ಮಣ್ನಲ್ಲಿ ನಡೆಯುವ ಸರ್ವೇ ಬಗ್ಗೆ ಈವರೆಗೆ ನನಗೆ ಯಾವುದೇ ಮಾಹಿತಿ ಇಲ್ಲ. ಮಾಹಿತಿ ಪಡೆದು ಬಳಿಕ ಸ್ಪಷ್ಟ ಮಾಹಿತಿ ನೀಡುವೆ.
– ಪ್ರದೀಪ್ ಕುರ್ಡೆಕರ್, ಕಾರ್ಕಳ ತಹಶೀಲ್ದಾರ್
ನನಗೂ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ. ವಿಚಾರಿಸಿಕೊಂಡು ನಾಳೆ ತಿಳಿಸುವೆ.
– ಕಿರಣ್ ಗೌರಯ್ಯ ಕುಂದಾಪುರ ತಹಶೀಲ್ದಾರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
MUST WATCH
ಹೊಸ ಸೇರ್ಪಡೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ