ಸಾರ್ವಜನಿಕ ಪ್ರದೇಶಗಳಲ್ಲಿ ಅಪರಾಧ ತಡೆಗೆ ಕಣ್ಗಾವಲು


Team Udayavani, Mar 15, 2019, 1:00 AM IST

sarvajanika-suraksha.jpg

ಕಾಪು: ಸಾರ್ವಜನಿಕ ಪ್ರದೇಶಗಳಲ್ಲಿ ಸಿಸಿ ಕೆಮರಾ ಅಳವಡಿಸುವ ಕಾನೂನು ಜಾರಿಯಾದ ಹಿನ್ನೆಲೆಯಲ್ಲಿ  ಉಡುಪಿ ಜಿಲ್ಲೆಗೆ ಒಟ್ಟು 35 ಸಿಸಿ ಕೆಮರಾ ಮಂಜೂರಾಗಿದೆ. ಇವುಗಳನ್ನು ಜನನಿಬಿಡ ಸ್ಥಳಗಳು ಮತ್ತು ಆಯಕಟ್ಟಿನ ಪ್ರದೇಶಗಳಲ್ಲಿ ಅಳಡಿಸಲು ಉದ್ದೇಶಿಸಲಾಗಿದೆ. 

ಜಿಲ್ಲೆಗೆ 35 ಸಿಸಿ ಕೆಮರಾ
ಉಡುಪಿ ಎಸ್ಪಿ ಆಫೀಸ್‌ ವ್ಯಾಪ್ತಿ – 12, ಕಾಪು ಪೊಲೀಸ್‌ ಠಾಣೆ- 5, ಮಲ್ಪೆ ಪೊಲೀಸ್‌ ಠಾಣೆ – 6, ಕುಂದಾಪುರ ಪೊಲೀಸ್‌ ಠಾಣೆ – 6, ಬೈಂದೂರು ಪೊಲೀಸ್‌ ಠಾಣೆ – 6 ಹೀಗೆ ಆಯಕಟ್ಟಿನ 20 ಕಡೆಗಳಲ್ಲಿ 35 ಸಿಸಿ ಕೆಮರಾಗಳು ಕೆಲವೇ ದಿನಗಳಲ್ಲಿ ಕಾರ್ಯಾಚರಿಸಲಿವೆ.  

100ರಿಂದ 500 ಜನ ಸೇರುವ ಸಾರ್ವಜನಿಕ ಪ್ರದೇಶಗಳಲ್ಲಿ ಸಿಸಿ ಕೆಮೆರಾ ಕಡ್ಡಾಯವಾಗಿ ಅಳವಡಿಸ ಬೇಕು ಎಂಬ ಕಾನೂನನ್ನು ರಾಜ್ಯ ಸರಕಾರ ಎರಡು ವರ್ಷಗಳ ಹಿಂದೆ ಜಾರಿಗೆ ತಂದಿತ್ತು. ಅದರಂತೆ ಕಾಪು ಪೊಲೀಸ್‌ ಠಾಣಾ ವ್ಯಾಪ್ತಿಯ ಮೂಳೂರು ಪೇಟೆಯಲ್ಲಿ 2, ಕಾಪು ಲೈಟ್‌ ಹೌಸ್‌ ಬಳಿ 2 ಮತ್ತು ಉದ್ಯಾವರ ಪೇಟೆಯಲ್ಲಿ 1 ಸಿಸಿ ಕೆಮರಾ ಅಳವಡಿಕೆಯಾಗಲಿದೆ. ಕಾಪು ಪೊಲೀಸರ ಸಮ್ಮುಖದಲ್ಲಿ ಖಾಸಗಿ ಕಂಪೆನಿಯು ಸ್ಥಳ ಸರ್ವೆ ಕೂಡ ನಡೆಸಿದೆ. 

ಕಾಪು, ಕಟಪಾಡಿ ಜಂಕ್ಷನ್‌ನಲ್ಲಿ ಕಣ್ಗಾವಲು 
ಈಗಾಗಲೇ ರಾ.ಹೆ. 66ರ ಕಾಪು ಪೊಲಿಪು ಜಂಕ್ಷನ್‌ನಲ್ಲಿ 4 ಮತ್ತು ಕಟಪಾಡಿ ಜಂಕ್ಷನ್‌ನಲ್ಲಿ 4 ಸಿಸಿ ಕೆಮರಾಗಳನ್ನು ಅಳವಡಿಸಲಾಗಿದೆ. ಪೊಲಿಪು ಜಂಕ್ಷನ್‌ನಲ್ಲಿ ಅಳವಡಿಸ ಲಾಗಿರುವ ಸಿಸಿ ಕೆಮರಾದ ಸರ್ವರ್‌ ಕಾಪು ಪೊಲೀಸ್‌ ಠಾಣೆಯ ನಿಯಂತ್ರಣದಲ್ಲಿದ್ದರೆ, ಕಟಪಾಡಿ ಜಂಕ್ಷನ್‌ನಲ್ಲಿರುವ ಸಿಸಿ ಕ್ಯಾಮರಾ ನಿಯಂತ್ರಣ ಕಟಪಾಡಿ ಹೊರ ಠಾಣೆಯ ನಿಯಂತ್ರಣ ದಲ್ಲಿದೆ.

ಪ್ರಕರಣ ಭೇದಿಸಲು ನೆರವು 
ಕಾಪು ಮಾರುಕಟ್ಟೆಯ 6 ಆಯಕಟ್ಟಿನ ಪ್ರದೇಶಗಳಲ್ಲಿ ಕಾಪು ಪುರಸಭೆಯ ಮೂಲಕ ಸಿಸಿ ಕೆಮರಾ ಕಣ್ಗಾವಲು ಅಳವಡಿಕೆಯಾಗಿದ್ದು, ಈ ಹಿಂದೆ ನಡೆದಿದ್ದ ಕೊಲೆ ಪ್ರಕರಣ, ಸಣ್ಣಪುಟ್ಟ ಕಳ್ಳತನ, ಅಪಾಯ ಕಾರಿ ಘಟನೆ ನಡೆದಾಗ ಅದನ್ನು ಪತ್ತೆ ಹಚ್ಚಿ, ಭೇದಿಸುವಲ್ಲಿ ಇವುಗಳು ಸಹಕಾರಿಯಾಗಿವೆ. ಮಾರಿಗುಡಿ,  ಜನಾರ್ದನ ದೇವಸ್ಥಾನದಲ್ಲಿ ಅಳವಡಿಸಲಾಗಿರುವ ಸಿಸಿ ಕೆಮರಾಗಳು ಕೂಡ 2-3 ಬಾರಿ ಉಪಯೋಗಕ್ಕೆ ಬಂದಿದ್ದವು.

ಇನ್ನೂ 5 ಕಡೆ ಸಿಸಿ ಕೆಮರಾಕ್ಕೆ ಬೇಡಿಕೆ
ಕಾಪು ವ್ಯಾಪ್ತಿಯಲ್ಲಿ ಇನ್ನೂ 5 ಕಡೆ ಸಿಸಿ ಕೆಮರಾಕ್ಕೆ ಬೇಡಿಕೆಯಿದೆ. ಕಾಪು ಬೀಚ್‌ ಪ್ರವೇಶದ್ವಾರ, ಇನ್ನಂಜೆ ರೈಲ್ವೇ ನಿಲ್ದಾಣ, ಎಕ್ಸ್‌ಪ್ರೆಸ್‌ ಬಸ್‌ ನಿಲ್ದಾಣ, ಕಾಪು ಬಸ್‌ ನಿಲ್ದಾಣ ಮತ್ತು ಕಾಪು ಸರಕಾರಿ ಪ್ರಥಮದರ್ಜೆ ಕಾಲೇಜಿನ ಬಳಿ ಸಿಸಿ ಕೆಮರಾ ಅಳವಡಿಸಲು ಬೇಡಿಕೆ ಇದೆ. ಈ ಸಂಬಂಧ ಉನ್ನತಾಧಿಕಾರಿಗಳಿಗೆ ಮನವಿ ಮಾಡಲಾಗಿದೆ.  

ಪುರಸಭೆ ಸ್ಪಂದನೆ  
ಸಾರ್ವಜನಿಕ ಪ್ರದೇಶಗಳಲ್ಲಿ, ಜಂಕ್ಷನ್‌ ಪ್ರದೇಶಗಳಲ್ಲಿ ಪೊಲೀಸ್‌ ಇಲಾಖೆ ಕಣ್ಗಾವಲು ಇರಬೇಕು. ಕಾಪು ಮಾರುಕಟ್ಟೆಯಲ್ಲಿ ಸಿಸಿ ಕ್ಯಾಮರಾ ಅಳವಡಿಸಿರುವುದರಿಂದ ಪೊಲೀಸರಿಗೆ ನೆರವಾಗಿದೆ. ಅಂತಹ ಪ್ರದೇಶಗಳನ್ನು ಗುರುತಿಸಿ, ಪೊಲೀಸರಿಂದ ಬೇಡಿಕೆ ಬಂದರೆ ಅದನ್ನು ಪೂರೈಸಲು ನಾವು ಪ್ರಯತ್ನಿಸುತ್ತೇವೆ.
-ರಾಯಪ್ಪ , ಮುಖ್ಯಾಧಿಕಾರಿ, ಕಾಪು ಪುರಸಭೆ

ಗುಣಮಟ್ಟದ ಸಿಸಿ ಕೆಮರಾ  
ಸಿಸಿ ಕೆಮರಾ ಕಣ್ಗಾವಲು ಇದ್ದಲ್ಲಿ  ಅಪರಾಧ ಪ್ರಕರಣ ತಡೆ, ಭೇದಿಸಲು ಸಾಧ್ಯವಿದೆ. ಕೆಮರಾ ಅಳವಡಿಕೆ ವೇಳೆ ಗುಣಮಟ್ಟ ಕಾಯ್ದುಕೊಳ್ಳಲಾಗುವುದು.  
-ನವೀನ್‌ ಎಸ್‌. ನಾಯಕ್‌, ಕಾಪು ಪೊಲೀಸ್‌ ಠಾಣಾಧಿಕಾರಿ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.