ಹಿಂದುಳಿದ ವರ್ಗಕ್ಕೆ ಸೇರಿದ ಕುಟುಂಬಗಳ ಕುರಿತಾಗಿಯೂ ಸಮೀಕ್ಷೆ ನಡೆಯಲಿ 


Team Udayavani, Aug 1, 2017, 7:20 AM IST

31-Purasabhe-1.jpg

ಕಾಪು: ಕಾಪು ಪುರಸಭೆ ವ್ಯಾಪ್ತಿಯಲ್ಲಿರುವ ಎಲ್ಲ ಹಿಂದುಳಿದ ವರ್ಗಗಳ ಕುಟುಂಬಗಳ ಕುರಿತಾಗಿ ಸಮಗ್ರ ಸಮೀಕ್ಷೆ ನಡೆಸಬೇಕು. ಆ ಮೂಲಕ ಹಿಂದುಳಿದ ವರ್ಗಗಳ ಕುಟುಂಬದ ವಸತಿ ಹಾಗೂ ಶೌಚಾಲಯ ರಹಿತರನ್ನು ಗುರುತಿಸಿ ಆದ್ಯತೆ ಮೇರೆಗೆ ಸೌಲಭ್ಯ ಒದಗಿಸಲು ಪುರಸಭೆ ವತಿಯಿಂದ ಕ್ರಮ ಕೈಗೊಳ್ಳಬೇಕು ಎಂದು ಕಾಪು ಪುರಸಭೆಯ ವಿರೋಧ ಪಕ್ಷದ ನಾಯಕ ಅರುಣ್‌ ಶೆಟ್ಟಿ  ಆಗ್ರಹಿಸಿದರು.

ಕಾಪು ಪುರಸಭೆಯ ಅಧ್ಯಕ್ಷೆ ಕು| ಸೌಮ್ಯಾ ಅವರ ಅಧ್ಯಕ್ಷತೆಯಲ್ಲಿ ಜು. 31ರಂದು ನಡೆದ ಕಾಪು ಪುರಸಭೆಯ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು, ಹಿಂದುಳಿದ ವರ್ಗಗಳಲ್ಲಿರುವ ಬಡ ಕುಟುಂಬಗಳ ಪಟ್ಟಿಯನ್ನು ಸಿದ್ಧ ಪಡಿಸದೇ ಇರುವುದರಿಂದ ಅವರಿಗೆ ಅನ್ಯಾಯ ಮಾಡಿದಂತಾಗುತ್ತಿದೆ. ಈ ಬಗ್ಗೆ ಪುರಸಭೆ ತತ್‌ಕ್ಷಣ ಎಚ್ಚೆತ್ತುಕೊಳ್ಳಬೇಕಿದೆ ಎಂದರು.

ಮುಖ್ಯಾಧಿಕಾರಿ ರಾಯಪ್ಪ ಅವರು ಇದಕ್ಕೆ ಉತ್ತರಿಸಿ, ಪುರಸಭಾ ವ್ಯಾಪ್ತಿಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರ ಪಟ್ಟಿಯೇ ಇದುವರೆಗೆ ಸಿದ್ಧವಾಗಿಲ್ಲ. ಪ್ರಸ್ತುತ ಈ ಕುಟುಂಬಗಳ ಸಮೀಕ್ಷೆ ನಡೆಸಲಾಗುತ್ತಿದ್ದು, ಬಳಿಕ ಹಿಂದುಳಿದ ವರ್ಗಗಳ ಸ್ಥೂಲವಾದ ಪಟ್ಟಿಯನ್ನು ಸಿದ್ಧಪಡಿಸಲಾಗುವುದು ಎಂದರು.

ಸದಸ್ಯರ ಗಮನಕ್ಕೆ 
ತಾರದೇ ಫಲಾನುಭವಿಗಳ ಪಟ್ಟಿ ರಚನೆ

ಪುರಸಭೆ ವ್ಯಾಪ್ತಿಯಲ್ಲಿ ಸದಸ್ಯರ ಗಮನಕ್ಕೆ ತಾರದೆಯೇ ಪಕ್ಕಾಮನೆ ನಿರ್ಮಾಣದ ಫಲಾನುಭವಿಗಳ ಪಟ್ಟಿ ತಯಾರಿಸಲಾಗಿದೆ. ಅಸಮರ್ಪಕ ರೀತಿಯಲ್ಲಿ ತಮಗಿಷ್ಟ ಬಂದಂತೆ ತಯಾರಿಸಿದ ಪಟ್ಟಿಯನ್ನು ತಡೆಹಿಡಿಯಬೇಕು ಎಂದು ವಿಪಕ್ಷ ಸದಸ್ಯ ಕಿರಣ್‌ ಆಳ್ವ ಒತ್ತಾಯಿಸಿದರು.

ವಸತಿ ಯೋಜನೆಯಲ್ಲಿ ಈಗಾಗಲೇ 138 ಮನೆಗಳು ಮಂಜೂರಾಗಿದ್ದು, 42 ಫಲಾನುಭವಿಗಳು ಇನ್ನೂ ಮನೆ ನಿರ್ಮಾಣ ಕಾಮಗಾರಿ ಆರಂಭಿಸಿಲ್ಲ. ಇದರಿಂದ ಅನುದಾನ ಸ್ಥಗಿತವಾಗುವ ಸಾಧ್ಯತೆಗಳಿವೆ. ಮನೆ ಪೂರ್ಣಗೊಳಿಸಿದ ಫಲಾನುಭವಿಗಳಿಗೆ ಶೀಘ್ರ ಕಂತಿನ ಹಣವನ್ನು ಬಿಡುಗಡೆ ಮಾಡಲಾಗುವುದು. ಪಕ್ಕಾ ಮನೆ ನಿರ್ಮಾಣಕ್ಕಾಗಿ ಬಂದಿರುವ ಅರ್ಜಿಗಳನ್ನು ಪರಿಶೀಲಿಸಿ ಸದಸ್ಯರ ಒಪ್ಪಿಗೆ ಪಡೆದು ಮಂಜೂರಾತಿ ನೀಡಲಾಗುವುದು ಎಂದು ಮುಖ್ಯಾಧಿಕಾರಿ ತಿಳಿಸಿದರು.

ಸದಸ್ಯರ ಬಗ್ಗೆ ಜನರಿಗೆ 
ಸಂಶಯ ನಿವಾರಿಸಿ

ಪುರಸಭಾ ವ್ಯಾಪ್ತಿಯಲ್ಲಿ ನಡೆದಿರುವ ಕೆಲವೊಂದು ಕಾಮಗಾರಿಗಳ ಗುಣಮಟ್ಟ ಮತ್ತು ಅನುಷ್ಠಾನದ ರೀತಿಯ ಬಗ್ಗೆ ಸಾರ್ವಜನಿಕರಲ್ಲಿ ಸಂಶಯಗಳು ಎದ್ದಿವೆ. ಇದನ್ನು ಪ್ರಶ್ನಿಸುವಲ್ಲಿ ಸದಸ್ಯರು ವಿಫಲರಾಗಿದ್ದಾರೆ, ಸದಸ್ಯರಿಗೂ ಲಾಭ ಮಾಡಿದ್ದಾರೆ ಎಂಬಿತ್ಯಾದಿ ಆರೋಪಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿವೆ ಎಂದು ಸದಸ್ಯ ಅನಿಲ್‌ ಕುಮಾರ್‌ ಆರೋಪಿಸಿದರು. 

ಕಾಪು ಪಡುಗ್ರಾಮದ ನಡೆಯುತ್ತಿರುವ ಶ್ಮಶಾನ ಕಾಮಗಾರಿಯ ಬಗ್ಗೆ ಸದಸ್ಯರಾದ ಮಮತಾ ಸಾಲ್ಯಾನ್‌, ಅನಿಲ್‌ ಕುಮಾರ್‌, ನಾಗೇಶ್‌ ಸುವರ್ಣ ಮೊದಲಾದವರು ಆಕ್ಷೇಪ ವ್ಯಕ್ತಪಡಿಸಿದರು. ಕಾಮಗಾರಿ ಯನ್ನು ಕಾಟಾಚಾರಕ್ಕೆ ಎಂಬಂತೆ ನಡೆಸದೇ ಸ್ವತ್ಛ ಮನಸ್ಸಿನಿಂದ ನಡೆಸುವಂತೆ ಆಗ್ರಹಿಸಿದರು.
 
ಕಾಪು ಪುರಸಭೆ ಉಪಾಧ್ಯಕ್ಷ ಕೆ. ಎಚ್‌. ಉಸ್ಮಾನ್‌, ಸ್ಥಾಯೀ ಸಮಿತಿ ಅಧ್ಯಕ್ಷ ಹಮೀದ್‌ ಮೂಳೂರು, ವ್ಯವಸ್ಥಾಪಕ ಉರ್ಬನ್‌ ಡಿ. ಸೋಜಾ ಮೊದಲಾದವರು ಉಪಸ್ಥಿತರಿದ್ದರು.

ಕಾಪು ಪೇಟೆಯಲ್ಲಿ  ಶೌಚಾಲಯ ನಿರ್ಮಾಣಕ್ಕೆ  ಆಗ್ರಹ
ಕಾಪು ಪೇಟೆಯಲ್ಲಿ ಶೌಚಾಲಯದ ಕೊರತೆಯಿದೆ. ಶೌಚಾಲಯವನ್ನು ನಿರ್ಮಿಸುವಂತೆ ಸ್ಥಾಯೀ ಸಮಿತಿ ಅಧ್ಯಕ್ಷ ಅಬ್ದುಲ್‌ ಹಮೀದ್‌ ಒತ್ತಾಯಿಸಿದರು. ಪೇಟೆಯಲ್ಲಿ ಜಾಗದ ಕೊರತೆಯಿದೆ. ಸರಿಯಾದ ಜಾಗ ಸಿಕ್ಕಿದಲ್ಲಿ ಶೌಚಾಲಯ ನಿರ್ಮಿಸಲು ಪ್ರಯತ್ನಿಸಲಾಗುವುದು. ಈ ಬಗ್ಗೆ ನಾವು  ಸ್ಥಳ ಸಮೀಕ್ಷೆ ನಡೆಸೋಣ ಎಂದು ರಾಯಪ್ಪ ಹೇಳಿದರು. 

ಹೆದ್ದಾರಿ ದುಸ್ಥಿತಿ ಸರಿಪಡಿಸುವಿಕೆ, ಬೀದಿ ನಾಯಿ ನಿಯಂತ್ರಣ ಸಾಧ್ಯವಿಲ್ಲವೇ 
ಕಲ್ಯ ಕ್ರಾಸ್‌ ಬಳಿಯ ರಾ. ಹೆ. 66ರ ದುಸ್ಥಿತಿ ಮತ್ತು ಬೀದಿ ನಾಯಿ ನಿಯಂತ್ರಣದ ನಿರ್ಣಯದ ಬಗ್ಗೆ ಹಿಂದಿನ ಸಭೆಗಳಲ್ಲಿ ನಡೆದಿರುವ ಚರ್ಚೆಗೆ ಸಂಬಂಧಪಟ್ಟು ಇನ್ನೂ ಕೆಲಸಗಳು ನ‌ಡೆಯುತ್ತಿಲ್ಲ. ಇದನ್ನು ಅನುಷ್ಟಾನಕ್ಕೆ ತರಲು ಸಾಧ್ಯವಿಲ್ಲವೇ ಎಂದು ಸದಸ್ಯ ಲಕ್ಷ್ಮೀಶ ತಂತ್ರಿ ಪ್ರಶ್ನಿಸಿದರು. 

ಹೆದ್ದಾರಿ ಕ್ರಾಸ್‌ ದುರಸ್ಥಿ ಬಗ್ಗೆ ಹೆದ್ದಾರಿ ಇಲಾಖೆ ಮತ್ತು ಪ್ರಾಧಿಕಾರಕ್ಕೆ ಹಲವು ಬಾರಿ ಪತ್ರ ಮುಖೇನ ಮನವಿ ಮಾಡಲಾಗಿದೆ. ಇನ್ನೂ ಸಮರ್ಪಕ ಉತ್ತರ ಸಿಕ್ಕಿಲ್ಲ. ಬೀದಿ ನಾಯಿಗಳ ನಿಯಂತ್ರಣದ ಕುರಿತಾಗಿ ಟೆಂಡರ್‌ ಕರೆಯಲಾಗಿದ್ದು ಟೆಂಡರ್‌ ಆಗಿರುವವರು ಇನ್ನೂ ಕೆಲಸ ಪ್ರಾರಂಭಿಸಿಲ್ಲ. ಸೆಪ್ಟಂಬರ್‌ ಒಳಗೆ ಕಾರ್ಯಯೋಜನೆ ಸಿದ್ಧಪಡಿಸಲಾಗುವುದು ಎಂದರು. 

ಬೀದಿ ದೀಪದ ಆರಿಸುವಲ್ಲಿ ಸದಸ್ಯರ ಸಹಕಾರ ಅಗತ್ಯ
ಪುರಸಭಾ ವ್ಯಾಪ್ತಿಯ ಕೆಲವೆಡೆಗಳಲ್ಲಿ ಬೀದಿ ದೀಪಗಳು ಸರಿಯಾಗಿ ಉರಿಯುತ್ತಿಲ್ಲ ಎಂದು ಕೆಲವು ಸದಸ್ಯರು ದೂರಿದರು. ಇದಕ್ಕೆ ಮುಖ್ಯಾಧಿಕಾರಿ ರಾಯಪ್ಪ ಪ್ರಕ್ರಿಯಿಸಿ ಬೀದಿ ದೀಪ ಆರಿಸುವ ಬಗ್ಗೆ ಯಾರು ಇಚ್ಚಾಶಕ್ತಿಯನ್ನೇ ಹೊಂದಿಲ್ಲ. ಹಲವಾರು ಕಡೆ ನಾನೇ ಬೀದಿ ದೀಪಗಳನ್ನು ಆರಿಸಿದ್ದೇನೆ. ಸದಸ್ಯರು ಈ ಬಗ್ಗೆ ಸ್ಥಳೀಯರಿಗೆ ಮನವರಿಕೆ ಮಾಡಬೇಕು ಎಂದರು.

ಟಾಪ್ ನ್ಯೂಸ್

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.