![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-415x249.jpg)
ಅಮಾನತಾದ ಪೊಲೀಸ್ ಪ್ರಕಾಶ್ ತಾಯಿ ಅಸ್ವಸ್ಥ
Team Udayavani, Apr 13, 2017, 1:27 PM IST
![prakash.jpg](https://www.udayavani.com/wp-content/uploads/2017/04/13/prakash-620x374.jpg)
ಉಡುಪಿ: ಹಲ್ಲೆ ಪ್ರಕರಣದಲ್ಲಿ ಆರೋಪಿಯಾಗಿ ಅಮಾನತುಗೊಂಡಿರುವ ಮಲ್ಪೆ ಠಾಣೆಯ ಪೊಲೀಸ್ ಪೇದೆ ಪ್ರಕಾಶ್ ಅವರ ತಾಯಿ ಅಸ್ವಸ್ಥಗೊಂಡು ಬೆಳಗಾವಿ ಜಿಲ್ಲೆಯ ಅವರ ಊರಿನ ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದಾರೆ.
ತಾಯಿ ಅಸ್ವಸ್ಥರಾದ ವಿಷಯ ತಿಳಿಯುತ್ತಲೇ ಪ್ರಕಾಶ್ ಮತ್ತವರ ಪತ್ನಿ ಊರಿಗೆ ತೆರಳಿದ್ದಾರೆ. ಈ ಬಗ್ಗೆ ಪ್ರಕಾಶ್ ಅವರನ್ನು ಸಂಪರ್ಕಿಸಿ ವಿಷಯ ಕೇಳಿದಾಗ ಟಿ.ವಿ. ಮಾಧ್ಯಮಗಳಲ್ಲಿ ಬಂದ ಘಟನೆಗಳ ವರದಿಯನ್ನು ನೋಡಿದ ನನ್ನ ತಾಯಿ ಅಸ್ವಸ್ಥಗೊಂಡಿದ್ದಾರೆ. ಅವರು ಗುಣಮುಖರಾಗಬೇಕು. ಅಮಾನತು ಆದೇಶ ಹಿಂಪಡೆದರೆ ಉಡುಪಿಗೆ ಬರುವೆ. ಘಟನೆಯ ಆಘಾತದಿಂದ ಪತ್ನಿಯೂ ಹೊರಬಂದಿಲ್ಲ. ಅವಳೂ ಜ್ವರದಿಂದ ಬಳಲಿ ಮನೆಯಲ್ಲೇ ಇದ್ದಾಳೆ ಎಂದು ಪ್ರಕಾಶ್ ಹೇಳಿದ್ದಾರೆ.
ಪೊಲೀಸರಿಂದ ಹಲ್ಲೆಗೊಳಗಾಗಿ ಸೊಂಟದ ಮೂಳೆ ಮುರಿತವಾಗಿರುವ ಮಲ್ಪೆಯ ಕಂಪೆನಿಯೊಂದರ ಉದ್ಯೋಗಿ ಕುಮಾರ್ ಅವರು ಕೂಡ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಿಗೆ ಇನ್ನು 2 ತಿಂಗಳು ಬೆಡ್ ರೆಸ್ಟ್ ಬೇಕಾಗಬಹುದು ಎಂದು ವೈದ್ಯರು ಹೇಳಿದ್ದಾರೆ ಎಂದವರ ಮಿತ್ರರು ತಿಳಿಸಿದ್ದಾರೆ. ಕುಮಾರ್ ನೀಡಿದ ದೂರಿನಂತೆ ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದರೆ, ಪ್ರಕಾಶ್ ಅವರ ಪತ್ನಿ ನೀಡಿದ ದೂರಿನಂತೆ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪೊಲೀಸ್ ಪೇದೆಯ ಅಮಾನತು ಆದೇಶ ಯಥಾಸ್ಥಿತಿಯಲ್ಲಿದೆ. ಎರಡೂ ಪ್ರಕರಣಗಳ ತನಿಖೆ ನಡೆಯುತ್ತಿದೆ ಎಂದು ಹೆಚ್ಚುವರಿ ಎಸ್ಪಿ ಎನ್. ವಿಷ್ಣುವರ್ಧನ್ ಅವರು ಪತ್ರಿಕೆಗೆ ತಿಳಿಸಿದ್ದಾರೆ. ಎಸ್ಪಿ ಕೆ.ಟಿ. ಬಾಲಕೃಷ್ಣ ಅವರು ಬೆಂಗಳೂರಿಗೆ ತೆರಳಿದ್ದಾರೆ.
ಟಾಪ್ ನ್ಯೂಸ್
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-150x90.jpg)
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.