ಸ್ವತ್ಛತೆ; ಹೆಚ್ಚಿನ ಕಾಳಜಿ ಅಗತ್ಯ: ಶಿಲ್ಪಾ ನಾಗ್‌


Team Udayavani, Mar 25, 2017, 4:18 PM IST

2403kde7.jpg

ಕುಂದಾಪುರ: ವಲಸೆ ಕಾರ್ಮಿಕ‌ರು  ಸಾಂಕ್ರಾಮಿಕ ರೋಗಗಳ ಬಗ್ಗೆ  ಅರಿವು ಹಾಗೂ  ಜಾಗೃತಿ ವಹಿಸಬೇಕು.  ಹೆಚ್ಚುತ್ತಿರುವ ಜನಸಂಖ್ಯೆ ಹಾಗೂ ನೈರ್ಮಲ್ಯದ ಸಮಸ್ಯೆಯಿಂದ ಸಾಂಕ್ರಾಮಿಕ ರೋಗಗಳು ಹರಡುತ್ತಿವೆ. ಸೊಳ್ಳೆಗಳಿಂದ ಮಲೇರಿಯಾ, ಫೈಲೇರಿಯಾ, ಡೆಂಗ್ಯೂ ಮೊದಲಾದ ಸಾಂಕ್ರಾಮಿಕ ರೋಗಗಳು ಹಬ್ಬುತ್ತಿದ್ದು, ಈ ಬಗ್ಗೆ ಜನರು ಎಚ್ಚರ ವಹಿಸಬೇಕು ಮುಖ್ಯವಾಗಿ  ಸ್ವತ್ಛತೆಯ ಬಗ್ಗೆ  ಹೆಚ್ಚಿನ ಕಾಳಜಿ ವಹಿಸುವುದರೊಂದಿಗೆ ಕಾರ್ಮಿಕರು ರೋಗ ವಾಹಕ ಆಶ್ರಿತ ರೋಗಗಳ ಬಗ್ಗೆ  ಅರಿವು ಪಡೆದಿರಬೇಕಾದ ಆವಶ್ಯಕತೆ ಇದೆ ಎಂದು ಕುಂದಾಪುರ ಉಪ ವಿಭಾಗದ ಸಹಾಯಕ ಕಮಿಷನರ್‌ ಶಿಲ್ಪಾ ನಾಗ್‌ ಹೇಳಿದರು.

ಅವರು  ಶುಕ್ರವಾರ  ಕುಂದಾಪುರ ನೆಹರೂ ಮೈದಾನದಲ್ಲಿ  ಜಿ.ಪಂ. ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ  ಇಲಾಖೆ ಉಡುಪಿ ಜಿಲ್ಲೆ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಕಚೇರಿ ಉಡುಪಿ, ತಾಲೂಕು ಆರೋಗ್ಯ ಅಧಿಕಾರಿ ಕಚೇರಿ ಕುಂದಾಪುರ, ಪೊಲೀಸ್‌ ಇಲಾಖೆ ಕುಂದಾಪುರ, ಜೆಸಿಐ ಕುಂದಾಪುರ ಸಿಟಿ, ಭಂಡಾರ್‌ಕಾರ್ಸ್‌ ಕಾಲೇಜು ಕುಂದಾಪುರ ಇವರ ಸಹಭಾಗಿತ್ವದಲ್ಲಿ ವಲಸೆ ಕಾರ್ಮಿಕರಿಗೆ ರೋಗವಾಹಕ ಆಶ್ರಿತ ರೋಗಗಳ ಬಗ್ಗೆ ಅರಿವು ಹಾಗೂ ಡಯಾಬಿಟಿಕ್‌ ತಪಾಸಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಈ  ಶಿಬಿರದಲ್ಲಿ ಕುಂದಾಪುರದ ಸುಮಾರು 150ಕ್ಕೂ ಅಧಿಕ ವಲಸೆ ಕಾರ್ಮಿಕರು ಡಯಾಬಿಟಿಕ್‌ ತಪಾಸಣೆಯನ್ನು  ನಡೆಸಿದರು.ಕಾರ್ಯಕ್ರಮದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು  ಕುಂದಾಪುರ ಪುರಸಭೆಯ ಅಧ್ಯಕ್ಷೆ ವಸಂತಿ ಸಾರಂಗ ವಹಿಸಿದ್ದರು. 
 
ಮುಖ್ಯ ಅತಿಥಿಗಳಾಗಿ ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ| ಚಿದಾನಂದ ಸಂಜು, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ| ಪ್ರೇಮಾನಂದ ಕೆ., ಕುಂದಾಪುರ ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿ ಡಾ| ಉದಯಶಂಕರ್‌, ಭಂಡಾರ್‌ಕಾರ್ಸ್‌ ಕಾಲೇಜಿನ ಎನ್‌.ಎಸ್‌.ಎಸ್‌. ಅಧಿಕಾರಿ ರಾಮಚಂದ್ರ, ಪತ್ರಕರ್ತರಾದ ಯು.ಎಸ್‌. ಶೆಣೈ, ಜಾನ್‌ ಡಿ’ಸೋಜಾ ಉಪಸ್ಥಿತರಿದ್ದರು.ಈ ಸಂದರ್ಭ  ವಲಸೆ ಕಾರ್ಮಿಕರಾದ ಚಂದ್ರಕಾಂತ ಮನಗೋಳಿ, ಬಸವ ಸೋಮನಕೊಪ್ಪ, ರಮೇಶ್‌ ರಾಮದುರ್ಗ, ಲಕ್ಷ್ಮೀ ಮಮತಕೇರಿ, ಸುಮಾ ಮಮತಕೇರಿ ಅವರಿಗೆ ಶ್ರಮಿಕ ಸೇವಾ ಪ್ರಶಸ್ತಿ ನೀಡಿ ಗೌರವಿಸಲಾಯಿತು.ಕುಂದಾಪುರ ಜೇಸಿಐ ಕುಂದಾಪುರ ಸಿಟಿ ಇದರ ಅಧ್ಯಕ್ಷ  ಶ್ರೀಧರ ಸುವರ್ಣ ಸ್ವಾಗತಿಸಿದರು. ತಾ| ಆರೋಗ್ಯಾಧಿಕಾರಿ ಡಾ| ನಾಗಭೂಷಣ್‌  ಉಡುಪ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಗುರು ಕಾರ್ಯಕ್ರಮ ನಿರ್ವಹಿಸಿದರು. ಜೇಸಿಐ ಸಿಟಿ ಸ್ಥಾಪಕ ಅಧ್ಯಕ್ಷ ಹುಸೇನ್‌ ಹೈಕಾಡಿ ವಂದಿಸಿದರು.

ಕುಂದಾಪುರಕ್ಕೆ  ರಾಜ್ಯದ  ಹಾಗೂ ಇತರ ರಾಜ್ಯದ ಅನೇಕ ಕಡೆಗಳಿಂದ  ನೂರಾರು ಮಂದಿ ವಲಸೆ ಕಾರ್ಮಿಕರು ಕೆಲಸಕ್ಕಾಗಿ ಬರುತ್ತಿದ್ದಾರೆ. ಅವರೆಲ್ಲರೂ ವಸತಿ ಸೌಕರ್ಯವಿಲ್ಲದೇ ಇಲ್ಲಿ ತೊಂದರೆ ಅನುಭವಿಸಿರುವುದನ್ನು ಗಮನಿಸಿದ್ದು  ಅವರಿಗೆ ಸೂಕ್ತ ವಸತಿ ಸೌಕರ್ಯ ಕಲ್ಪಿಸುವಲ್ಲಿ  ತಾಲೂಕು ಆಡಳಿತ ಸೂಕ್ತ ವ್ಯವಸ್ಥೆ ಮಾಡಲಾಗುವುದು.
-ಶಿಲ್ಪಾ ನಾಗ್‌, ಸಹಾಯಕ ಕಮೀಷನರ್‌

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.