“ಸ್ವಚ್ಚ ಕರ್ನಾಟಕ ನಿರ್ಮಾಣಕ್ಕೆ ಕಟಿಬದ್ಧ’


Team Udayavani, Aug 21, 2018, 6:00 AM IST

2008klrmain1a.jpg

ಕೊಲ್ಲೂರು: ವಂಡ್ಸೆಯಲ್ಲಿ ಆರಂಭಗೊಂಡಿರುವ ಘನ, ದ್ರವ ತ್ಯಾಜ್ಯ ವಿಲೇವಾರಿ ಘಟಕದ ಕಾರ್ಯನಿರ್ವಹಣೆ ರಾಜ್ಯಕ್ಕೆ ಮಾದರಿ. ಗ್ರಾಮೀಣ ಪ್ರದೇಶಗಳಲ್ಲಿ ಈ ಒಂದು ವ್ಯವಸ್ಥೆಯು ಹೆಚ್ಚು ಪರಿಣಾಮಕಾರಿಯಾಗುತ್ತಿದ್ದು ದೊಡ್ಡ ಗ್ರಾಮಗಳಿಗೆ ಇದು ಸವಾಲಾಗಿರಬಹುದು. ಅದಕ್ಕೆ ಪೂರಕವಾದ ವ್ಯವಸ್ಥೆ ಕಲ್ಪಿಸುವಲ್ಲಿ ಗ್ರಾಮಸ್ಥರ ಸಹಕಾರದೊಡನೆ ಶ್ರಮಿಸಿದಲ್ಲಿ ಯಶಸ್ಸು ಸಾಧ್ಯ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವ ಕೃಷ್ಣ ಭೈರೇಗೌಡ ಹೇಳಿದರು.

ವಂಡ್ಸೆ ಗ್ರಾ.ಪಂ.ನಲ್ಲಿ ಆರಂಭಗೊಂಡಿರುವ ಎಸ್‌.ಎಲ್‌.ಆರ್‌.ಎಂ. ಘಟಕವನ್ನು ವೀಕ್ಷಿಸಲು ಆ. 20ರಂದು ಇಲ್ಲಿಗೆ ಆಗಮಿಸಿದ ಸಚಿವರು ಸುದ್ದಿಗಾರರೊಡನೆ ಮಾತನಾಡುತ್ತಾ ಈ ಭಾಗದಲ್ಲಿ ಬಹಳಷ್ಟು ಯಶಸ್ಸು ಕಂಡುಕೊಂಡಿರುವ ಈ ಯೋಜನೆಯ ಅನುಷ್ಠಾನ ಕ್ರಮ ಇತರ ಗ್ರಾ.ಪಂ.ಗಳಿಗೆ ಮಾದರಿಯಾಗಿದೆ ಎಂದರು.
 
ಸರಕಾರವು ರಾಜ್ಯದ ಎಲ್ಲ ಗ್ರಾಮಗಳಲ್ಲಿ ಎಸ್‌.ಎಲ್‌.ಆರ್‌.ಎಂ. ಘಟಕವನ್ನು ಆರಂಭಿಸುವ ಬಗ್ಗೆ ಕ್ರಮ ಕೈಗೊಳ್ಳುವುದು. ಕೇವಲ ಸರಕಾರದ ಅನುದಾನವನ್ನೇ ಅವಲಂಬಿಸದೇ ಈ ಒಂದು ಘಟಕದ ನಿರ್ವಹಣೆ ಯಿಂದ ಬರುವ ಆರ್ಥಿಕ ವ್ಯವಸ್ಥೆಯನ್ನು ಬಳಸಿದಲ್ಲಿ ಹೆಚ್ಚಿನ ಗುರಿ ಸಾಧನೆಗೆ ಸಾಧ್ಯ ಎಂದು ಸಚಿವರು ಹೇಳಿದರು.

ಕಸ ವಿಲೇವಾರಿಗೆ ಶಾಶ್ವತ ಪರಿಹಾರ: ಚಿಂತನೆ
ಕಸವನ್ನು ತೆಗೆದು ಸಂಪನ್ಮೂಲವಾಗಿಸುವುದರೊಡನೆ ಮಹಿಳೆಯರಿಗೆ ಉದ್ಯೋಗಾವಕಾಶ ಕಲ್ಪಿಸಿರುವುದು ಉತ್ತಮ ಬೆಳವಣಿಗೆ. ಮೊದಮೊದಲು ಪೇಟೆಯ ಸಮಸ್ಯೆಯಾಗಿದ್ದ ಕಸ ವಿಲೇವಾರಿ ಈಗ ಗ್ರಾಮೀಣ ಪ್ರದೇಶಕ್ಕೂ ಚಾಚಿರುವುದರಿಂದ ಸಾರ್ವತ್ರಿಕವಾಗಿ ಇದಕ್ಕೊಂದು ಶಾಶ್ವತ ಪರಿಹಾರ ಕಂಡುಕೊಳ್ಳುವಲ್ಲಿ ಅಧ್ಯಯನ ನಡೆಸುತ್ತಿದ್ದು ವಂಡ್ಸೆ ಗ್ರಾ.ಪಂ.ನ ಈ ವ್ಯವಸ್ಥೆಯನ್ನು ವೀಕ್ಷಿಸುವುದರೊಡನೆ ಹೆಚ್ಚಿನ ಮಾಹಿತಿ ದೊರಕಿದೆ ಎಂದರು.

ಈ ಸಂದರ್ಭದಲ್ಲಿ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾದಿಕಾರಿ ಶಿವಾನಂದ ಕಾಪಸಿ, ಪಂಚಾಯತ್‌ರಾಜ್‌ ಮತ್ತು ಗ್ರಾಮೀಣಾಭಿವೃದ್ಧಿ ನಿರ್ದೇಶಕರಾದ ಕೆಂಪೇಗೌಡ, ಭುವನಹಳ್ಳಿ ನಾಗರಾಜ, ಬೈಂದೂರು ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ, ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ, ವಂಡ್ಸೆ ಗ್ರಾ.ಪಂ. ಅಧ್ಯಕ್ಷ ಉದಯ ಕುಮಾರ್‌ ಶೆಟ್ಟಿ, ಉಪಾಧ್ಯಕ್ಷೆ ಶಾರದಾ ರುದ್ರಯ್ಯ ಆಚಾರ್ಯ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಕಿರಣ್‌ ಪಡೆ°àಕರ್‌,  ತಾ.ಪಂ. ಸದಸ್ಯ ಉದಯ ಜಿ. ಪೂಜಾರಿ,  ಪಿಡಿಒ ಶಂಕರ ಆಚಾರ್ಯ, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಜನಾರ್ದನ ತೊನ್ಸೆ, ಗ್ರಾ.ಪಂ. ಸದಸ್ಯರು, ರಾಜು ಪೂಜಾರಿ, ವಂಡಬಳ್ಳಿ ಜಯರಾಮ ಶೆಟ್ಟಿ, ಇಲಾಖೆಯ ಅಧಿಕಾರಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

ಗುಡ್ಡ ಕುಸಿತ ಪ್ರದೇಶಕ್ಕೆ ಭೇಟಿ
ಭಾರೀ ಗಾಳಿ ಮಳೆಯಿಂದ ತೆಂಕೊಡ್ಗಿಯಲ್ಲಿ ಗುಡ್ಡ ಕುಸಿದು ಜಖಂಗೊಂಡ ಮನೆಗೆ ಭೇಟಿ ನೀಡಿದ ಸಚಿವರು ಮಾಹಿತಿ ಸಂಗ್ರಹಿಸಿದರು.

ಮಾಹಿತಿ, ಸ್ಪಷ್ಟ ಚಿತ್ರಣ ಇಲ್ಲ 
ರಾಜ್ಯದಲ್ಲಿ 45 ಲಕ್ಷ ಶೌಚಾಲಯ ನಿರ್ಮಿಸಲಾಗಿದ್ದು ಇನ್ನೂ 4 ಲಕ್ಷ ಶೌಚಾಲಯ ನಿರ್ಮಾಣ ಕಾರ್ಯ ಬಾಕಿ ಇದೆ. ಬಯಲು ಮುಕ್ತ ಶೌಚಾಲಯ ಜಿಲ್ಲೆಯಾಗಿರುವ ಉಡುಪಿಯನ್ನೇ ಆಧಾರವಾಗಿಟ್ಟು ಬಯಲು ಮುಕ್ತ ಶೌಚಾಲಯಗಳ ರಾಜ್ಯವಾಗಿಸುವಲ್ಲಿ ಪ್ರಯತ್ನಿಸಲಾಗುವುದು. 

– ಕೃಷ್ಣ ಭೈರೇಗೌಡ,ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವ

Ad

ಟಾಪ್ ನ್ಯೂಸ್

1-aa-agri

ದ.ಕ. ಜಿಲ್ಲೆಯಲ್ಲಿ 3,748 ಹೆಕ್ಟರ್‌ನಲ್ಲಿ ಬಿತ್ತನೆ ಪೂರ್ಣ

Ravi-Ganiga

ಕಾಲ ಕೂಡಿ ಬಂದಾಗ ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಶಾಸಕ ರವಿ ಗಣಿಗ

heart attack

ಯುವಕರಲ್ಲಿ ಹಠಾತ್‌ ಹೃದಯಾಘಾತ ಏರಿಕೆ ;ಮುನ್ನೆಚ್ಚರಿಕೆ ಅಗತ್ಯ: ಡಾ| ಯೂಸುಫ್‌ ಕುಂಬ್ಳೆ

Parameshawar

ಸಿಗಂದೂರು ಸೇತುವೆ ಉದ್ಘಾಟನೆಯಲ್ಲಿ ಸಂಹವನ ಕೊರತೆ: ಗೃಹ ಸಚಿವ

DCF-Chakrapani

ಐದು ಹುಲಿಗಳ ಸಾವು ಪ್ರಕರಣ: ಎಂಎಂ ಹಿಲ್ಸ್‌ ಡಿಸಿಎಫ್ ಚಕ್ರಪಾಣಿ ಅಮಾನತು

ಫಿಡೆ ಮಹಿಳಾ ವಿಶ್ವಕಪ್‌ ಚೆಸ್‌: ಪ್ರಿ ಕ್ವಾರ್ಟರ್‌ಗೆ ದಿವ್ಯಾ, ಹಂಪಿ

FIDE ಮಹಿಳಾ ವಿಶ್ವಕಪ್‌ ಚೆಸ್‌: ಪ್ರಿ ಕ್ವಾರ್ಟರ್‌ಗೆ ದಿವ್ಯಾ, ಹಂಪಿ

Tokyo ಜಪಾನ್‌ ಬ್ಯಾಡ್ಮಿಂಟನ್‌: ಲಕ್ಷ್ಯ ಸೇನ್ ಮೇಲೆ ನಿರೀಕ್ಷೆ

Tokyo ಜಪಾನ್‌ ಬ್ಯಾಡ್ಮಿಂಟನ್‌: ಲಕ್ಷ್ಯ ಸೇನ್ ಮೇಲೆ ನಿರೀಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aa-aa-crick–kashi

ಕೋಟೇಶ್ವರ: ಇಂದಿನಿಂದ ಕಾಶೀ ಶ್ರೀಗಳ ಚಾತುರ್ಮಾಸ ವ್ರತ

court

ಕೋಟ: 20 ಲಕ್ಷ ರೂ. ಸಾಲ ಬಾಕಿ; ಜಾಗ, ಮನೆ ಹರಾಜು

1-aa-aa-cong

‘ಶಕ್ತಿ-ಗ್ಯಾರಂಟಿ’ ಯಶಸ್ಸು: ವಿವಿಧೆಡೆ ಸಂಭ್ರಮ

1-aa-aa-RSS

ಗುರುದಕ್ಷಿಣೆ ಸಮರ್ಪಿಸಿ ಕೊನೆಯುಸಿರೆಳೆದ ಆರೆಸ್ಸೆಸ್‌ ಕಾರ್ಯಕರ್ತ ಬಾಬು ದೇವಾಡಿಗ

EPF

ಉದ್ಯೋಗ ಸೃಷ್ಟಿಗಾಗಿ ಇಎಲ್‌ಐ ಯೋಜನೆ: ಶಶಿಕಾಂತ್‌

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

arrested

ಭಟ್ಕಳ ಠಾಣೆಗೆ ಬಾಂ*ಬ್‌ ಬೆದರಿಕೆ ಸಂದೇಶ : ಪ್ರಮುಖ ಆರೋಪಿ ಖಾಲಿದ್‌ ಪತ್ತೆ

1-aa-agri

ದ.ಕ. ಜಿಲ್ಲೆಯಲ್ಲಿ 3,748 ಹೆಕ್ಟರ್‌ನಲ್ಲಿ ಬಿತ್ತನೆ ಪೂರ್ಣ

Ravi-Ganiga

ಕಾಲ ಕೂಡಿ ಬಂದಾಗ ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಶಾಸಕ ರವಿ ಗಣಿಗ

heart attack

ಯುವಕರಲ್ಲಿ ಹಠಾತ್‌ ಹೃದಯಾಘಾತ ಏರಿಕೆ ;ಮುನ್ನೆಚ್ಚರಿಕೆ ಅಗತ್ಯ: ಡಾ| ಯೂಸುಫ್‌ ಕುಂಬ್ಳೆ

1-aa-aa-crick–kashi

ಕೋಟೇಶ್ವರ: ಇಂದಿನಿಂದ ಕಾಶೀ ಶ್ರೀಗಳ ಚಾತುರ್ಮಾಸ ವ್ರತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.