“ಸ್ವಚ್ಚ ಕರ್ನಾಟಕ ನಿರ್ಮಾಣಕ್ಕೆ ಕಟಿಬದ್ಧ’
Team Udayavani, Aug 21, 2018, 6:00 AM IST
ಕೊಲ್ಲೂರು: ವಂಡ್ಸೆಯಲ್ಲಿ ಆರಂಭಗೊಂಡಿರುವ ಘನ, ದ್ರವ ತ್ಯಾಜ್ಯ ವಿಲೇವಾರಿ ಘಟಕದ ಕಾರ್ಯನಿರ್ವಹಣೆ ರಾಜ್ಯಕ್ಕೆ ಮಾದರಿ. ಗ್ರಾಮೀಣ ಪ್ರದೇಶಗಳಲ್ಲಿ ಈ ಒಂದು ವ್ಯವಸ್ಥೆಯು ಹೆಚ್ಚು ಪರಿಣಾಮಕಾರಿಯಾಗುತ್ತಿದ್ದು ದೊಡ್ಡ ಗ್ರಾಮಗಳಿಗೆ ಇದು ಸವಾಲಾಗಿರಬಹುದು. ಅದಕ್ಕೆ ಪೂರಕವಾದ ವ್ಯವಸ್ಥೆ ಕಲ್ಪಿಸುವಲ್ಲಿ ಗ್ರಾಮಸ್ಥರ ಸಹಕಾರದೊಡನೆ ಶ್ರಮಿಸಿದಲ್ಲಿ ಯಶಸ್ಸು ಸಾಧ್ಯ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಸಚಿವ ಕೃಷ್ಣ ಭೈರೇಗೌಡ ಹೇಳಿದರು.
ವಂಡ್ಸೆ ಗ್ರಾ.ಪಂ.ನಲ್ಲಿ ಆರಂಭಗೊಂಡಿರುವ ಎಸ್.ಎಲ್.ಆರ್.ಎಂ. ಘಟಕವನ್ನು ವೀಕ್ಷಿಸಲು ಆ. 20ರಂದು ಇಲ್ಲಿಗೆ ಆಗಮಿಸಿದ ಸಚಿವರು ಸುದ್ದಿಗಾರರೊಡನೆ ಮಾತನಾಡುತ್ತಾ ಈ ಭಾಗದಲ್ಲಿ ಬಹಳಷ್ಟು ಯಶಸ್ಸು ಕಂಡುಕೊಂಡಿರುವ ಈ ಯೋಜನೆಯ ಅನುಷ್ಠಾನ ಕ್ರಮ ಇತರ ಗ್ರಾ.ಪಂ.ಗಳಿಗೆ ಮಾದರಿಯಾಗಿದೆ ಎಂದರು.
ಸರಕಾರವು ರಾಜ್ಯದ ಎಲ್ಲ ಗ್ರಾಮಗಳಲ್ಲಿ ಎಸ್.ಎಲ್.ಆರ್.ಎಂ. ಘಟಕವನ್ನು ಆರಂಭಿಸುವ ಬಗ್ಗೆ ಕ್ರಮ ಕೈಗೊಳ್ಳುವುದು. ಕೇವಲ ಸರಕಾರದ ಅನುದಾನವನ್ನೇ ಅವಲಂಬಿಸದೇ ಈ ಒಂದು ಘಟಕದ ನಿರ್ವಹಣೆ ಯಿಂದ ಬರುವ ಆರ್ಥಿಕ ವ್ಯವಸ್ಥೆಯನ್ನು ಬಳಸಿದಲ್ಲಿ ಹೆಚ್ಚಿನ ಗುರಿ ಸಾಧನೆಗೆ ಸಾಧ್ಯ ಎಂದು ಸಚಿವರು ಹೇಳಿದರು.
ಕಸ ವಿಲೇವಾರಿಗೆ ಶಾಶ್ವತ ಪರಿಹಾರ: ಚಿಂತನೆ
ಕಸವನ್ನು ತೆಗೆದು ಸಂಪನ್ಮೂಲವಾಗಿಸುವುದರೊಡನೆ ಮಹಿಳೆಯರಿಗೆ ಉದ್ಯೋಗಾವಕಾಶ ಕಲ್ಪಿಸಿರುವುದು ಉತ್ತಮ ಬೆಳವಣಿಗೆ. ಮೊದಮೊದಲು ಪೇಟೆಯ ಸಮಸ್ಯೆಯಾಗಿದ್ದ ಕಸ ವಿಲೇವಾರಿ ಈಗ ಗ್ರಾಮೀಣ ಪ್ರದೇಶಕ್ಕೂ ಚಾಚಿರುವುದರಿಂದ ಸಾರ್ವತ್ರಿಕವಾಗಿ ಇದಕ್ಕೊಂದು ಶಾಶ್ವತ ಪರಿಹಾರ ಕಂಡುಕೊಳ್ಳುವಲ್ಲಿ ಅಧ್ಯಯನ ನಡೆಸುತ್ತಿದ್ದು ವಂಡ್ಸೆ ಗ್ರಾ.ಪಂ.ನ ಈ ವ್ಯವಸ್ಥೆಯನ್ನು ವೀಕ್ಷಿಸುವುದರೊಡನೆ ಹೆಚ್ಚಿನ ಮಾಹಿತಿ ದೊರಕಿದೆ ಎಂದರು.
ಈ ಸಂದರ್ಭದಲ್ಲಿ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾದಿಕಾರಿ ಶಿವಾನಂದ ಕಾಪಸಿ, ಪಂಚಾಯತ್ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ನಿರ್ದೇಶಕರಾದ ಕೆಂಪೇಗೌಡ, ಭುವನಹಳ್ಳಿ ನಾಗರಾಜ, ಬೈಂದೂರು ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ, ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ, ವಂಡ್ಸೆ ಗ್ರಾ.ಪಂ. ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ, ಉಪಾಧ್ಯಕ್ಷೆ ಶಾರದಾ ರುದ್ರಯ್ಯ ಆಚಾರ್ಯ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಕಿರಣ್ ಪಡೆ°àಕರ್, ತಾ.ಪಂ. ಸದಸ್ಯ ಉದಯ ಜಿ. ಪೂಜಾರಿ, ಪಿಡಿಒ ಶಂಕರ ಆಚಾರ್ಯ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜನಾರ್ದನ ತೊನ್ಸೆ, ಗ್ರಾ.ಪಂ. ಸದಸ್ಯರು, ರಾಜು ಪೂಜಾರಿ, ವಂಡಬಳ್ಳಿ ಜಯರಾಮ ಶೆಟ್ಟಿ, ಇಲಾಖೆಯ ಅಧಿಕಾರಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.
ಗುಡ್ಡ ಕುಸಿತ ಪ್ರದೇಶಕ್ಕೆ ಭೇಟಿ
ಭಾರೀ ಗಾಳಿ ಮಳೆಯಿಂದ ತೆಂಕೊಡ್ಗಿಯಲ್ಲಿ ಗುಡ್ಡ ಕುಸಿದು ಜಖಂಗೊಂಡ ಮನೆಗೆ ಭೇಟಿ ನೀಡಿದ ಸಚಿವರು ಮಾಹಿತಿ ಸಂಗ್ರಹಿಸಿದರು.
ಮಾಹಿತಿ, ಸ್ಪಷ್ಟ ಚಿತ್ರಣ ಇಲ್ಲ
ರಾಜ್ಯದಲ್ಲಿ 45 ಲಕ್ಷ ಶೌಚಾಲಯ ನಿರ್ಮಿಸಲಾಗಿದ್ದು ಇನ್ನೂ 4 ಲಕ್ಷ ಶೌಚಾಲಯ ನಿರ್ಮಾಣ ಕಾರ್ಯ ಬಾಕಿ ಇದೆ. ಬಯಲು ಮುಕ್ತ ಶೌಚಾಲಯ ಜಿಲ್ಲೆಯಾಗಿರುವ ಉಡುಪಿಯನ್ನೇ ಆಧಾರವಾಗಿಟ್ಟು ಬಯಲು ಮುಕ್ತ ಶೌಚಾಲಯಗಳ ರಾಜ್ಯವಾಗಿಸುವಲ್ಲಿ ಪ್ರಯತ್ನಿಸಲಾಗುವುದು.
– ಕೃಷ್ಣ ಭೈರೇಗೌಡ,ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್ ಕಾಲೇಜು: ಜಯಪ್ರಕಾಶ್ ಹೆಗ್ಡೆ
Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು
Theft; 13 ರಾಜ್ಯಗಳಿಗೆ ಬೇಕಾಗಿದ್ದ ಕಳ್ಳ ಕೋಟದಲ್ಲಿ ಪೊಲೀಸರ ಬಲೆಗೆ!