ಕೃಷಿ ಸಹಾಯದಲ್ಲಿ ಸಿಂಡ್‌ ಬ್ಯಾಂಕ್‌ ಮುಂಚೂಣಿ

ಸಿಂಡ್‌ ಬ್ಯಾಂಕ್‌ನಿಂದ ಗ್ರಾಮೀಣ ಕೃಷಿ ವಿಸ್ತರಣ ಕಾರ್ಯಕ್ರಮದಲ್ಲಿ ನಾಗೇಶ್ವರ ರಾವ್‌

Team Udayavani, Mar 4, 2020, 12:48 AM IST

Synd-bank

ಗ್ರಾಮೀಣ ಕೃಷಿ ವಿಸ್ತರಣಾ ಕಾರ್ಯಕ್ರಮವನ್ನು ಸಿಂಡಿಕೇಟ್‌ ಬ್ಯಾಂಕ್‌ ಕಾರ್ಯನಿರ್ವಾಹಕ ನಿರ್ದೇಶಕ ನಾಗೇಶ್ವರ ರಾವ್‌ ಉದ್ಘಾಟಿಸಿದರು.

ಉಡುಪಿ: ಸಿಂಡಿಕೇಟ್‌ ಬ್ಯಾಂಕ್‌ ಪ್ರಸಕ್ತ ಸಾಲಿನ ಡಿಸೆಂಬರ್‌ ಅಂತ್ಯಕ್ಕೆ 5 ಲಕ್ಷ ಕೋ.ರೂ. ವ್ಯವಹಾರ ನಡೆಸಿ, 451 ಕೋಟಿ ರೂ. ಲಾಭ ಗಳಿಸಿದೆ. ಬ್ಯಾಂಕ್‌ ಆರಂಭದಿಂದಲೂ ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಮಹತ್ವ ನೀಡುತ್ತ ಬಂದಿದ್ದು, ಕೃಷಿಕರಿಗೆ ಆರ್ಥಿಕ ಸಹಾಯ ನೀಡುವುದರಲ್ಲಿ ಮುಂಚೂಣಿಯಲ್ಲಿದೆ ಎಂದು ಬ್ಯಾಂಕ್‌ ಕಾರ್ಯನಿರ್ವಾಹಕ ನಿರ್ದೇಶಕ ನಾಗೇಶ್ವರ ರಾವ್‌ ಹೇಳಿದರು.

ಸಿಂಡಿಕೇಟ್‌ ಬ್ಯಾಂಕ್‌ ವತಿಯಿಂದ ಮಣಿಪಾಲದ ಸಿಂಡಿಕೇಟ್‌ ಬ್ಯಾಂಕ್‌ ಸ್ವರ್ಣ ಜಯಂತಿ ಸಭಾಂಗಣದಲ್ಲಿ ಮಂಗಳವಾರ ನಡೆದ ಗ್ರಾಮೀಣ ಕೃಷಿ ವಿಸ್ತರಣ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಯುವಕರು ಕೃಷಿ ಕ್ಷೇತ್ರಕ್ಕೆ ಬರಬೇಕು ಕೃಷಿ ಆದ್ಯತಾ ವಲಯದ ಮಹಾ ಪ್ರಬಂಧಕ ಮಣಿವಣ್ಣನ್‌ ಮಾತನಾಡಿ, ಕೃಷಿ ಎಲ್ಲ ಅವಧಿಯಲ್ಲಿ ಫ‌ಸಲು ನೀಡುತ್ತದೆ. ಆಧುನಿಕ ತಂತ್ರಜ್ಞಾನಗಳನ್ನು ಕೃಷಿ
ಯಲ್ಲಿ ಬಳಸಿಕೊಂಡಲ್ಲಿ ಹೆಚ್ಚು ಇಳುವರಿ ಜತೆಗೆ ಆದಾಯ ಪಡೆಯಲು ಸಾಧ್ಯ. ಹಿಂದೆ ಕೃಷಿಯಲ್ಲಿ ಶೇ. 70ರಷ್ಟು ಮಂದಿ ತೊಡಗಿಸಿಕೊಳ್ಳುತ್ತಿದ್ದರು, ಅದೀಗ ಶೇ. 40ಕ್ಕೆ ಇಳಿದಿದೆ. ಯುವ ಸಮುದಾಯ ಕೃಷಿ ಕ್ಷೇತ್ರದತ್ತ ಬರುವಂತಾಗಬೇಕು. ಅದಕ್ಕೆ ಅವರಿಗೆ ತಾಂತ್ರಿಕತೆಯ ಪರಿಚಯವಾಗಬೇಕು ಎಂದರು.

ಮಹಾಪ್ರಬಂಧಕ ಎಸ್‌.ಎಸ್‌. ಹೆಗ್ಡೆ, ಕೈಗಾರಿಕಾ ಜಂಟಿ ನಿರ್ದೇಶಕ ಗೋಕುಲದಾಸ್‌ ನಾಯಕ್‌, ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕ ಕೆಂಪೇಗೌಡ ಉಪಸ್ಥಿತರಿದ್ದರು. ಅಧಿಕಾರಿಗಳಾದ ರುದ್ರೇಶ್‌ ಸ್ವಾಗತಿಸಿ, ಪ್ರದೀಪ್‌ ಹೆಬ್ಟಾಳ್‌ ವಂದಿಸಿದರು. ಅರ್ಚನಾ ನಿರೂಪಿಸಿದರು.

350 ಮಂದಿ ರೈತರು ಭಾಗಿ
ಆರಂಭದಲ್ಲಿ ಸಿಂಡಿಕೇಟ್‌ ಬ್ಯಾಂಕ್‌ ಪ್ರಧಾನ ಕಚೇರಿ ಬಳಿಯಿಂದ ಟೈಗರ್‌ ಸರ್ಕಲ್‌ ತನಕ ಮೆರವಣಿಗೆ ಸಾಗಿ ಬಂತು. ಬಳಿಕ ಕೃಷಿ ಯಂತ್ರ ಪ್ರದರ್ಶನ ಮಳಿಗೆಗಳ ಉದ್ಘಾಟನೆ ನಡೆಯಿತು. 350ರಷ್ಟು ಮಂದಿ ಕೃಷಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿ, ಕೃಷಿ ಪರಿಕರಗಳ ಪ್ರಾತ್ಯಕ್ಷಿಕೆ, ಬ್ಯಾಂಕಿನಿಂದ ಸಿಗುವ ಎಂಎಸ್‌ಎಂಇ ಸಾಲ ಸೌಲಭ್ಯಗಳು, ನಗದು ರಹಿತ ವ್ಯವಹಾರ, ಡಿಜಿಟಲ್‌ ಬ್ಯಾಂಕಿಂಗ್‌ ಇತ್ಯಾದಿ ಮಾಹಿತಿ ಪಡೆದುಕೊಂಡರು.

ತಜ್ಞರಿಂದ ಮಾಹಿತಿ
ರೈತರಿಗೆ ಆಧುನಿಕ ಕೃಷಿ ತಂತ್ರಜ್ಞಾನ, ಸುಧಾರಿತ ಬೇಸಾಯ ಪದ್ಧತಿ, ಕೃಷಿಯಲ್ಲಿ ನೂತನ ಆವಿಷ್ಕಾರಗಳು, ಆದಾಯ ದ್ವಿಗುಣ ಇತ್ಯಾದಿಗಳ ಕುರಿತು ತಜ್ಞರು ಮಾಹಿತಿ ನೀಡಿದರು. ಸಣ್ಣ ಹಾಗೂ ಅತೀ ಸಣ್ಣ ಉದ್ದಿಮೆದಾರರಿಗೆ ಸರಕಾರದಿಂದ ಲಭ್ಯವಿರುವ ಪ್ರೋತ್ಸಾಹಧನ ಕುರಿತು ಬ್ಯಾಂಕಿನ ವಿವಿಧ ವಿಭಾಗಗಳ ಅಧಿಕಾರಿಗಳಾದ ಅರುಣ್‌ಸಾಗರ್‌, ಚಂದ್ರಕಾಂತ್‌, ಗೋಕುಲದಾಸ್‌ ನಾಯಕ್‌, ಕೆಂಪೇಗೌಡ ಮಾಹಿತಿ ಒದಗಿಸಿದರು.

ಯಶಸ್ವಿ ಕೃಷಿಕರ ಸಾಧನೆಗಳ ಕುರಿತು ಸಾಕ್ಷಚಿತ್ರ ಪ್ರದರ್ಶನ ಹಾಗೂ 15 ಮಂದಿ ಕೃಷಿಕರನ್ನು ಗುರುತಿಸಿ ಗೌರವಿಸಲಾಯಿತು.

ಕೃಷಿ ಸಾಲ ನೀಡಿದ ಪ್ರಥಮ ಬ್ಯಾಂಕ್‌
ಸಿಂಡಿಕೇಟ್‌ ಬ್ಯಾಂಕ್‌ ವಲಯ ಮಹಾಪ್ರಬಂಧಕ ಭಾಸ್ಕರ ಹಂದೆ ಮಾತನಾಡಿ, ಕೃಷಿ ಹಾಗೂ ಸಣ್ಣ ಉದ್ದಿಮೆಗಳಿಂದ ಆರ್ಥಿಕತೆ ಹೆಚ್ಚಿ ದೇಶ ಪ್ರಗತಿ ಹೊಂದಲು ಸಾಧ್ಯ. ಕೇವಲ 8 ಸಾವಿರ ರೂ. ಬಂಡವಾಳದಲ್ಲಿ ಆರಂಭಿಸಿ ನೇಕಾರರಿಗೆ ಸಹಾಯಧನ ಒದಗಿಸುವ ಮೂಲಕ ಆರಂಭಗೊಂಡ ಸಿಂಡಿಕೇಟ್‌ ಬ್ಯಾಂಕ್‌ ಇಂದು ದೊಡ್ಡ ಆರ್ಥಿಕ ಸಂಸ್ಥೆಯಾಗಿ ಬೆಳೆದಿದೆ. 1960ರಲ್ಲಿ ದೇಶದಲ್ಲಿ ಪ್ರಥಮ ಬಾರಿಗೆ ಬೆಳೆದು ನಿಂತ ಬೆಳೆಗೆ ಕೃಷಿ ಸಾಲ ನೀಡಿದ ಪ್ರಥಮ ಬ್ಯಾಂಕ್‌ ಎಂಬ ಹೆಗ್ಗಳಿಕೆ ನಮ್ಮ ಸಂಸ್ಥೆಗಿದೆ ಎಂದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.