ವ್ಯವಸ್ಥಿತ ತೋಟಗಾರಿಕೆ ಪದ್ಧತಿ: ವಾರ್ಷಿಕ ಆದಾಯ ದ್ವಿಗುಣ


Team Udayavani, May 26, 2019, 6:04 AM IST

VYAVASTITA

ಉಡುಪಿ: ಜಿಲ್ಲೆಯ ತೋಟಗಾರಿಕೆ ಕ್ಷೇತ್ರಗಳಲ್ಲಿ ಅಳವಡಿಸಿ ಕೊಂಡ ವ್ಯವಸ್ಥಿತ ತೋಟಗಾರಿಕೆ ಪದ್ಧತಿಯಿಂದ ವರ್ಷದಿಂದ ವರ್ಷಕ್ಕೆ ಆದಾಯ ಹೆಚ್ಚಾಗುತ್ತಿದ್ದು, ಫಾರ್ಮ್ಗಳಲ್ಲಿ ಬೆಳೆಸಲಾದ ಬಗೆ ಬಗೆ ಹಣ್ಣು, ತರಕಾರಿ ಸಸಿಗಳು ಜನರ ಗಮನ ಸೆಳೆಯುತ್ತಿದೆ.

59.28 ಲ. ರೂ.,ಆದಾಯ

ಜಿಲ್ಲೆಯ ತೋಟಗಾರಿಕೆ ಕ್ಷೇತ್ರ ಗಳು ಸಸಿ ಮಾರಾಟ ಮತ್ತು ಬೆಳೆಗಳ ಹರಾಜಿನಿಂದ ಉತ್ತಮ ಆದಾಯ ಗಳಿಸುತ್ತಿವೆ. ಪ್ರಸಕ್ತ ಸಾಲಿನಲ್ಲಿ ದೊಡ್ಡಣಗುಡ್ಡೆ ಶಿವಳ್ಳಿ 14.20 ಲಕ್ಷ ರೂ., ವಾರಂಬಳ್ಳಿ 7.16 ಲ.ರೂ., ಕೆದೂರು 6.53 ಲ. ರೂ., ಕುಂಭಾಶಿ 8 ಲ.ರೂ., ಕುಕ್ಕುಂದೂರು 10.14 ಲ.ರೂ., ರಾಮಸಮುದ್ರ 13.17 ಲ.ರೂ., ಸೇರಿದಂತೆ ಒಟ್ಟು ವಾರ್ಷಿಕ 59.28 ಲ.ರೂ., ಆದಾಯ ಗಳಿಸಿದೆ. 2017-18ನೇ ಸಾಲಿ ನಲ್ಲಿ 37.69 ಲ. ರೂ., 2016-17ರಲ್ಲಿ 30 ಲ.ರೂ., 2015-16ರಲ್ಲಿ 20 ಲ.ರೂ., ಆದಾಯ ಗಳಿಸಿತ್ತು.

700 ಹೆಕ್ಟೇರ್‌ ವಿಸ್ತರಣೆ ಗುರಿ

ಜಿಲ್ಲೆಯ ದೊಡ್ಡಣಗುಡ್ಡೆ ಶಿವಳ್ಳಿ 27.48 ಎಕ್ರೆ, ವಾರಂಬಳ್ಳಿ 2.74 ಎಕ್ರೆ, ಕುಂದಾಪುರದ ಕುಂಭಾಶಿ 22.22 ಎಕ್ರೆ, ಕೆದೂರು 13.62 ಎಕ್ರೆ, ಕಾರ್ಕಳದ ಕುಕ್ಕಂದೂರು 15.49 ಎಕ್ರೆ, ರಾಮಸಮುದ್ರ 196.97 ಎಕ್ರೆ ಪ್ರದೇಶ ಮಾದರಿ ತೋಟಗಾರಿಕೆ ಕ್ಷೇತ್ರವಾಗಿ ಗುರುತಿಸಿಕೊಂಡಿದೆ. ಕಳೆದ ಸಾಲಿನಲ್ಲಿ 500 ಹೆಕ್ಟೇರ್‌ ತೋಟಗಾರಿಕೆ ಬೆಳೆ ವಿಸ್ತರಣೆ ಗುರಿ ದಾಟಿ 611 ಹೆಕ್ಟೇರ್‌ ವಿಸ್ತರಣೆಯಾಗಿದೆ. ಈ ಬಾರಿ 700 ಹೆಕ್ಟೇರ್‌ ಗುರಿಯನ್ನು ಹೊಂದಿದೆ.

ವಾಣಿಜ್ಯ ಸಸಿಗಳ ಬೇಡಿಕೆ

ಜಿಲ್ಲೆಯಲ್ಲಿ ವಾಣಿಜ್ಯ ಸಸಿಗಳ ಬೇಡಿಕೆ ಹೆಚ್ಚಿದೆ. ಕಳೆದ ಬಾರಿ 3.88 ಲ.ರೂ. ವಾಣಿಜ್ಯ ಸಸಿಗಳು ಮಾರಾಟವಾಗಿವೆ. ಅದರಲ್ಲಿ ಸುಮಾರು 53,000 ತರಕಾರಿ ಸಸಿಗಳು ಮಾರಾಟವಾಗಿವೆ.

ನೀರಿನ ಸಮಸ್ಯೆ

ತೋಟಗಳಿಗೆ ಅಧಿಕ ಪ್ರಮಾಣದಲ್ಲಿ ನೀರಿನ ಅಗತ್ಯತೆ ಇದ್ದು, ಅಂತರ್ಜಲ ವೃದ್ಧ್ದಿಗಾಗಿ, ವರ್ಷದ ಎಲ್ಲ ದಿನಗಳಲ್ಲಿ ನೀರಿನ ಆವಶ್ಯಕತೆಗೆ ಎಲ್ಲ ತೋಟಗಾರಿಕೆ ಕ್ಷೇತ್ರಗಳಲ್ಲಿ ಮಳೆ ನೀರು ಕೊಯ್ಲು ಪದ್ದತಿ ಅಳವಡಿಸಲಾಗಿದೆ. ಆದರೆ ಈ ಬಾರಿ ರಾಮಸಮುದ್ರದಲ್ಲಿ ನೀರಿನ ಸಮಸ್ಯೆ ಅತಿಯಾಗಿ ಕಾಡುತ್ತಿರುವುದರಿಂದ ಸರದಿ ಪ್ರಕಾರ ಸಸಿಗಳಿಗೆ ನೀರು ಬಿಡಲಾಗುತ್ತಿದೆ. ಶಿವಳ್ಳಿಯಲ್ಲಿ ಬೇಸಗೆ ನೀರು ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಅಂತರ್ಜಲ ವೃದ್ದಿಗೆ 8.89 ಲಕ್ಷ ಲೀಟರ್‌ ಸಾಮರ್ಥ್ಯದ ಗುಂಡಿ ನಿರ್ಮಿಸಲಾಗಿದೆ.

ಬೇಡಿಕೆ ಇದೆ

ಎಲ್ಲ ತೋಟಗಾರಿಕೆ ಕ್ಷೇತ್ರಗಳಲ್ಲಿ ಸಸಿಗಳಿಗೆ ಸಾಕಷ್ಟು ಬೇಡಿಕೆ ಇದೆ. ವಾಣಿಜ್ಯ ಬೆಳೆ ಸೇರಿದಂತೆ ತರಕಾರಿ ಸಸಿಗಳ ಮಾರಾಟ ಪ್ರಮಾಣದಲ್ಲಿ ಏರಿಕೆಯಾಗಿದೆ. ಹೊಸದಾಗಿ ರೈತರ ಬೇಡಿಕೆಗೆ ಅನುಸಾರ ಕಸಿ ಕಾಳು ಮೆಣಸು ಸಸಿ ಉತ್ಪಾದನೆಯನ್ನು ಮಾಡಲಾಗುತ್ತಿದೆ.
– ನಿದೀಶ್‌ ಹೊಳ್ಳ , ಸಹಾಯಕ ತೋಟಗಾರಿಕೆ ಅಧಿಕಾರಿ, ಉಡುಪಿ
– ತೃಪ್ತಿ ಕುಮ್ರಗೋಡು

ಟಾಪ್ ನ್ಯೂಸ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.