ಟಿ. ಸತೀಶ್ ಯು. ಪೈ ಅವರಿಗೆ ಪತ್ರಿಕಾ ದಿನದ ಗೌರವ
Team Udayavani, Jun 27, 2019, 5:18 AM IST
ಉಡುಪಿ: ಬೆಂಗಳೂರಿನ ಪತ್ರಕರ್ತರ ವೇದಿಕೆಯ “ಹಿರಿಯರೆಡೆಗೆ ನಮ್ಮ ನಡಿಗೆ’ ಕಾರ್ಯಕ್ರಮದನ್ವಯ ಪತ್ರಿಕಾ ದಿನದ ಪ್ರಯುಕ್ತ ಹಿರಿಯ ಪತ್ರಿಕೋದ್ಯಮಿ, ಮಣಿಪಾಲ ಮೀಡಿಯಾ ನೆಟ್ವರ್ಕ್ ಲಿ.ನ ಆಡಳಿತ ನಿರ್ದೇಶಕ ಟಿ. ಸತೀಶ್ ಯು. ಪೈ ಅವರಿಗೆ 2019ರ ಪತ್ರಿಕಾ ದಿನದ ಗೌರವ ನೀಡಲಾಗುವುದು ಎಂದು ವೇದಿಕೆಯ ಉಡುಪಿ ಜಿಲ್ಲಾಧ್ಯಕ್ಷ ಶೇಖರ ಅಜೆಕಾರು ತಿಳಿಸಿದ್ದಾರೆ.
ಮಣಿಪಾಲದ ಅನಂತ ನಗರದಲ್ಲಿರುವ ಸತೀಶ್ ಪೈ ಅವರ ನಿವಾಸದಲ್ಲಿ ಜೂ. 30ರಂದು ಮಧ್ಯಾಹ್ನ 2.30ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು ಅವರು ಈ ಗೌರವ ಪ್ರದಾನಿಸಲಿದ್ದಾರೆ. ಹಿರಿಯ ಸಂಗೀತ ತಜ್ಞ ಉಡುಪಿ ನಾದವೈಭವಂ ವಾಸುದೇವ ಭಟ್, ಹಿರಿಯ ಉದ್ಯಮಿ ವಿಶ್ವನಾಥ ಶೆಣೈ, ಹಿರಿಯ ಸಾಹಿತಿ ಕು.ಗೋ., ಹಿರಿಯ ಶಿಕ್ಷಣ ತಜ್ಞ ಎ. ನರಸಿಂಹ, ಸಂಘಟಕ ಭುವನಪ್ರಸಾದ್ ಹೆಗ್ಡೆ ಸಹಿತ ಗಣ್ಯರು ಉಪಸ್ಥಿತರಿರುತ್ತಾರೆ ಎಂದವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ
Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್