ತಲ್ಲೂರು ಹೆದ್ದಾರಿ ಕಾಮಗಾರಿ: ಅವ್ಯವಸ್ಥೆಯ ಆಗರ


Team Udayavani, Feb 28, 2019, 1:00 AM IST

tallur-hedari.jpg

  ವಿಶೇಷ ವರದಿ

ಕುಂದಾಪುರ: ಕಾರವಾರ- ಕುಂದಾಪುರ ರಾಷ್ಟ್ರೀಯ ಹೆದ್ದಾರಿ 66ರ ಕಾಮಗಾರಿ ನಡೆಯುತ್ತಿದ್ದು, ತಲ್ಲೂರು ಭಾಗದಲ್ಲಿ ನಡೆಯುತ್ತಿರುವ ಕಾಮಗಾರಿಯ ಅವ್ಯವಸ್ಥೆಯಿಂದಾಗಿ ಜನರಿಗೆ ಗೊಂದಲ ಮೂಡಿಸುವಂತಿದೆ. ಹಟ್ಟಿಯಂಗಡಿ, ನೇರಳಕಟ್ಟೆ, ಕೊಲ್ಲೂರು ಕಡೆಗೆ ಸಂಚರಿಸುವ ವಾಹನ ಸವಾರರು ಹೇಗೆ ಸಂಚರಿಸಬೇಕು ಎನ್ನುವುದೇ ತಿಳಿಯದ ಸ್ಥಿತಿ ನಿರ್ಮಾಣವಾಗಿದೆ. 

ಕುಂದಾಪುರದಿಂದ ಕಾರವಾರವರೆಗಿನ ಹೆದ್ದಾರಿ ಕಾಮಗಾರಿಯ ಗುತ್ತಿಗೆ ಯನ್ನು ಐಆರ್‌ಬಿಯವರು ವಹಿಸಿ ಕೊಂಡಿವೆೆ. ಈಗಾಗಲೇ ಹೆಚ್ಚಿನ ಕಡೆಗಳಲ್ಲಿ ಕಾಮಗಾರಿ ಅಂತಿಮ ಹಂತಕ್ಕೆ ತಲುಪಿದೆ. ಆದರೆ ತಲ್ಲೂರು ಭಾಗದಲ್ಲಿನ ಕಾಮಗಾರಿ ಮಾತ್ರ ಅವಾಂತರ ಸೃಷ್ಟಿಸುವ ಸ್ಥಿತಿಯಲ್ಲಿದೆ. 

ಅಪಘಾತಕ್ಕೆ ಆಹ್ವಾನ
ಕುಂದಾಪುರದಿಂದ ಬೈಂದೂರು ಕಡೆಗೆ ಹೋಗುವ ಎಡಗಡೆಯ ರಸ್ತೆ ತುಂಬ ತಗ್ಗಿನಲ್ಲಿದ್ದರೆ ಬಲಗಡೆಯ ರಸ್ತೆ ತುಂಬ ಎತ್ತರದಲ್ಲಿದೆ. ಮಧ್ಯದಲ್ಲಿ ಸ್ವಲ್ಪ ಜಾಗವನ್ನೂ ಬಿಟ್ಟಿಲ್ಲ. ಇಲ್ಲಿ ದ್ವಿಚಕ್ರ ವಾಹನವೇನಾದರೂ ಸ್ಕಿಡ್‌ ಆಗಿ ಬಿದ್ದರೆ, ಕೆಳಗಿನ ರಸ್ತೆಗೆ ಬಂದು ಬೀಳುತ್ತದೆ. ಹೆದ್ದಾರಿಯಲ್ಲಿ ನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತಿದ್ದು, ಅದರಲ್ಲೂ ರಾತ್ರಿ ವೇಳೆ ಸಂಚರಿಸುವ ವಾಹನಗಳು ಫೋಕಸ್‌ ಲೈಟ್‌ ಹಾಕಿ ಬರುವುದರಿಂದ ಇತರ ವಾಹನಗಳಿಗೆ ರಸ್ತೆ ಸರಿಯಾಗಿ ಕಾಣಿಸದೇ ಅಪಘಾತ ಸಂಭವಿಸುವ ಭೀತಿಯೂ ಇದೆ. 

ಕಾಮಗಾರಿ ತ್ವರಿತಗತಿಯಲ್ಲಿ ಮುಗಿಸಲಿ
ತಲ್ಲೂರು ಒಂದು ಪ್ರಮುಖ ಜಂಕ್ಷನ್‌ ಆಗಿದೆ. ಒಂದು ಕಡೆ ಬೈಂದೂರು, ಮತ್ತೂಂದೆಡೆ ಕುಂದಾಪುರ, ಇನ್ನೊಂದೆಡೆ ನೇರಳಕಟ್ಟೆ, ಹಟ್ಟಿಯಂಗಡಿ, ಕೊಲ್ಲೂರಿಗೆ ತೆರಳುವ ಮಾರ್ಗ ಇದಾಗಿರುವುದರಿಂದ ಎಲ್ಲ ಸಮಯದಲ್ಲಿಯೂ ವಾಹನ ದಟ್ಟಣೆ ಹೆಚ್ಚಾಗಿರುತ್ತದೆ. ತಲ್ಲೂರು ಪೇಟೆ ಭಾಗದಲ್ಲಿ ತ್ವರಿತಗತಿಯಲ್ಲಿ ಕಾಮಗಾರಿ ಮುಗಿಸಲಿ ಎನ್ನುವುದು ಇಲ್ಲಿನ ಜನರ ಆಗ್ರಹವಾಗಿದೆ. 

ಧೂಳಿಗೆ ನೀರು ಹಾಕಲಿ
ಈ ವರೆಗೆ ನಮಗೆ ತಲ್ಲೂರಿನಲ್ಲಿ ಹೆದ್ದಾರಿ ಕಾಮಗಾರಿ ಬಗ್ಗೆ ಒಂದು ಸ್ಪಷ್ಟವಾದ ರೂಪುರೇಷೆ ಸಿಕ್ಕಿಲ್ಲ. ಚರಂಡಿ ನಿರ್ಮಾಣದ ಬಗ್ಗೆಯೂ ಮಾಹಿತಿಯಿಲ್ಲ. ಚರಂಡಿ ನಿರ್ಮಾಣ ಮಾಡದಿದ್ದಲ್ಲಿ ಮುಂದಿನ ಮಳೆಗಾಲದಲ್ಲಿ ಇಡೀ ತಲ್ಲೂರು ಪೇಟೆಯ ಜನರು ಸಂಕಷ್ಟ ಅನುಭವಿಸಲಿದ್ದಾರೆ. ಇಲ್ಲಿನ ನಿಧಾನ ಗತಿಯ ಕಾಮಗಾರಿಯಿಂದಾಗಿ ರಸ್ತೆಯಿಡೀ ಧೂಳುಮಯವಾಗಿದ್ದು, ಅದಕ್ಕೆ ಕಾಮಗಾರಿ ಗುತ್ತಿಗೆ ವಹಿಸಿಕೊಂಡಿರುವ ಐಆರ್‌ಬಿಯವರು ನೀರನ್ನಾದರೂ ಹಾಕಿ ಶಾಲಾ – ಕಾಲೇಜು ಮಕ್ಕಳು, ಜನರಿಗೆ ಅನುಕೂಲ ಮಾಡಿಕೊಡಲಿ. 
– ಸಂತೋಷ್‌ ತಲ್ಲೂರು, ಸ್ಥಳೀಯರು

ಕಾಮಗಾರಿ ಶೀಘ್ರ ಪೂರ್ಣ
ಈಗಾಗಲೇ ತಲ್ಲೂರಿನಲ್ಲಿ ಕಾಮಗಾರಿ ತ್ವರಿತಗತಿಯಲ್ಲಿ ನಡೆಯುತ್ತಿದೆ. ಆದಷ್ಟು  ಬೇಗ ರಸ್ತೆ ಕಾಮಗಾರಿ ಪೂರ್ಣಗೊಳಿಸಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು. ಚರಂಡಿ ಕಾಮಗಾರಿ ಕೂಡ ನಡೆಯಲಿದೆ. ತಲ್ಲೂರು ಪೇಟೆಯಲ್ಲಿ ಸರ್ವಿಸ್‌ ರಸ್ತೆ ಬೇಕು ಎನ್ನುವ ಪ್ರಸ್ತಾವನೆಯನ್ನು ಈಗಾಗಲೇ ಕಳುಹಿಸಿ ಕೊಡಲಾಗಿದ್ದು, ಅಲ್ಲಿಂದ ಮಂಜೂರಾಗಿ ಬರಬೇಕಿದೆ. 
– ಯೋಗೇಂದ್ರಪ್ಪ, ಐಆರ್‌ಬಿ ಪ್ರಾಜೆಕ್ಟ್ ಮ್ಯಾನೇಜರ್‌

ಟಾಪ್ ನ್ಯೂಸ್

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.