ಕರ್ತವ್ಯ ಲೋಪ: ತಾ| ಆಸ್ಪತ್ರೆ ವೈದ್ಯಾಧಿಕಾರಿ ಅಮಾನತು


Team Udayavani, Dec 3, 2019, 12:12 AM IST

kundapura

ಕುಂದಾಪುರ: ಕರ್ತವ್ಯ ಲೋಪ ಆರೋಪದ ಹಿನ್ನೆಲೆಯಲ್ಲಿ ಕುಂದಾಪುರ ತಾಲೂಕು ಸರಕಾರಿ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ| ರಾಬರ್ಟ್‌ ರೆಬೆಲ್ಲೋ ಅವರನ್ನು ಆರೋಗ್ಯ ಸಚಿವ ಶ್ರೀರಾಮುಲು ಅವರ ಸೂಚನೆಯಂತೆ ಸೇವೆಯಿಂದ ಅಮಾನತುಗೊಳಿಸಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತ ಪಂಕಜ್‌ ಪಾಂಡೆ ಆದೇಶ ಹೊರಡಿಸಿದ್ದಾರೆ.

ಡಾ| ರಾಬರ್ಟ್‌ ರೆಬೆಲ್ಲೋ ಅವರ ವಿರುದ್ಧ ಜನಪ್ರತಿನಿಧಿಗಳು, ಸಾರ್ವಜನಿಕ ರಿಂದ ಹಲವಾರು ದೂರುಗಳು ಬಂದಿವೆ. ಅವರು ಕರ್ತವ್ಯ ಲೋಪ ಎಸಗಿರುವುದು ಕಂಡುಬಂದಿದ್ದು, ತತ್‌ಕ್ಷಣದಿಂದ ಜಾರಿಗೆ ಬರುವಂತೆ ಸೇವೆಯಿಂದ ಅಮಾನತುಗೊಳಿಸಿದ್ದು, ಮುಂದಿನ ದಿನಗಳಲ್ಲಿ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಆದೇಶ ತಿಳಿಸಿದೆ. ಡಾ| ರೆಬೆಲ್ಲೊ ಅವರು 10ಕ್ಕೂ ಅಧಿಕ ವರ್ಷಗಳಿಂದ ಇದೇ ಆಸ್ಪತ್ರೆಯಲ್ಲಿದ್ದರು.

ಅರ್ಧ ವೇತನ
ಡಾ| ರಾಬರ್ಟ್‌ ರೆಬೆಲ್ಲೋ ಅವರನ್ನು ಅಮಾನುತುಗೊಳಿಸಿ, ಬಂಟ್ವಾಳ ಸಾರ್ವಜನಿಕ ಆಸ್ಪತ್ರೆಗೆ ವೇತನ ಲೀನ್‌(ಹುದ್ದೆಯ ಹಕ್ಕು) ಪಡೆಯುವಂತೆ ಬದಲಾವಣೆ ಮಾಡಲಾಗಿದೆ. ಈ ಅವಧಿಯಲ್ಲಿ ಜೀವನಾಂಶ ಭತ್ತೆ ಪಡೆಯಬಹುದು. ತನಿಖೆ ನಡೆದು, ಮುಂದಿನ ಆದೇಶ ಬರುವವರೆಗೆ ಈಗ ಪಡೆಯುತ್ತಿದ್ದ ವೇತನದ ಅರ್ಧ ಭಾಗ ಸಿಗಲಿದೆ. ಆದರೆ ಮೇಲಧಿಕಾರಿಗಳ ಅನುಮತಿಯಿಲ್ಲದೆ ಕೇಂದ್ರ ಸ್ಥಾನ ಬಿಡುವಂತಿಲ್ಲ ಎನ್ನುವುದಾಗಿ ಆರೋಗ್ಯ ಇಲಾಖೆಯು ಆದೇಶ ದಲ್ಲಿ ತಿಳಿಸಿದೆ.

ಅಮಾನತಿಗೆ ಕಾರಣವೇನು?
ಆಸ್ಪತ್ರೆಯ ಆವರಣದಲ್ಲಿರುವ ದೇವಸ್ಥಾನದ ಲೆಕ್ಕಪತ್ರಗಳಲ್ಲಿನ ಲೋಪದೋಷ ಕುರಿತಂತೆ ತಾ.ಪಂ. ಸದಸ್ಯರು ಆ. 28ರಂದು ನಡೆದ ತಾ.ಪಂ. ಸಾಮಾನ್ಯ ಸಭೆಯಲ್ಲಿ ಪ್ರಸ್ತಾವಿಸಿದ್ದು, ಲೆಕ್ಕಪತ್ರದ ದಾಖಲೆ ನೀಡುವಂತೆ ವೈದ್ಯಾಧಿಕಾರಿಗೆ ಸೂಚಿಸಿದರೂ ನೀಡಿರಲಿಲ್ಲ. ಆ ಬಳಿಕ ದೇಗುಲದ ಹಳೆ ಸಮಿತಿಯನ್ನು ಆಗಿನ ಎಸಿ ಡಾ| ಮಧುಕೇಶ್ವರ್‌ ರದ್ದುಗೊಳಿಸಿ, ವೈದ್ಯ ಡಾ| ವಿಜಯಶಂಕರ್‌ ಅವರನ್ನು ಅಧ್ಯಕ್ಷರನ್ನಾಗಿ ಸೆ. 6ರಂದು ನೇಮಿಸಿದ್ದರು. ಇದಲ್ಲದೆ ಸರಕಾರಿ ಆಸ್ಪತ್ರೆಗೆ ಡಾ| ಜಿ. ಶಂಕರ್‌ ಅವರು 6 ಕೋ.ರೂ. ವೆಚ್ಚದಲ್ಲಿ ಹೊಸ ಕಟ್ಟಡ ನಿರ್ಮಿಸಿಕೊಟ್ಟಿದ್ದು, ಅವರು ಕೂಡ ವೈದ್ಯಾಧಿಕಾರಿ ವಿರುದ್ಧ ಮೌಖೀಕ ದೂರು ನೀಡಿದ್ದಾರೆ. ತಾ.ಪಂ. ಸಭೆ, ಜಿ.ಪಂ. ಸಭೆಗಳಲ್ಲಿಯೂ ಹಲವು ಬಾರಿ ವೈದ್ಯಾಧಿಕಾರಿ ವಿರುದ್ಧ ದೂರು ಬಂದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಆದೇಶದಲ್ಲಿ ಆಯುಕ್ತರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.