ತಾಲೂಕಿನ ವಿವಿಧ ಗ್ರಾ.ಪಂ. ವ್ಯಾಪ್ತಿಯಲ್ಲಿ ಜಲಕ್ಷಾಮ ಭೀತಿ


Team Udayavani, Mar 19, 2017, 4:19 PM IST

1803kde1.jpg

ಕುಂದಾಪುರ: ಬೇಸಗೆ ಆರಂಭವಾಗುತ್ತಿದ್ದಂತೆ ನೀರಿನ ಸಮಸ್ಯೆ ಆರಂಭವಾಗಿದೆ. ಬಿಸಿಲ ಧಗೆ ದಿನದಿಂದ ದಿನಕ್ಕೆ ಏರುತ್ತಿದ್ದರೆ ಎಲ್ಲೆಲ್ಲೂ ನೀರಿನ ದಾಹ ಕಂಡು ಬಂದಿದೆ. ಈ ಬಾರಿ ಮಳೆಯ ಪ್ರಮಾಣ ಕಡಿಮೆಯಾಗಿರುವುದರಿಂದ ತಾಲೂಕಿನ ಅನೇಕ ಚೆಕ್‌ ಡ್ಯಾಂಗಳಲ್ಲಿ  ನೀರಿನ ಬರ ಕಂಡು ಬಂದರೆ ಕೆಲವು ಚೆಕ್‌ ಡ್ಯಾಂಗಳ ಹಲಗೆಗಳನ್ನು ಸರಿಯಾಗಿ ಹಾಕದೇ ನೀರು ಸೋರಿಕೆಯಾಗಿ ಈ ಪ್ರದೇಶದ ಅಂತ ರ್ಜಲ ಮಟ್ಟ ಕುಸಿದು ಹೋಗಿದೆ. ಗ್ರಾ.ಪಂ.ಗಳಲ್ಲಿ ಜಲಕ್ಷಾಮ ಎದುರಾಗಿದ್ದು, ತಾಲೂಕಿನ ಅನೇಕ ಗ್ರಾ.ಪಂ.ಗಳಲ್ಲಿ ಟ್ಯಾಂಕರ್‌ ನೀರು ಪೂರೈಕೆಗೆ ಬೇಡಿಕೆ ಬಂದಿದೆ.

ನದಿ ಪಾತ್ರಗಳಲ್ಲಿ ಉಪ್ಪು ನೀರಿನ ಪ್ರಮಾಣ ಹೆಚ್ಚಾಗಿರುವುದರಿಂದ  ಕುಡಿಯುವ ನೀರಿಗೆ ಸಮಸ್ಯೆಯಾಗಿ ಕಾಡ ತೊಡಗಿದೆ. ಗ್ರಾಮೀಣ ಪ್ರದೇಶದ‌ಲ್ಲಿ ಬಾವಿ , ಕೆರೆಗಳು ಬತ್ತಿಹೋಗಿ ಬೋರ್‌ವೆಲ್‌ಗ‌ಳಿಂದ ನೀರು ಪಡೆಯಲಾಗದ  ಜನರು ನೀರಿಗೋಸ್ಕರ  ಹಪ ಹಪಿಸುತ್ತಿದ್ದಾರೆ.  ಕುಂದಾಪುರ ತಾಲೂಕಿನ 56 ಗ್ರಾ.ಪಂ.ಗಳಲ್ಲಿ ಬಹುತೇಕ  ಗ್ರಾ.ಪಂ. ವ್ಯಾಪ್ತಿಯಲ್ಲಿ ಕುಡಿಯುವ ನೀರು  ಪೂರೈಸುವಂತೆ  ಆಯಾ ಗ್ರಾ.ಪಂ. ಪಿಡಿಒಗಳು  ತಾ.ಪಂ.ನಲ್ಲಿ ತಮ್ಮ ವ್ಯಾಪ್ತಿಯ ನೀರಿನ ಬೇಡಿಕೆಯನ್ನು ನೀಡಿದ್ದಾರೆ.

ಟ್ಯಾಂಕರ್‌ ಮೂಲಕ 
ನೀರು  ಸರಬರಾಜು

ಈ ಬಾರಿ ಕುಡಿಯುವ ನೀರಿನ ಸಮಸ್ಯೆ ಬಹಳಷ್ಟು ಬೇಗನೆ ಎದುರಾಗುವ ಸಾಧ್ಯತೆ ಇದ್ದು ತಾಲೂಕಿನ ಬಹುತೇಕ ಗ್ರಾ.ಪಂ.ಗಳು ಟ್ಯಾಂಕರ್‌ ಮೂಲಕ ನೀರನ್ನು ಒದಗಿಸುವಂತೆ ತಾಲೂಕು ಟಾಸ್ಕ್ಪೋರ್ಸ್‌ ಸಮಿತಿಗೆ  ನೀಡಿದ್ದಾರೆ. ಕೊಲ್ಲೂರು, ಅಂಪಾರು, ಮೂಡುಬಗೆ, ಕಿರಿಮಂಜೇಶ್ವರ, ಶಂಕರನಾರಾಯಣ, ಹಟ್ಟಿಯಂಗಡಿ, ಖಂಬದಕೋಣೆ ಈಗಾಗಲೇ ಬೇಡಿಕೆ ಯನ್ನು ನೀಡಿದೆ.  ಕಳೆದ ವರ್ಷ ಮಾರ್ಚ್‌ ಕೊನೆಯ ವಾರದಲ್ಲಿ  ಟ್ಯಾಂಕರ್‌ ಮೂಲಕ ನೀರು ಸರಬರಾಜು ಆರಂಭಿಸಿದ್ದು,  ಮೇ 19ರ ತನಕ ನೀರು ಸರಬರಾಜಾಗಿತ್ತು. ಒಟ್ಟು 37 ಗ್ರಾ.ಪಂ. ಗಳಿಗೆ  ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡಲಾಗಿತ್ತು.  ಗುಲ್ವಾಡಿ ಗ್ರಾ.ಪಂ. ವ್ಯಾಪ್ತಿಯ ಮಾವಿನಕಟ್ಟೆ, ಅಬ್ಬಿಗುಡ್ಡಿ, ದುರ್ಗಾನಗರ, ಉದಯ ನಗರ, ದಾಸರಬೆಟ್ಟು, ಸೌಕೂರು, ಮದಗ, ಕೌಂಜೂರುಗಳಲ್ಲಿ, ಗುಜ್ಜಾಡಿ ಗ್ರಾ.ಪಂ. ವ್ಯಾಪ್ತಿಯ ನಾಯಕವಾಡಿ  ಜನತಾ ಕಾಲೋನಿ, ಮಂಕಿ ಶಾಲೆಯ  ಬಳಿ ಹಾಗೂ ಜನತಾ ಕಾಲನಿ, ಕೊಡಪಾಡಿ, ಗುಜ್ಜಾಡಿ ಕಳಿಹಿತ್ಲು, ಹೊಸಾಡು ಗ್ರಾ.ಪಂ. ವ್ಯಾಪ್ತಿಯ ಭಗತ್‌ನಗರ, ಮಂಚುಗೋಡು, ಖಂಬದಕೋಣೆ ಗ್ರಾ.ಪಂ. ವ್ಯಾಪ್ತಿಯ ಹಳಗೇರಿ, ಹೇರಂಜಾಲು,  ಸಿದ್ದಾಪುರ ಗ್ರಾ.ಪಂ. ವ್ಯಾಪ್ತಿಯ ಜನ್ಸಾಲೆ, ಹೊಂಬಾಡಿ ಗ್ರಾ.ಪಂ. ವ್ಯಾಪ್ತಿಯ ಗುಡ್ಡೆಯಂಗಡಿ, ಯಡಾಡಿಗಳಲ್ಲಿ  ಅತಿ ಹೆಚ್ಚು  ಟ್ಯಾಂಕರ್‌ ನೀರು ಸರಬರಾಜಾಗಿತ್ತು. ಈ ಬಾರಿ ಬಹುತೇಕ ಎಪ್ರಿಲ್‌ ಮೊದಲ ವಾರದಲ್ಲಿ ನೀರು ಸರಬರಾಜು ಆರಂಭವಾಗಲಿದೆ.

ಕಿಂಡಿ ಅಣೆಕಟ್ಟುಗಳಲ್ಲಿ 
ನೀರು ಸೋರಿಕೆ 

ಅಂಪಾರು ಮೂಡುಬಗೆಯ ಶೇಡಿನ ಕೊಡ್ಲು ನಲ್ಲಿ ನಿರ್ಮಿಸಲಾಗಿರುವ ಕಿಂಡಿ ಅಣೆಕಟ್ಟುವಿನಲ್ಲಿ  ಈ ಬಾರಿ ನೀರು ಸೋರುವಿಕೆಯಿಂದಾಗಿ ಅಣೆಕಟ್ಟು ಬರಿದಾಗಿದೆ ಅಣೆಕಟ್ಟು ಪ್ರದೇಶದಲ್ಲಿ ನೀರು ಬರಿದಾಗಿರು ವುದರಿಂದ  ಪರಿಸರದ ಜಲ ಮೂಲಗಳು ಬತ್ತಿಹೋಗಲು ಆರಂಭವಾಗಿ ರುವುದರಿಂದ ಈ ಬೇಸಗೆಯಲ್ಲಿ ಇಲ್ಲಿನ ಕೆರೆ ಬಾವಿಗಳು ಬತ್ತುವ ಸಾಧ್ಯತೆ ಇದೆ. ಇದರಿಂದಾಗಿ ಕುಡಿಯುವ ನೀರ ಅಭಾವ ಈ ಗ್ರಾಮಗಳಲ್ಲಿ ಕಂಡುಬರುವ ಸಾಧ್ಯತೆ ಇದೆ. 

ಕೃಷಿ ತೋಟಗಳು ಒಣಗಿ ಹೋಗುವ ಸಾಧ್ಯತೆ ಇದೆ. ಹೇರಳವಾಗಿ ಸಿಗುತ್ತಿದ್ದ ನೀರನ್ನು ನಿರ್ಲಕ್ಷ್ಯದಿಂದ  ಹರಿಯ ಬಿಟ್ಟಿರುವುದು ಇನ್ನಷ್ಟು ಅಪಾಯಕ್ಕೆ ತಂದೊಡ್ಡುವ ಭೀತಿ ಇದೆ. ಬೆಳ್ವೆ ಗ್ರಾಮದ ಗುಮ್ಮೊಲದಲ್ಲಿ ನಿರ್ಮಿಸಲಾಗಿರುವ ಕಿಂಡಿ ಅಣೆಕಟ್ಟಿನಲ್ಲಿ ನೀರಿನ ಸೋರಿಕೆಯಿಂದ  ಪರಿಸರದಲ್ಲಿ ನೀರು ಶೇಖರಣೆ ಕಡಿಮೆಯಾಗಿ ಅಂತರ್ಜಲ ಇಂಗಿಹೋಗಿದೆ.

ಬೇಸಗೆ ಹತ್ತಿರ ಬಂದಂತೆ ನೀರಿನ ಬರ ಎದ್ದು ಕಾಣುತ್ತಿದೆ. ತಾಲೂಕಿನ ವಿವಿಧ ಗ್ರಾ.ಪಂ.ಗಳಿಂದ ಕುಡಿಯುವ ನೀರಿನ ಬೇಡಿಕೆ ಬಂದಿದೆ.  ಈ ಕುರಿತು ಪ್ರತಿ ವಾರ ಸಮತಿ ಸಭೆ ಕರೆದು ಅತಿ ತುರ್ತಾಗಿ ನೀರಿನ ಆವಶ್ಯಕತೆ ಇರುವ ಗ್ರಾಮಗಳಿಗೆ ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡಲು ವ್ಯವಸ್ಥೆ ಮಾಡಲಾಗುವುದು.  ಅಲ್ಲದೇ ತಾಲೂಕು ವ್ಯಾಪ್ತಿಯಲ್ಲಿ ಬೋರ್‌ವೆಲ್‌ ಹಾಗೂ ಪೈಪ್‌ಲೈನ್‌ ವಿಸ್ತರಣೆ ಕಾಮಗಾರಿ, ಬಾವಿ ಹಾಗೂ ಕೆರೆಗಳ ಹೂಳೆತ್ತುವಿಕೆ ಮೊದಲಾದ  ಕಾಮಗಾರಿಗಳಿಗೆ ಹೆಚ್ಚಿನ ಪ್ರಾಶಸ್ತÂ ನೀಡಲಾಗುವುದು.
– ಜಿ.ಎಂ. ಬೋರ್ಕರ್‌, ತಹಶೀಲ್ದಾರರು ಕುಂದಾಪುರ

– ಉದಯ ಆಚಾರ್‌ ಸಾಸ್ತಾನ

ಟಾಪ್ ನ್ಯೂಸ್

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.