ಘನ ತ್ಯಾಜ್ಯ ನಿರ್ವಹಣೆಗೆ ತೆರಿಗೆ ಹೆಚ್ಚಳ: ಸದಸ್ಯರಿಂದ ಖಂಡನೆ


Team Udayavani, Apr 28, 2017, 12:32 PM IST

2704KAR1.jpg

ಕಾರ್ಕಳ: ಇಲ್ಲಿನ  ಪುರಸಭೆಯ ಸಾಮಾನ್ಯ ಸಭೆ  ಗುರುವಾರ ನಡೆಯಿತು. ಕಾರ್ಕಳ ಪುರಸಭೆ ನಿರ್ಮಿಸಿದ ಬಯೋಗ್ಯಾಸ್‌ ಘಟಕ ಕಾರ್ಯಾರಂಭ ಮಾಡದೇ ಇರುವುದು, ವಿವಿಧ ವಾರ್ಡ್‌ಗಳಲ್ಲಿ  ಬೇಸಗೆಯಲ್ಲಿ ಸೃಷ್ಠಿಯಾಗುತ್ತಿರುವ ನೀರಿನ ಸಮಸ್ಯೆಯನ್ನು ಪುರಸಭೆ ನಿರ್ವಹಿಸಲು ಸೋತಿರುವುದು, ಮೊದಲಾದವುಗಳ ಬಗ್ಗೆ ಸಭೆಯಲ್ಲಿ ಚರ್ಚೆಯಾಯಿತು.ಮುಖ್ಯವಾಗಿ ಕಾರ್ಕಳ ಪುರಸಭೆ ಘನ ತ್ಯಾಜ್ಯ ನಿರ್ವಹಣೆಗಾಗಿ ಶೇ.15 ತೆರಿಗೆ ಏರಿಕೆ ಮಾಡಿರುವ ಕುರಿತು ಸಭೆಯಲ್ಲಿ ಬಲವಾದ ವಿರೋಧ ವ್ಯಕ್ತವಾಯಿತು.

ಪುರಸಭೆಯಿಂದ ಹಗಲು ದರೋಡೆ
ತ್ಯಾಜ್ಯ ನಿರ್ವಹಣೆಯಲ್ಲಿ ಪುರಸಭೆ ಹಿಂದಿನಂತೆ ನಿಷ್ಠೆಯಿಂದ ಸೇವೆ ಸಲ್ಲಿಸುತ್ತಿಲ್ಲ.ಆದರೂ ಘನ ತ್ಯಾಜ್ಯ ನಿರ್ವಹಣೆಗಾಗಿ ಸಾರ್ವಜನಿಕರಿಂದ ತೆರಿಗೆ ಸುಲಿಗೆ ನಿರಂತರವಾಗಿ ನಡೆಯುತ್ತಿದೆ. ಇದೀಗ ಶೇ. 15ರಷ್ಟು ತೆರಿಗೆ ಏರಿಕೆ ಮಾಡಿದ್ದು ಖಂಡನಾರ್ಹ.ಇದರಿಂದ ಬಡವರು ತ್ರಾಸ ಪಡುತ್ತಿದ್ದಾರೆ. ಮನೆ ಮನೆಗೂ ತ್ಯಾಜ್ಯ ಸಂಗ್ರಹಣೆಯನ್ನು ಪುರಸಭೆ ಸರಿಯಾಗಿ ಮಾಡುತ್ತಿಲ್ಲ.ಅದರ ನಡುವೆ ಇದೀಗ ಚ.ಅಡಿಗೆ ತೆರಿಗೆಯನ್ನು 60 ಪೈಸೆಗೆ ಹೆಚ್ಚಿಸಲಾಗಿದೆ. ಇದು ಪುರಸಭೆಯ ಹಗಲು ದರೋಡೆ. ಕೂಡಲೇ ಇದನ್ನು 20 ಪೈಸೆಗೆ ಇಳಿಸಬೇಕು ಇಲ್ಲದಿದ್ದರೆ ಪ್ರತಿಭಟಿಸಲಾಗುವುದು ಎಂದು ಸದಸ್ಯ ಅಶ#ಕ್‌ ಅಹಮ್ಮದ್‌ ಆಕ್ರೋಶ ವ್ಯಕ್ತಪಡಿಸಿದರು.

ಕೂಡಲೇ ಈ ನಿರ್ಣಯವನ್ನು ಹಿಂಪಡೆದು ತೆರಿಗೆಯನ್ನು ಇಳಿಸದಿದ್ದರೆ ಸಭೆಯನ್ನು ಇಲ್ಲಿಗೇ ಮೊಟಕು ಗೊಳಿಸಲಾಗುವುದು ಎಂದು ಸದಸ್ಯರು ಸಭೆಯಲ್ಲಿ ಮುಖ್ಯಾಧಿಕಾರಿಯವರ ವಿರುದ್ದ ಧಿಕ್ಕಾರ ಕೂಗಿದರು.

ಸದಸ್ಯ ಶುಭದ್‌ ರಾವ್‌ ಮಾತನಾಡಿ, ಆಡಳಿತ ಪಕ್ಷವೇ ಇಂತಹ ಹಗಲು ದರೋಡೆಯಲ್ಲಿ ಮುಖ್ಯ ಪಾತ್ರ ವಹಿಸಿದೆ ಎಂದು ದೂರಿದರು. ಈ ಸಂದರ್ಭದಲ್ಲಿ ಬಲವಾದ ಚರ್ಚೆಗಳಾದವು.ಸದಸ್ಯರಾದ ವಿವೇಕಾನಂದ ಶೆಣೈ, ಪ್ರತಿಮಾ ಮೋಹನ್‌, ಪ್ರಕಾಶ್‌ ರಾವ್‌, ಯೋಗೀಶ್‌ ಮೊದಲಾದವರು ಈ ಕುರಿತು ಅಭಿಪ್ರಾಯ ತಿಳಿಸಿದರು.

ಮುಖ್ಯಾಧಿಕಾರಿ ಮಾತನಾಡಿ, ನಿರ್ಣಯವನ್ನು ಆರು ತಿಂಗಳವರೆಗೆ ಬದಲಾಯಿಸಲು ಸಾಧ್ಯವಿಲ್ಲ.ಆರು ತಿಂಗಳ ಬಳಿಕ ತೆರಿಗೆ ಕಡಿತ ಮಾಡಲಾಗುವುದು ಎಂದು ಹೇಳಿದರು. ಹಾಗಾದರೆ ಆರು ತಿಂಗಳ ಬಳಿಕ ಸಭೆ ಮಾಡಿ ಎಂದು ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ ಪರಿಣಾಮ ಹಾಗೂ ವಿರೋಧ ಪಕ್ಷಗಳ ನಿರಂತರ ಒತ್ತಾಯದಿಂದಾಗಿ ಮುಖ್ಯಾಧಿಕಾರಿಯವರು ಸರ್ವಾ ನುಮತದಿಂದ ನಿರ್ಣಯ ಕೈಗೊಂಡು ಘನ ತ್ಯಾಜ್ಯ ನಿರ್ವಹಣೆಯಲ್ಲಿ  ಸಾರ್ವಜನಿಕರಿಗೆ ಚ.ಅಡಿಗೆ 20ಪೈಸೆ ರಷ್ಟು ಹಾಗೂ ವಾಣಿಜ್ಯಗಳಿಗೆ 30 ಪೈಸೆ ಮಾಡಲಾಗುವುದು ಎಂದು ಘೋಷಿಸಿದರು.

ಹಾಲ್‌ಗ‌ಳ ತೆರಿಗೆ ಇನ್ನೂ ಬಾಕಿ
ಸ್ಥಾಯಿ ಸಮಿತಿ ಸದಸ್ಯ ಅಕ್ಷಯ್‌ ರಾವ್‌ ಮಾತನಾಡಿ, ನಗರದಲ್ಲಿರುವ ಹಾಲ್‌ಗ‌ಳ ತೆರಿಗೆಗಳು ಇನ್ನೂ ಬಾಕಿ ಇವೆ.ಆ ಕುರಿತು ಪುರಸಭೆಗೆ ಕಾಳಜಿ ಇಲ್ಲ.ಆದರೆ ಸಾರ್ವಜನಿಕರಿಗೆ ಬೇಕಾಬಿಟ್ಟಿ ತೆರಿಗೆ ವಿಧಿಸಲಾಗುತ್ತಿದೆ ಎಂದು ಆರೋಪಿಸಿದರು.

ಹೂಳೆತ್ತಲು ಕ್ರಮ ಕೈಗೊಳ್ಳಿ
ಸದಸ್ಯ ಮೊಹಮ್ಮದ್‌ ಶರೀಫ್‌ ಮಾತನಾಡಿ,ವಿವಿಧ ವಾರ್ಡ್‌ಗಳಲ್ಲಿ ಜನ ನೀರಿಲ್ಲದೇ ತ್ರಾಸ ಪಡುತ್ತಿದ್ದಾರೆ. ನಗರಕ್ಕೆ ಬಿಡುತ್ತಿರುವ  ನೀರನ್ನು ನಗರದ ಹೊರಗಿರುವ ವಾರ್ಡ್‌ಗಳಿಗೆ ಬಿಡುತ್ತಿಲ್ಲ ಎಂದು ಆರೋಪಿಸಿದರು.

ಸದಸ್ಯರಾದ ಶುಭದ್‌ ರಾವ್‌ ಮಾತನಾಡಿ, ಕಾರ್ಕಳದ ಜೀವ ವಾಹಿನಿಯಾದ ಮುಂಡ್ಲಿ ಜಲಾಶಯ ಬತ್ತಿ ಹೋಗಿದೆ. ಆದರೂ ಅಲ್ಲಿ ಈ ವರೆಗೆ ಹೂಳೆತ್ತುವ ಕಾರ್ಯ ನಡೆದಿಲ್ಲ.ಕಳೆದ ವರ್ಷವೇ ಹೂಳೆತ್ತುವ ಕಾರ್ಯಕ್ರಮ ನಡೆಸಿದ್ದರೆ ಈ ಸಲ ನೀರಿಗೆ ಬರಗಾಲ ಬರುತ್ತಿರಲಿಲ್ಲ ಎಂದರು.

ಸದಸ್ಯ ನವೀನ್‌ ದೇವಾಡಿಗ ಮಾತನಾಡಿ, 25 ವರ್ಷಗಳಿಂದ ಮುಂಡ್ಲಿ ಜಲಾಶಯದ ಹೂಳೆತ್ತುವ ಕಾರ್ಯ ನಡೆದಿಲ್ಲ. ಆದ್ದರಿಂದ ನೀರು ಬತ್ತಿ ಹೋಗಿದೆ. ಇದಕ್ಕೆ ಪುರಸಭೆಯೇ ಹೊಣೆ ಎಂದು ಆರೋಪಿಸಿದರು.ಈ ಸಂದರ್ಭದಲ್ಲಿ ಸದಸ್ಯರು ಕೊಡಪಾನ ಹಿಡಿದು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಬಯೋಗ್ಯಾಸ್‌ ಘಟಕ ಲೆಕ್ಕಕ್ಕಿಲ್ಲ
ಸುಮಾರು 36 ಲಕ್ಷ ರೂ. ವೆಚ್ಚದಲ್ಲಿ ಶಬರಿ ಆಶ್ರಮದ ಪರಿಸರದಲ್ಲಿ ನಿರ್ಮಿಸಿದ ಬಯೋಗ್ಯಾಸ್‌ ಘಟಕ ಇದೀಗ ಪ್ರಯೋಜನವಿಲ್ಲದಂತಾಗಿದೆ.ಎಲ್ಲಾ ಕಾಮಗಾರಿಗಳನ್ನು ನಡೆಸದೇ ಇದನ್ನು  ಪುರಸಭೆ ಉದ್ಘಾಟಿಸಿದೆ ಎಂದು  ಅಹಮ್ಮದ್‌ ಆರೋಪಿಸಿದರು.

ಇದಕ್ಕೆ ಪ್ರಕ್ರಿಯಿಸಿದ ಮುಖ್ಯಾಧಿಕಾರಿ ಮೇಬಲ್‌ ಡಿ’ಸೋಜಾ, ಆ ಘಟಕದಲ್ಲಿ ವಿದ್ಯುತ್‌ ಸಂಪರ್ಕ ಕೊಡಲು ಬಾಕಿ ಇದೆ ಅಷ್ಟೆ ಎಂದರು. ಸದಸ್ಯ ನವೀನ್‌ ದೇವಾಡಿಗ ಮಾತನಾಡಿ, ವಿದ್ಯುತ್‌ ಸಂಪರ್ಕ ಕೊಡದೇ ಆ ಘಟಕವನ್ನು ಉದ್ಘಾಟಿಸಿದ್ದು ಯಾಕೆ? ಪುರಸಭೆಗೆ ಅಷ್ಟೂ ವಿವೇಚನೆ ಇಲ್ಲವೇ ಎಂದು ಪ್ರಶ್ನಿಸಿದರು.

ಸಭೆಯಲ್ಲಿ ಅಧ್ಯಕ್ಷೆ ಅನಿತಾ ಅಂಚನ್‌, ಉಪಾಧ್ಯಕ್ಷ ಗಿರಿಧರ್‌ ನಾಯಕ್‌, ಸ್ಥಾಯಿಸಮಿತಿ ಅಧ್ಯಕ್ಷ ಅಕ್ಷಯ್‌ ರಾವ್‌, ಮುಖ್ಯಾಧಿಕಾರಿ ಮೇಬಲ್‌ ಡಿ’ಸೋಜಾ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.