ತಪ್ಪು ಕರ ನೀತಿ ಕಪ್ಪು ಹಣಕ್ಕೆ ಕಾರಣ: ಗಣೇಶ್‌ ಶೆಟ್ಟಿ


Team Udayavani, Feb 23, 2017, 12:12 PM IST

2202kde6.jpg

ಕುಂದಾಪುರ:   ಸ್ವಾತಂತ್ರ್ಯ ಪೂರ್ವದಲ್ಲಿ ಬ್ರಿಟಿಷರು ಸಂಪನ್ಮೂಲ ಕ್ರೋಡೀಕರಣಕ್ಕಾಗಿ ಆರಂಭಿಸಿದ ಕರ ವಸೂಲಿ ನೀತಿಯನ್ನು, ಇನ್ನಷ್ಟು ಕಠಿನವಾಗಿ ಭಾರತ ಸರಕಾರ ಜನರ ಮೇಲೆ ಹೇರಲು ಪ್ರಯತ್ನಿಸಿದುದು ಕಪ್ಪು ಹಣ ಸೃಷ್ಟಿಗೆ ಕಾರಣವಾಯಿತು. ದಶಕಗಳ ಅನಂತರ ಪ್ರಮಾದದ ಅರಿವಾಗಿ ತೆರಿಗೆ ನೀತಿಯಲ್ಲಿ ಬದಲಾವಣೆ ಮಾಡಿದರೂ ಆದಾಯ ತೆರಿಗೆ ಇಲಾಖೆಯ ಕರಕಟ್ಟುವವರ ಮೇಲೆಯೇ ಮುಗಿ ಬೀಳುವ ಮನೋ ಭಾವದಿಂದ ಜನರು ಸಂತೋಷದಿಂದ ತೆರಿಗೆ ಕಟ್ಟದಂತಾಗಿದೆ ಎಂದು ಹಿರಿಯ ಲೆಕ್ಕ ಪರಿಶೋಧಕ, ರೋಟರಿ ಜಿಲ್ಲಾ ಮಾಜಿ ಅಸಿಸ್ಟೆಂಟ್‌ ಗವರ್ನರ್‌ ಗಣೇಶ ಶೆಟ್ಟಿ ಮೊಳಹಳ್ಳಿ ಹೇಳಿದರು.

ರೋಟರಿ ಕುಂದಾಪುರ ದಕ್ಷಿಣ ಏರ್ಪಡಿಸಿದ ಕಪ್ಪು ಹಣದ ಸುತ್ತಮುತ್ತ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.

ಬ್ರಿಟಿಷರು ಆಡಳಿತ ನಡೆಸುವಾಗ ಗರಿಷ್ಠ ಶೇ. 25 ತೆರಿಗೆ ಇತ್ತು. ಅವರು ಭಾರತಕ್ಕೆ ಸ್ವಾತಂತ್ರ್ಯ ನೀಡುವ ಮುನ್ನ ಅದನ್ನು ಶೇ. 63ಕ್ಕೆ ಏರಿಸಿದರು. ಅದರ ಕಾರಣ ಆದಷ್ಟು ಹೆಚ್ಚು ಹಣ ಪಡೆದುಕೊಳ್ಳುವುದು ಅಥವಾ ಇಲ್ಲಿಯ ಕೈಗಾರಿಕೋದ್ಯಮದ ಅಭಿ ವೃದ್ಧಿಗೆ ತಡೆ ಒಡ್ಡುವುದು. ಆದರೆ ಭಾರತದಲ್ಲಿ ನಮ್ಮದೇ ನೂತನ ಸಹಕಾರ ರಚನೆಗೊಂಡಾಗ ಇದೇ ಕರಮಟ್ಟವನ್ನು ಶೇ. 79ರಿಂದ 94ಕ್ಕೆ ಕೊಂಡೊಯ್ದರು. ಉದ್ಯಮ, ವ್ಯವಹಾರ ನಡೆಸುವುದಾದರೂ ಹೇಗೆ, ತನಗಾಗಿ ಏನಾದರೂ ಉಳಿಸಿಕೊಳ್ಳುವುದಾದರೂ ಹೇಗೆ? ಹಾಗಾಗಿ ಸರಕಾರಕ್ಕೆ ತಪ್ಪು ಲೆಕ್ಕ ನೀಡಿ ನಿಶ್ಚಿತವಾದ ಕರ ಕಟ್ಟುವುದನ್ನು ತಪ್ಪಿಸಿಕೊಳ್ಳುವ ಮನೋಭಾವ ಸಹಜ ವಾಗಿ ಉದ್ಭವವಾಯಿತು. ಜನರ ಮೇಲೆ ತೆರಿಗೆ ಹೊರೆಯಿಂದ ಅರ್ಥ ವ್ಯವಸ್ಥೆಯಲ್ಲಿ ಆಗಿರುವ ಪ್ರಮಾದದ ಅರಿವು ಆಗಬೇಕಾದರೆ ಸರಕಾರಕ್ಕೆ 15 ವರ್ಷಗಳೇ ಬೇಕಾಯಿತು. ಆನಂತರವೂ ಈ ತೆರಿಗೆ ಕ್ರಮದಿಂದಾದ ಅವ್ಯವಸ್ಥೆ ಸರಿಪಡಿಸುತ್ತ ಬರಲು ಹಲವು ಸರಕಾರಗಳು ಬರಬೇಕಾಯಿತು,  ಇಂದೂ ಸಹ ಕರ ಪದ್ಧತಿ ನ್ಯಾಯಯುತವಾಗಿಲ್ಲ. ಕಂಪೆನಿಗಳಿಗೆ ಇರುವ ಅನುಕೂಲತೆ. ವೈಯಕ್ತಿಕವಾಗಿ ವ್ಯವಹಾರ ನಡೆಸು ವವರಿಗಿಲ್ಲ. ಆದಾಯ ತೆರಿಗೆ ಇಲಾಖೆ ಯವರೂ ಆದಾಯ ಕಟ್ಟುತ್ತಿ ದ್ದವರ ಮೇಲೆ ಒತ್ತಡದ ಕ್ರಮ ಕೈಗೊಳ್ಳುತ್ತಿದ್ದಾರೆ ವಿನಾ ಸಾಕಷ್ಟು ಸಂಪಾದನೆ ವಿವಿಧ ಭಾಗಗಳಿಂದ ಕ್ರೋಡೀಕರಿಸುತ್ತಿರುವ ಜನರತ್ತ ಗಮನವೇ ಹರಿಸುತ್ತಿಲ್ಲ. ಕರಕಟ್ಟು ವವರು ಸಂಕಟ ಪಡುತ್ತಿದ್ದರೆ, ಕಟ್ಟದವರು ಸಂತೃಪ್ತಿಯಲ್ಲಿದ್ದಾರೆ ಎಂದರು.

ರೋಟರಿ ಕುಂದಾಪುರ ದಕ್ಷಿಣದ ಅಧ್ಯಕ್ಷ ಓಝಲಿನ್‌ ರೆಬೆಲ್ಲೊ ಅಧ್ಯಕ್ಷತೆ ವಹಿಸಿದ್ದರು. ಕೆ.ಕೆ. ಕಾಂಚನ್‌ ಅತಿಥಿ ಯನ್ನು ಪರಿಚಯಿಸಿದರು. ಕಾರ್ಯ ದರ್ಶಿ ಫ್ಲೆ ವಿನ್‌ ವಂದಿಸಿದರು.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.