ಮಕ್ಕಳಿಗೆ ಕೃಷಿ ಕಾರ್ಯ ಕಲಿಸಿ: ಡಾ| ವೀರೇಂದ್ರ ಹೆಗ್ಗಡೆ

ಯಾಂತ್ರೀಕೃತ ಭತ್ತ ಬೇಸಾಯ, ಹಡಿಲು ಭೂಮಿ ಪುನಃಶ್ಚೇತನಕ್ಕೆ ಚಾಲನೆ

Team Udayavani, Jun 29, 2022, 6:35 AM IST

ಮಕ್ಕಳಿಗೆ ಕೃಷಿ ಕಾರ್ಯ ಕಲಿಸಿ: ಡಾ| ವೀರೇಂದ್ರ ಹೆಗ್ಗಡೆ

ಬ್ರಹ್ಮಾವರ: ಎಲ್ಲ ಹೆತ್ತವರೂ ಮಕ್ಕಳಿಗೆ ಬೆಣ್ಣೆ ತಿನ್ನಿಸುವುದನ್ನು ಕಲಿಸುತ್ತಾರೆ. ಇದರ ಜತೆಗೆ ಕೃಷಿ ಕಾಯಕದ ಮೂಲಕ ನಮ್ಮ ಮಣ್ಣಿನ ಗುಣವನ್ನೂ ತಿಳಿಸಬೇಕು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಹೇಳಿದರು.

ಅವರು ಮಂಗಳವಾರ ಬಾರಕೂರು ಕೂಡ್ಲಿ ಉಡುಪರ ಮನೆ ವಠಾರದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ
ವತಿಯಿಂದ 2022-23ನೇ ಸಾಲಿನಲ್ಲಿ ರಾಜ್ಯದ 20,000 ಹೆಕ್ಟೇರ್‌ ಪ್ರದೇಶದಲ್ಲಿ ಅನುಷ್ಠಾನಗೊಳ್ಳಲಿರುವ ಯಾಂತ್ರೀಕೃತ ಭತ್ತ ಬೇಸಾಯ (ಯಂತ್ರಶ್ರೀ), ಹಡಿಲು ಭೂಮಿ ಪುನಃಶ್ಚೇತನ ಯೋಜನೆಗಳಿಗೆ ಚಾಲನೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಗ್ರಾಮೀಣ ಪರಿಸ್ಥಿತಿ
ಮೊದಲು ಮನೆಯಲ್ಲಿರುವ ಹತ್ತಾರು ಮಕ್ಕಳೇ ಕೃಷಿ ಕೆಲಸಕ್ಕೆ ಸಾಲುತ್ತಿದ್ದರು. ಈಗ ಪರಿಸ್ಥಿತಿ ಬದಲಾಗಿದೆ. ಇರುವ ಎರಡು ಮಕ್ಕಳಿಗೆ ಉನ್ನತ ಶಿಕ್ಷಣ ನೀಡಿ ಊರಿನಿಂದ ಹೊರಗೆ ಕಳುಹಿಸಲಾಗಿದೆ. ಪ್ರಸ್ತುತ ಗ್ರಾಮೀಣ ಭಾಗದಲ್ಲಿ ಕೃಷಿ ಭೂಮಿ ಇದ್ದರೂ ಹಡಿಲು ಬೀಳುವ ಪರಿಸ್ಥಿತಿ ಎದುರಾಗಿದೆ ಎಂದರು.

ಶ್ರಮಿಕರಿಗೆ ಪ್ರೇರಣೆ
ಶ್ರಮಿಕರಿಗೆ ಪ್ರೋತ್ಸಾಹ, ಮಾರ್ಗದರ್ಶನ ಒದಗಿಸಬೇಕು. ಗ್ರಾಮೀಣಾಭಿವೃದ್ಧಿ ಯೋಜನೆ ಮೂಲಕ ನಾವು ಪ್ರೇರಣೆ ನೀಡುತ್ತಿದ್ದೇವೆ. ಆಸಕ್ತರಿಗೆ ಅಗತ್ಯವಿರುವ ಬೆಂಬಲವನ್ನು ಯೋಜನೆ ಮೂಲಕ ನೀಡುತ್ತಿದ್ದೇವೆ. ಅಂತೆಯೇ ರೈತರಿಗೆ ಶಕ್ತಿ ನೀಡುವ ಉದ್ದೇಶದಿಂದಲೇ ಕೇಂದ್ರ ಸರಕಾರ ಇ-ಶ್ರಮ್‌, ಫಸಲ್‌ ವಿಮೆ ಮೊದಲಾದ ಯೋಜನೆಗಳನ್ನು ಅನುಷ್ಠಾನಿಸಿದೆ. ಅವುಗಳನ್ನು ಸದುಪಯೋಗಪಡಿಸಿಕೊಂಡು ಸದೃಢರಾಗಬೇಕು ಎಂದರು.

10,000 ರೈತ ಉತ್ಪಾದಕ
ಸಂಸ್ಥೆ: ಸಚಿವೆ ಶೋಭಾ
ಸಣ್ಣ ರೈತರನ್ನು ಸಂಘಟಿಸುವ ಉದ್ದೇಶದಿಂದ ಕೇಂದ್ರ ಸರಕಾರ 10 ಸಾವಿರ ರೈತ ಉತ್ಪಾದಕ ಸಂಸ್ಥೆಗಳನ್ನು ಸ್ಥಾಪಿಸುತ್ತಿದೆ. ಈ ಮೂಲಕ ಕೃಷಿ ಉತ್ಪಾದನೆ, ಮಾರುಕಟ್ಟೆ ಒದಗಿಸುವುದು ಗುರಿಯಾಗಿದೆ. ರೈತರ ಆದಾಯ ದ್ವಿಗುಣಗೊಳಿಸುವಲ್ಲಿ ಈ ಸಂಸ್ಥೆಗಳು ಸಹಕಾರಿಯಾಗಲಿವೆ. ಜತೆಗೆ ಕೇಂದ್ರ ಸರಕಾರವು ಬೆಳೆ ವಿಮೆ, ಹನಿ ನೀರಾವರಿ ಇತ್ಯಾದಿ ಹತ್ತು ಹಲವು ಯೋಜನೆ ಜಾರಿಗೆ ತಂದಿದೆ. ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ, ಸಂರಕ್ಷಣೆ, ರಫ್ತು ವಿಚಾರದಲ್ಲಿ ಕಾರ್ಯೋನ್ಮುಖವಾಗಿದೆ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆಯ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

ಧರ್ಮಸ್ಥಳ ಮಾದರಿ
ಸರಕಾರ ಮಾಡುವ ಕಾರ್ಯವನ್ನು ಎನ್‌ಜಿಒ ಕೂಡ ಮುಂಚೂಣಿಯಲ್ಲಿ ನಿಂತು ಸಾಧಿಸಬಹುದು ಎನ್ನುವುದನ್ನು ಧರ್ಮಸ್ಥಳ ಗ್ರಾ.ಅ. ಯೋಜನೆ ತೋರಿಸಿದೆ. ಡಾ| ಹೆಗ್ಗಡೆ ಅವರ ನೇತೃತ್ವದಲ್ಲಿ ಧರ್ಮಸ್ಥಳ ಕ್ಷೇತ್ರವು ದೇಶಕ್ಕೆ ಮಾದರಿಯಾಗಿದೆ ಎಂದರು.

ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ರಘುಪತಿ ಭಟ್‌, ಮಾಜಿ ಸಚಿವ ವಿನಯ ಕುಮಾರ್‌ ಸೊರಕೆ, ಜಂಟಿ ಕೃಷಿ ನಿರ್ದೇಶಕ ಕೆಂಪೇಗೌಡ, ಯಡ್ತಾಡಿ ಗ್ರಾ.ಪಂ. ಅಧ್ಯಕ್ಷೆ ಸವಿತಾ ದೇವಾಡಿಗ, ಪ್ರಮುಖರಾದ ಅಪ್ಪಣ್ಣ ಹೆಗ್ಡೆ, ಬಿ. ಶಾಂತಾರಾಮ ಶೆಟ್ಟಿ, ಡಾ| ಕೆ. ವೆಂಕಟರಮಣ ಉಡುಪ, ಆನಂದ ಸಿ. ಕುಂದರ್‌, ಬಿ. ಶ್ರೀನಿವಾಸ ಶೆಟ್ಟಿಗಾರ್‌, ಸಂಪತ್‌ ಸಾಮ್ರಾಜ್ಯ ಉಪಸ್ಥಿತರಿದ್ದರು.

ಗ್ರಾ. ಯೋಜನೆಯ ಕಾ.ನಿರ್ವಾಹಕ ನಿರ್ದೇಶಕ ಡಾ| ಎಲ್‌.ಎಚ್‌. ಮಂಜುನಾಥ್‌ ಸ್ವಾಗತಿಸಿ, ದಿನೇಶ್‌ ಶೇರೆಗಾರ್‌ ವಂದಿಸಿದರು. ಸುಧೀರ್‌ ಜೈನ್‌, ದಿನೇಶ್‌ ಸಿ. ನಿರೂಪಿಸಿದರು.

ಟಾಪ್ ನ್ಯೂಸ್

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.