ಶೀಘ್ರ ಕಚೇರಿ ಆರಂಭಿಸಲು ಅಧಿಕಾರಿಗಳಿಗೆ ತಾಕೀತು

ಬೈಂದೂರು ತಾಲೂಕು ಅಭಿವೃದ್ಧಿ: ಶಾಸಕರ ಪ್ರಗತಿ ಪರಿಶೀಲನ ಸಭೆ

Team Udayavani, Sep 19, 2019, 5:32 AM IST

1809BDRE1

ಬೈಂದೂರು: ತಾ| ಕೇಂದ್ರವಾಗಿ ಬೆಳೆಯುತ್ತಿರುವ ಬೈಂದೂರಿನ ಅಭಿವೃದ್ಧಿ ಕುರಿತು ಅಧಿಕಾರಿಗಳೊಂದಿಗೆ ಶಾಸಕರ ಪ್ರಗತಿ ಪರಿಶೀಲನ ಸಭೆ ಬೈಂದೂರು ಪ್ರವಾಸಿ ಮಂದಿರದಲ್ಲಿ ನಡೆಯಿತು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಬೈಂದೂರು ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಬಹಳ ವರ್ಷಗಳಿಂದ ಬೈಂದೂರಿನ ಅಭಿವೃದ್ಧಿ ಕುರಿತು ಕಂಡಿರುವ ಕನಸು ನನಸಾಗುವ ಕಾಲ ಬಂದಿದೆ. ಈ ಕ್ಷೇತ್ರದ ಮಾಜಿ ಸಂಸದರು ರಾಜ್ಯದ ಮುಖ್ಯ ಮಂತ್ರಿಯಾಗಿದ್ದಾರೆ. ಅವರ ಪುತ್ರ ಬಿ. ವೈ. ರಾಘವೇಂದ್ರ ಸಂಸದರಾಗಿರು ವುದು ಕ್ಷೇತ್ರದ ಅಭಿವೃದ್ಧಿಗೆ ದೊರೆತ ಸುವರ್ಣಾವಕಾಶವಾಗಿದೆ. ಇನ್ನು ಕೆಲವೇ ಸಮಯದಲ್ಲಿ ಬೈಂದೂರಿನ ಚಿತ್ರಣವೆ ಬದಲಾಗಲಿದೆ. ಅಭಿವೃದ್ಧಿ ಕಾರ್ಯದ ಮೂಲಕ ಮಾದರಿ ತಾಲೂಕು ಕೇಂದ್ರ ವಾಗಿ ಮಾರ್ಪಡಲಿದೆ ಎಂದರು.

ಶೀಘ್ರ ಕಚೇರಿಗಳನ್ನು
ಆರಂಭಿಸಲು ಸೂಚನೆ
ತಾಲೂಕು ಕೇಂದ್ರದಲ್ಲಿ ಒಟ್ಟು 36 ಇಲಾಖೆಗಳು ಕಾರ್ಯ ನಿರ್ವಹಿಸ ಬೇಕಾಗಿದೆ. ಅವುಗಳಲ್ಲಿ 16 ಕಚೆೇರಿಗಳು ಮಾತ್ರ ಕಾರ್ಯ ನಿರ್ವಹಿಸುತ್ತಿವೆ. ಕೆಲವು ಕಚೇರಿಗಳಿಗೆ ಜಾಗ ಮಂಜೂರಾಗಿದೆ. ಇನ್ನು ಕೆಲವು ಕಚೇರಿಗಳ ಸಿಬಂದಿ ನೇಮಕ ಪ್ರಕ್ರಿಯೆ ನಡೆಯುತ್ತಿದೆ. ಬೈಂದೂರು ತಾಲೂಕು ಆಗಿರುವ ಕಾರಣ ಅಧಿಕಾರಿಗಳು ಮೊದಲು ಸೂಕ್ತ ಜಾಗ ನಿಗದಿಪಡಿಸಿ ತತ್‌ಕ್ಷಣ ಕಚೆೇರಿ ಆರಂಭಿಸಬೇಕು. ಸರಕಾರದಿಂದ ದೊರೆಯಬೇಕಾದ ಆವಶ್ಯಕತೆಗಳ ಬಗ್ಗೆ ನೇರ ತಿಳಿಸಿ ಸಂಸದರ ಸಹಕಾರದೊಂದಿಗೆ ಸರಕಾರದಿಂದ ಮಂಜೂರು ಮಾಡಿಸಿ ಕೊಡುತ್ತೇನೆ. ಜನರಿಗೆ ಸಮರ್ಪಕ ಸೇವೆ ದೊರೆಯಬೇಕು ಎಂದರು.

ತಾಲೂಕು ಆಸ್ಪತ್ರೆ ಪ್ರಕ್ರಿಯೆಗೆ ಶೀಘ್ರ ಚಾಲನೆ
ಬೈಂದೂರಿನಲ್ಲಿ ಶೀಘ್ರವೇ ನೂರು ಹಾಸಿಗೆಗಳ ತಾಲೂಕು ಆಸ್ಪತ್ರೆ ಪ್ರಕ್ರಿಯೆ ಗಳಿಗೆ ಚಾಲನೆ ದೊರೆಯಲಿದೆ. ಈಗಿರುವ ಸಮುದಾಯ ಆರೋಗ್ಯ ಕೇಂದ್ರವನ್ನು ಮಹಿಳಾ ಮತ್ತು ಮಕ್ಕಳ ವಿಭಾಗವಾಗಿ ವಿಂಗಡಿಸಿ ತಾ.ಪಂ. ಸ್ಥಳವನ್ನು ಆರೋಗ್ಯ ಇಲಾಖೆಗೆ ವರ್ಗಾಯಿಸಲಾಗುವುದು ಹಾಗೂ ಆರೋಗ್ಯ ಇಲಾಖೆಗೆ ಮೀಸಲಿರಿಸಿದ 57 ಸೆಂಟ್ಸ್‌ ಜಾಗವನ್ನು ತಾಲೂಕು ಪಂಚಾಯತ್‌ ಅಧೀನಕ್ಕೆ ನೀಡಲಾಗುವುದು. ನ್ಯಾಯಾಲಯ ಸ್ಥಾಪನೆ, ಕ್ರೀಡಾಂಗಣ ಪ್ರಕ್ರಿಯೆ ಯನ್ನು ಈಗಿರುವ ಗಾಂಧಿ ಮೈದಾನದ ದಾಖಲೆಗಳನ್ನು ಸರಿಪಡಿಸಿ ಕೇಂದ್ರ ಭಾಗದಲ್ಲಿ ಸ್ಟೇಡಿಯಂ ನಿರ್ಮಿಸುವ ಚಿಂತನೆಯಿದೆ ಎಂದರು.ತಾಲೂಕು ಕೇಂದ್ರಕ್ಕೆ ಅವಶ್ಯವಿರುವ ಎಲ್ಲ ಕಚೇರಿಗಳು ಅತೀ ಶೀಘ್ರದಲ್ಲಿ ಕಾರ್ಯಾರಂಭ ಮಾಡಲಿವೆ ಎಂದರು.

ವಿವಿಧ ಇಲಾಖೆಗಳ ಅಧಿಕಾರಿಗಳಿಂದ ತಾಲೂಕು ಕೇಂದ್ರದ ಆವಶ್ಯಕತೆಗಳ ಬಗ್ಗೆ ಮಾಹಿತಿ ಪಡೆಯಲಾಯಿತು.ಈ ಸಂದರ್ಭದಲ್ಲಿ ಬೈಂದೂರು ತಾಲೂಕು ದಂಡಾಧಿಕಾರಿ ಬಿ.ಪಿ. ಪೂಜಾರ್‌, ಜಿ.ಪಂ. ಸದಸ್ಯರಾದ ಶಂಕರ ಪೂಜಾರಿ, ಸುರೇಶ್‌ ಬಟ್ವಾಡಿ, ತಾ.ಪಂ. ಅಧ್ಯಕ್ಷೆ ಶ್ಯಾಮಲಾ ಕುಂದರ್‌, ಬಿಜೆಪಿ ಮುಖಂಡ ದೀಪಕ್‌ ಕುಮಾರ್‌ ಶೆಟ್ಟಿ, ಕ್ಷೇತ್ರ ಬಿಜೆಪಿ ಅಧ್ಯಕ್ಷ ಸದಾನಂದ ಉಪ್ಪಿನಕುದ್ರು ಉಪಸ್ಥಿತರಿದ್ದರು.

ವಾರದೊಳಗೆ ಮರಳು ಸಮಸ್ಯೆ ಇತ್ಯರ್ಥ
ಮರಳು ಸಮಸ್ಯೆ ಒಂದು ವಾರದೊಳಗೆ ಬಗೆಹರಿಯಲಿದೆ. ಈಗಾಗಲೇ ಜಿಲ್ಲಾಧಿಕಾರಿಗಳ ಜತೆ ಸಭೆ ನಡೆಸಲಾಗಿದೆ. ಸಿ.ಆರ್‌.ಝಡ್‌. ನಿಯಮ ವ್ಯಾಪ್ತಿಗನುಗುಣವಾಗಿ 159 ಜನರಿಗೆ ಪರವಾನಿಗೆ ನೀಡಲಾಗುವುದು. ಯಾವುದೇ ಕಾರಣಕ್ಕೂ ಇಲ್ಲಿನ ಮರಳು ಹೊರ ಜಿಲ್ಲೆಗಳಿಗೆ ಹೋಗದಂತೆ ಇಲಾಖೆ ಕಟ್ಟುನಿಟ್ಟಿನ ಕ್ರಮಕೈಗೊಂಡಾಗ ಮರಳು ಸಮಸ್ಯೆ ಉದ್ಬವಿಸುವುದಿಲ್ಲ ಎಂದರು.ಈಗಿರುವ ಐ.ಟಿ.ಐ. ಕಾಲೇಜುಗಳನ್ನು ಮೇಲ್ದರ್ಜೆಗೇರಿಸಲಾಗುವುದು ಮತ್ತು ಪ್ರಥಮ ದರ್ಜೆ ಕಾಲೇಜು ಬಳಿ ಸ್ಥಳಾವಕಾಶ ಇರುವುದರಿಂದ ಈ ಸ್ಥಳದಲ್ಲಿ ಐ.ಟಿ.ಐ. ಕಟ್ಟಡ ನಿರ್ಮಿಸುವ ಚಿಂತನೆಯಿದೆ ಎಂದು ಶಾಸಕ ಸುಕುಮಾರ ಶೆಟ್ಟಿ ಹೇಳಿದರು.

ಟಾಪ್ ನ್ಯೂಸ್

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Viral: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

IPL 2024; Suresh Raina made an important statement about Dhoni’s IPL future

IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Jadkal: ಬೈಕ್‌ಗಳ ಢಿಕ್ಕಿ, ಸವಾರರಿಗೆ ಗಂಭೀರ ಗಾಯ

Jadkal: ಬೈಕ್‌ಗಳ ಢಿಕ್ಕಿ, ಸವಾರರಿಗೆ ಗಂಭೀರ ಗಾಯ

Gangolli ರಿಕ್ಷಾಗೆ ಕಾರು ಢಿಕ್ಕಿ ; ಚಾಲಕನಿಗೆ ಗಾಯ

Gangolli ರಿಕ್ಷಾಗೆ ಕಾರು ಢಿಕ್ಕಿ ; ಚಾಲಕನಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Viral: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

IPL 2024; Suresh Raina made an important statement about Dhoni’s IPL future

IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.