ಶಿಕ್ಷಕ ಸ್ನೇಹಿ ಮಸೂದೆ ಮಂಡನೆ: ಸಚಿವ ಸುರೇಶ್‌ ಕುಮಾರ್‌

ಕಾರ್ಕಳ ಕ್ಷೇತ್ರ ಶಿಕ್ಷಣಾಧಿಕಾರಿಗಳ ನೂತನ ಕಾರ್ಯಾಲಯ ಉದ್ಘಾಟನೆ

Team Udayavani, Feb 29, 2020, 7:30 AM IST

teacher-friendly

ಕಾರ್ಕಳ: ಮುಂದಿನ ಅಧಿವೇಶನದಲ್ಲಿ ಶಿಕ್ಷಣ ಸ್ನೇಹಿ ಮಸೂದೆ ಮಂಡಿಸುವುದಾಗಿ ಶಿಕ್ಷಣ ಸಚಿವ ಎಸ್‌. ಸುರೇಶ್‌ ಕುಮಾರ್‌ ಹೇಳಿದರು. ಶುಕ್ರವಾರ ಅವರು 67 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾದ ಕಾರ್ಕಳ ಕ್ಷೇತ್ರ ಶಿಕ್ಷಣಾಧಿಕಾರಿಗಳ ನೂತನ ಕಾರ್ಯಾಲಯ ಉದ್ಘಾಟಿಸಿ ಬಳಿಕ ನಡೆದ ಸಮಾರಂಭದಲ್ಲಿ ಮಾತನಾಡಿದರು. ಶಿಕ್ಷಕರ ಕಡ್ಡಾಯ ವರ್ಗಾವಣೆಯಿಂದಾಗಿ ನಾನಾ ಸಮಸ್ಯೆಗಳು ತಲೆದೋರಿವೆ. ಹೀಗಾಗಿ ಮುಂದಿನ ಅಧಿವೇಶನದಲ್ಲಿ ಶಿಕ್ಷಕ ಸ್ನೇಹಿ ಮಸೂದೆ ಮಂಡಿಸುತ್ತೇವೆ ಎಂದು ಸಚಿವರು ಭರವಸೆ ನೀಡಿದರು.

ಸಹಾಯವಾಣಿ
ಶಿಕ್ಷಕರ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಎಪ್ರಿಲ್‌ ಮೊದಲ ವಾರದಲ್ಲಿ ಸಹಾಯವಾಣಿ ತೆರೆಯಲಾಗುವುದು. ಶಿಕ್ಷಕರು ತಾವು ಎದುರಿಸುತ್ತಿರುವ ಸಮಸ್ಯೆ, ಸವಾಲುಗಳ ಕುರಿತು ಸಹಾಯವಾಣಿಗೆ ಮಾಹಿತಿ ನೀಡಿದಲ್ಲಿ ಕೂಡಲೇ ಸಂಬಂಧಪಟ್ಟವರಿಗೆ ರವಾನಿಸಿ ಸಮಸ್ಯೆ ಬಗೆಹರಿಸಲಾಗುವುದು ಎಂದು ಸಚಿವರು ತಿಳಿಸಿದರು.

ಆ್ಯಪ್‌ ಮೂಲಕ ಸಹಕಾರ ಯಾಚನೆ
ಶೈಕ್ಷಣಿಕ ಕೇಂದ್ರಗಳ ಅಭಿವೃದ್ಧಿಗೆ ನೆರವಾಗುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ವತಿಯಿಂದ ಆ್ಯಪ್‌ ಬಿಡುಗಡೆ ಮಾಡಲಾಗುವುದು. ಆ್ಯಪ್‌ ಮೂಲಕ ದಾನಿಗಳು ಶಿಕ್ಷಣ ಇಲಾಖೆಗೆ ಪೂರಕವಾದ ಕೊಡುಗೆ ನೀಡುವ ಕುರಿತು ಮಾಹಿತಿ ಒದಗಿಸಬಹುದು ಎಂದು ಸಚಿವರು ಹೇಳಿದರು.

ಶಿಕ್ಷಕರಿಗೆ ತರಗತಿ ಪಾಠ ಬಿಟ್ಟು ಇತರ ಕಾರ್ಯಗಳೇ ಅಧಿಕವಾಗುತ್ತಿದೆ. ಅದನ್ನು ತಪ್ಪಿಸುವಂತೆ ಎರ್ಲಪಾಡಿ ಶಾಲಾ ಮುಖ್ಯಶಿಕ್ಷಕರು ಮನವಿ ಮಾಡಿಕೊಂಡರು. ವೈದ್ಯನಾಥ್‌ ವರದಿ ಜಾರಿಗೊಳಿಸುವಂತೆ ತೆಳ್ಳಾರು ಶಾಲೆಯ ಗಣಪಯ್ಯ ಸಚಿವರಲ್ಲಿ ವಿನಂತಿಸಿದರು. ಉಳಿದಂತೆ ವೇತನ ತಾರತಮ್ಯ ನಿವಾರಿಸುವಂತೆ, ಉಡುಪಿ ಜಿಲ್ಲೆಯ ಶಾಲಾ ಮಕ್ಕಳಿಗೆ ಅಕ್ಷರ ದಾಸೋಹಕ್ಕೆ ಕುಚ್ಚಲು ಅಕ್ಕಿ ವಿತರಿಸಬೇಕೆಂಬ ಬೇಡಿಕೆ ಕೇಳಿಬಂತು.

ಪದವಿ ಪೂರ್ವ ಶಿಕ್ಷಣ ಇಲಾಖೆಯಲ್ಲಿ ಕಡತಗಳು ವರ್ಷಾನುಗಟ್ಟಲೆ ವಿಲೇವಾರಿಯಾಗದೆ ಬಾಕಿಯಿದೆ. ಪ್ರೌಢಶಾಲೆ ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕರ ಭಡ್ತಿ ಕುರಿತಾದ ಕಡತಗಳು ಜಿಲ್ಲಾ ಮಟ್ಟದಲ್ಲಿ ವಿಲೇವಾರಿಯಾಗುವಂತೆ ಕಾಲೇಜು ಶಿಕ್ಷಕರದ್ದೂ ಆಗಬೇಕೆಂದು ವಾಸುದೇವ ಭಟ್‌ ಸಚಿವರಲ್ಲಿ ವಿನಂತಿಸಿದರು.

ಮುಖ್ಯಶಿಕ್ಷಕ, ದೈಹಿಕ ಶಿಕ್ಷಣ ಶಿಕ್ಷಕರ ನೇಮಕ
ಶಿಕ್ಷಕ ರವೀಂದ್ರ ಹೆಗ್ಡೆ ಅವರು ಸಂವಾದದಲ್ಲಿ ಮುಖ್ಯಶಿಕ್ಷಕರ ಮತ್ತು ದೈಹಿಕ ಶಿಕ್ಷಣ ಶಿಕ್ಷಕರ ಕೊರತೆ ಕುರಿತು ಸಚಿವರ ಗಮನ ಸೆಳೆದಾಗ ಎಲ್ಲ ಶಾಲೆಗಳಿಗೂ ಪೂರ್ಣಾವಧಿ ಮುಖ್ಯಶಿಕ್ಷಕರ ಮತ್ತು ದೈಹಿಕ ಶಿಕ್ಷಣ ಶಿಕ್ಷಕರನ್ನು ನೇಮಕಗೊಳಿಸುವುದು ನಮ್ಮ ಸರಕಾರದ ಪ್ರಥಮ ಆದ್ಯತೆಯಾಗಲಿದೆ ಎಂದುತ್ತರಿಸಿದರು.

ಅತೀ ಕಡಿಮೆ ಸಂಖ್ಯೆಯ ವಿದ್ಯಾರ್ಥಿಗಳನ್ನು ಹೊಂದಿರುವ ಶಾಲಾ ಮಕ್ಕಳನ್ನು ವಾಹನ ಸೌಕರ್ಯ ಕಲ್ಪಿಸಿ ಪಕ್ಕದ ಶಾಲೆಗೆ ಕಳುಹಿಸಿದಲ್ಲಿ ಆ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣದೊಂದಿಗೆ ಸ್ಮರ್ಧಾತ್ಮಕ ವಾತಾವರಣ ದೊರೆಯುವುದು ಎಂದು ಸಚಿವರು ಅಭಿಪ್ರಾಯಪಟ್ಟರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.