ಶಿಕ್ಷಕ ಸ್ನೇಹಿ ಮಸೂದೆ ಮಂಡನೆ: ಸಚಿವ ಸುರೇಶ್ ಕುಮಾರ್
ಕಾರ್ಕಳ ಕ್ಷೇತ್ರ ಶಿಕ್ಷಣಾಧಿಕಾರಿಗಳ ನೂತನ ಕಾರ್ಯಾಲಯ ಉದ್ಘಾಟನೆ
Team Udayavani, Feb 29, 2020, 7:30 AM IST
ಕಾರ್ಕಳ: ಮುಂದಿನ ಅಧಿವೇಶನದಲ್ಲಿ ಶಿಕ್ಷಣ ಸ್ನೇಹಿ ಮಸೂದೆ ಮಂಡಿಸುವುದಾಗಿ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದರು. ಶುಕ್ರವಾರ ಅವರು 67 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾದ ಕಾರ್ಕಳ ಕ್ಷೇತ್ರ ಶಿಕ್ಷಣಾಧಿಕಾರಿಗಳ ನೂತನ ಕಾರ್ಯಾಲಯ ಉದ್ಘಾಟಿಸಿ ಬಳಿಕ ನಡೆದ ಸಮಾರಂಭದಲ್ಲಿ ಮಾತನಾಡಿದರು. ಶಿಕ್ಷಕರ ಕಡ್ಡಾಯ ವರ್ಗಾವಣೆಯಿಂದಾಗಿ ನಾನಾ ಸಮಸ್ಯೆಗಳು ತಲೆದೋರಿವೆ. ಹೀಗಾಗಿ ಮುಂದಿನ ಅಧಿವೇಶನದಲ್ಲಿ ಶಿಕ್ಷಕ ಸ್ನೇಹಿ ಮಸೂದೆ ಮಂಡಿಸುತ್ತೇವೆ ಎಂದು ಸಚಿವರು ಭರವಸೆ ನೀಡಿದರು.
ಸಹಾಯವಾಣಿ
ಶಿಕ್ಷಕರ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಎಪ್ರಿಲ್ ಮೊದಲ ವಾರದಲ್ಲಿ ಸಹಾಯವಾಣಿ ತೆರೆಯಲಾಗುವುದು. ಶಿಕ್ಷಕರು ತಾವು ಎದುರಿಸುತ್ತಿರುವ ಸಮಸ್ಯೆ, ಸವಾಲುಗಳ ಕುರಿತು ಸಹಾಯವಾಣಿಗೆ ಮಾಹಿತಿ ನೀಡಿದಲ್ಲಿ ಕೂಡಲೇ ಸಂಬಂಧಪಟ್ಟವರಿಗೆ ರವಾನಿಸಿ ಸಮಸ್ಯೆ ಬಗೆಹರಿಸಲಾಗುವುದು ಎಂದು ಸಚಿವರು ತಿಳಿಸಿದರು.
ಆ್ಯಪ್ ಮೂಲಕ ಸಹಕಾರ ಯಾಚನೆ
ಶೈಕ್ಷಣಿಕ ಕೇಂದ್ರಗಳ ಅಭಿವೃದ್ಧಿಗೆ ನೆರವಾಗುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ವತಿಯಿಂದ ಆ್ಯಪ್ ಬಿಡುಗಡೆ ಮಾಡಲಾಗುವುದು. ಆ್ಯಪ್ ಮೂಲಕ ದಾನಿಗಳು ಶಿಕ್ಷಣ ಇಲಾಖೆಗೆ ಪೂರಕವಾದ ಕೊಡುಗೆ ನೀಡುವ ಕುರಿತು ಮಾಹಿತಿ ಒದಗಿಸಬಹುದು ಎಂದು ಸಚಿವರು ಹೇಳಿದರು.
ಶಿಕ್ಷಕರಿಗೆ ತರಗತಿ ಪಾಠ ಬಿಟ್ಟು ಇತರ ಕಾರ್ಯಗಳೇ ಅಧಿಕವಾಗುತ್ತಿದೆ. ಅದನ್ನು ತಪ್ಪಿಸುವಂತೆ ಎರ್ಲಪಾಡಿ ಶಾಲಾ ಮುಖ್ಯಶಿಕ್ಷಕರು ಮನವಿ ಮಾಡಿಕೊಂಡರು. ವೈದ್ಯನಾಥ್ ವರದಿ ಜಾರಿಗೊಳಿಸುವಂತೆ ತೆಳ್ಳಾರು ಶಾಲೆಯ ಗಣಪಯ್ಯ ಸಚಿವರಲ್ಲಿ ವಿನಂತಿಸಿದರು. ಉಳಿದಂತೆ ವೇತನ ತಾರತಮ್ಯ ನಿವಾರಿಸುವಂತೆ, ಉಡುಪಿ ಜಿಲ್ಲೆಯ ಶಾಲಾ ಮಕ್ಕಳಿಗೆ ಅಕ್ಷರ ದಾಸೋಹಕ್ಕೆ ಕುಚ್ಚಲು ಅಕ್ಕಿ ವಿತರಿಸಬೇಕೆಂಬ ಬೇಡಿಕೆ ಕೇಳಿಬಂತು.
ಪದವಿ ಪೂರ್ವ ಶಿಕ್ಷಣ ಇಲಾಖೆಯಲ್ಲಿ ಕಡತಗಳು ವರ್ಷಾನುಗಟ್ಟಲೆ ವಿಲೇವಾರಿಯಾಗದೆ ಬಾಕಿಯಿದೆ. ಪ್ರೌಢಶಾಲೆ ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕರ ಭಡ್ತಿ ಕುರಿತಾದ ಕಡತಗಳು ಜಿಲ್ಲಾ ಮಟ್ಟದಲ್ಲಿ ವಿಲೇವಾರಿಯಾಗುವಂತೆ ಕಾಲೇಜು ಶಿಕ್ಷಕರದ್ದೂ ಆಗಬೇಕೆಂದು ವಾಸುದೇವ ಭಟ್ ಸಚಿವರಲ್ಲಿ ವಿನಂತಿಸಿದರು.
ಮುಖ್ಯಶಿಕ್ಷಕ, ದೈಹಿಕ ಶಿಕ್ಷಣ ಶಿಕ್ಷಕರ ನೇಮಕ
ಶಿಕ್ಷಕ ರವೀಂದ್ರ ಹೆಗ್ಡೆ ಅವರು ಸಂವಾದದಲ್ಲಿ ಮುಖ್ಯಶಿಕ್ಷಕರ ಮತ್ತು ದೈಹಿಕ ಶಿಕ್ಷಣ ಶಿಕ್ಷಕರ ಕೊರತೆ ಕುರಿತು ಸಚಿವರ ಗಮನ ಸೆಳೆದಾಗ ಎಲ್ಲ ಶಾಲೆಗಳಿಗೂ ಪೂರ್ಣಾವಧಿ ಮುಖ್ಯಶಿಕ್ಷಕರ ಮತ್ತು ದೈಹಿಕ ಶಿಕ್ಷಣ ಶಿಕ್ಷಕರನ್ನು ನೇಮಕಗೊಳಿಸುವುದು ನಮ್ಮ ಸರಕಾರದ ಪ್ರಥಮ ಆದ್ಯತೆಯಾಗಲಿದೆ ಎಂದುತ್ತರಿಸಿದರು.
ಅತೀ ಕಡಿಮೆ ಸಂಖ್ಯೆಯ ವಿದ್ಯಾರ್ಥಿಗಳನ್ನು ಹೊಂದಿರುವ ಶಾಲಾ ಮಕ್ಕಳನ್ನು ವಾಹನ ಸೌಕರ್ಯ ಕಲ್ಪಿಸಿ ಪಕ್ಕದ ಶಾಲೆಗೆ ಕಳುಹಿಸಿದಲ್ಲಿ ಆ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣದೊಂದಿಗೆ ಸ್ಮರ್ಧಾತ್ಮಕ ವಾತಾವರಣ ದೊರೆಯುವುದು ಎಂದು ಸಚಿವರು ಅಭಿಪ್ರಾಯಪಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ
Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ
Kerala-ಕರ್ನಾಟಕ-ತಮಿಳುನಾಡು ತ್ರಿಜಂಕ್ಷನ್: ಮತ್ತೆ ನಕ್ಸಲರ ಸದ್ದು?
Hebri; ಸ್ಕೂಟಿಗೆ ಕಾರು ಢಿಕ್ಕಿ,ಸವಾರ ಸ್ಥಳದಲ್ಲೇ ಸಾವು
Temple History: ಶ್ರೀ ವಡಭಾಂಡೇಶ್ವರ ಬಲರಾಮ ದೇವಸ್ಥಾನ; ಹಿನ್ನೆಲೆ, ಇತಿಹಾಸ,ವಿಶೇಷಗಳು
MUST WATCH
ಹೊಸ ಸೇರ್ಪಡೆ
ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…
ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ
Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ