ಮನೆಯಿಂದಲೇ ಗುರುವಂದನೆ; ಭಾರತೀಯ ಅಂಚೆ ಇಲಾಖೆಯಿಂದ ಟೀಚರ್ಸ್‌ ಡೇ ಸ್ಪೆಶಲ್


Team Udayavani, Aug 28, 2020, 6:19 AM IST

ಮನೆಯಿಂದಲೇ ಗುರುವಂದನೆ; ಭಾರತೀಯ ಅಂಚೆ ಇಲಾಖೆಯಿಂದ ಟೀಚರ್ಸ್‌ ಡೇ ಸ್ಪೆಶಲ್

ಉಡುಪಿ: ಶಿಕ್ಷಕರ ದಿನವನ್ನು ಈ ಬಾರಿ ವಿಶೇಷವಾಗಿ ಆಚರಿಸಿಕೊಳ್ಳಲು ಅಂಚೆ ಇಲಾಖೆ ಮುಂದಾಗಿದೆ. ತಮ್ಮ ಜೀವನವನ್ನು ರೂಪಿಸಿದ ಗುರುಗಳಿಗೆ ಗುರುವಂದನೆ ಸಲ್ಲಿಸುವ ಪ್ರಕ್ರಿಯೆಯನ್ನು ಮನೆಯ ಒಳಗೇ ಕುಳಿತು ಸುಲಭ ವಿಧಾನದಲ್ಲಿ ಮಾಡಲು ಯೋಜನೆ, ಯೋಚನೆಗಳನ್ನು ಭಾರತೀಯ ಅಂಚೆ ಇಲಾಖೆಯ ಕರ್ನಾಟಕ ಅಂಚೆ ವೃತ್ತ ರೂಪಿಸಿದೆ.

ಶಾಲಾ-ಕಾಲೇಜುಗಳು ಇನ್ನೂ ಆರಂಭವಾಗದ ಹಿನ್ನೆಲೆಯಲ್ಲಿ ಗುರು ವಂದನೆ ಸಲ್ಲಿಸಲು ಈ ಸೇವಾ ವಿಧಾನ ಹೆಚ್ಚು ಪರಿಣಾಮಕಾರಿಯಾಗಿದೆ. ಇದಕ್ಕೆ ಕರ್ನಾಟಕ ಅಂಚೆ ವೃತ್ತವು ಶಿಕ್ಷಕರ ದಿನಕ್ಕೆ “ಗುರುವಂದನ’ ಎಂಬ ವಿಶೇಷ ಪರಿಕಲ್ಪನೆಯನ್ನು ಕರ್ನಾಟಕ ವೃತ್ತದ ಮುಖ್ಯ ಪೋಸ್ಟ್‌ ಮಾಸ್ಟರ್‌ ಜನರಲ್‌ ಶಾರದಾ ಸಂಪತ್‌ ಅವರು ಬೆಂಗಳೂರಲ್ಲಿ ಲೋಕಾರ್ಪಣೆಗೊಳಿಸಿದ್ದಾರೆ.

ಹೀಗೆ ಸಲ್ಲಿಸಿ
Karnatakapost.gov.in ಮುಖಾಂತರ ನಮ್ಮ ದೇಶ ಮಾತ್ರವಲ್ಲದೆ ಹೊರದೇಶದಲ್ಲಿರುವವರೂ ಭಾರತದ ಯಾವುದೇ ಪ್ರದೇಶದಲ್ಲಿರುವ ತಮ್ಮ ಶಿಕ್ಷಕರಿಗೆ ಗುರುವಂದನೆ ಸಲ್ಲಿಸಬಹುದಾಗಿದೆ. ಬಹು ಸುಲಭವಾಗಿ, ಬಲು ತ್ವರಿತವಾಗಿ ಕೇವಲ 100 ರೂ. ವೆಚ್ಚದಲ್ಲಿ ಆಗುವ ಈ ಸೇವಾ ಯೋಜನೆಗಾಗಿ https://karnatakapost.gov.in/ guru_vandana ಇದಕ್ಕೆ ಲಾಗಿನ್‌ ಆಗಿ ಶುಲ್ಕವನ್ನು ಅಂತರ್ಜಾಲ ಬ್ಯಾಂಕಿಂಗ್‌ ನಮ್ಮ ಇಲಾಖೆಯ ಐಪಿಪಿಬಿ, ಗೂಗಲ್‌ ಪೇ ಭೀಮ್‌ ಆ್ಯಪ್‌, ಫೋನ್‌ ಪೇ, ಮುಂತಾದ ವಿಧಾನಗಳಿಂದ ಪಾವತಿಸಬಹುದಾಗಿದೆ. ಅದರ ಯುಟಿಆರ್‌ ಕ್ರಮಸಂಖ್ಯೆಯನ್ನು ಹಾಕಿ ಮುಂದುವರಿದು ಕಳುಹಿಸುವವರ ಪೂರ್ಣ ವಿವರ ನೀಡಬೇಕು.

ಚಿತ್ರ ತೆಗೆದು ಕಳುಹಿಸುವ ಅವಕಾಶ
ಹಾಗೇ ಮುಂದುವರಿದಾಗ ಶಿಕ್ಷಕರಿಗೆ ಕಳುಹಿಸಲು ಸುಮಾರು ಮೂರು ವಿಧದ ಆಕರ್ಷಕ ಕೊಡುಗೆಗಳಾದ ಖಾದಿ ಫೇಸ್‌ ಮಾಸ್ಕ್, ಸೀಡ್‌ ಪೆನ್ಸಿಲ್‌ ಹಾಗೂ ಬುಕ್‌ ಮಾರ್ಕ್‌ಗಳು ವೀಕ್ಷಣೆಗೆ ಲಭ್ಯವಿದ್ದು ಪ್ರತಿಯೊಂದು ಕೊಡುಗೆಯ‌ ಮುಂದೆ ವಿನ್ಯಾಸ ಅಂಕಿ ನಮೂದಿಸಲಾಗಿದೆ. ಇದಕ್ಕೆ ಬೇಕಾದ ಕೊಡುಗೆಗಳನ್ನು ಆರಿಸಿ ಮುಂದುವರಿದಾಗ ಸಂದೇಶ ಕಳುಹಿಸುವ ಆಯ್ಕೆ ಕಾಣಸಿಗುತ್ತದೆ. ಸುಮಾರು ಮೂರು ರೀತಿಯ ಮುದ್ರಿತ ಸಂದೇಶಗಳನ್ನು ಆಯ್ಕೆ ಮಾಡುವ, ಇಲ್ಲವೇ ನಮಗೆ ಬೇಕಾದ ಸಂದೇಶ ಬರೆದು ಅದರ ಫೋಟೋ ತೆಗೆದು ಕಳುಹಿಸುವ ಅವಕಾಶವೂ ಲಭ್ಯವಿದೆ.

ಗುರುವಂದನೆಯ ಅರ್ಥಪೂರ್ಣ ಸಂದೇಶ
ಶಿಕ್ಷಕರ ದಿನದ ಸಾಮಾನ್ಯ ಸಂದೇಶಗಳು ಅಥವಾ ಡಾ| ಎಸ್‌.ರಾಧಾಕೃಷ್ಣನ್‌ ಅವರ ಚಿತ್ರ ಹೊತ್ತ ಸಂದೇಶಗಳು ಇಲ್ಲವೇ ಎಪಿಜೆ ಅಬ್ದುಲ್‌ ಕಲಾಂ ರವರ ಚಿತ್ರ ಹೊತ್ತ ಸಂದೇಶಗಳನ್ನು ಆಯ್ಕೆ ಮಾಡಬಹುದಾಗಿದೆ. ಕೊನೆಯಲ್ಲಿ ಸ್ವೀಕರಿಸುವವರ ಪೂರ್ಣ ವಿವರಗಳನ್ನು ಬರೆಯುವ ವಿಭಾಗವಿದೆ. ಕೇವಲ 100 ರೂ.ಗಳಲ್ಲಿ ಆಕರ್ಷಕ ಕೊಡುಗೆಗಳು, ಗುರುವಂದನೆಯ ಅರ್ಥಪೂರ್ಣ ಸಂದೇಶಗಳನ್ನು ಹೊತ್ತು ವಿಶಿಷ್ಟ ವಿನ್ಯಾಸದ ಗುರುವಂದನ ಲಕೋಟೆಗಳಲ್ಲಿ ತಮ್ಮ ನೆಚ್ಚಿನ ಗುರುಗಳನ್ನು ಸೇರುತ್ತವೆ. ಗುರುಗಳಿಗೆ ಸಲ್ಲಿಸಲು ಕೊಡುಗೆಗಳ ಸೀಮಿತ ದಾಸ್ತಾನು ಲಭ್ಯವಿದ್ದು ಈ ಸೇವಾ ವಿಧಾನದ ಮೂಲಕ ಗುರುವಂದನೆ ಸಲ್ಲಿಸಲು ಸೆ.1ರವರೆಗೆ ಇಲ್ಲವೇ ಕೊಡುಗೆಗಳ ದಾಸ್ತಾನು ಮುಗಿಯುವವರೆಗೆ ಮಾತ್ರ ಚಾಲ್ತಿ ಯಲ್ಲಿರುತ್ತದೆ.

ಮನೆಯಿಂದಲೆ ಗುರುವಂದನೆ
ಗುರುವಂದನಾ ಲಕೋಟೆಯು “ವೇರ್‌ ಮಾಸ್ಕ್ ಡಿಯರ್‌ ಟೀಚರ್‌ ಸ್ಟೇ ಸೇಫ್’ ಎಂಬ ಆಕರ್ಷಕ ಸ್ಲೋಗನ್‌ ಹಾಗೂ ಚೆಂದದ ಚಿತ್ರ ವಿನ್ಯಾಸ ಹೊಂದಿದ್ದು ತ್ವರಿತ ಅಂಚೆಯ ಮೂಲಕ ಗುರುಗಳನ್ನು ತಲುಪುವಂತೆ ವಿನ್ಯಾಸ ರೂಪಿಸಲಾಗಿದೆ. ನಮ್ಮ ದೇಶದ ಯಾವುದೇ ಮೂಲೆಗೂ ಈ ಗುರು ವಂದನಾ ಕೊಡುಗೆ ಕಳುಹಿಸಿ ‌ಬಹುದಾಗಿದೆ. ಹೊರದೇಶದಲ್ಲಿರುವ ಭಾರತೀಯರು ತಮ್ಮ ಇಲ್ಲಿನ ಬ್ಯಾಂಕ್‌ ಖಾತೆಯ ಮೂಲಕ ಭಾರತದೊಳ ಗಿರುವ ಗುರುಗಳಿಗೂ ಕೊಡುಗೆ ಕಳುಹಿಸಬಹುದಾಗಿದೆ. ಈ ಮೂಲಕ ಮನೆಯೊಳಗೇ ಕುಳಿತು ತಮ್ಮ ನೆಚ್ಚಿನ
ಶಿಕ್ಷಕರಿಗೆ ಗುರುವಂದನೆ ಸಲ್ಲಿಸಬಹು ದಾದ ಕರ್ನಾಟಕ ಅಂಚೆ ವೃತ್ತದ ಈ ಸೇವಾ ಯೋಜನೆ ಜನಸಾಮಾನ್ಯರಲ್ಲಿ ಸಂಚಲನ ಮೂಡಿಸಿದೆ.

ಮತ್ತೂಂದು ಸುತ್ತಿನ ಯತ್ನ
ಮಾಜಿ ರಾಷ್ಟ್ರಪತಿ ದಿ| ಸರ್ವಪಲ್ಲಿ ರಾಧಾಕೃಷ್ಣನ್‌ ಅವರ ಜನ್ಮದಿನವನ್ನು ಭಾರತಾದ್ಯಂತ ಶಿಕ್ಷಕರ ದಿನ ಎಂದು ಆಚರಿಸಲಾಗುತ್ತದೆ. ಕೋವಿಡ್‌-19 ಕಾರಣದಿಂದಾಗಿ ಮನೆಯೊಳಗೆ ಕುಳಿತು ರಾಖೀ ಪೋಸ್ಟ್‌ ಮುಖಾಂತರ ದೇಶಾದ್ಯಂತದ ಸಹೋದರರಿಗೆ, ಸೈನಿಕರಿಗೆ
ಕಳುಹಿಸುವ ವಿನೂತನ ವಿಧಾನದ ಯಶಸ್ಸಿನ ಬಳಿಕ ಈಗ ಅಂಚೆ ಇಲಾಖೆ ಮತ್ತೂಂದು ಸುತ್ತಿಗೆ ಅಣಿಯಾಗಿದೆ.
-ನವೀನ್‌ ಚಂದರ್‌, ಉಡುಪಿ ಅಂಚೆ ವಿಭಾಗದ ಅಂಚೆ ಅಧೀಕ್ಷಕ

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.