ಸಾರ್ವತ್ರಿಕ ಕುಟುಂಬ ಸಮೀಕ್ಷೆಯಲ್ಲಿ ಶಿಕ್ಷಕರು!

ಆರಂಭದಲ್ಲಿ ಮೂಡಿದ್ದ ಗೊಂದಲ ಬಳಿಕ ನಿವಾರಣೆ

Team Udayavani, May 12, 2020, 6:20 AM IST

ಸಾರ್ವತ್ರಿಕ ಕುಟುಂಬ ಸಮೀಕ್ಷೆಯಲ್ಲಿ ಶಿಕ್ಷಕರು!

ಸಾಂದರ್ಭಿಕ ಚಿತ್ರ.

ಉಡುಪಿ: ಕೋವಿಡ್-19 ಸೋಂಕು ಹಿನ್ನೆಲೆಯಲ್ಲಿ ಕುಟುಂಬಗಳ ಸಾರ್ವತ್ರಿಕ ಸಮೀಕ್ಷೆ ಮೇ 6ರಿಂದ ಅವಿಭಜಿತ ಜಿಲ್ಲೆಯಲ್ಲಿ ಆರಂಭಗೊಂಡಿದೆ. ಮತಗಟ್ಟೆ ಬಿಎಲ್‌ಒಗಳ ಜತೆ ಶಿಕ್ಷಕರು ಸಮೀಕ್ಷೆಯಲ್ಲಿ ತೊಡಗಿಸಿಕೊಂಡಿದ್ದಾರೆ.

ದ.ಕ. ಜಿಲ್ಲೆಯಲ್ಲಿ 2,000 ಹಾಗೂ ಉಡುಪಿಯಲ್ಲಿ 1,000 ಮಂದಿ ಶಿಕ್ಷಕರು ಸಮೀಕ್ಷೆಯಲ್ಲಿ ಭಾಗವಹಿಸುತ್ತಿದ್ದಾರೆ. ಬಿಎಲ್‌ಒ ಜತೆ ಪಾಲ್ಗೊಳ್ಳುವ ಶಿಕ್ಷಕರಿಗೆ ದ.ಕ.ದಲ್ಲಿ ತರಬೇತಿ ನೀಡಿಲ್ಲ ಎಂಬ ಬಗ್ಗೆ ಆರಂಭದಲ್ಲಿ ಗೊಂದಲ ಏರ್ಪಟ್ಟಿತ್ತು. ಬಿಎಲ್‌ಒಗಳ ಜತೆ ಸಹಾಯಕರಾಗಿ ಪಾಲ್ಗೊಳ್ಳುತ್ತಿರುವುದರಿಂದ ಶಿಕ್ಷಕ ರಲ್ಲಿದ್ದ ಗೊಂದಲ ಅನಂತರ ನಿವಾರಣೆ ಆಗಿತ್ತು. ಉಡುಪಿಯಲ್ಲಿ ಮೇ 5ರಂದು ತಾಲೂಕು ಮಟ್ಟದಲ್ಲಿ ತರಬೇತಿ ನೀಡಿ ಮೇ 7ರಿಂದ ಸಮೀಕ್ಷೆ ಆರಂಭಿಸಿದ್ದು, ಎರಡೂ ಜಿಲ್ಲೆಗಳಲ್ಲಿ ಈಗ ಸಮೀಕ್ಷೆ ನಡೆಯುತ್ತಿದೆ.

ದ.ಕ. ಜಿಲ್ಲೆಯ ಕೆಲವು ತಾಲೂಕು ಗಳಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಶಿಕ್ಷಕರ ಪಟ್ಟಿ ಮಾಡಿ, ಮೇ 7ರಿಂದ 10ರ ತನಕ ಸಮೀಕ್ಷೆಯಲ್ಲಿ ಪಾಲ್ಗೊಳ್ಳು ವಂತೆ ಸೂಚಿಸಿದ್ದರು. ಶಿಕ್ಷಕರ ಮೊಬೈಲ್‌ ಗಳಿಗೆ ಮೇ 6ರಂದು ಸಂಜೆ ಕರ್ತವ್ಯಕ್ಕೆ ಹಾಜರಾಗುವ ಬಗ್ಗೆ ಸಂದೇಶ ತಲುಪಿತ್ತು. ಕ್ಲಸ್ಟರ್‌ ಮಟ್ಟದ ಮೇಲ್ವಿಚಾರಕರು, ನೋಡಲ್‌ ಅಧಿಕಾರಿಗಳಿಗೆ ಶಿಕ್ಷಕರ ಪಟ್ಟಿಯನ್ನು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಿಂದ ಕಳುಹಿಸಿ ಕೊಡ ಲಾಗಿತ್ತು. ಪಟ್ಟಿಯಲ್ಲಿರುವ ಶಿಕ್ಷಕರಿಗೆ ವಿಷಯವೇ ಗೊತ್ತಿರಲಿಲ್ಲ. ಕೆಲವು ಬಿಎಲ್‌ಒಗಳಿಗೂ ಮಾಹಿತಿ ಇರಲಿಲ್ಲ. ತರಬೇತಿ ನೀಡದೆ ಸಮೀಕ್ಷೆ ನಡೆಸುವುದಕ್ಕೆ ಬಿಎಲ್‌ಒ, ಶಿಕ್ಷಕರು ಅಸಮಾಧಾನ ವ್ಯಕ್ತಪಡಿಸಿ ದ್ದರು. ಕೆಲವು ಬಿಎಲ್‌ಒಗಳು ಕರ್ತ ವ್ಯಕ್ಕೆ ಹಾಜರಾಗದಿರಲು ನಿರ್ಧರಿಸಿದ್ದರು. ಈಗಲೂ ಕೆಲವು ಕಡೆಗಳಲ್ಲಿ ನಿವೃತ್ತರನ್ನು ಕರ್ತವ್ಯಕ್ಕೆ ನಿಯೋಜಿಸಿರುವುದು ಗೊಂದಲ ಕ್ಕೀಡು ಮಾಡಿದೆ. ಅವರ ಸ್ಥಾನಕ್ಕೆ ಬೇರೊಬ್ಬ ಶಿಕ್ಷಕರನ್ನು ನೇಮಿಸಿಕೊಂಡು ಸಮಸ್ಯೆ ನಿವಾರಿಸುವ ಪ್ರಯತ್ನ ನಡೆಯುತ್ತಿದೆ.

ಬಿಎಲ್‌ಒಗಳ ಸಹಾಯಕರಾಗಿ ಭಾಗವಹಿಸುವ ಶಿಕ್ಷಕರಿಗೆ ಮೇ 5ರಂದು ತಾಲೂಕು ಮಟ್ಟದಲ್ಲಿ ತರಬೇತಿ ಕೊಡಲಾಗಿದೆ. ಮೇ 7ರಿಂದ ಜಿಲ್ಲೆಯ 1,000 ಮಂದಿ ಶಿಕ್ಷಕರು ಸಮೀಕ್ಷೆಯಲ್ಲಿ ಪಾಲ್ಗೊಂಡು ಸಮೀಕ್ಷೆ ಕಾರ್ಯದಲ್ಲಿ ನಿರತರಾಗಿದ್ದಾರೆ.
– ಶೇಷಶಯನ ಕಾರಿಂಜ, ಡಿಡಿಪಿಐ, ಉಡುಪಿ

ಜಿಲ್ಲೆಯಲ್ಲಿ ಯಾವುದೇ ಅಡೆತಡೆಗಳಿಲ್ಲದೆ ಸಮೀಕ್ಷೆ ನಡೆಯುತ್ತಿದೆ. ಆರೋಗ್ಯ ಇಲಾಖೆ ಜತೆ ಶಿಕ್ಷಕರು ನೆರವು ನೀಡುತ್ತಿದ್ದಾರೆ.ಆರಂಭದಲ್ಲಿ ಕೆಲ ಗೊಂದಲಗಳು ಇದ್ದವು. ಅವು ಈಗ ನಿವಾರಣೆಗೊಂಡು ಸಮೀಕ್ಷೆ ಯಶಸ್ವಿಯಾಗಿ ನಡೆಯುತ್ತಿದೆ.
– ಮಲ್ಲೇಸ್ವಾಮಿ,
ಡಿಡಿಪಿಐ, ಮಂಗಳೂರು

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.