ಮುಂಡ್ಕೂರು ಕನ್ನಡಬೆಟ್ಟು ನಿವಾಸಿಗಳ ನೀರಿಗಾಗಿ ಕಣ್ಣೀರು ಅಂತ್ಯ


Team Udayavani, Apr 8, 2019, 6:30 AM IST

mundkur

ಬೆಳ್ಮಣ್‌: ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾ.ಪಂ. ವ್ಯಾಪ್ರಿಯ ಪೊಸ್ರಾಲು ಸಮೀಪದ ಕನ್ನಡಬೆಟ್ಟು ನಿವಾಸಿಗಳು ಸುಮಾರು 75 ವರ್ಷಗಳಿಂದ ಕುಡಿಯುವ ನೀರಿಗಾಗಿ ಹಾಕುತ್ತಿದ್ದ ಕಣ್ಣೀರು ಕೊನೆಗೂ ಕೊನೆಯಾಗಿದೆ.

ಖಾಸಗಿಯವರ ಜಮೀನಿನಲ್ಲಿ ಪೈಪ್‌ ಆಳವಡಿಕೆ ಇದ್ದ ಸಮಸ್ಯೆಗಳನ್ನು ಪರಿಹರಿಸಿದ ಮುಂಡ್ಕೂರು ಗ್ರಾಮ ಪಂಚಾಯತ್‌ ಆಡಳಿತ ಖಾಸಗಿಯವರ ಮನವೊಲಿಸಿ ಪೈಪ್‌ ಅಳವಡಿಸಿ ನೀರಿನ ಸಂಪರ್ಕ ನೀಡಿದ್ದು, ನೀರಿನ ಸಮಸ್ಯೆ ಎದುರಿಸುತ್ತಿದ್ದ 5 ಮನೆಗಳಿಗೆ ನಳ್ಳಿ ನೀರಿನ ಸಂಪರ್ಕ ಕಲ್ಪಿಸಿ ಸಂತೃಪ್ತಿಯ ಸಿಂಚನ ಮೂಡಿಸಿದೆ.

ಉದಯವಾಣಿ ವರದಿ
ಈ ಹಿಂದೆ ಸುಮಾರು 75 ವರ್ಷಗಳಿಂದ ಈ ಭಾಗದಲ್ಲಿ ವಾಸವಾಗಿದ್ದ ಪದ್ದು ಪೂಜಾರ್ತಿ, ಕಮಲ ಪೂಜಾರ್ತಿ, ಯಶೋದಾ ಪೂಜಾರ್ತಿ, ಸುಶೀಲಾ ಪೂಜಾರ್ತಿ ಹಾಗೂ ಪುರುಷೋತ್ತಮ ಪೂಜಾರಿ ಎಂಬವರ ಕುಟುಂಬದ ಮಂದಿ ನಿತ್ಯ ನೀರಿಗಾಗಿ ಪರದಾಟ ನಡೆಸುತ್ತಿದ್ದರೂ ಯಾವುದೇ ಇಲಾಖೆ ಅಥವಾ ಸ್ಥಳಿಯಾಡಳಿತ ಈ ಕಾಲೋನಿಯ ನೀರಿನ ಸಮಸ್ಯೆಗೆ ಪರಿಹಾರ ನೀಡದಿರುವ ಬಗ್ಗೆ ಉದಯವಾಣಿ ಸಚಿತ್ರ ವರದಿಯನ್ನು ಎರಡೆರಡು ಬಾರಿ ಪ್ರಕಟಿಸಿತ್ತು.

ಈ ಪರಿಣಾಮ ಗ್ರಾ. ಪಂ.ನ ಆಡಳಿತ ಹೊತ್ತಿರುವ ಮಂದಿ ತಮ್ಮ ಜವಾಬ್ದಾರಿ ಅರಿತು ಸಮಸ್ಯೆ ಪರಿಹರಿಸಿ ನೀರಿನ ಸಂಪರ್ಕ ನೀಡಿದ್ದು ಸಾರ್ವಜನಿಕ ವಲಯದಲ್ಲಿ ಮುಕ್ತ ಪ್ರಶಂಸೆಗೆ ಪಾತ್ರವಾಗಿದೆ.

75 ವರ್ಷಗಳ ಸಮಸ್ಯೆ
ಕನ್ನಡಬೆಟ್ಟು ಕಾಲೋನಿಯಲ್ಲಿ 5 ಮನೆಗಳಲ್ಲಿ ಸುಮಾರು 40 ಮಂದಿ ಜನರಿದ್ದು ಇವರ ನಿತ್ಯ ಉಪಯೋಗದ ನೀರಿಗಾಗಿ ಇಲ್ಲಿನ ನಿವಾಸಿಗಳು ಕಳೆದ 75ವರ್ಷಗಳಿಂದ ಪರದಾಟ ನಡೆಸುತ್ತಿದ್ದರು. ಅಡುಗೆ ತಯಾರಿಕೆಗೆ, ಪಾತ್ರೆ ತೊಳೆಯಲು, ಶೌಚಾಲಯ ಹೀಗೆ ಹತ್ತು ಹಲವು ಕೆಲಸಗಳಿಗೆ ನೀರಿನ ಅವಶ್ಯಕತೆ ಇದ್ದು ಇಲ್ಲಿನ ನಿವಾಸಿಗಳು ನಿತ್ಯ ನೀರಿಗಾಗಿ ಕಣ್ಣೀರು ಹಾಕುವಂತಾಗಿತ್ತು. ಈ ಕಾಲನಿಯ ಎಲ್ಲಾ ಮನೆಗಳ ಮಂದಿ ತಮ್ಮ ಬಟ್ಟೆ ಬರೆ ಸಹಿತ ಪಾತ್ರೆಗಳನ್ನು ತೊಳೆಯಲು ಸುಮಾರು 1 ಕಿ.ಮೀ. ನಷ್ಟು ದೂರ ಸಾಗಿ ನದಿ ನೀರನ್ನು ಬಳಕೆ ಮಾಡುತ್ತಿದ್ದರು. ಇತ್ತೀಚೆಗೆ ಆ ನದಿಯಲ್ಲಿ ಮೊಸಳೆಗಳು ಕಾಣಸಿಕ್ಕಿದ್ದು ಈ ಭಾಗದ ಜನ ನೀರಿಗೆ ಇಳಿಯಲೂ ಇದೀಗ ಭಯವುಂಟಾಗಿತ್ತು.

ಬಾವಿ ತೋಡಿದ್ದರೂ ಪ್ರಯೋಜನವಾಗಿರಲಿಲ್ಲ
ತಮ್ಮ ನಿತ್ಯ ಕಾರ್ಯಕ್ಕೆ ಬೇಕಾದ ನೀರಿಗಾಗಿ ಪರದಾಟ ನಡೆಸುವುದರಿಂದ ನೊಂದ ಕಾಲನಿ ಜನರೇ ಒಟ್ಟಾಗಿ ಒಂದು ಬಾವಿಯನ್ನು ನಿರ್ಮಿಸಿದ್ದರು. 5 ಮನೆಗಳಿಗೆ ನೀರಿನ ದಾಹ ತೀರಿಸುತ್ತಿದ್ದ ಈ ಒಂದು ಬಾವಿಯೂ 5 ಮನೆಯ ಬಳಕೆಗೆ ಬಾರದೇ ಸಂಪೂರ್ಣ ಬತ್ತಿ ಹೋಗಿದ್ದು ಇಲ್ಲಿನ ನಿವಾಸಿಗಳು ಸುಮಾರು ದೂರ ಕ್ರಮಿಸಿ ಖಾಸಗಿ ಮಾಲಿಕರ ಬಾವಿಯಿಂದ ನೀರು ತರಬೇಕಾಗಿತ್ತು. ಇಲ್ಲವೇ ನದಿ ನೀರನ್ನೇ ಆಶ್ರಯಿಸಬೇಕಾಗಿತ್ತು.

ಮನವಿ ನೀಡಲಾಗಿತ್ತು
ಬಹು ವರ್ಷದ ನೀರಿನ ಸಮಸ್ಯೆಗಾಗಿ ಈ ಭಾಗದ ಜನ ಸ್ಥಳೀಯ ಗ್ರಾ.ಪಂ, ತಾ.ಪಂ, ಜಿಲ್ಲಾ ಪಂ. ನಿಂದ ಹಿಡಿದು ಕಾರ್ಕಳ ಶಾಸಕರಿಗೆ ಹಾಗೂ ಜಿಲ್ಲಾದಿಕಾರಿಗಳಿಗೆ ಮನವಿಯನ್ನು ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿರಲಿಲ್ಲ.

ಖಾಸಗಿಯವರ ಜಮೀನಿನಲ್ಲಿ ಪೈಪ್‌ಲೈನ್‌ ಅಳವಡಿಸಬೇಕಾಗಿದ್ದರಿಂದ ಅವರ ಮನವೊಲಿಸಿ ನೀರು ಸಂಪರ್ಕ ನೀಡಬೇಕಾಗಿತ್ತು. ಆದರೆ ಖಾಸಗಿಯವರು ನಕಾರಾತ್ಮಕ ಧೋರಣೆ ತೋರಿದ್ದರಿಂದ ಇದು ಅಸಾಧ್ಯವಾಗಿತ್ತು. ಆದರೆ ಈ ಬಾರಿ ಕಾರ್ಕಳ ತಾಳುಕು ಪಂಚಾಯತ್‌ ಉಪಾಧ್ಯಕ್ಷ ಗೋಪಾಲ ಮೂಲ್ಯ, ಮುಂಡ್ಕೂರು ಗ್ರಾಮ ಪಂಚಾಯತ್‌ ಅಧ್ಯಕ್ಷೆ ಶುಭಾ ಪಿ. ಶೆಟ್ಟಿ, ಉಪಾಧ್ಯಕ್ಷ ರವೀಂದ್ರ ಶೆಟ್ಟಿ, ಮಾಜಿ ಆಧ್ಯಕ್ಷ ಸತ್ಯಶಂಕರ ಶೆಟ್ಟಿಯವರ ಪರಿಶ್ರಮದ ಫಲವಾಗಿ ಕೊನೆಗೂ ಮಾನವೀಯ ನೆಲೆಯಲ್ಲಿ ಒಪ್ಪಿದ ಖಾಸಗಿ ಜಮೀನಿನ ಮಾಲಕ ಪೇರ್ಗುತ್ತು ಶಿವರಾಮ ಶೆಟ್ಟಿ, ಕಾಳು ಯಾನೆ ಸುಂದರ ಸಾಲ್ಯಾನ್‌, ಮುಕುಂದ ಪ್ರಭು ಮನೆಯವರು ಮನ ಮಾಡಿ ನೀರು ಸಂಪರ್ಕದ ಪೈಪ್‌ ಲೈನ್‌ ಅಳವಡಿಕೆಗೆ ಜಮೀನು ಮೂಲಕ ಸಂಪರ್ಕಕ್ಕೆ ಒಪ್ಪಿಗೆ ನೀಡಿದರು.

ಸಮಸ್ಯೆ ಪರಿಹಾರ
ಖಾಸಗಿ ಜಾಗದ ಸಮಸ್ಯೆ ಇರುವುದರಿಂದ ನಳ್ಳಿ ನೀರಿನ ಸಂಪರ್ಕ ಕಲ್ಪಿಸಲು ಸಾಧ್ಯವಾಗಿರಲಿಲ್ಲ. ಪೈಪ್‌ ಲೆ„ನ್‌ ಅಳವಡಿಸಲು ಇದೀಗ ಖಾಸಗಿಯವರು ನಮ್ಮ ವಿನಂಈ ಭಾಗದ ನೀರಿನ ಸಮಸ್ಯೆ ಪರಿಹಾರವಾಗಿದೆ.
-ಗೋಪಾಲಮೂಲ್ಯ, ಕಾರ್ಕಳ ತಾ.ಪಂ. ಉಪಾಧ್ಯಕ್ಷ

ಶಾಶ್ವತ ಪರಿಹಾರ
ಮುಂಡ್ಕೂರು ಗ್ರಾಮ ಪಂಚಾಯತ್‌ನ ಸತತ ಪರಿಶ್ರಮದ ಫಲವಾಗಿ ನಮ್ಮ 5 ಮನೆಗಳ 75 ವರ್ಷಗಳ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಲಭಿಸಿದೆ. ಪೈಪ್‌ಲೈನ್‌ ಅಳವಡಿಕೆಗೆ ಜಮೀನು ಮೂಲಕ ಅವಕಾಶ ನೀಡಿದ ಜಮೀನಿನ ಮಾಲಕರಾದ ಪೇರ್ಗುತ್ತು ಶಿವರಾಮ ಶೆಟ್ಟಿ, ಕಾಳು ಯಾನೆ ಸುಂದರ ಸಾಲ್ಯಾನ್‌, ಮುಕುಂದ ಪ್ರಭು ಮನೆಯವರಿಗೆ ಕೃತಜ್ಞತೆಗಳು.
-ವಸಂತಿ, ಸ್ಥಳೀಯರು

ಟಾಪ್ ನ್ಯೂಸ್

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.