ತಾಂತ್ರಿಕತೆ ಶಿಕ್ಷಣ ಅತಿಮುಖ್ಯ: ನಾರಾಯಣ ಸಭಾಹಿತ್
Team Udayavani, Jul 20, 2017, 5:20 AM IST
ಉಡುಪಿ: ಅಭಿವೃದ್ಧಿ ಹೊಂದುತ್ತಿರುವ ತಂತ್ರಜ್ಞಾನದ ಯುಗದಲ್ಲಿ ತಾಂತ್ರಿಕತೆಯ ಶಿಕ್ಷಣ ಅತೀ ಮುಖ್ಯವಾಗಿದೆ ಎಂದು ಮಣಿಪಾಲ ವಿಶ್ವವಿದ್ಯಾಲಯದ ಕುಲಸಚಿವ ಡಾ| ನಾರಾಯಣ ಸಭಾಹಿತ್ ಅವರು ಹೇಳಿದರು.
ಮಣಿಪಾಲ ಎಂಐಟಿಯ ಎಲೆಕ್ಟ್ರಿಕಲ್ ಸೈನ್ಸ್ ವಿಭಾಗಕ್ಕೆ ಹೊಸದಾಗಿ ಪ್ರವೇಶಿಸಿದ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಅವರು ಮಾತನಾಡಿದರು.
ಅತೀ ಕ್ಷೀಣ ಕಣಗಳನ್ನು ಗುರುತಿಸಿ ಅದರಿಂದ ಆಗುವ ಪರಿಣಾಮಗಳನ್ನು ಕಂಡುಹಿಡಿದಿರುವ ನಾವು ಇಡೀ ಜಗತ್ತನ್ನು ನಿಯಂತ್ರಿಸುವ ಮಟ್ಟದಲ್ಲಿ ಬೆಳೆದಿದ್ದೇವೆ. ತಂತ್ರಜ್ಞಾನದಿಂದಾಗಿ ವಿಶ್ವವನ್ನೇ ಹತ್ತಿರಕ್ಕೆ ತಂದಿದ್ದೇವೆ ಎಂದವರು ಹೇಳಿದರು.
ಮಣಿಪಾಲ ಎಐಟಿ ನಿರ್ದೇಶಕ ಡಾ| ಜಿ.ಕೆ. ಪ್ರಭು ಅವರು ಮಾತನಾಡಿ, ವಿವಿಧ ದೇಶಗಳಿಂದ ಬಂದಿರುವ ವಿದ್ಯಾರ್ಥಿಗಳು ಮಣಿಪಾಲ ಶಿಕ್ಷಣ ಸಂಸ್ಥೆಯನ್ನು ಜಗತ್ತಿನಲ್ಲಿ ಅತ್ಯಂತ ಎತ್ತರಕ್ಕೆ ಬೆಳೆಸಲು ಸಹಕಾರಿಯಾಗಬೇಕು ಎಂದು ಹೇಳಿದ ಅವರು, ನುರಿತ ತಾಂತ್ರಿ ತಂತ್ರಜ್ಞರಾಗಿ ಹೊರಹೊಮ್ಮಿ ಎಂದರು.
ಜಂಟಿನಿರ್ದೇಶಕ ಡಾ| ಬಿ.ಎಚ್.ವಿ. ಪೈ ಸ್ವಾಗತಿಸಿದರು.
ಪ್ರೊ| ಶೀಬಾ ಡೆರಿಸ್ ಕಾರ್ಯಕ್ರಮ ನಿರ್ವಹಿಸಿದರು. ಡಾ| ನಾರಾಯಣ ಶೆಣೈ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ