ದೂರದೃಷ್ಟಿ, ಸ್ಪಷ್ಟ ಗುರಿ ಇದ್ದರೆ ಮಾದಕ ವ್ಯಸನ ಮುಕ್ತ
Team Udayavani, Jun 27, 2019, 5:02 AM IST
ಉಡುಪಿ: ವಿದ್ಯಾರ್ಥಿಗಳು ಬದುಕಿಗೊಂದು ಸ್ಪಷ್ಟ ಗುರಿ, ದೂರ ದೃಷ್ಟಿಯನ್ನಿಟ್ಟುಕೊಂಡು ಅದರತ್ತ ಸಾಗುವ ನಿರ್ಧಾರ ತೆಗೆದುಕೊಂಡರೆ ಮಾದಕ ವ್ಯಸನದಂಥ ಆಕರ್ಷಣೆಗಳಿಗೆ ಒಳಗಾಗುವ ಸಾಧ್ಯತೆ ತೀರಾ ಕಡಿಮೆ ಎಂದು ಉಡುಪಿ ಅಪರ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಅಭಿಪ್ರಾಯಪಟ್ಟರು.
ಜಿಲ್ಲಾಡಳಿತ, ರಾಜ್ಯ ಮದ್ಯಪಾನ ಸಂಯಮ ಮಂಡಳಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಡುಪಿ, ಎಂಜಿಎಂ ಕಾಲೇಜು, ಮಹಾತ್ಮಾಗಾಂಧಿ ಸ್ಮಾರಕ ನಿಧಿ ಎಂಜಿಎಂ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಸಂಯುಕ್ತ ಆಶ್ರಯದಲ್ಲಿ ಮಂಗಳವಾರ ಎಂಜಿಎಂ ಕಾಲೇಜಿನಲ್ಲಿ ಜರಗಿದ ವಿಶ್ವ ಮಾದಕ ವಸ್ತು ವಿರೋಧಿ ಸಪ್ತಾಹ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು.
ಇಂದಿನ ಮಾರುಕಟ್ಟೆ ಅಥವಾ ಸರಕು ಸಂಸ್ಕೃತಿ ಯುವಜನರನ್ನು ಕೇವಲ ಗ್ರಾಹಕರನ್ನಾಗಿ ನೋಡುತ್ತಿದೆ. ಮಾದಕ ವಸ್ತುಗಳ ಮಾರಾಟ ದಂಧೆಗೆ ವಿದ್ಯಾರ್ಥಿಗಳೇ ಸುಲಭದ ಗ್ರಾಹಕರು. ಕ್ಷಣಿಕ ಸುಖಕ್ಕಾಗಿ ಒಮ್ಮೆ ಅದರತ್ತ ವಾಲಿದರೆ ಅನಂತರ ಬದುಕು ಕೈಮೀರಿ ಹೋಗುವ ಅಪಾಯವಿದೆ. ಬದುಕಿನ ನಿರ್ಣಾಯಕ ಘಟ್ಟವಾದ ವಿದ್ಯಾರ್ಥಿ ಜೀವನದಲ್ಲಿ ಕಲಿಕೆಯ ಜತೆಗೆ ಸಮಾಜಮುಖೀ ಚಿಂತನೆ ಕೂಡ ಬೆಳೆಸಿಕೊಳ್ಳಬೇಕು. ಒಳ್ಳೆಯ ವ್ಯಕ್ತಿಯಾಗಿ ಸಮಾಜಕ್ಕೆ ಒಳಿತನ್ನು ಮಾಡಬೇಕೆ ಅಥವಾ ದುಶ್ಚಟಗಳಿಗೆ ಬಲಿಯಾಗಿ ಸಮಾಜಕ್ಕೆ ಭಾರವಾಗಿ ಬದುಕಬೇಕೆ ಎಂದು ಯೋಚಿಸಿ ಕಾರ್ಯೋನ್ಮುಖರಾಗಬೇಕು. ವಿದ್ಯಾರ್ಥಿಗಳು ತಮ್ಮ ಸುತ್ತಮುತ್ತ ಇರಬಹುದಾದ ಮಾದಕ ವ್ಯಸನಿಗಳನ್ನು ಆ ಚಟದಿಂದ ಹೊರಕ್ಕೆ ತರುವ ಕಾರ್ಯ ವನ್ನೂ ಮಾಡಬೇಕು ಎಂದು ವಿದ್ಯಾಕುಮಾರಿ ಹೇಳಿದರು.
ಬುದ್ಧಿ ಬೆಳವಣಿಗೆ ಸ್ಥಗಿತ
ಸಂಪನ್ಮೂಲ ವ್ಯಕ್ತಿಯಾಗಿದ್ದ ಮಣಿ ಪಾಲ ಕೆಎಂಸಿಯ ಮನೋವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕ, ಮನೋವೈದ್ಯ ಡಾ| ರವೀಂದ್ರ ಮನೋಳಿ ಅವರು ಮಾತನಾಡಿ ’15ರಿಂದ 25 ವರ್ಷ ವಯಸ್ಸಿನಲ್ಲಿ ನಮ್ಮ ಮೆದುಳು ವಿಕಸನಗೊಳ್ಳುವ ಅವಧಿ. ಈ ಅವಧಿಯಲ್ಲಿ ಮಾದಕ ವಸ್ತುವಿನಿಂದ ಮೆದುಳಿಗೆ ಪರಿಣಾಮ ಉಂಟಾದರೆ ನೆನಪಿನ ಶಕ್ತಿ, ಇತರ ಕೌಶಲ ಸೇರಿದಂತೆ ಬುದ್ಧಿ ಬೆಳವಣಿಗೆ ಸ್ಥಗಿತಗೊಳ್ಳಲಿದೆ’ ಎಂದು ಹೇಳಿದರು.
ಎಂಜಿಎಂ ಕಾಲೇಜು ಪ್ರಾಂಶುಪಾಲ ಡಾ| ಎಂ.ಜಿ.ವಿಜಯ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಬಿ.ಎ.ಖಾದರ್ ಶಾ ಉಪಸ್ಥಿತರಿದ್ದರು. ರಾಜ್ಯ ಮದ್ಯಪಾನ ಸಂಯಮ ಮಂಡಳಿಯ ಕಾರ್ಯದರ್ಶಿ ರೋಹಿಣಿ ಕೆ. ಸ್ವಾಗತಿಸಿದರು. ಪೂರ್ಣಿಮಾ ಮತ್ತು ಪ್ರಶಾಂತ್ ಶೆಟ್ಟಿ ಹಾವಂಜೆ ಕಾರ್ಯಕ್ರಮ ನಿರ್ವಹಿಸಿದರು.
ನಗರದ ಬೋರ್ಡ್ ಹೈಸ್ಕೂಲ್ನಿಂದ ಎಂಜಿಎಂ ಕಾಲೇಜುವರೆಗೆ ನಡೆದ ಜಾಗೃತಿ ಜಾಥಾವನ್ನು ಎಸ್ಪಿ ನಿಶಾ ಜೇಮ್ಸ್ ಉದ್ಘಾಟಿಸಿದರು.
ವಿವಿಧ ಕಾಲೇಜುಗಳ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
MUST WATCH
ಹೊಸ ಸೇರ್ಪಡೆ
Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ