ಉಡುಪಿ ಜಿಲ್ಲೆಯಲ್ಲಿ ತಾಪಮಾನ ಏರಿಕೆ

ಬಿಸಿಲ ಧಗೆ ತಣಿಸಲು ಜ್ಯೂಸ್‌, ಹಣ್ಣುಗಳಿಗೆ ಬೇಡಿಕೆ

Team Udayavani, Feb 27, 2020, 5:12 AM IST

2502UDKC2A

ಉಡುಪಿ: ಬಿಸಿಲಿನ ಧಗೆ ಕೆಲವು ದಿನಗಳಿಂದ ಏರಿಕೆಯಾಗುತ್ತಿದ್ದು, 35 ಡಿಗ್ರಿವರೆಗೆ ತಲುಪಿದೆ. ಮುಂದಿನ ದಿನಗಳಲ್ಲಿ ತಾಪಮಾನ ಇನ್ನೂ ಒಂದೆರಡು ಡಿಗ್ರಿ ಹೆಚ್ಚಳವಾಗುವ ಸಾಧ್ಯತೆ ಇದೆ.

ಏರಿಳಿತ!
ಮಾರ್ಚ್‌ನ ಕೆಲವು ದಿನಗಳಲ್ಲಿ ಬಿಸಿಲು ತಾಪ ಏರಿಕೆ ಕಂಡರೂ ಉಳಿದಂತೆ ಹೆಚ್ಚಿನ ವ್ಯತ್ಯಾಸ ಕಾಣದು. ಜಿಲ್ಲೆಯಲ್ಲಿ ಮಂಗಳವಾರ 33 ಡಿಗ್ರಿ ತಾಪಮಾನ ಕಂಡು ಬಂದಿದ್ದು, ಫೆ. 26ಕ್ಕೆ 34 ಡಿಗ್ರಿ, ಫೆ. 27 ರಂದು 34 ಡಿಗ್ರಿಗೆ ಏರಿಕೆಯಾಗಲಿದೆ. ಬಳಿಕ ನಿಧಾನವಾಗಿ ಇಳಿಕೆ ಕಾಣಲಿದೆ. ಫೆ.28ರಂದು 32 ಡಿಗ್ರಿ, ಫೆ. 29 ರಂದು 32 ಡಿಗ್ರಿ ತಲುಪಿ ಮಾ.10ಕ್ಕೆ 31 ಡಿಗ್ರಿಗೆ ತಲುಪಲಿದೆ.

ಮಾರ್ಚ್‌ ತಿಂಗಳ ತಾಪಮಾನ
2020 ಮಾ.26ರಂದು 34 ಡಿಗ್ರಿ ಗರಿಷ್ಠ, ಕನಿಷ್ಠ ಮಾ.1ರಂದು 23 ಡಿಗ್ರಿ ದಾಖಲಾಗಲಿದೆ. ಉಳಿದಂತೆ 2019ರ ಮಾ. 14ರಂದು 35 ಡಿಗ್ರಿ ಗರಿಷ್ಠ, ಮಾ. 2ರಂದು 21 ಡಿಗ್ರಿ ಕನಿಷ್ಠ, 2018ರಲ್ಲಿ ಮಾ.2ರಂದು 36 ಡಿಗ್ರಿ ಗರಿಷ್ಠ, ಮಾ. 1ರಂದು 22 ಡಿಗ್ರಿ ಕನಿಷ್ಠ, 2017ರ ಮಾ.1ರಂದು 38 ಡಿಗ್ರಿ ಗರಿಷ್ಠ, ಮಾ.12ರಂದು 22 ಡಿಗ್ರಿ ಕನಿಷ್ಠ, 2016ರಲ್ಲಿ ಮಾ.3ರಂದು 35 ಡಿಗ್ರಿ ಗರಿಷ್ಠ, ಮಾ. 17ರಂದು 24 ಡಿಗ್ರಿ ಕನಿಷ್ಠ ತಾಪಮಾನ ದಾಖಲಾಗಿತ್ತು.

ಕಲ್ಲಂಗಡಿ, ಎಳನೀರಿಗೆ ಬೇಡಿಕೆ
ಉಷ್ಣಾಂಶ ಹೆಚ್ಚಿಗೆಯಾದ ಕಾರಣ ಎಳನೀರು, ವಿವಿಧ ಜ್ಯೂಸ್‌, ಕಲ್ಲಂಗಡಿ, ವಿವಿಧ ತಂಪು ಪಾನೀಯಗಳ ಮಾರಾಟ ಹೆಚ್ಚಳವಾಗಿವೆ. ನಗರದ ಕೆಲವು ಕಡೆಗಳಲ್ಲಿ ಕಲ್ಲಂಗಡಿ, ಅನಾನಸು, ಮುಳ್ಳು ಸೌತೆ ಮಾರಾಟ ಜೋರಾಗಿದೆ. ಎಳನೀರಿನ ಬೇಡಿಕೆ ಹೆಚ್ಚುತ್ತಿದ್ದು 35 ರೂ. ಬೆಲೆ ಇದೆ, ಕೆಲ ಮಾಲ್‌ಗ‌ಳಲ್ಲಿ 24 ರೂ.ಗೂ ಲಭ್ಯವಿದೆ. ಕಾಪು, ಮಲ್ಪೆ ಹಾಗೂ ಇತರ ಕಡಲ ಕಿನಾರೆಗೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆಯೂ ಹೆಚ್ಚಾಗಿದೆ.

ತುಸು ಹೆಚ್ಚಳ
ತಾಪಮಾನ ಇತ್ತೀಚೆಗೆ 34.8 ಡಿಗ್ರಿ, 35.4 ಡಿಗ್ರಿ, 36ಡಿಗ್ರಿ ವರೆಗೆ ತಲುಪಿದೆ. ಕಳೆದ ವರ್ಷ ಬಿಸಿ ಗಾಳಿ ಪ್ರಮಾಣ ಹೆಚ್ಚಿದ್ದರಿಂದ ಸೆಕೆಯ ಪ್ರಮಾಣ ಹೆಚ್ಚಿತ್ತು. ಇತ್ತೀಚಿನ ದಿನಗಳಲ್ಲಿ ಭೂಮಿಯಲ್ಲಿ ನೀರಿನ ತೇವಾಂಶ ಕಡಿಮೆ, ಗಾಳಿಯ ಪ್ರಮಾಣ ಕಡಿಮೆಯಿಂದ ಸೆಕೆಯ ಅನುಭವ ಆಗುತ್ತಿದೆ. ಮುಂದಿನ ತಿಂಗಳು 1ರಿಂದ 2 ಡಿಗ್ರಿಯಷ್ಟು ಮಾತ್ರ ತಾಪಮಾನ ಹೆಚ್ಚಾಗಲಿದ್ದು, ಅಕಾಲಿಕ ಮಳೆಯ ಸಾಧ್ಯತೆ ಕಡಿಮೆ ಇದೆ.
-ರಂಜಿತ್‌ ಟಿ.ಎಚ್‌.,ತಾಂತ್ರಿಕ ಅಧಿಕಾರಿ, ಗ್ರಾಮೀಣ ಕೃಷಿ ಹವಾಮಾನ ಮನ್ಸೂಚನಾ ಘಟಕ, ಬ್ರಹ್ಮಾವರ

ಬೀಚ್‌ಗೆ ಜನರ ಲಗ್ಗೆ
ಮಲ್ಪೆ ಬೀಚ್‌ನಲ್ಲಿ ಬೆಳಗ್ಗಿನ ಹೊತ್ತಿಗಿಂತ ಸಂಜೆ 4ರಿಂದ 7ರವರೆಗೆ ಹೆಚ್ಚಿನ ಮಂದಿ ಭೇಟಿ ನೀಡುತ್ತಿದ್ದು, ದಿನಂಪ್ರತಿ 3 ಸಾವಿರ ಮಂದಿ ಭೇಟಿ ನೀಡುತ್ತಾರೆ. ವೀಕೆಂಡ್‌ನ‌ಲ್ಲಿ 10 ಸಾವಿರ ಮಂದಿ ಭೇಟಿ ನೀಡುತ್ತಾರೆ ಎಂದು ಮಲ್ಪೆ ಬೀಚ್‌ ಅಭಿವೃದ್ಧಿ ನಿಗಮದ ಸಿಇಒ ಸುದೇಶ್‌ ಹೇಳುತ್ತಾರೆ. ಇದೇ ವೇಳೆ ಕಾಪುವಿನಲ್ಲೂ ವಾರಾಂತ್ಯ 6- 7 ಸಾವಿರ ಮಂದಿ ಭೇಟಿ ನೀಡುತ್ತಿದ್ದಾರೆ ಎಂದು ಕಾಪು ಬೀಚ್‌ ಅಭಿವೃದ್ಧಿ ನಿಗಮದ ಸಿಇಒ ಯತೀಶ್‌ ಬೈಕಂಪಾಡಿ ಹೇಳುತ್ತಾರೆ.

ಟಾಪ್ ನ್ಯೂಸ್

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.