ಅನಧಿಕೃತ ಮರಳು ಸಾಗಾಟಕ್ಕೆ ತಾತ್ಕಾಲಿಕ ತಡೆ
Team Udayavani, Jan 24, 2019, 12:30 AM IST
ಬೈಂದೂರು: ಅನಧಿಕೃತ ಮರಳು ಸಾಗಾಟ ದಂಧೆ ರಾಜಾರೋಷವಾಗಿ ನಡೆಯುತ್ತಿದ್ದರೂ ಸಂಬಂಧಪಟ್ಟ ಇಲಾಖೆಗಳು ಕಣ್ಣುಮುಚ್ಚಿ ಕುಳಿತಿವೆ ಎಂದು ಉದಯವಾಣಿ ವರದಿ ಪ್ರಕಟಿಸಿದ ಬೆನ್ನಲ್ಲೇ ಪೊಲೀಸ್ ಮತ್ತು ಕಂದಾಯ ಅಧಿಕಾರಿಗಳು ಎಚ್ಚೆತ್ತಿದ್ದು, ಮೂರು ದಿನಗಳಿಂದ ಮರಳು ದಂಧೆಗೆ ತಾತ್ಕಾಲಿಕ ತಡೆ ಬಿದ್ದಿದೆ.
ಉಡುಪಿ ಜಿಲ್ಲೆಯಲ್ಲಿ ಕಳೆದೆರಡು ವರ್ಷಗಳಿಂದ ಮರಳು ಸಮಸ್ಯೆ ಜನಸಾಮಾನ್ಯರನ್ನು ಕಂಗಾಲಾಗಿಸಿದೆ. ಕಳೆದ ಆರು ತಿಂಗಳಿಂದ ಮರಳು ಸಾಗಾಟಕ್ಕೆ ಪರವಾನಿಗೆ ದೊರೆಯುತ್ತದೆ ಎಂದು ಕಾದು ಕುಳಿತ ಜಿಲ್ಲೆಯ ಜನತೆಗೆ ಸೀಸನ್ ಮುಗಿಯುತ್ತ ಬಂದರು ಕೂಡ ಮರಳು ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿಲ್ಲ. ಇದನ್ನೇ ಬಂಡವಾಳವನ್ನಾಗಿರಿಸಿಕೊಂಡ ಕೆಲವು ವ್ಯಕ್ತಿಗಳು ಬೈಂದೂರು, ಶಿರೂರು ಪರಿಸರದಲ್ಲಿ ಅನಧಿಕೃತ ಮರಳು ಸಾಗಾಟ ಮಾಡುವ ಮೂಲಕ ಹೊರ ಜಿಲ್ಲೆಗಳಿಗೂ ರವಾನಿಸುತ್ತಿದ್ದರು.
ವಿಶೇಷ ತಂಡ ರಚನೆ
ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳ ಮಾರ್ಗದರ್ಶನದಲ್ಲಿ ಇಂತಹ ದಂಧೆಗೆ ಬ್ರೇಕ್ ಹಾಕುವುದಕ್ಕೆ ವಿಶೇಷ ತಂಡ ರಚಿಸಲಾಗಿದೆ. ಮಂಗಳೂರಿನಿಂದ ಮರಳು ತುಂಬಿಕೊಂಡು ಬೈಂದೂರು ಪರಿಸರದಲ್ಲಿ ಸಣ್ಣ ಟಿಪ್ಪರ್ಗಳಲ್ಲಿ ಸಾಗಿಸುವ ಕುರಿತು ಮಾಹಿತಿ ಸಂಗ್ರಹಿಸಲಾಗುತ್ತಿದೆ.ಪ್ರತಿ ಪೋಲಿಸ್ ಗೇಟ್ಗಳಲ್ಲೂ ಇನ್ನಷ್ಟು ಕಟ್ಟುನಿಟ್ಟಿನ ತಪಾಸಣೆ ನಡೆಸಲಾಗುತ್ತಿದೆ.ಉಡುಪಿ ಜಿಲ್ಲೆಯ ಗಡಿಭಾಗದ ಚೆಕ್ಪೋಸ್ಟ್ಗಳಲ್ಲಿ ಪ್ರತಿ ವಾಹನಗಳ ಕುರಿತು ಮಾಹಿತಿ ಪಡೆಯಲಾಗುತ್ತದೆ. ಸಂಶಯಾಸ್ಪದ ಸ್ಥಳಗಳಿಗೆ ಆರಕ್ಷಕ ತಂಡ ಭೕಟಿ ನೀಡಿದೆ.ಟೋಲ್ಗೇಟ್ಗಳಲ್ಲಿ ಮರಳು ತುಂಬಿದ ಲಾರಿಗಳ ಕುರಿತು ತಕ್ಷಣ ಆರಕ್ಷಕರಿಗೆ ಮಾಹಿತಿ ರವಾನೆಯಾಗುತ್ತದೆ.ಇದರಿಂದಾಗಿ ಮಂಗಳೂರಿನಿಂದ ದೊಡ್ಡ ಲಾರಿಗಳಲ್ಲಿ ಮರಳು ತುಂಬಿಕೊಂಡ ಬಳಿಕ ಉತ್ತರ ಕನ್ನಡ ಜಿಲ್ಲೆಗೆ ಸಾಗಿಸುವ ವ್ಯವಹಾರಕ್ಕೆ ಒಂದಿಷ್ಡು ಕಡಿವಾಣ ಬಿದ್ದಂತಾಗಿದೆ ಹಾಗೂ ಸಾರ್ವಜನಿಕರೂ ಅನಧಿಕೃತ ಮರಳು ವ್ಯವಹಾರ ನಡೆಸುವ ವಾಹನಗಳ ಕುರಿತು ಮಾಹಿತಿ ಇದ್ದರೆ ಆರಕ್ಷಕ ಇಲಾಖೆಗೆ ತಿಳಿಸಬಹುದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
D.K,Udupi ಸಿಎನ್ಜಿ ಇಂಧನ ಕೊರತೆ: ಬಂಕ್ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು
Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ
Kundapura ಕಾರು ಡಿವೈಡರ್ ಏರಿ ಪಲ್ಟಿ; ಮೂವರಿಗೆ ಗಾಯ
MUST WATCH
ಹೊಸ ಸೇರ್ಪಡೆ
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ