ಶಾಂತಿ, ಸೌಹಾರ್ದಕ್ಕೆ ಉಗ್ರವಾದ ಬೆದರಿಕೆ


Team Udayavani, Aug 28, 2018, 3:25 AM IST

akbar-27-8.jpg

ಉಡುಪಿ: ಉಗ್ರವಾದವೇ ಶಾಂತಿಯ ಪರಿಕಲ್ಪನೆಗೆ ಇರುವ ಅತಿ ದೊಡ್ಡ ಬೆದರಿಕೆ ಎಂದು ವಿದೇಶಾಂಗ ವ್ಯವಹಾರಗಳ ಖಾತೆಯ ರಾಜ್ಯ ಸಚಿವ, ಹಿರಿಯ ಪತ್ರಕರ್ತ ಎಂ.ಜೆ. ಅಕ್ಬರ್‌ ಅಭಿಪ್ರಾಯಪಟ್ಟಿದ್ದಾರೆ. ಮಣಿಪಾಲದ ಮಾಹೆ ವಿ.ವಿ.ಯಲ್ಲಿ ಜಿಯೋಪಾಲಿಟಿಕ್ಸ್‌ ಆ್ಯಂಡ್‌ ಇಂಟರ್‌ನ್ಯಾಶನಲ್‌ ರಿಲೇಶನ್ಸ್‌ ವತಿಯಿಂದ ಆರಂಭಗೊಂಡ ಚೀನ ಅಧ್ಯಯನ ಕೇಂದ್ರವನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದ ಅವರು, ಭಾರತವೂ ಸೇರಿದಂತೆ ಜಾಗತಿಕ ಮಟ್ಟದಲ್ಲಿ ಸಾಮಾಜಿಕ ಸೌಹಾರ್ದಕ್ಕೆ ಭಯೋತ್ಪಾದನೆ ಭಾರೀ ಸವಾಲು. ಬಹುತ್ವದ ಸಮಾಜ ಮತ್ತು ರಾಷ್ಟ್ರಕ್ಕೆ ಇದು ಬೆದರಿಕೆ ಒಡ್ಡುತ್ತಿದೆ ಎಂದರು. ದೇಶದಲ್ಲಿ ಬಹುತ್ವದ ಸಮಾಜವನ್ನು ಬಹುಕಾಲದಿಂದ ಕಾಪಾಡಿಕೊಂಡು ಬರಲಾಗಿದೆ. ಬಹುತ್ವವನ್ನು ಮೂಲ ಹಕ್ಕಾಗಿ ಸಂವಿಧಾನ ಪರಿಗಣಿಸಿದೆ. ಭಾರತ ಧಾರ್ಮಿಕ ವಿಶ್ವಾಸದಲ್ಲಿ ನಂಬಿಕೆ ಇರಿಸಿದೆ. ನಾವು ರಕ್ಷಣಾ ಸಾಹಸದಲ್ಲಿ ಹೆಚ್ಚು ಆಸಕ್ತಿಯಿಂದಿಲ್ಲ, ಆದರೆ ಶಾಂತಿ ಮೂಲಕ ಅಭಿವೃದ್ಧಿ ಸಾಧಿಸುವ ಛಲ ಭಾರತಕ್ಕೆ ಇದೆ. ಭಾರತದ ಪ್ರಧಾನಿ ಎಲ್ಲರನ್ನೂ ಒಳಗೊಂಡ ಅಭಿವೃದ್ಧಿಗೆ ಹೆಚ್ಚು ಪ್ರೋತ್ಸಾಹ ಕೊಡುತ್ತಿದ್ದಾರೆ. ಶಾಂತಿ ಇಲ್ಲದೆ ಅಭಿವೃದ್ಧಿ ಅಸಾಧ್ಯ. ನಮ್ಮ ಆರ್ಥಿಕ ನೀತಿಗಳು ಮತ್ತು ಅಭಿವೃದ್ಧಿ ನಿಧಿಗಳು ಜನ ಕೇಂದ್ರಿತವಾಗಿವೆ ಎಂದರು.

ಜಾಗತಿಕ ಮಟ್ಟದಲ್ಲಿ ಭಾರತ ನಡೆಸುತ್ತಿರುವ ಸ್ನೇಹ ಪ್ರದರ್ಶನಕ್ಕೆ ಜಗತ್ತೇ ಆಶ್ಚರ್ಯ ವ್ಯಕ್ತಪಡಿಸುತ್ತಿದೆ. ಇದಕ್ಕೆ ಪ್ರಧಾನಿ ಮೋದಿ ಜಗತ್ತಿನಾದ್ಯಂತ ಪ್ರವಾಸ ನಡೆಸಿ ನೀಡುತ್ತಿರುವ ಶಕ್ತಿಯುತ ಅಭಿಮತಗಳೇ ಉದಾಹರಣೆ ಎಂದು ಅಕ್ಬರ್‌ ಹೇಳಿದರು. ಮಹಿಳಾ ಸಶಕ್ತೀಕರಣವನ್ನು ಉಲ್ಲೇಖೀಸಿದ ಸಚಿವರು, ಸ್ತ್ರೀಯರು ಸಾಮಾಜಿಕ, ಆರ್ಥಿಕವಾಗಿ ಸಬಲರಾಗುತ್ತಿದ್ದಾರೆ. 13 ಕೋಟಿ ಮುದ್ರಾ ಯೋಜನೆ ಫ‌ಲಾನುಭವಿಗಳಲ್ಲಿ ಶೇ. 80 ಮಹಿಳೆಯರು ಎಂದರು.

ಅಧ್ಯಯನ ಕೇಂದ್ರಕ್ಕೆ ಶ್ಲಾಘನೆ
ಶೈಕ್ಷಣಿಕ ಕೇಂದ್ರಗಳಲ್ಲಿ ಅಧ್ಯಯನ ಕೇಂದ್ರ ಆರಂಭಿಸುವುದರಿಂದ ಬೇರೆ ದೇಶಗಳ ಕುರಿತು ಜನ ಸಾಮಾನ್ಯರ ಜ್ಞಾನ ಹೆಚ್ಚಲಿದೆ. ನೆರೆ ರಾಷ್ಟ್ರಗಳ ಮಹತ್ವದ ತಿಳಿವಳಿಕೆ ವಿಚಾರದಲ್ಲಿ ಭಾರತದ ಸ್ಥಾನ ಏರುತ್ತಿದೆ. ಇಂತಹ ಪ್ರಯತ್ನಕ್ಕೆ ಶೈಕ್ಷಣಿಕ ಕೇಂದ್ರಗಳ ಅಧ್ಯಯನ ಸಹಕಾರಿಯಾಗಲಿದೆ ಎಂದರು.

ಮಾಹೆ ವಿ.ವಿ. ಕುಲಪತಿ ಡಾ| ಎಚ್‌. ವಿನೋದ ಭಟ್‌ ಸ್ವಾಗತಿಸಿ, ವಿಭಾಗದ ಮುಖ್ಯಸ್ಥ ಡಾ| ಅರವಿಂದಕುಮಾರ್‌ ಕಾರ್ಯಕ್ರಮ ನಿರ್ವಹಿಸಿದರು. ರಾಜಕೀಯ ವಿಶ್ಲೇಷಕ, ಪತ್ರಕರ್ತ ಶೇಷಾದ್ರಿಚಾರಿ ವಂದಿಸಿದರು. ಮಾಹೆ ಸಹಕುಲಾಧಿಪತಿ ಡಾ| ಎಚ್‌.ಎಸ್‌. ಬಲ್ಲಾಳ್‌, ಕುಲಸಚಿವ ಡಾ| ನಾರಾಯಣ ಸಭಾಹಿತ್‌, ಸಹಕುಲಪತಿ ಡಾ| ಪೂರ್ಣಿಮಾ ಬಾಳಿಗಾ ಉಪಸ್ಥಿತರಿದ್ದರು.

ಮಣಿಪಾಲದ ಶಿಕ್ಷಣಕ್ಕೆ ಜಗತ್ತಿನಲ್ಲಿ ‘ಹಸಿವು’
ನಾನು ವಿವಿಧ ದೇಶಗಳಿಗೆ ಭೇಟಿ ಕೊಟ್ಟಾಗ ಮಣಿಪಾಲದ ಶಿಕ್ಷಣ ಸಂಸ್ಥೆಗಳ ಹೆಸರು ಕೇಳಿಬರುತ್ತದೆ. ಭಾರತದ ಶಿಕ್ಷಣ ಅದರಲ್ಲೂ  ವಿಶೇಷವಾಗಿ ಮಾಹೆ ವಿ.ವಿ.ಯ ಶಿಕ್ಷಣಕ್ಕೆ ಜಗತ್ತಿನ ವಿವಿಧೆಡೆ ಕಂಡುಬರುತ್ತಿರುವ ಹಸಿವನ್ನು ನಾನು ವರ್ಣಿಸಲಾರೆ. ನಿಮಗೆ ಕೇಂದ್ರ ಸರಕಾರ ನೀಡಿರುವ ‘ಶ್ರೇಷ್ಠ ಶಿಕ್ಷಣ ಸಂಸ್ಥೆ’ ಸ್ಥಾನ ಅರ್ಹವಾಗಿದೆ. ಭಾರತದ ಶಿಕ್ಷಣ ಸಂಸ್ಥೆಗಳು ಹೆಸರಾಗಿರುವುದು ಶಿಕ್ಷಣದಿಂದಾಗಿ ವಿನಾ ಯಾವುದೇ ಸಿದ್ಧಾಂತಗಳ ಮಿಶ್ರಣದಿಂದಲ್ಲ.
– ಎಂ.ಜೆ. ಅಕ್ಬರ್‌

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.