ಕಾಪು ಬೀಚ್ ಪಾರ್ಕಿಂಗ್ ಏರಿಯಾದಲ್ಲಿ ಕಾಣಿಸಿಕೊಂಡ ಉಡ; ದಂಗಾದ ಜನತೆ
Team Udayavani, Sep 29, 2020, 8:00 PM IST
ಕಾಪು: ಮಂಗಳವಾರ ಮಧ್ಯಾಹ್ನ ಕಾಪು ಬೀಚ್ನ ಪಾರ್ಕಿಂಗ್ ಏರಿಯಾದಲ್ಲಿ ಉಡ (ಒಡು)ವೊಂದು ಅನಿರೀಕ್ಷಿತ ಎಂಬ ರೀತಿಯಲ್ಲಿ ಕಾಣಿಸಿಕೊಂಡಿದ್ದು, ಪಾರ್ಕಿಂಗ್ ಪ್ರದೇಶದ ಸುತ್ತೆಲ್ಲಾ ಸಂಚರಿಸಿ ಪಾರ್ಕಿಂಗ್ ಏರಿಯಾದ ಜನರನ್ನು ದಂಗಾಗುವಂತೆ ಮಾಡಿದೆ.
ಕಾಪು ಲೈಟ್ ಹೌಸ್ ನಿರ್ವಹಣಾ ಸಮಿತಿಯ ಸಿಬಂದಿ ಪ್ರಶಾಂತ್ ಕರ್ಕೇರ ಅವರು ಅರಣ್ಯ ಇಲಾಖೆಯ ಸಿಬಂದಿಗಳಿಗೆ ಮಾಹಿತಿ ನೀಡಿದ್ದು ಸ್ಥಳಕ್ಕೆ ಆಗಮಿಸಿದ ಅರಣ್ಯ ರಕ್ಷಕ ಮಂಜುನಾಥ್, ಅಭಿಲಾಷ್ ಅವರು ಸ್ಥಳೀಯರಾದ ಶಿವಾನಂದ ಪೂಜಾರಿ, ನಿತೇಶ್ ಕುಮಾರ್, ಚಂದ್ರಶೇಖರ ಬಂಗೇರ, ವಿನೋದ್ ಶ್ರೀಯಾನ್, ಗಣೇಶ್, ಮಹಮ್ಮದ್ ಇಕ್ಬಾಲ್ ಮೊದಲಾದವರ ಸಹಕಾರದೊಂದಿಗೆ ಉಡವನ್ನು ಸೆರೆ ಹಿಡಿಯಲಾಗಿದೆ.
ವಲಯ ಅರಣ್ಯಾಧಿಕಾರಿ ಕ್ಲಿಫರ್ಡ್ ಲೋಬೋ ಅವರ ಮಾರ್ಗದರ್ಶನದಲ್ಲಿ, ಕಾಪು ಉಪ ವಲಯ ಅರಣ್ಯಾಧಿಕಾರಿಗಳಾದ ಜೀವನ್ದಾಸ್ ಶೆಟ್ಟಿ, ಗುರುರಾಜ್ ಕೆ. ಅವರ ನೇತೃತ್ವದಲ್ಲಿ ಉಡವನ್ನು ವಶಕ್ಕೆ ಪಡೆದುಕೊಂಡು ಅರಣ್ಯ ಇಲಾಖೆಯ ಜೀಪಿನಲ್ಲಿ ಕೊಂಡೊಯ್ದು ಪಿಲಾರು ಅರಣ್ಯ ಪ್ರದೇಶದಲ್ಲಿ ಬಿಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ