ಬೋಟ್‌ ಕಾಣೆಯಾಗಿ 38 ದಿನ ಮಿಲಿಟರಿ ಕಾರ್ಯಾಚರಣೆಗೆ ಆಗ್ರಹ


Team Udayavani, Jan 22, 2019, 12:50 AM IST

missing.jpg

ಮಲ್ಪೆ: ಸುವರ್ಣ ತ್ರಿಭುಜ ಬೋಟ್‌ ಅವಘಡವಾಗಿರುವ ಬಗ್ಗೆ ಯಾವುದೇ ಸುಳಿವಿಲ್ಲ. ಅಹರಣವಾಗಿರುವ ಶಂಕೆಯೇ ಅಧಿಕವಾಗಿದ್ದು, ಕೇಂದ್ರ ಸರಕಾರವು ಮಹಾರಾಷ್ಟ್ರದ ಬಂದರು ಭಾಗದ ನದಿತೀರದಲ್ಲಿ ಮಿಲಿಟರಿ ಕಾರ್ಯಾಚರಣೆ ನಡೆಸಬೇಕು ಎಂದು ಮೀನುಗಾರರ ಕುಟುಂಬಗಳು ಆಗ್ರಹಿಸಿವೆ.

ಸುವರ್ಣ ತ್ರಿಭುಜ ಬೋಟ್‌, 7 ಮಂದಿ ಮೀನುಗಾರರು ನಾಪತ್ತೆಯಾಗಿ 38 ದಿನ ಕಳೆದಿವೆ. ನೌಕಾಪಡೆ ಹಡಗಿನ ಮೂಲಕ ಸಾಕಷ್ಟು ಕಾರ್ಯಾಚರಣೆ ನಡೆಸಿದರೂ ಮಹತ್ವದ ಸುಳಿವು ಲಭಿಸಿಲ್ಲ. ಮಿಲಿಟರಿ ಕಾರ್ಯಾಚರಣೆ ನಡೆಸುವಂತೆ ರಾಜ್ಯ ಸರಕಾರ ಮತ್ತು ಕೇಂದ್ರ ಸರಕಾರದಲ್ಲಿರುವ ನಮ್ಮ ಜನಪ್ರತಿನಿಧಿಗಳು ಕೇಂದ್ರಕ್ಕೆ ಒತ್ತಡ ಹೇರಬೇಕು ಎಂದು ಕುಟುಂಬದವರು ತಿಳಿಸಿದ್ದಾರೆ.

ಮಹಾರಾಷ್ಟ್ರದ ಅಸಹಕಾರ
ನದಿಗಳಲ್ಲಿ ಶೋಧ ಕಾರ್ಯ ವ್ಯವಸ್ಥಿತ ಮತ್ತು ಯೋಜನಾಬದ್ಧವಾಗಿ ನಡೆದಿಲ್ಲ. ಮಹಾರಾಷ್ಟ್ರ ಭಾಗದಲ್ಲಿ ಅಲ್ಲಿನ ಯಾವುದೇ ಇಲಾಖೆಗಳು ಕಾರ್ಯಾಚರಣೆಗೆ ಸೂಕ್ತ ಸಹಕಾರ ನೀಡಿಲ್ಲ. ಪೊಲೀಸರು ಬಂದರು ಸಮೀಪದ 500 ಮೀಟರ್‌ ದೂರಕ್ಕಷ್ಟೇ ತೆರಳಿ ವಾಪಸು ಬಂದಿದ್ದಾರೆ ಎಂದು ಕಾರ್ಯಾಚರಣೆಯಲ್ಲಿ ಪಾಲ್ಗೊಂಡ ಮೀನುಗಾರರು ಆರೋಪಿಸಿದ್ದಾರೆ.

ಬೋಟ್‌ ಢಿಕ್ಕಿ ಸಾಧ್ಯತೆ ಕಡಿಮೆ
ಭಾರತೀಯ ನೌಕಾಪಡೆಯ ಸೂಚನೆಯಂತೆ ರಾತ್ರಿ ಸಮುದ್ರದಲ್ಲಿ ಮೀನುಗಾರಿಕಾ ಬೋಟ್‌ಗಳಿಗೆ ಸಿಗ್ನಲ್‌ ಲೈಟ್‌ನ ನಿಯಮ ಇದೆ. ಬೋಟ್‌ ಟ್ರಾಲಿಂಗ್‌ನಲ್ಲಿರುವ ಬೋಟಿನ ಮುಂಭಾಗ ಮತ್ತು ಹಿಂಭಾಗದ ದೀಪ, ನಿಂತಿರುವ ಸಮಯದಲ್ಲಿ ಹಿಂಭಾಗ, ಮುಂಭಾಗ ಅಲ್ಲದೆ ಎಡ ಮತ್ತು ಬಲಬದಿಯಲ್ಲಿ ಲೈಟ್‌ ಉರಿಸಿರಬೇಕು.
ಬೋಟ್‌ಗಳ ದೀಪದ ಸೂಚನೆಯ ಆಧಾರದಲ್ಲಿ ಹಡಗುಗಳ ಸಂಚಾರ ನಡೆಯುತ್ತವೆ. ಹಾಗಾಗಿ ಹಡಗು ಢಿಕ್ಕಿಯಾಗಿರುವ ಸಾಧ್ಯತೆ ಕಡಿಮೆ ಎನ್ನುತ್ತಾರೆ ಆಳಸಮುದ್ರದ ಮೀನುಗಾರಿಕೆಯಲ್ಲಿ ನಿರತರಾದವರು.

ಊಟ ತಿಂಡಿ ಕೊಟ್ಟಿದ್ದಾರೋ?
ಅಪಹರಣಕಾರರು ನಮ್ಮವರಿಗೆ ಸರಿಯಾಗಿ ಊಟ ತಿಂಡಿ ಕೊಟ್ಟಿದ್ದಾರೋ? ಎಷ್ಟು ಚಿತ್ರ ಹಿಂಸೆ ನೀಡುತ್ತಿದ್ದಾರೆಯೋ? ಅವರು ಮನುಷ್ಯರಾ? ನನ್ನ ಕೈಗೆ ಸಿಗಬೇಕು. ತುಂಡು ತುಂಡು ಮಾಡಿ ಕತ್ತರಿಸಿ ಬಿಡುತ್ತಿದ್ದೆ 
ಎಂದು ನಾಪತ್ತೆಯಾದ ಮೀನುಗಾರ ದಾಮೋದರ ಅವರ ಅಕ್ಕ ರಮಣಿ ಆಕ್ರೋಶವನ್ನು ವ್ಯಕ್ತಪಡಿಸಿದರು. 
ಸಮುದ್ರದಲ್ಲಿ  ಹುಡುಕಾಟ ನಡೆಸಿದ್ದಾರೆ. ಭೂಭಾಗದಲ್ಲಿ ಪರಿಣಾಮಕಾರಿ ಹುಟುಕಾಟ ನಡೆದಿಲ್ಲ. ಸರಕಾರ ಭೂಸೇನೆಯನ್ನು ಕಳುಹಿಸಿ ಹುಡುಕಾಟ ನಡೆಸಿದರೆ ಉತ್ತಮ.
– ಉದಯ ಬಂಗೇರ 
(ದಾಮೋದರ ಅವರ ಭಾವ)

ಟಾಪ್ ನ್ಯೂಸ್

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

police crime

Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.