ಹಿಂದೂ ಸಂಖ್ಯೆ ಕುಸಿದ ಕಾರಣ ಜನಗಣತಿ ಬಹಿರಂಗವಾಗಿಲ್ಲ


Team Udayavani, Feb 15, 2020, 5:20 AM IST

14022020ASTRO07

ಉಡುಪಿ: ಭಾರತದಲ್ಲಿ ಹಿಂದೂಗಳ ಜನಸಂಖ್ಯೆ ಕುಸಿತ ಕಂಡು ಬಂದಿದೆ. ಹೀಗಾಗಿ 2011ರ ಜನಗಣತಿಯನ್ನೂ ಬಹಿರಂಗಪಡಿಸಿಲ್ಲ ಎಂದು ಚಿಂತಕ, ಪ್ರಾಧ್ಯಾಪಕ ಪ್ರೊ| ನಂದನ ಪ್ರಭು ಹೇಳಿದ್ದಾರೆ.

ಉಡುಪಿ ಆರೆಸ್ಸೆಸ್‌ ಕಾರ್ಯಾಲಯದ ಸಭಾಂಗಣದಲ್ಲಿ ಶುಕ್ರವಾರ “ಹಿಂದುತ್ವದ ಆವಶ್ಯಕತೆ- ಪೌರತ್ವದ ಅನಿವಾರ್ಯತೆ’ ವಿಷಯ ಕುರಿತು ಉಪನ್ಯಾಸ ನೀಡಿದ ಅವರು, ಹಿಂದೂಗಳ ಜನಸಂಖ್ಯೆ ಶೇ. 85 ಎನ್ನುತ್ತಿದ್ದಾರೆ. ಆದರೆ ವಾಸ್ತವದಲ್ಲಿ ಜನಸಂಖ್ಯೆ ಶೇ. 79ಕ್ಕೆ ಇಳಿದಿದೆ.ಇತರ ಮತೀಯರ ಸಂಖ್ಯೆ ಹೆಚ್ಚಿದೆ ಎನ್ನುವುದನ್ನು ಮುಚ್ಚಿಡಲು, ಹಿಂದೂ ಸಂಸ್ಕೃತಿ ಉಳಿಸುವುದು ಅಗತ್ಯ ಎಂಬ ಭಾವನೆ ಬರಬಹುದು ಎಂಬ ಕಾರಣಕ್ಕೆ 2011ರ ಜನಗಣತಿಯನ್ನು ಇಂದಿಗೂ ನಿಖರವಾಗಿ ಬಹಿರಂಗಪಡಿಸಿಲ್ಲ ಎಂದರು.

ಪೌರತ್ವ ತಿದ್ದುಪಡಿ ಮಸೂದೆಯನ್ನು ವಿರೋಧಿ ಸುವವರು ಮುಂದಿನ ಅಂಶಗಳನ್ನು ಗಮನಿಸಬೇಕು. ಇಲ್ಲಿನ ಮುಸ್ಲಿಮರಿಗೆ ಯಾವುದೇ ತೊಂದರೆ ಇಲ್ಲ. ಹೊರಗಿನಿಂದ ಬರುವವರು ಅರ್ಜಿ ಸಲ್ಲಿಸಿದರೆ ಕಾನೂನು ಪ್ರಕಾರ ಪೌರತ್ವ ನೀಡಲಾಗುತ್ತದೆ. ನೇಪಾಲದಿಂದ ಬಂದ ಹಿಂದೂಗಳು, ಶ್ರೀಲಂಕಾದ ತಮಿಳರು, ಟಿಬೆಟಿಯನ್‌ ಬೌದ್ಧರ ವಿಚಾರಗಳಲ್ಲಿ ಧಾರ್ಮಿಕ ಸಂಘರ್ಷ ಆಗಿರದೆ ಪಾಕಿಸ್ಥಾನ, ಬಾಂಗ್ಲಾದಲ್ಲಿ ಧಾರ್ಮಿಕ ಸಂಘರ್ಷದಿಂದ ಬಂದ ಅಲ್ಪಸಂಖ್ಯಾಕರಿಗೆ ಮಾತ್ರ ಪೌರತ್ವ ಕೊಡುವ ವಿಚಾರವಾಗಿದೆ ಎಂದರು.

ಹಿಂದುತ್ವ ರಾಷ್ಟ್ರದ ಅಸ್ಮಿತೆ
ಹಿಂದುತ್ವ ಎನ್ನುವುದು ಪ್ರತಿಕ್ರಿಯಾತ್ಮಕವಾದುದಲ್ಲ. ಇದು ರಾಷ್ಟ್ರದ ಅಸ್ಮಿತೆ (ಐಡೆಂಟಿಟಿ). ಪ್ರಪಂಚದ ಎಲ್ಲ ರಾಷ್ಟ್ರಗಳಲ್ಲಿಯೂ ಇದು ಇದೆ. ಭಾರತದ ರಾಷ್ಟ್ರೀಯತೆಯನ್ನು ಹಿಂದೂ ಐಡೆಂಟಿಟಿಯಿಂದ ಸುಮಾರು 2,000 ವರ್ಷಗಳಿಂದ ಗುರುತಿಸಲಾಗಿದೆ. ಅದಕ್ಕೂ ಹಿಂದೆ ಸನಾತನ ಎಂಬ ಹೆಸರಿತ್ತು ಎಂದು ಪ್ರಭು ವಿಶ್ಲೇಷಿಸಿದರು.

ಹಿಂದುತ್ವದಲ್ಲಿ ಸಾಂಸ್ಕೃತಿಕ, ಧಾರ್ಮಿಕ ಅಂಶಗಳೂ ಇವೆ. ಜತೆಗೆ ಜೀವನದೃಷ್ಟಿ- ವಿಶ್ವದೃಷ್ಟಿಯೂ ಇದೆ. ವೇದ ಪ್ರಾಮಾಣ್ಯವನ್ನು ಒಪ್ಪದ, ದೇವರನ್ನೂ ಒಪ್ಪದ ನಾಸ್ತಿಕರಿಗೂ ಹಿಂದುತ್ವದಲ್ಲಿ ಸ್ಥಾನವಿದೆ. ಇಸ್ಲಾಂ, ಕ್ರೈಸ್ತ ಮತಗಳಲ್ಲಿ ಪ್ರಭುತ್ವದ ಮೂಲಕ ಧಾರ್ಮಿಕ ಹಿಡಿತ ಸಾಧಿಸುವ ಕ್ರಮವಿದೆ ಎಂದರು.

ಆರೆಸ್ಸೆಸ್‌ ಜಿಲ್ಲಾ ಸಂಘಚಾಲಕ್‌ ಡಾ| ನಾರಾಯಣ ಶೆಣೈ, ನಗರ ಸಂಘಚಾಲಕ್‌ ರಾಮಚಂದ್ರ ಸನಿಲ್‌ ಉಪಸ್ಥಿತರಿದ್ದರು. ನಗರ ಬೌದ್ಧಿಕ್‌ ಪ್ರಮುಖ್‌ ಗಣೇಶ್‌ ಅಂಬಲಪಾಡಿ ಕಾರ್ಯಕ್ರಮ ನಿರ್ವಹಿಸಿದರು.

ಟಾಪ್ ನ್ಯೂಸ್

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.