ನಿರಾಲಂಬ ಪೂರ್ಣ ಚಕ್ರಾಸನ: 9ರ ತನುಶ್ರೀ ಗಿನ್ನೆಸ್‌ ವಿಶ್ವ ದಾಖಲೆ


Team Udayavani, Apr 8, 2018, 7:00 AM IST

19.jpg

ಉಡುಪಿ: ಉದ್ಯಾವರ ಪಿತ್ರೋಡಿಯ ಉದಯಕುಮಾರ್‌-ಸಂಧ್ಯಾ ದಂಪತಿ ಪುತ್ರಿ 9ರ ಹರೆಯದ ಬಾಲೆ ತನುಶ್ರೀ ಪಿತ್ರೋಡಿ ಅವರು ಎ. 7ರಂದು ಗಿನ್ನೆಸ್‌ ವಿಶ್ವ ದಾಖಲೆಯಲ್ಲಿ ಸ್ಥಾನ ಪಡೆದಿದ್ದಾರೆ. ಮುಖವನ್ನು ಮುಂದೆ ಮಾಡಿ ಎದೆಭಾಗವನ್ನು ನೆಲದಲ್ಲಿ ಸ್ಥಿರವಿರಿಸಿ ದೇಹದ ಉಳಿದ ಭಾಗಗಳನ್ನು ವರ್ತು ಲಾಕಾರದಲ್ಲಿ ತಿರುಗಿಸುವ ಯೋಗದ ನಿರಾಲಂಬ ಪೂರ್ಣ ಚಕ್ರಾಸನವನ್ನು ಒಂದು ನಿಮಿಷದಲ್ಲಿ 42 ಬಾರಿ ಮಾಡಿರುವ ತನುಶ್ರೀ, ಈ ಹಿಂದಿನ ಪ್ಯಾಲೆಸ್ತೇನ್‌ ದೇಶದ ಹುಡುಗನ ಗಿನ್ನೆಸ್‌ ದಾಖಲೆಯನ್ನು ಮುರಿದಿದ್ದಾರೆ. 2017 ಫೆಬ್ರವರಿಯಲ್ಲಿ ಜೋರ್ಡಾನ್‌ನಲ್ಲಿ ನಡೆದ ಗಿನ್ನೆಸ್‌ ದಾಖಲೆಯಲ್ಲಿ ಪ್ಯಾಲೆಸ್ತೀನ್‌ನ 12 ವರ್ಷದ ಬಾಲಕ ಮಹಮ್ಮದ್‌ ಅಲ್‌ ಶೇಖ್‌ ನಿಮಿಷಕ್ಕೆ 38 ಸುತ್ತು ಯೋಗಭಂಗಿ ಮಾಡಿದ್ದನು. ತನುಶ್ರೀ 42 ಸುತ್ತು ಮಾಡಿ ಗಿನ್ನೆಸ್‌ ಬುಕ್‌ ರೆಕಾರ್ಡ್‌ನಲ್ಲಿ ಹೆಸರು ದಾಖ
ಲಿಸಿಕೊಂಡಿದ್ದಾರೆ.

ಶನಿವಾರ ಪಿತ್ರೋಡಿಯ ವೆಂಕಟರಮಣ ನ್ಪೋರ್ಟ್ಸ್ ಕ್ಲಬ್‌ನವರ ಆಶ್ರಯದಲ್ಲಿ ಉಡುಪಿಯ ಅಮ್ಮಣಿ ರಾಮಣ್ಣ ಶೆಟ್ಟಿ ಸಭಾಭವನದಲ್ಲಿ ಗಿನ್ನೆಸ್‌ ಬುಕ್‌ ಆಫ್ ರೆಕಾರ್ಡ್‌ ಅಧಿಕಾರಿ ಮುಂಬಯಿಯ ಸ್ವಪ್ನಿಲ್‌ ಡಾಂಗ್ರೀಕರ್‌ ಅವರೆದುರು 1 ನಿಮಿಷದ ಯೋಗಭಂಗಿಯನ್ನು ತನುಶ್ರೀ ಪ್ರದರ್ಶಿಸಿದರು. ಇದನ್ನು ದಾಖಲೀಕರಿಸಿಕೊಂಡು ಪರಿಶೀಲಿಸಿಕೊಂಡು 30 ನಿಮಿಷದ ಆನಂತರ ತನುಶ್ರೀ ಗಿನ್ನೆಸ್‌ ದಾಖಲೆ ಮಾಡಿರುವುದನ್ನು ಅಧಿಕಾರಿ ಘೋಷಿಸಿದರು. ತನುಶ್ರೀಗೆ ಗಿನ್ನೆಸ್‌ ಬುಕ್‌ ಆಫ್ ರೆಕಾರ್ಡ್‌ನ ದಾಖಲೆಯನ್ನು ಡಾಂಗ್ರೀಕರ್‌ ಹಸ್ತಾಂತರಿಸಿದರು. ತನುಶ್ರೀ ಕಳೆದ ವರ್ಷ ಯೋಗದ ನಿರಾಲಂಬ ಪೂರ್ಣ ಚಕ್ರಾಸನವನ್ನು ಒಂದು ನಿಮಿಷದಲ್ಲಿ 19 ಬಾರಿ ಮಾಡಿ ಗೋಲ್ಡನ್‌ ಬುಕ್‌ ಆಫ್ ರೆಕಾರ್ಡ್‌ ಸಾಧನೆ ಮಾಡಿದ್ದರು.

ತನುಶ್ರೀ ಅವರ ತಂದೆ ಉದಯ ಕುಮಾರ್‌, ತಾಯಿ ಸಂಧ್ಯಾ, ಗಣ್ಯರಾದ ಜಯಕರ ಶೆಟ್ಟಿ ಇಂದ್ರಾಳಿ, ನಾಗೇಶ್‌ ಉದ್ಯಾವರ, ಪ್ರವೀಣ್‌ ಪೂಜಾರಿ, ಸಾಧು ಸಾಲ್ಯಾನ್‌, ವಿನಯ ಕರ್ಕೇರ, ನಿರುಪಮಾ ಪ್ರಸಾದ್‌, ಗಿರಿಜಾ ತಲ್ಲೂರು ಶಿವರಾಮ ಶೆಟ್ಟಿ, ಎನ್‌.ಟಿ. ಅಮೀನ್‌, ಸುಕುಮಾರ್‌, ನಾಗರಾಜ ರಾವ್‌, ರವಿ, ಶ್ಯಾಮ್‌ ಮಲ್ಪೆ, ದಯಾಕರ್‌, ಉಮೇಶ್‌ ಕರ್ಕೇರ, ನಾರಾಯಣ, ಗಿರೀಶ್‌ ಸುವರ್ಣ ಮತ್ತಿತರರು ಉಪಸ್ಥಿತರಿದ್ದರು. ಸತೀಶ್ಚಂದ್ರ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ಸಾಧನೆ ದೇಶಕ್ಕೆ ಅರ್ಪಣೆ
ಬೆಳಗ್ಗೆ, ಸಂಜೆ, ರಾತ್ರಿ ನಾಲ್ಕು ತಿಂಗಳ ಪರ್ಯಂತ ಪ್ರಯತ್ನದಿಂದ ಈ ಸಾಧನೆ ಮಾಡಿದ್ದೇನೆ. ಈ ಸಾಧನೆಯನ್ನು ನಾನು ದೇಶಕ್ಕೆ ಅರ್ಪಿಸುತ್ತೇನೆ. ತಂದೆ, ತಾಯಿಯೇ ನನಗೆ ಗುರುಗಳು. ಮೊಬೈಲ್‌ ಯೂಟ್ಯೂಬ್‌ ವೀಡಿಯೋ ನೋಡಿ ಯೋಗ ಭಂಗಿಯನ್ನು ಕಲಿಯುತ್ತಿದ್ದೆ. 

ಹಿಂದಿನ ದಾಖಲೆ
ಪ್ಯಾಲೇಸ್ತೇನ್‌ನ 12 ವರ್ಷದ ಬಾಲಕ ಮಹಮ್ಮದ್‌ ಅಲ್‌ ಶೇಖ್‌ – ನಿಮಿಷಕ್ಕೆ 38 ಸುತ್ತು. 
ಈಗಿನ ದಾಖಲೆ 
ಭಾರತದ ಉಡುಪಿ ಜಿಲ್ಲೆ ತನುಶ್ರೀ ಪಿತ್ರೋಡಿ  – ನಿಮಿಷಕ್ಕೆ 42 ಸುತ್ತು.

ಟಾಪ್ ನ್ಯೂಸ್

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.