ಭಾರತ ವಿಶ್ವಗುರುವಾಗಲು ಸಂತರ ಕೊಡುಗೆಯೂ ಅಪಾರ: ಡಾ| ಕಲ್ಲಡ್ಕ ಪ್ರಭಾಕರ ಭಟ್


Team Udayavani, Jun 2, 2019, 11:09 AM IST

prabhakar-bhat

ಪಡುಬಿದ್ರಿ: ಭಾರತವು ಮುಂದೆ ವಿಶ್ವಗುರುವೆನಿಸಲು ಸಂತರ ಕೊಡುಗೆಯೂ ಅಪಾರವಾಗಿರುತ್ತದೆ. ಬ್ರಿಟಿಷ್‌ ಅಧಿಕಾರಿ ಮೆಕಾಲೆ ಕೆಡಿಸಿರುವಂತಹಾ ಭಾರತೀಯತೆಯು ನಮ್ಮ ದೇಶದಲ್ಲಿ ಅದಮಾರು ಶಿಕ್ಷಣ ಸಂಸ್ಥೆಗಳನ್ನು ಹುಟ್ಟು ಹಾಕಿರುವ ಶ್ರೀ ವಿಬುಧೇಶರು ಹಾಗೂ ಅದನ್ನು ಮುಂದುವರಿಸಿಕೊಂಡು ಬಂದಿರುವ ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದರ ಶಿಕ್ಷಣ ಸಂಸ್ಥೆಗಳಲ್ಲಿನ ಶಿಕ್ಷಣ ವ್ಯವಸ್ಥೆಗಳಿಂದ ಇಂದು ಉಳಿದುಕೊಂಡಿದೆ. ಇಂತಹವರಿಂದ ಜಗತ್ತಿಗೇ ಮಂಗಳವಾಗಲಿದೆ ಎಂದು ಪುತ್ತೂರು ವಿವೇಕಾನಂದ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ | ಕಲ್ಲಡ್ಕ ಪ್ರಭಾಕರ ಭಟ್ ಹೇಳಿದರು.

ಅವರು ಜೂ. 1ರಂದು ಸುಮಾರು 2.5ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಶ್ರೀ ಅದಮಾರು ಮಠ ಶಿಕ್ಷಣ ಸಂಸ್ಥೆಗಳ ಆಡಳಿತಕ್ಕೊಳಪಟ್ಟ ಅದಮಾರು ಪೂರ್ಣಪ್ರಜ್ಞ ಪ. ಪೂ. ಕಾಲೇಜಿನ ನೂತನ ತರಗತಿ ಕೊಠಡಿ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.

ಭಾರತೀಯರು ಜಗತ್ತಿನಲ್ಲೇ ಶ್ರೇಷ್ಠರಿದ್ದಾರೆ. ನಮಗೆ ಕೀಳರಿಮೆ ಬೇಡ. ನಮ್ಮ ಶಕ್ತಿಯನ್ನು ಮರೆಯದಿರೋಣ. ಎಲ್ಲಾ ಕ್ಷೇತ್ರಗಳಲ್ಲೂ ನಾವು ಸಾವಿರಾರು ವರ್ಷಗಳಿಂದಲೂ ನಮ್ಮ ಛಾಪನ್ನು ಮೂಡಿಸಿದ್ದೇವೆ. ನಾವು ಎಲ್ಲರಿಗೂ ಆಶ್ರಯ ಕೊಟ್ಟಿದ್ದೇವೆ. ಎಲ್ಲರಿಂದಲೂ ಮನ್ನಣೆಯನ್ನೂ ಗಳಿಸಿಕೊಂಡಿದ್ದೇವೆ. ನಮ್ಮ ಹಿಂದೂ ಧರ್ಮದ ಮರ್ಮವೇ ಜಗತ್ತಿಗೇ ಒಳ್ಳೆಯದಾಗಲಿ ಎಂದು ಹಾರೈಸುವುದಾಗಿದೆ. ಹಾಗಾಗಿ ಮುಂದೆ ಭಾರತವು ಸೂಪರ್‌ ಪವರ್‌ ಆಗುವುದಲ್ಲ. ಭಾರತವು ಮುಂದಿನ ದಿನಗಳಲ್ಲಿ ವಿಶ್ವಗುರುವಾಗಲಿದೆ. ಯುವ ವಿದ್ಯಾರ್ಥಿಗಳು ಈ ನಿಟ್ಟಿನಲ್ಲಿ ಪರಿಪೂರ್ಣ ಶಿಕ್ಷಣ ಪಡೆದು ತಮ್ಮದಾದ ಉತ್ತಮ ಕೊಡುಗೆಯನ್ನು ನೀಡಬೇಕು ಎಂದೂ ಪ್ರಭಾಕರ ಭಟ್ ವಿವರಿಸಿದರು.

ನಮ್ಮ ವಿದ್ಯಾರ್ಥಿಗಳೂ ಪೂರ್ಣ ಪ್ರಜ್ಞರಾಗುತ್ತಾರೆ: ಶ್ರೀ ವಿಶ್ವಪ್ರಿಯ ತೀರ್ಥರು

ಅಧ್ಯಾಪಕರನ್ನೂ ಪರಿಪೂರ್ಣ ಶಿಕ್ಷಕರೆಂಬ ಪರಿಧಿಗೆ ತಲುಪಿಸುವವನೂ ವಿದ್ಯಾರ್ಥಿಯೇ ಆಗಿದ್ದು ಪ್ರಶ್ನೆಯ ಮೇಲೆ ಪ್ರಶ್ನೆಯನ್ನು ಕೇಳಿಕೊಂಡು ತಮಗೆ ಅರ್ಥವಾಗದ್ದನ್ನು ಕೇಳಿ ಅರಿತುಕೊಂಡು ನಮ್ಮ ವಿದ್ಯಾರ್ಥಿಗಳೂ ಪೂರ್ಣಪ್ರಜ್ಞರೂ, ಅಭಿನಂದನಾರ್ಹರೂ ಆಗುತ್ತಾರೆ. ಅಧ್ಯಾಪಕರನ್ನು ಒಳ್ಳೆಯವನನ್ನಾಗಿಸುವ ಗುಣ, ಜವಾಬ್ದಾರಿಯು ನಮ್ಮ ವಿದ್ಯಾರ್ಥಿಗಳಲ್ಲಿದೆ. ಇದು ಅದಮಾರು ಶಿಕ್ಷಣ ಸಂಸ್ಥೆಗಳ ಯಶಸ್ಸಿನ ಗುಟ್ಟು ಎಂದು ಶ್ರೀ ಅದಮಾರು ಮಠ ಶಿಕ್ಷಣ ಮಂಡಳಿಯ ಅಧ್ಯಕ್ಷ, ಶ್ರೀ ಅದಮಾರು ಮಠಾಧೀಶ ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದರು ಹೇಳಿದರು.

ಚಿಂತನೆಯ ಆಯಾಮವನ್ನು ಬದಲಿಸಿ ಕೊಳ್ಳಿರಿ: ಶ್ರೀ ಈಶಪ್ರಿಯ

ತೀರ್ಥ ಶ್ರೀಪಾದರು

ವಿದ್ಯಾರ್ಥಿಗಳು ತಮ್ಮ ಚಿಂತನೆಯ ಆಯಾಮವನ್ನು ಬದಲಿಸಿಕೊಳ್ಳಿರಿ. ವಿಧುರ ನೀತಿಯನ್ವಯ ಕೋಪ, ನಾಚಿಕೆ, ಹರ್ಷ, ದರ್ಪಗಳು ಬೇಕಾದಾಗ ಆಯಾಯ ರೀತಿಯಲ್ಲಿ ಉತ್ತಮ ಪ್ರಯೋಜನ ಲಭಿಸುವಂತಾಗುವಲ್ಲಿ ಬಳಸಿಕೊಳ್ಳಲು ತಾವು ಅರಿತುಕೊಂಡು ಸದ್ವಿದ್ಯಾ ಪಾರಂಗತರಾಗಿರಿ ಎಂದು ಶ್ರೀ ಅದಮಾರು ಮಠ ಶಿಕ್ಷಣ ಮಂಡಳಿಯ ಉಪಾಧ್ಯಕ್ಷ, ಅದಮಾರು ಕಿರಿಯ ಶ್ರೀಪಾದರಾದ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು ಹೇಳಿದರು.

ಇನ್ನೋರ್ವ ಮುಖ್ಯ ಅತಿಥಿ ನಿವೃತ್ತ ರಾಷ್ಟ್ರ ಪ್ರಶಸ್ತಿ ವಿಜೇತ ಶಿಕ್ಷಕ ಕುದಿ ವಸಂತ ಶೆಟ್ಟಿ ಮಾತನಾಡಿ ವಿದ್ಯಾರ್ಥಿಗಳಲ್ಲಿ ನಮ್ರತೆ, ಚಿಂತನಾಶೀಲತೆಗಳಿರಲಿ. ದೂರದೃಷ್ಟಿಯೊಂದಿಗೆ ಗುಣವಂತರಾಗಿ ಇಂತಹಾ ಉತ್ತಮ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳಾಗಿರುವುದಕ್ಕೆ ಹಮ್ಮೆ ಪಟ್ಟುಕೊಳ್ಳಿರೆಂದರು. ಅದಮಾರು ಪ. ಪೂ. ಕಾಲೇಜಿನ ಪ್ರಾಂಶುಪಾಲ ರಾಮಕೃಷ್ಣ ಪೈ ಸಂದರ್ಭೋಚಿತವಾಗಿ ಮಾತನಾಡಿದರು.

ಪಿಯುಸಿಯಲ್ಲಿ ರಾಜ್ಯಕ್ಕೇ 7ನೇ ಸ್ಥಾನಗಳಿಸಿದ ಪ್ರತಿಭಾನ್ವಿತ ವಿದ್ಯಾರ್ಥಿಗಳಾದ ವೈಷ್ಣವಿ ವೈ., ಶಿಶಿರ್‌ ಭಟ್, ಸಿಇಟಿ ರ್‍ಯಾಂಕ್‌ ವಿಜೇತ ಸಂಹಿತಾ ಆರ್‌. ಭಟ್ ಮತ್ತಿತರ ವಿದ್ಯಾರ್ಥಿಗಳನ್ನು ಶ್ರೀಪಾದರು ಸಮ್ಮಾನಿಸಿದರು. ಅದಮಾರು ಮಠ ಶಿಕ್ಷಣ ಸಂಸ್ಥೆಗಳ ವಿವಿಧೆಡೆಗಳ ಕಾರ್ಯದರ್ಶಿಗಳನ್ನು, ಶಿಕ್ಷಣವೇತ್ತರನ್ನು ಸಮ್ಮಾನಿಸಲಾಯಿತು. ಸುಮಾರು 5.75ಲಕ್ಷ ರೂ. ಸಹಾಯಧನ, ಸಮವಸ್ತ್ರ ವಿತರಣೆ, ವಿದ್ಯಾರ್ಥಿವೇತನವನ್ನು ಅದಮಾರು ಶಿಕ್ಷಣ ಮಂಡಳಿಯ ಮೂಲಕ ವಿತರಿಸಲಾಯಿತು.

ಅದಮಾರು ಮಠ ಶಿಕ್ಷಣ ಮಂಡಳಿಯ ಬೆಂಗಳೂರು ಕಾರ್ಯಾಲಯದ ಕಾರ್ಯದರ್ಶಿಗಳಾದ ಡಾ | ಕೆ. ಶ್ರೀಹರಿ ಭಟ್ ಸ್ವಾಗತಿಸಿದರು. ಕನ್ನಡ ಪ್ರಾಧ್ಯಾಪಕ ದೇವಿಪ್ರಸಾದ್‌ ಬೆಳ್ಳಿಬೆಟ್ಟು ಕಾರ್ಯಕ್ರಮ ನಿರ್ವಹಿಸಿದರು. ಅದಮಾರು ಮಠ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ, ನ್ಯಾಯವಾದಿ ಪ್ರದೀಪ್‌ ಕುಮಾರ್‌ ವಂದಿಸಿದರು.

ಟಾಪ್ ನ್ಯೂಸ್

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ ಅಡಿಗೆ ಸಿಲುಕಿದ ಬೈಕ್; ಯಕ್ಷಗಾನ ಕಲಾವಿದ ಸ್ಥಳದಲ್ಲೇ ಮೃತ್ಯು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.