ಕುಸಿದು ವರ್ಷ ಕಳೆದರೂ ದುರಸ್ತಿಯಾಗದ ಆಯರೆಬೆಟ್ಟು ಮುಳುಗು ಸೇತುವೆ
Team Udayavani, May 26, 2019, 6:10 AM IST
ಅಜೆಕಾರು: ವರಂಗ ಗ್ರಾ.ಪಂ. ವ್ಯಾಪ್ತಿಯ ಅಂಡಾರು ಗ್ರಾಮದ ಆಯರೆಬೆಟ್ಟು ಪರಿಸರದ ಮಳುಗು ಸೇತುವೆ ಕಳೆದ ವರ್ಷ ಮಳೆಗಾಲದಲ್ಲಿ ಸುರಿದ ಭಾರೀ ಮಳೆಗೆ ಕುಸಿತಗೊಂಡಿದ್ದು ಇನ್ನೂ ದುರಸ್ತಿಕಂಡಿಲ್ಲ. ಹೊಸ ಸೇತುವೆ ನಿರ್ಮಾಣಕ್ಕೆ ಅನುದಾನವೂ ಬಿಡುಗಡೆಗೊಂಡಿಲ್ಲ.
ಈ ಮಳೆಗಾಲದಲ್ಲಿ ಸೇತುವೆ ಒಂದು ವೇಳೆ ಕೊಚ್ಚಿ ಹೋದಲ್ಲಿ ಪೈತಾಳ, ಆಯರೆಬೆಟ್ಟು, ಪಕ್ಕಿಬೈಲು ಸೇರಿದಂತೆ ಹಲವು ಪ್ರದೇಶಗಳ ನಾಗರಿಕರಿಗೆ ಸಂಚಾರ ಸಂಪರ್ಕ ಕಡಿತಗೊಳ್ಳಲಿದೆ.
ಸುಮಾರು 2 ದಶಕಗಳ ಹಿಂದೆ ನಿರ್ಮಾಣವಾದ ಈ ಮುಳುಗು ಸೇತುವೆಯು ಸ್ಥಳೀಯರ ಸಂಪರ್ಕದ ಏಕೈಕ ರಸ್ತೆ. ಈ ಪ್ರದೇಶದಲ್ಲಿ ಮಲೆಕುಡಿಯ ಸಮುದಾಯ ಸೇರಿದಂತೆ ನೂರಾರು ಕುಟುಂಬಗಳು ವಾಸಿಸುತ್ತಿವೆ. ಆಯರೆಬೆಟ್ಟು, ಪೈತಾಳ ದರ್ಖಾಸು, ಪರಿಶಿಷ್ಟ ಪಂಗಡ ಕಾಲನಿ ಹಾಗೂ ಪಕ್ಕಿಬೈಲು ಶಾಲೆಗೆ ಹೋಗುವ ವಿದ್ಯಾರ್ಥಿಗಳಿಗೆ ಈ ಸೇತುವೆ ಸೇತುವೆಯೇ ಅಧಾರ.
ಪಶ್ಚಿಮ ಘಟ್ಟ ಪ್ರದೇಶದಲ್ಲಿ ಸುರಿಯುವ ಭಾರೀ ಮಳೆಗೆ ಪ್ರವಾಹ ಬಂದ ವೇಳೆ ಮುಳುಗು ಸೇತುವೆ ಕುಸಿತಗೊಂಡಿದ್ದರೂ ದುರಸ್ತಿ ಕಾಣದ ಕಾರಣ ಈ ಬಾರಿ ಮಳೆಗಾಲಕ್ಕೆ ಕುಸಿತಗೊಂಡ ಪ್ರದೇಶದ ಮಣ್ಣು ಮತ್ತೆ ಕೊಚ್ಚಿ ಹೋಗುವ ಸಂಭವ ಹೆಚ್ಚಾಗಿದೆ.
ಕುಸಿತಗೊಂಡ ತತ್ಕ್ಷಣ ಸ್ಥಳೀಯರು ಜನಪ್ರತಿನಿ ಧಿಗಳಿಗೆ ಹಾಗೂ ಇಲಾಖೆಯ ಅಧಿಕಾರಿಗಳಿಗೆ ಮನವಿ ಮಾಡಿದ್ದರೂ ಯಾವುದೇ ಪ್ರಗತಿ ಕಂಡಿಲ್ಲ. ಇದು ಸ್ಥಳೀಯರ ಆಕ್ರೋಶಕ್ಕೆ ಕರಣವಾಗಿದೆ.
ಮುಳುಗು ಸೇತುವೆಗೆ ಮುಕ್ತಿ ನೀಡಿ ವಿಶಾಲ ಸೇತುವೆ ನಿರ್ಮಿಸುವಂತೆ ಕಳೆದ ಹಲವು ವರ್ಷಗಳಿಂದ ಮನವಿ ಮಾಡುತ್ತಾ ಬಂದಿದ್ದಾರೆ. ಕೆಲ ವರ್ಷಗಳ ಹಿಂದೆ ಮೋರಿ ಅಳವಡಿಸಿ ಮುಳುಗು ಸೇತುವೆಯ ಎತ್ತರ ಏರಿಸುವ ಯೋಜನೆ ರೂಪಿಸಲಾಗಿತ್ತು. ಆದರೆ ಇದು ತಾತ್ಕಲಿಕ ವ್ಯವಸ್ಥೆಯಾಗಿರುವುದನ್ನು ಮನಗಂಡ ಸ್ಥಳೀಯರು ವಿಶಾಲ ಸೇತುವೆಗೆ ಬೇಡಿಕೆಯಿಟ್ಟಿದ್ದರು.
ಅಪಾಯಕಾರಿ
ಮೊದಲೇ ಇದು ಮುಳುಗು ಸೇತುವೆಯಾಗಿದ್ದು ಈಗ ಕುಸಿತಬೆರೆ ಕಂಡಿರುವುದು ತೀರ ಅಪಾಯಕಾರಿ ಎಂದೆನಿಸಿದೆ. ಸೇತುವೆ ಪಕ್ಕದಲ್ಲಿಯೇ ಕಿರಿಯ ಪ್ರಾಥಮಿಕ ಶಾಲೆಯಿದೆ. ಇಲ್ಲಿನ ವಿದ್ಯಾರ್ಥಿಗಳು ಈ ಅಪಾಯಕಾರಿ ಸೇತುವೆ ಮೇಲೆಯೇ ಮಳೆಗಾಲದಲ್ಲೂ ಸಂಚರಿಸಬೇಕಾದ ಅನಿವಾರ್ಯತೆ ಇದೆ.
ಈಗಾಗಲೇ ಬೈಕ್ ಸವಾರರು ಹಾಗೂ ಸ್ಥಳೀಯರು ಹಲವು ಬಾರಿ ನೀರಿನ ಸೆಳೆತಕ್ಕೆ ಕೊಚ್ಚಿ ಹೋಗಿದ್ದರಾದರೂ ಇಲ್ಲಿನ ಸ್ಥಳೀಯರ ಸಮಯ ಪ್ರಜ್ಞೆಯಿಂದ ಯಾವುದೇ ಪ್ರಾಣಾಪಾಯವಾಗಿಲ್ಲ.
ಇನ್ನಾದರೂ ಜನಪ್ರತಿನಿಧಿಗಳು ಹಾಗೂ ಇಲಾಖೆಯ ಅಧಿಕಾರಿಗಳು ಸ್ಥಳೀಯರ ಸಮಸ್ಯೆಯನ್ನು ಮನಗಂಡು ತ್ವರಿತವಾಗಿ ಸೇತುವೆ ದುರಸ್ತಿ ನಡೆಸಿ ಮುಂದಿನ ದಿನಗಳಲ್ಲಿ ವಿಶಾಲ ಸೇತುವೆಗೆ ಅನುದಾನ ಒದಗಿಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
MUST WATCH
ಹೊಸ ಸೇರ್ಪಡೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್ಕಮ್ ಹೊಟೇಲ್ನಲ್ಲಿ ವ್ಯವಸ್ಥೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್