ಅನುದಾನ ಬಳಕೆಯಲ್ಲಿ ರಾಜ್ಯ ಸಂಸದರ ನಿರುತ್ಸಾಹ

ಸಂಸದರ ನಿಧಿಗೆ ಅನುದಾನ ಹಂಚಿಕೆಯಲ್ಲಿ ಕೇಂದ್ರದಿಂದಲೂ ವಿಳಂಬ

Team Udayavani, Dec 17, 2019, 5:01 AM IST

RS

ಸಾಂದರ್ಭಿಕ ಚಿತ್ರ.

ಉಡುಪಿ: ಲೋಕಸಭಾ ಕ್ಷೇತ್ರವಾರು ಅಭಿವೃದ್ಧಿಗಾಗಿ ಕೇಂದ್ರ ಸರಕಾರದಿಂದ ಬಿಡುಗಡೆಯಾಗುವ ಸಂಸದರ ಪ್ರದೇಶಾಭಿವೃದ್ಧಿ ಅನುದಾನವನ್ನು ಬಳಸಿಕೊಳ್ಳಲು ರಾಜ್ಯದ ಸಂಸದರು ವಿಫ‌ಲರಾಗುತ್ತಿದ್ದಾರೆ. ಇದಕ್ಕೆ ಪೂರಕ ಎಂಬಂತೆ 2014ರಿಂದ 2019ರ ಅವಧಿಯಲ್ಲಿ 700 ಕೋ.ರೂ. ಪೈಕಿ ಕೇಂದ್ರದಿಂದ 452.50 ಕೋ.ರೂ. ಮಾತ್ರ ಬಿಡುಗಡೆಯಾಗಿದೆ.

ಈ ಪೈಕಿ 24 ಕ್ಷೇತ್ರಗಳ ಸಂಸದರಿಗೆ ಕೆಲವು ತಿಂಗಳುಗಳ ಹಿಂದೆಯಷ್ಟೇ 2.5 ಕೋ.ರೂ.ನಂತೆ ಒಟ್ಟು 60 ಕೋ.ರೂ.ಗಳನ್ನು ಬಿಡುಗಡೆ ಮಾಡಲಾಗಿದೆ.

ಓರ್ವ ಸಂಸದರಿಗೆ ವಾರ್ಷಿಕ 5 ಕೋ.ರೂ.ನಂತೆ ಒಟ್ಟು 25 ಕೋ.ರೂ. ಅನುದಾನ ಮೀಸಲಿರಿಸಲಾಗುತ್ತದೆ. ರಾಜ್ಯದಲ್ಲಿ ಅತೀ ಹೆಚ್ಚು ಅನುದಾನ ಬಳಕೆ ಮಾಡಿರುವ ಕ್ಷೇತ್ರ ಚಾಮರಾಜನಗರ. ಈ ಕ್ಷೇತ್ರದ ಸಂಸದರು 22.50 ಕೋ.ರೂ. ಸದ್ಬಳಕೆ ಮಾಡಿ ಪ್ರಥಮ ಸ್ಥಾನದಲ್ಲಿದ್ದಾರೆ. ಉಳಿದಂತೆ ಬೆಂಗಳೂರು ಉತ್ತರ, ಚಿಕ್ಕೋಡಿ, ದಾವಣಗೆರೆ ಕ್ಷೇತ್ರದಸಂಸದರು ತಲಾ 20 ಕೋಟಿ ರೂ.ಗಳನ್ನು ಪ್ರದೇಶಾಭಿವೃದ್ಧಿಗಾಗಿ ಬಳಸಿಕೊಂಡಿದ್ದಾರೆ.

28 ಸಂಸದರ ಪೈಕಿ 8 ಸಂಸದರು ಬಳಸಿಕೊಂಡದ್ದು ತಲಾ 12.50 ಕೋ.ರೂ. ಮಾತ್ರ. ಬೆಂಗಳೂರುದ., ಬೀದರ್‌, ಬಿಜಾಪುರ, ಹಾಸನ, ಉ.ಕ., ಮಂಡ್ಯ, ರಾಯಚೂರು, ಬೆಂಗಳೂರು ಸೆಂಟ್ರಲ್‌ ಕ್ಷೇತ್ರದ ಸಂಸದರು ಹಿಂದೆ ಇದ್ದಾರೆ.

ಕರಾವಳಿ ಸಂಸದರು ಮುಂದು
ಕರಾವಳಿಯ ದ.ಕ. ಮತ್ತು ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಸಂಸದರು ತಲಾ 25 ಕೋ.ರೂ. ಅನುದಾನದಲ್ಲಿ 20 ಕೋ.ರೂ.ಗಳಷ್ಟು ಬಳಕೆ ಮಾಡಿದ್ದಾರೆ. ತಲಾ 5 ಕೋ.ರೂ.ಗಳಷ್ಟು ಅನುದಾನ ಕೇಂದ್ರದಿಂದ ಬರಲು ಬಾಕಿಯಿದ್ದು, ಆಡಿಟ್‌ ವರದಿ ಆಕ್ಷೇಪ ಹಿನ್ನೆಲೆಯಲ್ಲಿ ತುಸು ವಿಳಂಬವಾಗಿದೆ. ಈ ಎಲ್ಲದರ ನಡುವೆ 2019-20ನೇ ಸಾಲಿನ ಅನುದಾನಕ್ಕಾಗಿ 2019ರಿಂದ 2024ನೇ ನಿಧಿ ಖಾತೆ ತೆರೆಯುವ ಪ್ರಕ್ರಿಯೆ ನಡೆಯುತ್ತಿದೆ.

ಗುತ್ತಿಗೆದಾರರಿಗೆ ಸಂಕಷ್ಟ
ಸಂಸದರ ಪ್ರದೇಶಾಭಿವೃದ್ಧಿ ನಿಧಿಯಡಿ ಕಾಮಗಾರಿ ನಿರ್ವಹಿಸಿದ ಗುತ್ತಿಗೆದಾರರು ಬಿಲ್‌ ಸಲ್ಲಿಸಿ ಹಲವಾರು ವರ್ಷಗಳು ಕಳೆದರೂ ಹಣ ಬಾರದೆ ಕಾಲ ಕಳೆಯುವಂತಾಗಿದೆ. ಇದರಿಂದ ಹೊಸ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಅವರು ಹಿಂದೇಟು ಹಾಕುತ್ತಿದ್ದಾರೆ. ಬಾಕಿ ಹಣ ಬಾರದಿರುವುದು ಕಳಪೆ, ವಿಳಂಬ ಕಾಮಗಾರಿಗೂ ಕಾರಣವಾಗುತ್ತಿದೆ.

ಹೊಸ ಅನುದಾನ
ಸಂಸದರ ನಿಧಿ ಬಳಕೆಗೆ ಸಂಬಂಧಿಸಿ ಜಿಲ್ಲಾಡಳಿತ ಸಲ್ಲಿಸಿದ ಆಡಿಟ್‌ ವರದಿ ಆಕ್ಷೇಪ ಹಿನ್ನೆಲೆಯಲ್ಲಿ ಪರಿಷ್ಕರಿಸಿ ಸಲ್ಲಿಸಲಾಗಿದೆ. ಕಾಮಗಾರಿ ಪ್ರಸ್ತಾವನೆಗಳಿಗೆ ಜಿಲ್ಲಾಡಳಿತದಿಂದ ಆಡಳಿತಾತ್ಮಕ ಅನುಮೋದನೆ ನೀಡಲಾಗುತ್ತಿದೆ. 2019ರಿಂದ 2024ನೇ ಸಾಲಿನ ಸಂಸದರ ಪ್ರತ್ಯೇಕ ಖಾತೆ ತೆರೆದಿದ್ದು, ಶೀಘ್ರವೇ ಹಳೆ ಬಾಕಿ ಸಹಿತ ಹೊಸ ಅನುದಾನ ಬಿಡುಗಡೆಯಾಗಲಿದೆ.
– ಬಿ. ಸದಾಶಿವ ಪ್ರಭು
ಅಪರ ಜಿಲ್ಲಾಧಿಕಾರಿ, ಉಡುಪಿ

-ಪುನೀತ್‌ ಸಾಲ್ಯಾನ್‌

ಟಾಪ್ ನ್ಯೂಸ್

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.