ಸಮುದ್ರ ನೀರನ್ನು ಸಿಹಿನೀರಾಗಿ ಪರಿವರ್ತಿಸುವ ತಂತ್ರಜ್ಞಾನ ಆವಿಷ್ಕಾರ
Team Udayavani, May 26, 2019, 6:20 AM IST
ಕಾರ್ಕಳ: ಬೇಸಿಗೆಯಲ್ಲಿ ಶುದ್ಧ ಕುಡಿಯುವ ನೀರಿನ ಕೊರತೆಯಿಂದಾಗಿ ಪರಿತಪಿಸುವಂತಾಗುತ್ತಿದೆ. ಕುಡಿಯುವ ನೀರಿನ ಕೊರತೆಯನ್ನು ನೀಗಿಸುವ ನಿಟ್ಟಿನಲ್ಲಿ ನಿಟ್ಟೆ ತಾಂತ್ರಿಕ ಕಾಲೇಜಿನ ಮೆಕಾನಿಕಲ್ ವಿಭಾಗದ ವಿದ್ಯಾರ್ಥಿಗಳು ಸಮುದ್ರ ನೀರನ್ನು ಕುಡಿಯಲು ಯೋಗ್ಯವಾದ ನೀರನ್ನಾಗಿ ಪರಿವರ್ತಿಸುವ ತಂತ್ರಜ್ಞಾನವನ್ನು ಕಂಡುಹಿಡಿದಿದ್ದಾರೆ.
ಮೆಕ್ಯಾನಿಕಲ್ ವಿಭಾಗದ ಶ್ರೇಯಸ್ ಟ್ಗ, ಸುವಿಧ್ ಅಕಾರಿ, ಹರ್ಷಾ ಕರ್ಕೇರ ಹಾಗೂ ವಿನಯ ರಾಜ್ ಹೆಬ್ಟಾರ್ ಅಂತಿಮ ವರ್ಷದ ಬಿ.ಇ. ವಿದ್ಯಾರ್ಥಿಗಳ ತಂಡ ಮೆಕ್ಯಾನಿಕಲ್ ವಿಭಾಗದ ಪ್ರಾಧ್ಯಾಪಕ ಡಾ| ಮಲ್ಲಿಕಪ್ಪ ಅವರ ಮಾರ್ಗದರ್ಶನದಲ್ಲಿ ಸಮುದ್ರನೀರಿನಿಂದ ಉಪ್ಪಿನ ಅಂಶವನ್ನು ತೆಗೆದು ಕುಡಿಯಲು ಯೋಗ್ಯವಾದ ನೀರನ್ನಾಗಿ ಮಾಡುವ ತಂತ್ರಜ್ಞಾನವನ್ನು ಆವಿಷ್ಕರಿಸಿದ್ದಾರೆ.
ಪ್ರಯೋಗಕ್ಕೆ ತೆಗೆದುಕೊಳ್ಳಲಾದ ಸಮುದ್ರನೀರಿನ ಸುಮಾರು ಶೇ. 40 ನೀರನ್ನು ಶುದ್ಧ ಕುಡಿಯಲು ಯೋಗ್ಯವಾದ ನೀರನ್ನಾಗಿ ಪರಿವರ್ತಿಸುವಲ್ಲಿ ಈ ತಂಡವು ಯಶಸ್ವಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…