ಹಿರಿಯ ಜೀವದ ಕನಸು ಕೊನೆಗೂ ನನಸಾಯಿತು


Team Udayavani, Jun 10, 2018, 7:00 AM IST

0906kota1e.jpg

ಕೋಟ:  ಸಾಲಿಗ್ರಾಮ ಪ.ಪಂ. ವ್ಯಾಪ್ತಿಯ ಕಾರ್ಕಡ ತೆಂಕ ಹೋಳಿ ನಿವಾಸಿ ಕಾಳಿಂಗ ಹೊಳ್ಳ ಎನ್ನುವ 75 ವರ್ಷದ ಹಿರಿಯ ನಾಗರಿಕರು  ತನ್ನ ಮನೆ ಸಮೀಪದ ರಸ್ತೆ ಅಭಿವೃದ್ಧಿಗಾಗಿ ಸಾಕಷ್ಟು  ಹೋರಾಟ ನಡೆಸಿ ಪ್ರಯೋಜನವಾಗದಿದ್ದಾಗ  ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದರು. ಇದೀಗ ಪ್ರಧಾನಿ ಕಾರ್ಯಾಲಯದಿಂದ ಬಂದ ಸೂಚನೆಯಂತೆ ವಿಧಾನಪರಿಷತ್‌ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಅವರ ಅನುದಾನದಿಂದ ರಸ್ತೆ ಅಭಿವೃದ್ಧಿಗೊಂಡಿದೆ.

ಈ ರಸ್ತೆ  ಅಭಿವೃದ್ಧಿಗೆ  2011ರಲ್ಲಿ ಸಾಲಿಗ್ರಾಮ ಪ.ಪಂ. ಅನುದಾನ ಬಿಡುಗಡೆ ಮಾಡಿತ್ತು.  ಆಗ ಹೊಳ್ಳರು ತನ್ನ  ಪಟ್ಟಾ  ಸ್ಥಳವನ್ನು ರಸ್ತೆ ನಿರ್ಮಾಣಕ್ಕಾಗಿ ಬಿಟ್ಟುಕೊಟ್ಟಿದ್ದರು. ಆದರೆ  ಶೇ.75  ಮಾತ್ರ ಕಾಮಗಾರಿ ನಡೆಸ ಲಾಯಿತು. ಇದರಿಂದಾಗಿ  ಕಾಳಿಂಗ ಹೊಳ್ಳರ ಮನೆ ಹಾಗೂ ಹತ್ತಿರದ ಹಲವು ಮನೆ ಗಳಿಗೆ  ಸಂಪರ್ಕ ಸಾಧ್ಯವಾಗಲಿಲ್ಲ. ಹೀಗಾಗಿ ಮಳೆಗಾಲದಲ್ಲಿ  ಸಾಕಷ್ಟು ಸಮಸ್ಯೆ ಯಾಗುತಿತ್ತು.  ದ್ವಿಚಕ್ರ ವಾಹನ ಕೂಡ ಸಂಚರಿಸಲು ಸಾಧ್ಯವಾಗುತ್ತಿರಲಿಲ್ಲ.
ಈ ಕುರಿತು ಕಾಳಿಂಗ ಹೊಳ್ಳರು 2011ರಿಂದ ಜಿಲ್ಲಾಧಿಕಾರಿ, ಎ.ಸಿ.ಸ್ಥಳೀಯ ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಿದ್ದರು. ಪ್ರಯೋಜನವಾಗದಿದ್ದಾಗ   ತಹಶೀಲ್ದಾರ್‌, ಲೋಕಾಯುಕ್ತ, ಎ.ಸಿ.ಬಿ.ಗೂ ದೂರು ನೀಡಿದ್ದರು. ಅನಂತರ  ಕೊನೆಗೆ ಪ್ರಧಾನಿ ಅವ‌ರಿಗೆ ಪತ್ರ ಬರೆದರು. ಹೊಳ್ಳರ ಈ ಹೋರಾಟ ಕುರಿತು ಉದಯವಾಣಿ ಹಲವು ಬಾರಿ ವರದಿ ಮಾಡಿತ್ತು.

ಎರಡು ಬಾರಿ ಮನವಿ 
ಪ್ರಧಾನಿಯವರಿಗೆ ಮೊದಲ ಬಾರಿ ಮನವಿ ಸಲ್ಲಿಸಿದಾಗ ಪರಿಶೀಲಿಸುವಂತೆ ಜಿಲ್ಲಾಡಳಿತ ಹಾಗೂ ಸ್ಥಳೀಯಾಡಳಿತಕ್ಕೆ ಸೂಚನೆ ಬಂದಿತ್ತು. ಅದರಂತೆ ಸ್ಥಳೀಯಾಡಳಿತ ಪರಿಶೀಲಿಸಿತು. ಆದರೆ ಯಾವುದೇ ಪ್ರಯೋಜನವಾಗಲಿಲ್ಲ. ಇದರಿಂದ ಬೇಸರಗೊಂಡ ಹೊಳ್ಳರು ಮತ್ತೆ ಪ್ರಧಾನಿಗೆ ಪತ್ರ ಬರೆದರು. ಆಗ ಸಮಸ್ಯೆಯನ್ನು ಗಂಭೀರವಾಗಿ ಪರಿಶೀಲಿಸುವಂತೆ ಮತ್ತೂಮ್ಮೆ  ಆದೇಶ ಬಂತು.

ಅನಂತರ  ಹೊಳ್ಳರು ವಿಧಾನ ಪರಿಷತ್‌ ಸದಸ್ಯ ಕೋಟ ಶ್ರೀನಿವಾಸ್‌ ಪೂಜಾರಿ ಅವರನ್ನು ಭೇಟಿ ಮಾಡಿ ಪ್ರಧಾನಿ ಕಾರ್ಯಾಲಯದಿಂದ ಬಂದ ಪತ್ರವನ್ನು ತೋರಿಸಿದರು. ತತ್‌ಕ್ಷಣ ಕಾರ್ಯಪ್ರವೃತ್ತರಾದ ವಿ.ಪ. ಸದಸ್ಯರು 1.50ಲಕ್ಷ ರೂ. ಅನುದಾನ ನೀಡಿ ರಸ್ತೆ ಅಭಿವೃದ್ಧಿಗೆ ಸಹಕರಿಸಿದ್ದಾರೆ. ಇದೀಗ ಹೊಳ್ಳರ ಮನೆಯ ತನಕ ಕಾಮಗಾರಿ ಪೂರ್ಣಗೊಂಡಿದೆ. ಇನ್ನೂ ಸ್ವಲ್ಪ ಕಾಮಗಾರಿ ಬಾಕಿ ಇದ್ದು  ಹೆಚ್ಚುವರಿ ಅನುದಾನ ನೀಡುವ ಭರವಸೆ ಕೂಡ ಕೇಳಿ ಬಂದಿದೆ.

ಟಾಪ್ ನ್ಯೂಸ್

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.