“ಕುಡಿಯುವ ನೀರಿನ ಕಾಮಗಾರಿ ಸೆಪ್ಟಂಬರ್‌ನಲ್ಲಿ ಪೂರ್ಣ’


Team Udayavani, Feb 15, 2019, 12:30 AM IST

1402kdlm10ph.jpg

ಕುಂದಾಪುರ: ಕರ್ನಾಟಕ ಮೂಲ ಸೌಕರ್ಯ ಅಭಿವೃದ್ಧಿ ನಿಗಮ ಮೂಲಕ ಇಲ್ಲಿನ ಪುರಸಭೆ ವ್ಯಾಪ್ತಿಯಲ್ಲಿ 24×7 ನಿರಂತರ ಕುಡಿಯುವ ನೀರಿನ ಕಾಮಗಾರಿ 23 ಕೋ.ರೂ. ವೆಚ್ಚದಲ್ಲಿ ನಡೆಯುತ್ತಿದ್ದು ಸೆಪ್ಟಂಬರ್‌ ವೇಳೆಗೆ ಪೂರ್ಣವಾಗಲಿದೆ ಎಂದು ಎಇಇ ರಾಮಕೃಷ್ಣ ಹೇಳಿದ್ದಾರೆ.

ಗುರುವಾರ ಇಲ್ಲಿನ ಅಂಬೇಡ್ಕರ್‌ ಭವನದಲ್ಲಿ ಪುರಸಭೆ ಮತ್ತು ಕರ್ನಾಟಕ ಮೂಲ ಸೌಕರ್ಯ ಅಭಿವೃದ್ಧಿ ನಿಗಮ ನಿಯಮಿತ ಇವರ ಕ್ವಿಮಿಪ್‌ ಟ್ರಾಂಚ್‌ -2 ಅಡಿಯಲ್ಲಿ ಕುಂದಾಪುರ ಪಟ್ಟಣದಲ್ಲಿ ಕೈಗೊಳ್ಳುವ ಕುಡಿಯುವ ನೀರು ಸರಬರಾಜು ಯೋಜನೆ ಮತ್ತು ಕಾಮಗಾರಿಗಳ ಬಗ್ಗೆ ನಗರ ಮಟ್ಟದ ಸಾರ್ವಜನಿಕ ಸಮಾಲೋಚನೆ ಸಭೆಯಲ್ಲಿ ಅವರು ಮಾತನಾಡಿದರು.

ಸಾರ್ವಜನಿಕರಿಗೆ, ಚುನಾಯಿತ ಪ್ರತಿನಿಧಿ ಗಳಿಗೆ ಮಾಹಿತಿ ಕೊಡುವ ಸಲುವಾಗಿ ಸಭೆ ಕರೆಯಲಾಗಿದೆ. ಕಾಮಗಾರಿಗೆ ಏಶಿಯನ್‌ ಡೆವಲಪ್‌ಮೆಂಟ್‌ ಬ್ಯಾಂಕ್‌ನವರು ಸಾಲ ರೂಪದಲ್ಲಿ ಹಣ ನೀಡಿದ್ದಾರೆ. ಪ್ರಸ್ತುತ ಜಪ್ತಿಯಿಂದ ಪುರಸಭೆ ವ್ಯಾಪ್ತಿಗೆ ನೀರು ಬರುತ್ತಿದ್ದು ಅದು ಕೋಡಿ ಪ್ರದೇಶಕ್ಕೆ ತಲುಪುತ್ತಿಲ್ಲ. ಆದ್ದರಿಂದ ಹೊಸ ಯೋಜನೆ ಮಾಡಲಾಗಿದೆ ಎಂದರು.

ಪುರಸಭೆ ಸದಸ್ಯರಾದ ಲಕ್ಷ್ಮೀ ಬಾಯಿ, ದೇವಕಿ ಸಣ್ಣಯ್ಯ, ಗಿರೀಶ್‌ ಕುಮಾರ್‌ ಎಚ್‌., ಮೋಹನದಾಸ ಶೆಣೈ, ರಾಘವೇಂದ್ರ ಖಾರ್ವಿ, ಸಂದೀಪ್‌ ಖಾರ್ವಿ, ಚಂದ್ರಶೇಖರ್‌ ಖಾರ್ವಿ, ಅಶ#ಕ್‌, ಅಬ್ಬು ಮಹಮ್ಮದ್‌, ಸಂತೋಷ್‌ ಶೆಟ್ಟಿ, ಮಾಜಿ ಉಪಾಧ್ಯಕ್ಷ ರಾಜೇಶ್‌ ಕಾವೇರಿ, ಮಾಜಿ ಸದಸ್ಯರಾದ ಪುಷ್ಪಾ ಆರ್‌. ಶೇಟ್‌, ಕಲಾವತಿ, ಕೋಡಿ ಪ್ರದೇಶದ ನಾಗರಿಕ ಆರಿಫ್, ಅಬ್ದುಲ್ಲ ಕಾಮಗಾರಿಯಿಂದಾಗುತ್ತಿರುವ ಸಮಸ್ಯೆಗಳ ಕುರಿತು ಮಾತನಾಡಿದರು.

ಒಂದಷ್ಟು ಕಾಮಗಾರಿ ಆದಮೇಲೆ ಮಾಹಿತಿ ನೀಡಲು ಕರೆಯಲಾಗುತ್ತಿದೆ. ಸಭೆ ನಡೆಯುವ ಹಿಂದಿನ ಸಂಜೆಯಷ್ಟೇ ಸದಸ್ಯರನ್ನು ಆಹ್ವಾನಿಸಲಾಗಿದೆ. ಸಾರ್ವ ಜನಿಕರ ಗಮನಕ್ಕೆ ತರದೇ  ಸಭೆ ನಡೆಸ ಲಾಗಿದೆ. ಮಾಧ್ಯಮದವರಿಗೂ ಮಾಹಿತಿ ನೀಡಿಲ್ಲ. ಈಗಾಗಲೇ ಮಾಡಿದ ಕಾಮಗಾರಿ ಅಸಮರ್ಪಕವಾಗಿದೆ. ಅಗೆದು ಹಾಕಿದಲ್ಲಿ ಸರಿಯಾಗಿ ದುರಸ್ತಿ ಮಾಡಿಲ್ಲ. ಇಂಟರ್‌ಲಾಕ್‌ ತೆಗೆದಲ್ಲಿ ಸರಿಯಾದ ರೀತಿ ಅಳವಡಿಸದೇ ಕುಸಿಯುತ್ತಿದೆ. ಸುಂದರ ಕುಂದಾಪುರ ಬದಲು ವಿರೂಪದ ಕುಂದಾಪುರ ಆಗುತ್ತಿದೆ. ಪುರಸಭೆ ಹೊಸದಾಗಿ ಹಾಕಿದ ಇಂಟರ್‌ಲಾಕ್‌ಗಳನ್ನು ಕೀಳಲಾಗಿದೆ. ಕಿತ್ತು ಹಾಕಿದ ಇಂಟರ್‌ಲಾಕ್‌ಗಳನ್ನು ಎಲ್ಲಿ ಸಾಗಿಸಲಾಗಿದೆ. ಗುತ್ತಿಗೆದಾರರು ಜನಪ್ರತಿನಿಧಿಗಳ ದೂರಿಗೂ ಸ್ಪಂದಿಸುವುದಿಲ್ಲ ಯಾಕೆ. ಸಮಸ್ಯೆಗಳ ಕುರಿತು ಹೇಳಿದರೂ ಹಾರಿಕೆ ಉತ್ತರ ನೀಡಲಾಗುತ್ತಿದೆ. ಅಳವಡಿಸುತ್ತಿರುವ ಪೈಪ್‌ಲೈನ್‌ ಗಾತ್ರ ಸಣ್ಣದಾದ ಕಾರಣ ಅವಶ್ಯವುಳ್ಳಷ್ಟು ನೀರು ಪೂರೈಸಬಹುದೆ? ಎಂಬ ಪ್ರಶ್ನೆಗಳನ್ನು ಕೇಳಿದರು.

ಮರಳು ಸಮಸ್ಯೆಯಿಂದ ಕಾಮಗಾರಿ ನಿಧಾನವಾಗಿದೆ. ಸಮಸ್ಯೆಗಳಿಗೆ  ಸ್ಪಂದಿ ಸುತ್ತೇವೆ. ದುರಸ್ತಿ ಕಾಮಗಾರಿ ಸರಿಯಾಗಿ ಮಾಡುತ್ತೇವೆ ಎಂದು ರಾಮಕೃಷ್ಣ ಉತ್ತರಿಸಿದರು. ಪುರಸಭೆ ಮಾಜಿ ಅಧ್ಯಕ್ಷೆ ವಸಂತಿ ಸಾರಂಗ, ಸದಸ್ಯರಾದ ರೋಹಿಣಿ ಉದಯ್‌, ಪ್ರಭಾಕರ ಕೆ., ಸಹಾಯಕ ಎಂಜಿನಿಯರ್‌ ಹರೀಶ್‌ ಬಿ., ಕಾಮಗಾರಿ ನಿರ್ವಹಿಸುವ ಸಂಸ್ಥೆಯ ಪ್ರಾಜೆಕ್ಟ್ ಮೆನೇಜರ್‌ ವರ್ಧಮಾನ್‌ ಉಪಸ್ಥಿತರಿದ್ದರು. ರತ್ನಾಕರ್‌ ನಿರ್ವಹಿಸಿದರು.

ಸಾರ್ವಜನಿಕರಿಲ್ಲ
ಸಭೆಯ ಕುರಿತು ಮಾಹಿತಿ ಕೊರತೆ ಯಿಂದಾಗಿ ಸಾರ್ವಜನಿಕರ ಸಂಖ್ಯೆ ಬೆರಳೆಣಿಕೆ ಯಲ್ಲಿತ್ತು. ಮಾತಿನ ಭರಾಟೆ ಸದಸ್ಯರು ಹಾಗೂ ಅಧಿಕಾರಿ ಮಧ್ಯೆ ತೀವ್ರವಾಗಿ ನಡೆಯಿತು. 

ಯೋಜನೆಯ ಅನುದಾನ
ಹಳೆಕೋಟೆಯಲ್ಲಿ 5 ಲಕ್ಷ ಲೀ. ಸಾಮರ್ಥ್ಯ, ಕೋಡಿಯಲ್ಲಿ 4 ಲಕ್ಷ ಲೀ. ಸಾಮರ್ಥ್ಯದ ಟ್ಯಾಂಕಿ ರಚನೆಯಾಗುತ್ತಿದೆ. ಪೈಪ್‌ಲೈನ್‌ ಅಳವಡಿಕೆ ಸಂದರ್ಭ ಹಾಳಾಗುವ ಕಾಮಗಾರಿಯ ದುರಸ್ತಿಯನ್ನು ಮಾಡಿಕೊಡಲಾಗುವುದು. ಡಾಮರು, ಇಂಟರ್‌ಲಾಕ್‌, ಕಾಂಕ್ರೀಟ್‌ ರಸ್ತೆ ಅಗೆದರೆ ಅದನ್ನು ನವೀಕರಣ ಮಾಡಿ ಕೊಡಲಾಗುವುದು. ಇಂತಹ ದುರಸ್ತಿ ಕಾಮಗಾರಿಗೆ ಪುರಸಭೆಯ ಅನುದಾನ ಬಳಸುವುದಿಲ್ಲ. ಎಲ್ಲದಕ್ಕೂ ಯೋಜನೆಯ ಅನುದಾನ ಬಳಸಲಾಗುವುದು ಎಂದು ರಾಮಕೃಷ್ಣ ಹೇಳಿದರು.

ಟಾಪ್ ನ್ಯೂಸ್

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.