ಉಡುಪಿ ನಗರ ವ್ಯಾಪ್ತಿಯಲ್ಲಿ ನಿರ್ಮಾಣವಾಗಲಿದೆ ಇ-ಶೌಚಾಲಯ


Team Udayavani, Dec 19, 2019, 4:28 AM IST

xc-26

ಉಡುಪಿ: ನಗರದಲ್ಲಿ ಸಾರ್ವಜನಿಕ ಶೌಚಾಲಯಗಳ ಕೊರತೆ ನೀಗಿಸಲು ಉಡುಪಿ ನಗರಸಭೆ ಮುಂದಾಗಿದ್ದು, ಅಲ್ಲಲ್ಲಿ ಇ-ಶೌಚಾಲಯಗಳನ್ನು ನಿರ್ಮಾಣ ಮಾಡುತ್ತಿದೆ. ಬೆಂಗಳೂರಿನ ಎನ್‌.ಕೆ. ಮೆಟಲ್‌ ಶೀಟ್‌ ಸಂಸ್ಥೆಯು ಇದರ ನಿರ್ಮಾಣದ ಉಸ್ತುವಾರಿವನ್ನು ವಹಿಸಿದೆ.

ನಿರ್ಮಾಣದ ವೆಚ್ಚವನ್ನು ಪೌರಾಡಳಿತ ನಿರ್ದೇ ಶನಾಲಯ ಭರಿಸಲಿದೆ. ಈ ಶೌಚಾಲಯಗಳನ್ನು ಆಯಕಟ್ಟಿನ ಸ್ಥಳದಲ್ಲಿ ಪಾದಚಾರಿ ಮಾರ್ಗದಲ್ಲಿ ಅಳವಡಿಸಲಾಗುತ್ತಿದೆ. ನಗರಸಭೆ ಹಾಗೂ ಒಳಚರಂಡಿ ವಿಭಾಗದ ವತಿಯಿಂದ ಸರ್ವೆ ನಡೆಸಲಾಗಿದ್ದು, ಅದರ ಅನ್ವಯ ಇ-ಶೌಚಾಲಯ ನಿರ್ಮಾಣ ಮಾಡಲು ಜಾಗ ಆಯ್ಕೆ ಮಾಡಲಾಗಿದೆ.

ಬಯೋ ಡೈಜೆಸ್ಟರ್‌ ವ್ಯವಸ್ಥೆ
ಇ- ಶೌಚಾಲಯಗಳು “ಬಯೋ ಡೈಜೆಸ್ಟರ್‌’ ವ್ಯವಸ್ಥೆಯನ್ನು ಒಳಗೊಂಡಿದೆ. ಡೈಜೆಸ್ಟರ್‌ ವ್ಯವಸ್ಥೆಯಲ್ಲಿ ತ್ಯಾಜ್ಯ ತಂತಾನೇ ಜೈವಿಕವಾಗಿ ವಿಲೇವಾರಿಯಾಗಲಿದೆ. ಜನರ ಬಳಕೆ ಅನುಗುಣವಾಗಿ ಬಯೋ ಡೈಜೆಸ್ಟರ್‌ ಶೌಚದ ಗುಂಡಿ ನಿರ್ಮಿಸಲಾಗುತ್ತದೆ. ಅದಕ್ಕೆ ಇನಾ ಕ್ಯುಲಂ ಎಂಬ ಬ್ಯಾಕ್ಟೀರಿಯಾ ಸೇರಿಸಿದರೆ ಕಲ್ಮಷ ಶುದ್ಧೀಕರಿಸುವ ಕೆಲಸವನ್ನು ಇದು ಮಾಡುತ್ತದೆ. ಶೌಚಾಲಯದ ಸೇಫ್ಟಿ ಟ್ಯಾಂಕ್‌ ಒಳಗೆ ಇದನ್ನು ಸೇರಿಸುವುದರಿಂದ ಕಲ್ಮಷಗಳು ಶೇ. 100ರಷ್ಟು ಕರಗಿ, ಹಾಕಿದ ನೀರು ಮಾತ್ರ ಉಳಿಯುತ್ತದೆ. ಈ ನೀರು ವಾಸನೆಯಿಂದ ಕೂಡಿರುವುದಿಲ್ಲ. ಈ ಒಮ್ಮೆ ಬ್ಯಾಕ್ಟೀರಿಯಾ ಸೇರಿಸಿದ ಬಳಿಕ ನಿರಂತರ ಉಪಯೋಗವಿದ್ದರೆ ಮತ್ತೆ ಮತ್ತೆ ಬ್ಯಾಕ್ಟೀರಿಯಾ ಸೇರಿಸುವ ಅಗತ್ಯವಿಲ್ಲ. ಬ್ಯಾಕ್ಟೀರಿಯಾಗಳು ಶೌಚಾಲಯವನ್ನು ಬಳಸದಿದ್ದರೂ ನಾಲ್ಕು ತಿಂಗಳ ಕಾಲ ಉಳಿಯುತ್ತವೆ.

ಬಳಕೆ ಹೇಗೆ?
ಇ-ಶೌಚಾಲಯಗಳು ಹೊಸ ತಂತ್ರಜ್ಞಾನ ಹೊಂದಿದ್ದು, ಸ್ವಯಂ ಸ್ವತ್ಛತೆ ಮಾಡಿಕೊಳ್ಳಲಿವೆ. ಶೌಚಾಲಯದ ಹೊರ ಬಾಗಿಲಲ್ಲಿ ಹಸಿರು ಬಣ್ಣ ಇದ್ದರೆ ಅದು ಬಳಕೆಗೆ ಮುಕ್ತ ಎಂದರ್ಥ. ಕೆಂಪು ಬಣ್ಣ ಇದ್ದರೆ ಒಳಗೆ ಇನ್ನೊಬ್ಬರು ಇದ್ದಾರೆ ಎಂದರ್ಥ. ಬಳಕೆದಾರರು ನಿಗದಿತ ದರದ ನಾಣ್ಯ ಹಾಕಿದ ಅನಂತರ ಬಾಗಿಲು ತಾನೇ ತೆರೆದುಕೊಳ್ಳಲಿದೆ. ಬಾಗಿಲುಗಳು ಸೆನ್ಸರ್‌ ವ್ಯವಸ್ಥೆ ಹೊಂದಿದ್ದು, ಒಳಗಡೆ ಮತ್ತೂಬ್ಬರು ಇದ್ದರೆ ಹೊರಗಿನಿಂದ ನಾಣ್ಯ ಹಾಕಿದರೂ ತೆಗೆದುಕೊಳ್ಳುವುದಿಲ್ಲ. ಒಳಗೆ ವಿದ್ಯುತ್‌ ದೀಪ, ಪುಟ್ಟ ಫ್ಯಾನ್‌ ವ್ಯವಸ್ಥೆಯೂ ಇದೆ. ಬಳಕೆಯ ಅನಂತರ ನೀರು ಹರಿಯುತ್ತದೆ.

ಎಲ್ಲೆಲ್ಲಿ ಇ-ಶೌಚಾಲಯ?
ಉಡುಪಿ ಬೋರ್ಡ್‌ ಹೈಸ್ಕೂಲ್‌ ಪ್ರವೇಶ ದ್ವಾರ, ತಾಲೂಕು ಕಚೇರಿ, ನಗರಸಭೆ ಸಮೀಪದಲ್ಲಿ ಇ-ಶೌಚಾಲಯ ನಿರ್ಮಾಣವಾಗಲಿದೆ. ಒಂದು ಶೌಚಾಲಯಕ್ಕೆ 6.8 ಲ.ರೂ ವೆಚ್ಚ ತಗಲಲಿದೆ.

ಪರಿಸರಸ್ನೇಹಿ
ನಗರದಲ್ಲಿ ಮೂರು ಇ-ಶೌಚಾಲಯಗಳ ನಿರ್ಮಾಣ ಕಾಮಗಾರಿ ಶೀಘ್ರದಲ್ಲಿ ಪ್ರಾರಂಭವಾಗಲಿದೆ. ಈ ಶೌಚಾಲಯವು ಪರಿಸರಸ್ನೇಹಿ ಶೌಚಾಲಯವಾಗಿರಲಿದೆ.
-ಸ್ನೇಹಾ, ಪರಿಸರ ಎಂಜಿನಿಯರ್‌, ನಗರಸಭೆ

ಸ್ವಚ್ಛತೆ ಅಗತ್ಯ
ಪ್ರಸ್ತುತ ಇರುವ ಶೌಚಾಲಯದಲ್ಲಿ ಸ್ವತ್ಛತೆ ಕೊರತೆ ಇದೆ. ಇದೀಗ ನಗರಸಭೆ ಇ- ಶೌಚಾಲಯ ನಿರ್ಮಾಣ ಮಾಡಲು ಸಿದ್ಧತೆ ಮಾಡಿಕೊಳ್ಳುತ್ತಿದೆ. ಈ ಸೌಲಭ್ಯ ಜನರಿಗೆ ಶೀಘ್ರದಲ್ಲಿ ಬಳಕೆಗೆ ಸಿಗುವಂತಾಗಲಿ.
-ಮೀರಾ ನಾಯಕ್‌, ಉಡುಪಿ

– ತೃಪ್ತಿ ಕುಮ್ರಗೋಡು

ಟಾಪ್ ನ್ಯೂಸ್

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Rahul Gandhi 3

PM Modiಗೆ ನಾಜಿ ಪ್ರಚಾರಕ ಗೋಬೆಲ್ಸ್‌ನೇ ಸ್ಫೂರ್ತಿ: ಕಾಂಗ್ರೆಸ್‌

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.