ಕೃಷಿಕನಿಗೆ ಕೃಷಿ ಸಮ್ಮೇಳನದಲ್ಲೇ ಅವಮಾನ


Team Udayavani, Jan 3, 2018, 12:26 PM IST

03-31.jpg

ಬೆಳ್ಮಣ್‌: ಮಂಗಳೂರಿನ ಕದ್ರಿ ಪಾರ್ಕ್‌ನಲ್ಲಿ ಡಿ. 23ರಂದು ನಡೆದ ಸಿರಿ ಧಾನ್ಯಗಳ ಕೃಷಿ ಸಮ್ಮೇಳನದಲ್ಲಿ ಪ್ರಶಸ್ತಿ ಪುರಸ್ಕೃತ ಪ್ರಗತಿಪರ ಕೃಷಿಕ ಕಡಂದಲೆಗುತ್ತು ಸುದರ್ಶನ ಶೆಟ್ಟಿ ಅವರಿಗೆ ಭಾರೀ ಅವಮಾನ ನಡೆದಿದೆ.

ಉತ್ತಮ ಪ್ರಗತಿಪರ ಕೃಷಿಕರಾಗಿದ್ದ ಸುದರ್ಶನ ಶೆಟ್ಟಿ ಅವರು ಅತ್ಯುತ್ತಮ ಕೃಷಿಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆಂದು ತಿಳಿಸಿ ಸಮ್ಮೇಳನಕ್ಕೆ ಮುಂಚಿತವಾಗಿ ಆಹ್ವಾನ ನೀಡಲಾಗಿತ್ತು. ಅಲ್ಲದೆ ಪ್ರಯಾಣದ ವ್ಯವಸ್ಥೆಯನ್ನೂ ಮಾಡುವುದಾಗಿ ಇಲಾಖೆ ತಿಳಿಸಿತ್ತು. ಆದರೂ ಸುದರ್ಶನ ಶೆಟ್ಟಿ ಅವರು ತಮ್ಮ 20 ಮಂದಿ ಗೆಳೆಯರ ಬಳಗದ ಜತೆ ಕಾರ್ಯಕ್ರಮಕ್ಕೆ ಸಾಕಷ್ಟು ಮುಂಚಿತವಾಗಿ ಸ್ವಂತ ಖರ್ಚಿನಲ್ಲಿ ತೆರಳಿದ್ದರು.

ಕಾರ್ಯಕ್ರಮದಲ್ಲಿ ಕೃಷಿ ಸಚಿವ ಕೃಷ್ಣ ಬೈರೇಗೌಡ, ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಸಹಿತ ಶಾಸಕರು, ಜನಪ್ರತಿನಿಧಿಗಳಿದ್ದರು. ಕಾರ್ಯಕ್ರಮ ನಡೆದು ಧನ್ಯವಾದದೊಂದಿಗೆ ಮುಕ್ತಾಯ ಕಂಡರೂ ಅತ್ಯುತ್ತಮ ಕೃಷಿಕ ಪ್ರಶಸ್ತಿ ವಿತರಣೆ ನಡೆಯಲೇ ಇಲ್ಲ. ಬಳಿಕ ಇಲಾಖೆಯ ಸಿಬಂದಿಯೋರ್ವರು ಸಭೆಯಲ್ಲಿ ಸುದರ್ಶನ ಶೆಟ್ಟಿ ಅವರು ಕುಳಿತಿದ್ದಲ್ಲಿಗೆ ಬಂದು ಇಲಾಖೆ ಪ್ರಶಸ್ತಿಯಾಗಿ ಘೋಷಿಸಿದ್ದ ಪ್ರಶಸ್ತಿ ಹಣ 10,000 ರೂ.ಗಳ ಚೆಕ್‌ ನೀಡಿದ್ದರು. ಆ ಸಂದರ್ಭದಲ್ಲಿ ವೇದಿಕೆಯಲ್ಲಿದ್ದ ಗಣ್ಯರ ಸಹಿತ ಬಹುತೇಕ ಮಂದಿ ನಿರ್ಗಮಿಸಿಯಾಗಿತ್ತು. ಇಂತಹ ಕಾಟಾಚಾರದ ಪ್ರಶಸ್ತಿ ಪ್ರದಾನ ಅಗತ್ಯವೇ ಎಂದು ಆಕ್ರೋಶ ವ್ಯಕ್ತಪಡಿಸಿರುವ ಸುದರ್ಶನ ಶೆಟ್ಟಿ ಅವರು, ದೇಶದ ಬೆನ್ನೆಲುಬೆನಿಸಿರುವ ರೈತರ ಬಗ್ಗೆ ಸರಕಾರ, ಜನಪ್ರತಿನಿಧಿಗಳು ಹಾಗೂ ಇಲಾಖೆಯ ನಿರ್ಲಕ್ಷ್ಯಕ್ಕೆ ಈ ಘಟನೆ ಕೈಗನ್ನಡಿ ಎಂದು ಆರೋಪಿಸಿದ್ದಾರೆ.

ಕೃಷಿ ಚಟುವಟಿಕೆಗಳ ಬಗ್ಗೆ ಈಗಿನ ಮಂದಿ ನಿರಾಸಕ್ತಿ ತೋರುತ್ತಿರುವ ಈ ಕಾಲಘಟ್ಟದಲ್ಲಿ ಉತ್ಸಾಹದಿಂದ ಕೃಷಿ ಕಾಯಕ ನಡೆಸಿ ಇತರರಿಗೆ ಮಾದರಿ ಎನಿಸುತ್ತಿರುವ ಕೃಷಿಕರನ್ನೂ ಈ ರೀತಿ ನಿರ್ಲಕ್ಷಿಸುತ್ತಿರುವ ಬಗ್ಗೆ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸುದರ್ಶನ ಶೆಟ್ಟಿ ಅವರು ಭತ್ತ ಬೇಸಾಯದ ಜತೆಗೆ ಅಡಿಕೆ, ತೆಂಗು, ಕಾಳುಮೆಣಸು, ಮಾವು, ಗೇರು ಇತ್ಯಾದಿ ಕೃಷಿ, ಅಲ್ಲದೆ ಹೈನುಗಾರಿಕೆಯಲ್ಲಿಯೂ ತೊಡಗಿಸಿಕೊಂಡಿದ್ದಾರೆ. ಇಂತಹ ಕೃಷಿಕನ ಅವಗಣನೆ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಟಾಪ್ ನ್ಯೂಸ್

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.