ಕಾಡುಹೊಳೆ ಕಾಮಗಾರಿ ಅಂತಿಮ ಹಂತದಲ್ಲಿ
Team Udayavani, May 15, 2018, 6:20 AM IST
ಅಜೆಕಾರು: ಮರ್ಣೆ ಪಂ.ವ್ಯಾಪ್ತಿಯ ಕಾಡುಹೊಳೆ ಎಂಬಲ್ಲಿ ಸುಮಾರು 1.50 ಕೋಟಿ ವೆಚ್ಚದಲ್ಲಿ ನಿರ್ಮಾಣ ಗೊಳ್ಳುತ್ತಿರುವ ಕಿಂಡಿ ಅಣೆಕಟ್ಟು ಸಹಿತ ಸೇತುವೆಯ ಕಾಮಗಾರಿ ಬಹುತೇಕ ಮುಗಿ ದಿದ್ದು ಅಂತಿಮ ಹಂತದಲ್ಲಿದೆ.
ಸ್ಥಳೀಯ ಜನರ ಬಹು ದಶಕಗಳ ಬೇಡಿಕೆಯಾಗಿದ್ದ ಕಿಂಡಿ ಅಣೆಕಟ್ಟು ನಿರ್ಮಾಣ ಕಾಮಗಾರಿ ಸಂಪೂರ್ಣಗೊಂಡಿದ್ದು, ಸುಮಾರು 3 ರಿಂದ 4 ಫೀಟ್ ನಷ್ಟು ನೀರು ಈ ಬಾರಿ ಸಂಗ್ರಹಗೊಂಡಿದೆ.
ಕಿಂಡಿ ಅಣೆಕಟ್ಟುವಿನ ನಿರ್ಮಾಣದಿಂದಾಗಿ ಅಂರ್ತಜಲ ವೃದ್ಧಿಗೊಂಡಿದ್ದು, ಹೊಳೆಯ ಇಕ್ಕೆಲಗಳ ಕೃಷಿಕರ ಬಾವಿ ನೀರಿನ ಮಟ್ಟ ಹೆಚ್ಚಳಗೊಂಡಿರುವ ಬಗ್ಗೆ ರೈತರು ಸಂತಸ ವ್ಯಕ್ತಪಡಿಸುತ್ತಿದ್ದಾರೆ. ಮುಂದಿನ ಬೇಸಿಗೆಯಲ್ಲಿ ಸುಮಾರು 8 ರಿಂದ 10 ಫೀಟ್ ನಷ್ಟು ನೀರು ಸಂಗ್ರಹಗೊಳ್ಳಲು ಅವಕಾಶವಿದ್ದು, ಮರ್ಣೆ ಪಂ.ವ್ಯಾಪ್ತಿಯ ಹಾಗೂ ವರಂಗ ಪಂಚಾಯತ್ ವ್ಯಾಪ್ತಿಯ ಕಾಡುಹೊಳೆ ಪ್ರದೇಶದ ಕೃಷಿಕರ ಬಾವಿಗಳ ಅಂತರ್ಜಲ ವೃದ್ಧಿಸಿ ಕೃಷಿಗೆ ಸಾಕಷ್ಟು ನೀರು ಒದಗಬಹುದು ಎಂಬುದು ಸ್ಥಳೀಯರ ಅಭಿಪ್ರಾಯ.ಕಿಂಡಿ ಅಣೆಕಟ್ಟುವಿನೊಂದಿಗೆ ವಿಶಾಲ ವಾದ ಸೇತುವೆ ಕಾಮಗಾರಿಯು ನಡೆ ಯುತ್ತಿದ್ದು ಅಂತಿಮ ಹಂತದಲ್ಲಿದೆ.
ಮುಂಬರುವ ಮಳೆಗಾಲದ ಮೊದಲು ಕಾಮಗಾರಿ ಪೂರ್ಣಗೊಳ್ಳಲಿದೆ. ಸೇತುವೆ ನಿರ್ಮಾಣದಿಂದಾಗಿ ವರಂಗ ಹಾಗೂ ಮರ್ಣೆ ಪಂಚಾಯತ್ ವ್ಯಾಪ್ತಿಯ ಕಾಡು ಹೊಳೆ ಪರಿಸರದ ಜನತೆಗೆ ಸಂಚಾರಕ್ಕೆ ಸಹಕಾರಿಯಾಗಲಿದೆ.
ಕಾಡುಹೊಳೆ ಮಳೆಗಾಲದಲ್ಲಿ ತುಂಬಿ ಹರಿಯುವುದರಿಂದ ಹೊಳೆಯ ಇಕ್ಕೆಲಗಳ ಜನರಿಗೆ ಸಂಪರ್ಕಕ್ಕೆ ಸುತ್ತು ಬಳಸಿ ಹೋಗಬೇಕಾಗಿತ್ತು. ಈ ಸೇತುವೆ ನಿರ್ಮಾಣ ದಿಂದಾಗಿ ಸುಮಾರು 100 ಮನೆಗಳ ಜನರಿಗೆ ಸಂಪರ್ಕಕ್ಕೆ ಅನುಕೂಲವಾಗಿದೆ.
ಉತ್ತಮ ಸ್ಪಂದನೆ
ಕಾಡುಹೊಳೆ ಪರಿಸರದ ಕೃಷಿಕರ ಬಹುದಿನದ ಬೇಡಿಕೆ ಕಿಂಡಿ ಅಣೆಕಟ್ಟು ನಿರ್ಮಾಣ ಪೂರ್ಣಗೊಂಡಿದೆ. ಈ ಬಗ್ಗೆ ಸ್ಥಳೀಯರು ಶಾಸಕರು ಸೇರಿದಂತೆ ಜನಪ್ರತಿನಿಧಿಗಳಿಗೆ ಸಲ್ಲಿಸಿದ್ದ ಮನವಿಗೆ ಸ್ಪಂದನೆ ದೊರೆತಂತಾಗಿದೆ.
– ಕೃಷ್ಣ ನಾಯ್ಕ , ಕೃಷಿಕರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ