ಮಣಿಪಾಲ ಸನಿಹದಲ್ಲಿ ರಾಜ್ಯದ ಮೊದಲ ಎಫ್ಎಸ್‌ಟಿಪಿ ಘಟಕ


Team Udayavani, Feb 11, 2022, 6:11 PM IST

ಮಣಿಪಾಲ ಸನಿಹದಲ್ಲಿ ರಾಜ್ಯದ ಮೊದಲ ಎಫ್ಎಸ್‌ಟಿಪಿ ಘಟಕ

ಮಣಿಪಾಲ: ಮಲತ್ಯಾಜ್ಯ ಸಂಸ್ಕರಣ ಘಟಕ (ಎಫ್ಎಸ್‌ಟಿಪಿ) ರಾಜ್ಯದಲ್ಲಿ ಮೊದಲ ಬಾರಿಗೆ ಮಣಿಪಾಲ ಹೊರವಲಯದ 80 ಬಡಗಬೆಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ಸಂಪೂರ್ಣ ಕಾಮಗಾರಿ ಮುಗಿದು ಬಳಕೆಗೆ ಸಜ್ಜಾಗಿದೆ.

ಕಾರ್ಕಳ ತಾಲೂಕಿನ ಕುಕ್ಕುಂದೂರು ಹಾಗೂ ಉಡುಪಿ ತಾಲೂಕಿನ 80 ಬಡಗಬೆಟ್ಟು ಗ್ರಾ.ಪಂ.ಗಳಲ್ಲಿ ಎಫ್ಎಸ್‌ಟಿಪಿ ನಿರ್ಮಾಣಕ್ಕೆ ವರ್ಷಗಳ ಹಿಂದೆ ಚಾಲನೆ ಸಿಕ್ಕಿತ್ತು. ಜಿಲ್ಲೆಯ ಬೇರೆ ಯಾವುದೇ ಗ್ರಾ.ಪಂ.ನಲ್ಲೂ ಈ ಘಟಕ ಇಲ್ಲ. ಕುಕ್ಕುಂದೂರಿನಲ್ಲಿ ಘಟಕ ಇನ್ನೂ ನಿರ್ಮಾಣ ಹಂತದಲ್ಲಿದೆ. 80 ಬಡಗಬೆಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ 43 ಲ.ರೂ. ವೆಚ್ಚದಲ್ಲಿ ಘಟಕ ನಿರ್ಮಾಣಗೊಂಡಿದೆ. ಶೀಘ್ರವೇ ಇದರ ಉಪಯೋಗ ಗ್ರಾಮಸ್ಥರಿಗೆ ಸಿಗಲಿದೆ.

ಶೌಚಾಲಯದ ಮೂಲಕ ಮಲ ತ್ಯಾಜ್ಯ ಗುಂಡಿ ಸೇರುತ್ತದೆ ಮತ್ತು ನಿರ್ದಿಷ್ಟ ವರ್ಷಗಳ ಅನಂತರ ಅದು ಭರ್ತಿಯಾಗುತ್ತದೆ. ಕಲ್ಲು ಮಿಶ್ರಿತ ಪ್ರದೇಶಗಳಲ್ಲಿ ನೀರು ಹೆಚ್ಚು ಇಂಗದ‌ ಕಾರಣ ಬೇಗ ಭರ್ತಿಯಾಗುತ್ತದೆ. ಹೀಗಾಗಿ ಮಲತ್ಯಾಜ್ಯ ಸಂಸ್ಕರಣೆ ಪ್ರತಿ ಗ್ರಾ.ಪಂ.ಗಳಿಗೂ ಸವಾಲಾಗಿದೆ. 80 ಬಡಗಬೆಟ್ಟು ಗ್ರಾ.ಪಂ. ವ್ಯಾಪ್ತಿಯ ಮಲತ್ಯಾಜ್ಯ ಸದ್ಯ ಉಡುಪಿ ನಗರಸಭೆಯಿಂದ ಸಂಸ್ಕರಣೆ ಮಾಡಲಾಗುತ್ತಿದೆ. ಇದಕ್ಕಾಗಿ ಮಲ ತ್ಯಾಜ್ಯ ನೀಡುವ ಮನೆಯಿಂದ ಶುಲ್ಕ ಪಡೆಯ ಲಾಗುತ್ತದೆ. ಇನ್ನು ಮುಂದೆ ಈ ಗ್ರಾ.ಪಂ. ವ್ಯಾಪ್ತಿಯಲ್ಲೇ ಸಂಸ್ಕರಣೆಯಾಗಲಿದೆ ಎಂದು ಗ್ರಾ.ಪಂ. ಪಿಡಿಒ ಅಶೋಕ್‌ ಕುಮಾರ್‌ ತಿಳಿಸಿದ್ದಾರೆ.

ಗ್ರಾ.ಪಂ.ಗಳೊಂದಿಗೆ ಒಪ್ಪಂದ
ಎಫ್ಎಸ್‌ಟಿಪಿ ಘಟಕ 80 ಬಡಗಬೆಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿದ್ದರೂ, ಅದರ ಬಳಕೆ ಸುತ್ತಲಿನ ಗ್ರಾ.ಪಂ.ಗಳು ಪಡೆದುಕೊಳ್ಳಲು ಅನುಕೂಲವಾಗುವಂತೆ ಒಪ್ಪಂದ ಮಾಡಿಕೊಳ್ಳಲಿದ್ದೇವೆ. ಅಂಬಲಪಾಡಿ, ಕರ್ಜೆ, ಅಲೆವೂರು ಮೊದಲಾದ ಗ್ರಾ.ಪಂ.ಗಳೊಂದಿಗೆ ಒಪ್ಪಂದ ಮಾಡಿಕೊಂಡು, ಆ ಗ್ರಾ.ಪಂ. ವ್ಯಾಪ್ತಿಯ ಮಲತ್ಯಾಜ್ಯ ಸಂಸ್ಕರಣೆ ಇಲ್ಲಿ ಮಾಡಲಾಗುವುದು. ಅದಕ್ಕೆ ಗ್ರಾ.ಪಂ. ನಿರ್ದಿಷ್ಟ ಶುಲ್ಕ ಪಾವತಿಸಬೇಕಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

ವಾಹನದ ಅಗತ್ಯವಿದೆ
ಸದ್ಯ ಘಟಕ ಪೂರ್ಣಪ್ರಮಾಣದಲ್ಲಿ ಸಜ್ಜಾಗಿ ನಿಂತಿದೆ. ಆದರೆ, ಕಾರ್ಯಾರಂಭಕ್ಕೆ ವಾಹನದ ಅಗತ್ಯವಿದೆ. ಮಲತ್ಯಾಜ್ಯ ಸಾಗಾಟಕ್ಕೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಯಾವುದೇ ವಾಹನವಿಲ್ಲ. ಈ ಸಂಬಂಧ ತಾಲೂಕು ಪಂಚಾಯತ್‌ ಮೂಲಕ ಜಿಲ್ಲಾ ಪಂಚಾಯತ್‌ಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಜಿ.ಪಂ. ಹಂತದಲ್ಲಿ ಇದರ ಚರ್ಚೆಯೂ ನಡೆಯುತ್ತಿದೆ. ಸುಸಜ್ಜಿತವಾದ ಆಧುನಿಕ ತಂತ್ರಜ್ಞಾನದ ವಾಹನ ಲಭ್ಯವಾದ ತತ್‌ಕ್ಷಣದಿಂದಲೇ ಘಟಕ ಕಾರ್ಯಾರಂಭವಾಗಲಿದೆ.

ಉಪಯೋಗವೇನು?
ಎಫ್ಎಸ್‌ಟಿಪಿಯಲ್ಲಿ ಮನೆ, ವಸತಿ ಸಮುಚ್ಚಯದ ಮಲತ್ಯಾಜ್ಯವನ್ನು ವೈಜ್ಞಾನಿಕ ರೀತಿಯಲ್ಲಿ ಸಂಸ್ಕರಣೆ ಮಾಡಲಾಗುತ್ತದೆ. ನಾಲ್ಕು ಹಂತದಲ್ಲಿ ಸಂಸ್ಕರಣೆ ನಡೆಯಲಿದೆ. ಮನೆಗಳಿಂದ ಮಲತ್ಯಾಜ್ಯ ಸಂಗ್ರಹಿಸಿ ನಿರ್ದಿಷ್ಟ ವಾಹನದ ಮೂಲಕ ಘಟಕಕ್ಕೆ ತರಲಾಗುತ್ತದೆ. ಅನಂತರ ನೀರಿನ ಅಂಶಗಳನ್ನು ಬೇರ್ಪಡಿಸಲು ಸಂಸ್ಕರಣೆ ಮಾಡಲಾಗುತ್ತದೆ. ಸುಮಾರು 15 ದಿನಗಳಲ್ಲಿ ಅದು ಗೊಬ್ಬರವಾಗುತ್ತದೆ. ತದನಂತರ ಆ ಗೊಬ್ಬರವನ್ನು ಕೃಷಿ ಚಟುವಟಿಕೆಗಳಿಗೆ ಬಳಸಲು ಸಾಧ್ಯವಿದೆ.

ಶೀಘ್ರ ವಾಹನ ಪೂರೈಕೆ
ಇದು ರಾಜ್ಯದ ಮೊದಲ ಮಲತ್ಯಾಜ್ಯ ಸಂಸ್ಕರಣ ಘಟಕವಾಗಿದೆ. ತಾ.ಪಂ.ನಿಂದ ಇದಕ್ಕೆ ವಾಹನ ಒದಗಿಸುವ ಸಂಬಂಧ ಪ್ರಕ್ರಿಯೆ ನಡೆದಿದ್ದು ಶೀಘ್ರದಲ್ಲಿ ವಾಹನ ಬರಲಿದೆ. ಮಲತ್ಯಾಜ್ಯ ಸಂಸ್ಕರಣೆಯಿಂದ ಗೊಬ್ಬರ ಸಿದ್ಧವಾಗಲಿದೆ. ಕುಕ್ಕುಂದೂರು ಗ್ರಾ.ಪಂ.ನಲ್ಲಿ ಇದೇ ರೀತಿ ಘಟಕ ನಿರ್ಮಾಣ ಹಂತದಲ್ಲಿದೆ.
ಡಾ| ನವೀನ್‌ ಭಟ್‌ ವೈ.,
ಜಿ.ಪಂ. ಸಿಇಒ, ಉಡುಪಿ

ಜನಸಾಮಾನ್ಯರಿಗೆ ಅನುಕೂಲ
ಸುಸಜ್ಜಿತ ಎಫ್ಎಸ್‌ಟಿಪಿ ಘಟಕದ ಕಾಮಗಾರಿ ಸಂಪೂರ್ಣ ಮುಗಿದಿದ್ದು ಬಳಕೆಗೆ ಸಿದ್ಧವಾಗಿದೆ. ವಾಹನ
ಸೌಲಭ್ಯ ಸಿಕ್ಕ ಕೂಡಲೇ ಉದ್ಘಾಟನೆಯಾಗಿ ಕಾರ್ಯಾರಂಭ ಮಾಡಲಿದೆ. ಗ್ರಾ.ಪಂ. ವ್ಯಾಪ್ತಿಯ ಜನಸಾಮಾನ್ಯರಿಗೆ ಇದರಿಂದ ಹೆಚ್ಚು ಅನುಕೂಲವಾಗಲಿದೆ.
-ಮಾಧವಿ ಎಸ್‌. ಆಚಾರ್ಯ,
ಅಧ್ಯಕ್ಷೆ, 80 ಬಡಗಬೆಟ್ಟು, ಗ್ರಾ.ಪಂ.

8 ಹಂತದ ಸಂಸ್ಕರಣೆ
ಎಫ್ಎಸ್‌ಟಿಪಿಯಲ್ಲಿ ಮಲ ತ್ಯಾಜ್ಯ ವೈಜ್ಞಾನಿಕ ಹಾಗೂ ಸ್ವಾಭಾವಿಕ ವಿಧಾನದ ಮೂಲಕ 8 ಹಂತದಲ್ಲಿ ಸಂಸ್ಕರಣೆ ಮಾಡ ಲಾಗುತ್ತದೆ. ಬೇರೆ ಗ್ರಾ.ಪಂ.ಗಳು ಇದರ ಉಪಯೋಗ ಪಡೆಯಬಹುದು. ಈ ಸಂಬಂಧ ಒಪ್ಪಂದ ಮಾಡಿಕೊಳ್ಳಲಿದ್ದೇವೆ.
ಅಶೋಕ್‌ ಕುಮಾರ್‌,
ಪಿಡಿಒ, 80 ಬಡಗಬೆಟ್ಟು, ಗ್ರಾ.ಪಂ.

-ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.