ದ್ವೀಪದಲ್ಲಿ ರಾತ್ರಿ ಕಳೆದ ನಾಲ್ವರು!

ಮಲ್ಪೆ ಸೈಂಟ್‌ ಮೇರಿಸ್‌ ದ್ವೀಪದಲ್ಲಿ ನಡೆದ ಘಟನೆ ; ಏರಿದ ನೀರಿನ ಮಟ್ಟ; ತಪ್ಪಿದ ಕೊನೆಯ ಬೋಟ್‌

Team Udayavani, Nov 25, 2019, 5:05 AM IST

2411MLP2

ಮಲ್ಪೆ: ಪ್ರವಾಸಿಗರನ್ನು ಕರೆದೊಯ್ಯುವ ಕೊನೆಯ ಬೋಟ್‌ ತಪ್ಪಿದ ಕಾರಣ ವಿಹಾರಕ್ಕೆ ಬಂದಿದ್ದ ಕೇರಳ ಮೂಲದ ಮಹಿಳೆ ಸಹಿತ ನಾಲ್ವರು ಶನಿವಾರ ಮಲ್ಪೆ ಸೈಂಟ್‌ ಮೇರಿಸ್‌ ದ್ವೀಪದಲ್ಲೇ ರಾತ್ರಿ ಕಳೆದ ಘಟನೆ ನಡೆದಿದೆ.

ಕೇರಳದ ಕೊಚ್ಚಿನ್‌ ನಿವಾಸಿ ಗಳಾದ ಜಸ್ಟಿನ್‌ (34), ಶೀಜಾ (33), ಜೋಶ್‌ (28) ಮತ್ತು ಹರೀಶ್‌ (17) ಶನಿವಾರ ರಾತ್ರಿ ಪೂರ್ತಿ ದ್ವೀಪದಲ್ಲಿ ದ್ದರು. ಅವರನ್ನು ರವಿವಾರ ಬೆಳಗ್ಗೆ 7.30ಕ್ಕೆ ತೀರಕ್ಕೆ ಸುರಕ್ಷಿತವಾಗಿ ಕರೆದುಕೊಂಡು ಬರಲಾಗಿದೆ. ಮಲ್ಪೆ ಠಾಣೆಯ ಪೊಲೀಸರು ಪ್ರಾಥಮಿಕ ತನಿಖೆ ನಡೆಸಿದ್ದು, ಸುರಕ್ಷಿತವಾಗಿ ಕೇರಳಕ್ಕೆ ಕಳುಹಿಸಿದ್ದಾರೆ.
ಜಸ್ಟಿನ್‌ ಮತ್ತು ಶೀಜಾ ಕೇರಳದಲ್ಲಿ ಹೋಮ್‌ಸ್ಟೇಯಂತಹ ಸಣ್ಣ ಉದ್ಯಮ ನಡೆಸುತ್ತಿದ್ದು, ಜೋಶ್‌ ಇವರೊಂದಿಗೆ ಕೆಲಸಕ್ಕಿರುವಾತ ಎನ್ನಲಾಗಿದೆ. ಹರೀಶ್‌ 17 ವರ್ಷದೊಳಗಿನ ಕೊಚ್ಚಿನ್‌ ಫುಟ್ಬಾಲ್‌ ಅಕಾಡೆಮಿಯ ಗೋಲ್‌ಕೀಪರ್‌ ಆಗಿದ್ದ ಎಂದು ವಿಚಾರಣೆ ವೇಳೆ ತಿಳಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.

ಈ ನಾಲ್ವರು ನ. 21ರಂದು ಕೇರಳದಿಂದ ರೈಲಿನಲ್ಲಿ ಹೊರಟು ಉಡುಪಿಗೆ ಬಂದಿ ದ್ದರು. ಉಡುಪಿಯ ವಿವಿಧ ಸ್ಥಳಗಳನ್ನು ಸಂದರ್ಶಿಸಿದ ಬಳಿಕ ನ. 22ರಂದು ಗೋವಾಕ್ಕೆ ತೆರಳಿ, ನ. 23ರಂದು ಮತ್ತೆ ಉಡುಪಿಗೆ ಬಂದಿದ್ದರು. ಅಪರಾಹ್ನ 12.30ಕ್ಕೆ ಸೈಂಟ್‌ ಮೇರಿಸ್‌ ದ್ವೀಪ ತಲುಪಿದ್ದರು ಎನ್ನಲಾಗಿದೆ.

ಬಂಡೆ ಮೇಲೆ ಏರಿದ್ದರು!
ಸೈಂಟ್‌ ಮೇರಿಸ್‌ ದ್ವೀಪದಲ್ಲಿ ವಿಹರಿಸುತ್ತ ಈ ನಾಲ್ವರು ದೊಡ್ಡ ಬಂಡೆಯೊಂದನ್ನು ಏರಿದ್ದರು. ಸಂಜೆ ಬಂಡೆಯ ಸುತ್ತ ನೀರಿನ ಮಟ್ಟ ಏರಿದ್ದರಿಂದ ಇಳಿದು ಬರಲು ಅವರಿಗೆ ಸಾಧ್ಯವಾಗಲಿಲ್ಲ. ನೀರಿನ ಮಟ್ಟ ಸ್ವಲ್ಪ ಇಳಿಯುತ್ತಿದ್ದಂತೆ ಬೋಟ್‌ ಹೊರಡುವ ಸ್ಥಳಕ್ಕೆ ಈ ನಾಲ್ವರು ಬಂದಾಗ ಕೊನೆಯ ಬೋಟ್‌ ದ್ವೀಪದಿಂದ ಮಲ್ಪೆಗೆ ವಾಪಸಾಗಿತ್ತು.

“ಸಂಪರ್ಕ ಸಾಧ್ಯವಾಗಿಲ್ಲ’
ಯಾರನ್ನೂ ಸಂಪರ್ಕಿಸಲು ಸಾಧ್ಯವಾಗದೆ ಈ ನಾಲ್ವರು ಇಡೀ ರಾತ್ರಿ ದ್ವೀಪದಲ್ಲೇ ಕಳೆಯುವಂತಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ರವಿವಾರ ಬೆಳಗ್ಗೆ ಬೋಟ್‌ನವರು ಈ ನಾಲ್ವರನ್ನು ಗಮನಿಸಿದ್ದು, ವಿಚಾರಿಸಿ ತೀರಕ್ಕೆ ಕರೆತಂದಿದ್ದಾರೆ. ಈ ಬಗ್ಗೆ ಮಲ್ಪೆ ಪೊಲೀಸರಿಗೆ ಮಾಹಿತಿ ನೀಡಿದ್ದು, ದ್ವೀಪದಲ್ಲಿ ರಾತ್ರಿ ವಾಸ್ತವ್ಯ ಹೂಡಲು ಅವಕಾಶವಿಲ್ಲವಾದುದರಿಂದ ಠಾಣೆಗೆ ಕರೆಸಿ ವಿಚಾರಣೆ ನಡೆಸಿದ್ದಾರೆ.

ಹೆಚ್ಚುವರಿ ಭದ್ರತಾ
ಸಿಬಂದಿ ನೇಮಕ
ಕೊನೆಯ ಬೋಟ್‌ ತಪ್ಪಿಹೋದ ಪರಿಣಾಮ ನಾಲ್ವರು ಪ್ರವಾಸಿಗರು ಸೈಂಟ್‌ ಮೇರಿಸ್‌ ದ್ವೀಪದಲ್ಲಿ ರಾತ್ರಿ ಉಳಿದುಕೊಂಡಿರುವುದು ವಿಚಾರಣೆ ಯಿಂದ ತಿಳಿದುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿ ಕೇರಳದ ಸ್ಥಳೀಯ ಪೊಲೀಸ್‌ ಠಾಣೆಯಿಂದ ಮಾಹಿತಿ ಕಲೆ ಹಾಕಿದ್ದೇವೆ. ನಾಲ್ವರು ಕೊಟ್ಟ ಹೇಳಿಕೆ ಹೊಂದಾಣಿಕೆಯಾಗಿರುವುದರಿಂದ ಕಳುಹಿಸಿಕೊಟ್ಟಿದ್ದೇವೆ. ಪ್ರವಾಸಿಗರ ಸುರಕ್ಷತೆ ಮುಖ್ಯವಾಗಿರುವ ಹಿನ್ನೆಲೆಯಲ್ಲಿ ದ್ವೀಪದಲ್ಲಿ ಹೆಚ್ಚಿನ ಭದ್ರತಾ ಸಿಬಂದಿ ನಿಯೋಜಿಸುವಂತೆ ಸೂಚಿಸುತ್ತೇವೆ.
-ನಿಶಾ ಜೇಮ್ಸ್‌,ಎಸ್ಪಿ ಉಡುಪಿ

ಟಾಪ್ ನ್ಯೂಸ್

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

IMD

IMD; ರಾಜ್ಯದ 19 ಜಿಲ್ಲೆಗಳಿಗೆ ಬಿಸಿ ಗಾಳಿ ಮುನ್ಸೂಚನೆ : ಬೆಂಗಳೂರಿನಲ್ಲಿ ಮಳೆ

Bommai BJP

Haveri; ಕಮಲ-ಕೈ ನಡುವೆ ನೇರ ಸ್ಪರ್ಧೆ: ಯಾರ ಕೊರಳಿಗೆ ಏಲಕ್ಕಿ ಹಾರ?

bjp-congress

Bagalkote: ಒಬ್ಬರಿಗೆ ಮೊದಲನೆಯದು, ಇನ್ನೊಬ್ಬರಿಗೆ ‘ಕಡೇ’ ಚುನಾವಣೆ!

vidhana-soudha

ಜೂ.3: ಶಿಕ್ಷಕ, ಪದವೀಧರ ಕ್ಷೇತ್ರಗಳಿಗೆ ಚುನಾವಣೆ : ಯಾವ ಕ್ಷೇತ್ರದಲ್ಲಿ ಯಾರಿದ್ದರು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

22

Udupi: ಆಕಸ್ಮಿಕವಾಗಿ ಬಾವಿಗೆ ಬಿದ್ದವರ ರಕ್ಷಣೆ

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

19

Fraud: ಬೆಳಪು; ಹಣ ಪಡೆದು ಕಾಯಿಲ್‌ ನೀಡದೆ ವಂಚನೆ; ದೂರು ದಾಖಲು

CBI ಏಜೆನ್ಸಿ ನಮ್ಮ ನಿಯಂತ್ರಣದಲ್ಲಿಲ್ಲ: ಸುಪ್ರೀಂಗೆ ಕೇಂದ್ರ ಮಾಹಿತಿ

CBI ಏಜೆನ್ಸಿ ನಮ್ಮ ನಿಯಂತ್ರಣದಲ್ಲಿಲ್ಲ: ಸುಪ್ರೀಂಗೆ ಕೇಂದ್ರ ಮಾಹಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.