ಕಟಪಾಡಿ: ಆಡುತ್ತಿದ್ದಾಗ ಜೋಕಾಲಿ ಉರುಳಿಗೆ ಸಿಲುಕಿ ಬಾಲಕಿ ಸಾವು
Team Udayavani, May 3, 2017, 4:11 PM IST
ಕಾಪು: ಮನೆಯಲ್ಲಿ ಜೋಕಾಲಿ ಆಡುತ್ತಿದ್ದ ವೇಳೆ ಜೋಕಾಲಿ ಕಟ್ಟಿದ ಸೀರೆ ಕುತ್ತಿಗೆಗೆ ಬಿಗಿದು ಬಾಲಕಿ ಮೃತಪಟ್ಟ ಘಟನೆ ಕಟಪಾಡಿ – ಅಗ್ರಹಾರದಲ್ಲಿ ಸೋಮವಾರ ಸಂಜೆ ಸಂಭವಿಸಿದೆ.
ಕಟಪಾಡಿ ಅಗ್ರಹಾರ ನಿವಾಸಿ, ಪೌರೋಹಿತ್ಯ ವೃತ್ತಿಯ ಶಶಿಧರ್ ಪುರೋಹಿತ್ ಮತ್ತು ಭಾರತಿ ದಂಪತಿಯ ಪುತ್ರಿ ಅಭಿಜ್ಞಾ (10) ಮೃತ ಪಟ್ಟವಳು. ಅಭಿಜ್ಞಾ ಸೋಮವಾರ ಸಂಜೆ 3.30ರ ವೇಳೆಗೆ ಅಕ್ಕ ಮತ್ತು ತಮ್ಮನ ಜತೆಗೂಡಿ, ತನ್ನ ಮನೆಯ ಪರಿಸರದಲ್ಲಿ ಸೀರೆಯಿಂದ ಕಟ್ಟಲಾಗಿದ್ದ ಜೋಕಾಲಿಯಲ್ಲಿ ಆಟವಾಡುತ್ತಿದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ. ಘಟನೆ ಬೆಳಕಿಗೆ ಬಂದ ಕೂಡಲೇ ತಾಯಿ ಬೊಬ್ಬೆಹಾಕಿದ್ದು, ಸ್ಥಳೀಯರು ಬಂದು ಬಾಲಕಿಯನ್ನು ಸೀರೆಯ ಉರುಳಿನಿಂದ ಬಿಡಿಸಿ ಆಸ್ಪತ್ರೆಗೆ ಸಾಗಿಸಿದರು. ಆದರೆ ಅಷ್ಟರಲ್ಲೇ ಬಾಲಕಿ ಕೊನೆಯುಸಿರೆಳೆದಿದ್ದಳು ಎನ್ನಲಾಗಿದೆ.
ಅಭಿಜ್ಞಾ ಶಂಕರ ಪುರ ಸೈಂಟ್ ಜೋನ್ಸ್ ಶಿಕ್ಷಣ ಸಂಸ್ಥೆಯಲ್ಲಿ ನಾಲ್ಕನೇ ತರಗತಿಯಲ್ಲಿ ಶಿಕ್ಷಣ ಪಡೆಯುತ್ತಿದ್ದಳು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್
Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್
Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ
Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!
Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ